Article Image

ಜೈನ ಸಮಾಜದ ಅಪರೂಪದ ರಾಜಕಾರಿಣಿ

Article Image

ಜೈನ ಸಮಾಜದ ಅಪರೂಪದ ರಾಜಕಾರಿಣಿ

ಶ್ರೀ ತವನಪ್ಪ ಅಷ್ಟಗಿ ಅವರ ೬೪ ನೇ ಜನ್ಮ ದಿನದ ಸಂಭ್ರಮ ಇಂದು ವಿಧಾನ ಪರಿಷತ್ ಸ್ಥಾನಕ್ಕೆ ನಾಮಕರಣಕ್ಕೆ ಸೂಕ್ತ ಅಭ್ಯರ್ಥಿ. ಜಾತಿ ಆಧಾರವೇ ನಿರ್ಣಾಯಕವಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆಯಲ್ಲಿ ಅಲ್ಪಸಂಖ್ಯಾತರಲ್ಲಿಯೇ ಅಲ್ಪಸಂಖ್ಯಾತ ಜೈನ ಸಮುದಾಯದ ನಾಯಕ ಧಾರವಾಡ ತಾಲೂಕು ಉಪ್ಪಿನ ಬೆಟಗೇರಿ ಗ್ರಾಮದ ಸ್ನೇಹ ಜೀವಿ ಶ್ರೀ ತವನಪ್ಪ ಅಷ್ಟಗಿಯವರು. ಸಾರ್ವಜನಿಕ ಕ್ಷೇತ್ರದಲ್ಲಿ ಇವರ ಜನಪರ ಕಾಳಜಿ, ಮೌಲ್ಯಾಧಾರಿತ ರಾಜಕೀಯ ಸಿದ್ದಾಂತ,ಸಾಮಾನ್ಯ ಜನರೊಂದಿಗೆ ನಿರಂತರ ಸಂಪರ್ಕ ಮತ್ತು ಸಮಸ್ಯೆ ಪರಿಹಾರದ ಬಗ್ಗೆ ಸ್ಪಂದನೆ ಪ್ರಾಮಾಣಿಕ ಪ್ರಯತ್ನ ಶುದ್ಧ ಚಾರಿತ್ಯ ಇವರ ಹುಟ್ಟುಗುಣ. ಈ ಕಾರಣದಿಂದಲೇ ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿ ಬಹಳ ಜನಪ್ರೀಯ ನಾಯಕರಾಗಿ ಹೊರಹೊಮ್ಮಿದ್ದಾರೆ ಹಾಗೂ ಒಂದೂ ವಿವಾದ ಇಲ್ಲದ ಅಪ್ಪಟ ನಾಯಕರು ಎನ್ನಬಹುದು. ಧಾರವಾಡ ಗ್ರಾಮೀಣ ವಿಧಾನಸಭಾ ಮತಕ್ಷೇತ್ರದಲ್ಲಿ ಅಪಾರ ಜನ ಬೆಂಬಲ ಇದ್ದು ಅಪಾರವಾದ ಅಭಿಮಾನಿಗಳನ್ನು, ಹಿತ ಚಿಂತಕರನ್ನು ಹೊoದಿ ಅವರ ಆಶಯದಂತೆ ಜನರ ಸೇವೆಗಾಗಿ ರಾಜಕೀಯವನ್ನು ಬಳಸಿಕೊಳ್ಳುತ್ತಿವ ಅಪರೂಪದ ರಾಜಕಾರಣಿ ಇವರು. ಜೊತೆಗೆ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿನ ಹಿಂದಿನ ಶಕ್ತಿ ಇವರೇ ಆಗಿದ್ದಾರೆ. ಹಿನ್ನಲೆ, ಕಾರ್ಯಾವಲೋಕನ ಮತ್ತು ಸಂಕ್ಷಿಪ್ತ ಪರಿಚಯ : ಶ್ರೀ ತವನಪ್ಪಾ ಅಷ್ಟಗಿಯವರು ಗ್ರಾಮೀಣ ಹಿನ್ನೆಲೆಯುಳ್ಳವರು ಧಾರವಾಡ ತಾಲೂಕು ಉಪ್ಪಿನ ಬೆಟಗೇರಿ ಗ್ರಾಮದ ರೈತ ಕುಟುಂಬದ ಶ್ರೀ ಪಾಯಪ್ಪ ಮತ್ತು ದ್ಯಾಮವ್ವ ದಂಪತಿಗಳ ಉದರದಲ್ಲಿ ಜನಿಸಿದ್ದು ದಿ 6-7-1961ರಲ್ಲಿ ಪಿಯುಸಿವರೆಗೆ ಶಿಕ್ಷಣ ಪಡೆದ ಇವರು ಸಮಾಜ ಸೇವೆಯನ್ನೇ ಗುರಿಯಾಗಿಟ್ಟುಕೊಂಡು ರಾಜಕೀಯ ಜೀವನವನ್ನು ಪ್ರಾರಂಭಿಸಿದರು ಮತ್ತು ಅದರಲ್ಲಿ ಸಾರ್ಥಕತೆಯನ್ನು ಕಂಡಿದ್ದಾರೆ. ಸಾರ್ವಜನಿಕ ಸೇವೆಯ ಮನೋಭಾವನೆಯಿಂದ ರಾಜಕೀಯ ಪ್ರವೇಶಿಸಿದ ಇವರು 2005 ರ ಜಿಲ್ಲಾ ಪಂಚಾಯತು ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾಯಿತರಾದರು ಹಾಗೂ 2008 - 2009 ರ ಅವಧಿಯಲ್ಲಿ ಜಿಲ್ಲಾ ಪಂಚಾಯಿತಿಯ ಶಿಕ್ಷಣ ಮತ್ತು ಅರೋಗ್ಯ ಸಂಘಟನೆಯ ಅಧ್ಯಕ್ಷರಾಗಿ ಅತ್ಯಂತ ಸಮರ್ತವಾಗಿ ಕಾರ್ಯನಿರ್ವಹಿಸಿದ್ದಾರೆ. ಇವರ ಧರ್ಮಪತ್ನಿ ಶ್ರೀಮತಿ ಕಸ್ತೂರಿ ಅಷ್ಟಗಿ ಕೂಡ ರಾಜಕೀಯದಲ್ಲಿ ಒಳ್ಳೆಯ ಹೆಸರು ಮಾಡಿದ್ದು ಇವರು ಕೂಡ ಉಪ್ಪಿನ ಬೆಟಗೇರಿ ಕ್ಷೇತ್ರದಿಂದ ಜಿಲ್ಲಾ ಪಂಚಾಯತಿ ಸದಸ್ಯರಾಗಿ 2011-2016 ರ ಅವಧಿಗೆ ಆಯ್ಕೆಯಾಗಿ 2016ರಲ್ಲಿ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ. "ಇದುವರೆಗೂ ಎಲ್ಲಿಯೂ ಒಂದು ಪೈಸೆಯೂ ಭ್ರಷ್ಟಾಚಾರದ ಮಾಡಿದವನಲ್ಲ ಹಣಕ್ಕಾಗಿ ನನ್ನ ನಿಷ್ಠೆ ಹಾಗೂ ಕರ್ತವ್ಯ ಮರೆತವನಲ್ಲ" ಎಂದು ಶ್ರೀ ತವನಪ್ಪ ಹಲವಾರು ಬಾರಿ ಹೇಳಿಕೊಂಡಿದ್ದಾರೆ. ಇವರ ಮೂಲತ ಕೃಷಿ ಕುಟುಂಬದವರಾಗಿದ್ದು ಅತ್ಯಂತ ಪ್ರಗತಿಪರ ರೈತ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಜೊತೆಗೆ ರೈತರಲ್ಲಿ ಆತ್ಮಸ್ಥರ್ಯ ತುಂಬಿ ಅವರನ್ನು ಸ್ವಾವಲಂಬರನ್ನಾಗಿ ಮಾಡಿ ಹೆಮ್ಮೆಯಿಂದ ಬದುಕಲು ಪ್ರೇರೇಪಿಸುತ್ತಾ ಅವರಿಗೆ ಪ್ರೀತಿ ಪಾತ್ರರಾಗಿದ್ದು ಉತ್ತಮ ಮಾರ್ಗದರ್ಶಕರಾಗಿದ್ದಾರೆ. ಇವರ ಕ್ಷೇತ್ರದಲ್ಲಿ ಸಣ್ಣವರಿರಲಿ ದೊಡ್ಡವರಲಿ ಪ್ರತಿಯೊಬ್ಬರ ಮನೆ ಮನೆಯಲ್ಲಿ ನಡೆಯುವ ಯಾವದೇ ಕಾರ್ಯಕ್ರಮವಿರಲಿ ಅಲ್ಲಿಗೆ ಬಿಡುವು ಮಾಡಿಕೊಂಡು ತಪ್ಪದೇ ಭಾಗವಹಿಸಿ ಅವರೊಂದಿಗೆ ಸ್ಪಂದಿಸುತ್ತಾರೆ ಇದೇ ಇವರ ದೊಡ್ಡಗುಣ. ಇವರದೇ ಮೇಲ್ವಿಚಾರಣೆಯಲ್ಲಿ ಧಾರವಾಡದಲ್ಲಿ ಕೃಷಿಗೆ ಪೂರಕ ಉದ್ದಿಮೆಯಾಗಿ ಪದ್ಮಾವತಿ ಕಾಟನ್ ಇಂಡಸ್ಟ್ರೀಸ್ ಫ್ಯಾಕ್ಟರಿಯನ್ನು ಪ್ರಾರಂಭಿಸಿ ರೈತರ ಆಶಾಕಿರಣವಾಗಿದ್ದಾರೆ. ಜನ್ಮ ದಿನದ ವಿಶೇಷ : ತವನಪ್ಪ ಅಷ್ಟಗಿ ಇವರಿಗೆ ಅಭಿಮಾನಿಗಳು ಸ್ನೇಹಿತರು, ಕಾರ್ಯಕರ್ತರ, ಹಿತೈಸಿಗಳ ದೊಡ್ಡ ಬಳಗವೇ ಇದೆ. ಇವರೆಲ್ಲರೂ ಸೇರಿ ಇವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಸಲು ರವಿವಾರ ದಿನಾಂಕ ೬ ರಂದು ಇಡೀ ದಿನ ರಕ್ತದಾನ ಶಿಬಿರ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಹಲವಾರು ಪೂಜ್ಯರ ಆಶೀರ್ವಚನ, ಅನ್ನಸಂತರ್ಪಣೆ ಮುಂತಾದ ಜನಸ್ನೇಹಿ ಕಾರ್ಯಕ್ರಗಳನ್ನು ಸವದತ್ತಿ ರಸ್ತೆಯಲ್ಲಿ ರುವ ಪದ್ಮಾವತಿ ಕಾಟನ್ ಇಂಡಸ್ಟ್ರಿ ಯಲ್ಲಿ ಆಯೋಜಿಸಿದ್ದಾರೆ. ಮುಂದಿನ ಚಿಂತನೆಗಳು : ಕ್ಷೇತ್ರ ಸರ್ವಾoಗೀನ ಅಭಿವೃದ್ಧಿಗೆ ಶ್ರಮಿಸುವುದು, ಜನರ ಆಶೋತ್ತರಗಳಿಗೆ ಸದಾ ಸ್ಪಂದಿಸುವುದು. ಯುವಕರಲ್ಲಿ ನವೋತ್ಸಾಹ ತುಂಬಿ ಸ್ವಯಂ ಉದ್ಯೋಗಕ್ಕೆ ಪ್ರೇರೇಪಿಸುವುದು ನಿರುದ್ಯೋಗ ನಿವಾರಣೆ, ರಾಜಕೀಯದಲ್ಲಿ ಪ್ರಾಮಾಣಿಕ ಮೌಲ್ಯ ಆಧಾರಿತ ಕ್ರಮವನ್ನು ಅನುಸರಿಸುವುದು. ಇಂಥ ಒಬ್ಬ ನಿಷ್ಠಾವಂತ ರಾಜಕಾರಿಣಿಯನ್ನು ಈಗ ಖಾಲಿ ಇರುವ ವಿಧಾನ ಪರಿಷತ್ ಸ್ಥಾನಕ್ಕೆ ಸರಕಾರ ನಾಮಕರಣ ಮಾಡಬೇಕೆಂದು ಈ ಸಂಧರ್ಭದಲ್ಲಿ ಸರಕಾರವನ್ನು ಒತ್ತಾಯಿಸುತ್ತೇವೆ. ಇವರ ರಾಜಕೀಯ ಭವಿಷ್ಯ ಉಜ್ವಲವಾಗಲಿ ಈ ನಾಡಿಗೆ ಇವರ ಸೇವೆ ಮಾರ್ಗದರ್ಶನ ಸದಾ ಲಭಿಸಲಿ ಇವರ ಆದರ್ಶ ನಡೆ ನುಡಿ ಇತರರಿಗೆ ಮಾದರಿಯಾಗಲಿ ಎನ್ನುವ ಹಾರೈಕೆಗಳೊಂದಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು ಶಾಂತರಾಜ ಮಲ್ಲಸಮುದ್ರ ಲೇಖಕರು

ಕ ವಿ ವಿ ಕುಲಪತಿಯವರಿಗೆ ಗೌರವ ಸನ್ಮಾನ

Article Image

ಕ ವಿ ವಿ ಕುಲಪತಿಯವರಿಗೆ ಗೌರವ ಸನ್ಮಾನ

ಕರ್ನಾಟಕ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ ಡಾ. ಎ ಎಮ್ ಖಾನ್ ಇವರನ್ನು ಇಂದು ಕ ವಿ ವಿ ಜೈನ ಅಧ್ಯಯನ ಪೀಠ ಮತ್ತು ಜೈನ ಸಂಸ್ಕೃತಿ ಮತ್ತು ಸಾಹಿತ್ಯ ಟ್ರಸ್ಟ್ ವತಿಯಿಂದ ಅಭಿನಂದಿಸಿ ಸತ್ಕರಿಸಲಾಯಿತು. ಪೀಠದ ಸಂಯೋಜಕರು ಹಾಗೂ ಟ್ರಸ್ಟಿನ ಅಧ್ಯಕ್ಷರೂ ಆದ ಡಾ. ಜಿನದತ್ತ ಹಡಗಲಿ, ಜೈನ ಅಧ್ಯಯನ ಪೀಠದ ಸಲಹಾ ಸಮಿತಿ ಸದಸ್ಯರಾದ ಶಾಂತರಾಜ ಮಲ್ಲಸಮುದ್ರ,ದನಪಾಲ ಜೆ ಮುನ್ನೊಳ್ಳಿ, ಧರಣೇoದ್ರ ಜವಳಿ, ಡಾ. ಆರ್.ಎ. ಬಾಳಿಕಾಯಿ ಮುಂತಾದವರು ಭಾಗವಹಿಸಿದ್ದರು. ಕುಲಪತಿಗಳು ಜೈನ ಅಧ್ಯಯನ ಪೀಠದ ಅಭಿವೃದ್ಧಿಗೆ ಮತ್ತು ಕಾರ್ಯಾಚಟುವಟಿಕೆಗೆ ನನ್ನ ಸಹಾಯ ಸಹಕಾರ ನೀಡುವುದಾಗಿ ಹೇಳಿದರು. ವರದಿ : ಶಾಂತರಾಜ ಮಲ್ಲಸಮುದ್ರ

ವೇಣೂರಿನ ಮಹಾವೀರ ನಗರದ ಪ್ರಸಾದ್‌ ಕ್ಲಿನಿಕ್‌ ನ ಖ್ಯಾತ ವೈದ್ಯರಾದ ಡಾ. ಕೆ. ಆರ್.‌ ಪ್ರಸಾದ್‌ರವರು ನಿಧನ

Article Image

ವೇಣೂರಿನ ಮಹಾವೀರ ನಗರದ ಪ್ರಸಾದ್‌ ಕ್ಲಿನಿಕ್‌ ನ ಖ್ಯಾತ ವೈದ್ಯರಾದ ಡಾ. ಕೆ. ಆರ್.‌ ಪ್ರಸಾದ್‌ರವರು ನಿಧನ

ಬೆಳ್ತಂಗಡಿ ತಾಲೂಕಿನ ಪೆರಿಂಜೆ, ಬಡಕೋಡಿಗುತ್ತು ನಿವಾಸಿ, ವೇಣೂರಿನ ಮಹಾವೀರ ನಗರದ "ಪ್ರಸಾದ್‌ ಕ್ಲಿನಿಕ್‌" ನ ಖ್ಯಾತ ವೈದ್ಯರಾದ ಡಾ. ಕೆ. ಆರ್.‌ ಪ್ರಸಾದ್‌ (75ವ) ಇವರು ಜು.04ರಂದು ನಿಧನ ಹೊಂದಿದರು. ಇವರು ಪತ್ನಿ, ಇಬ್ಬರು ಪುತ್ರರನ್ನು ಹಾಗೂ ಅಪಾರ ಬಂಧು- ವರ್ಗವನ್ನು ಅಗಲಿದ್ದಾರೆ. ಇವರು ಕೃಷಿಕರಾಗಿದ್ದು, ವೇಣೂರಿನಲ್ಲಿ ಹಲವು ದಶಕಗಳಿಂದ ವೈದ್ಯಕೀಯ ಸೇವೆ ನೀಡಿ, ಜನಪ್ರಿಯ ವೈದ್ಯರಾಗಿ ಜನರ ಪ್ರೀತಿ - ವಿಶ್ವಾಸಕ್ಕೆ ಪಾತ್ರರಾಗಿದ್ದರು. ಅಲ್ಲದೇ ಇವರು ಹಲವಾರು ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತಾವು ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು

ಎಸ್.ಡಿ.ಎಂ. ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Article Image

ಎಸ್.ಡಿ.ಎಂ. ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

ಸತ್ತೂರು, ಧಾರವಾಡ: ಎಸ್.ಡಿ.ಎಂ. ವಿಶ್ವವಿದ್ಯಾಲಯದಲ್ಲಿ ಜುಲೈ 1, 2025 ರಂದು ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು. ಪಶ್ಚಿಮ ಬಂಗಾಳದ ಖ್ಯಾತ ವೈದ್ಯ ಮತ್ತು ಮುಖ್ಯಮಂತ್ರಿಯವರಾದ ಡಾ. ಬಿ. ಸಿ. ರಾಯ್ ಅವರ ಜನ್ಮದಿನವನ್ನು ಸ್ಮರಿಸಲು ಮತ್ತು ದೇಶದಲ್ಲಿ ವೈದ್ಯರನ್ನು ಸ್ಮರಿಸಲು ವೈದ್ಯರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಅವರ ಮನುಕುಲಕ್ಕೆ ನೀಡಿದ ಅಪಾರ ಸೇವೆಯನ್ನು ಪರಿಗಣಿಸಿ ಈ ದಿನವನ್ನು ಆಚರಿಸಲಾಗುತ್ತದೆ. ವೈದ್ಯರ ದಿನಾಚರಣೆಯ ಸಂದರ್ಭದಲ್ಲಿ, ಎಸ್.ಡಿ.ಎಂ. ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ 3 ಖ್ಯಾತ ವೈದ್ಯರನ್ನು ಸನ್ಮಾನಿಸಲಾಯಿತು ಡಾ. ಪ್ರಕಾಶ ಜಿ. ಮಹಾಲಿಂಗಶೆಟ್ಟಿ, ಹಿರಿಯ ಶಸ್ತ್ರಚಿಕಿತ್ಸಾ ಪ್ರಾಧ್ಯಾಪಕರು ಡಾ. ಚಿದೇಂದ್ರ ಶೆಟ್ಟರ್, ಹಿರಿಯ ಎಲಬು ಮತ್ತು ಕೀಲು ಚಿಕಿತ್ಸಕರು ಮತ್ತು ಕುಲಸಚಿವರು ಡಾ. ಶೀಲಾ ಎಸ್. ಕುದರಿ, ನುರಿತ ವೈದ್ಯಕೀಯ ಚಿಕಿತ್ಸಕರು ಉಪಕುಲಪತಿಗಳಾದ ಡಾ. ನಿರಂಜನ್ ಕುಮಾರ್ ಅವರು ಅಧ್ಯಕ್ಷತೆಯನ್ನು ವಹಿಸಿ, ಮೂವರು ವೈದ್ಯರನ್ನು ಸನ್ಮಾನಿಸಿದರು. ವೈದ್ಯರ ದಿನದ ಪ್ರಶಸ್ತಿಯನ್ನು ಸ್ವೀಕರಿಸಿದ ಹಿರಿಯ ಶಸ್ತ್ರಚಿಕಿತ್ಸಾ ಪ್ರಾಧ್ಯಾಪಕರಾದ ಡಾ. ಪ್ರಕಾಶ ಜಿ. ಮಹಾಲಿಂಗಶೆಟ್ಟಿ ಅವರು ಮಾತನಾಡುತ್ತಾ ವೈದ್ಯರು ರೋಗಿಗಳ ಆರೋಗ್ಯ ಮತ್ತು ಸಾಮಾಜಿಕ ಮನಸ್ಥಿತಿಯನ್ನು ಅರ್ಥಮಾಡಿಕೊಂಡು ಚಿಕಿತ್ಸೆ ನೀಡಬೇಕು. ರೋಗಿಗಳ ಸಂತೃಪ್ತಿಯೇ ವೈದ್ಯರುಗಳ ತೃಪ್ತಿಯ ಮೂಲವಾಗಿರಬೇಕು. ಹೊಸವಿಷಯಗಳ ಅಧ್ಯಯನದೊಂದಿಗೆ ಉತ್ತಮ ಸಮಯ ಪಾಲನೆ ವೈದ್ಯರ ಜ್ಞಾನವನ್ನು ಹೆಚ್ಚಿಸುತ್ತದೆ. ಸರಳತೆ ಮತ್ತು ಕೃತಜ್ಞತಾ ಮನೋಭಾವ ಜೀವನದಲ್ಲಿ ಬಹಳ ಯಶಸ್ಸನ್ನು ತಂದುಕೊಡುತ್ತದೆ. ಎಸ್.ಡಿ.ಎಂ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ವಿಜಯ್ ಕುಲಕರ್ಣಿ ಅವರು ಅಭಿನಂದನಾ ಭಾಷಣ ಮಾಡಿದರು. ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್, ಸಹ ಉಪ ಕುಲಪತಿಗಳಾದ ಜೀವಂಧರ್ ಕುಮಾರ, ಹಣಕಾಸು ಅಧಿಕಾರಿಗಳಾದ ವಿ.ಜಿ. ಪ್ರಭು, ಆಡಳಿತ ನಿರ್ದೇಶಕರಾದ ಸಾಕೇತ ಶೆಟ್ಟಿ ಮತ್ತು ಇತರ ವಿಶ್ವವಿದ್ಯಾಲಯದ ಅಧಿಕಾರಿಗಳು, ಸಂಸ್ಥೆಯ ಮುಖ್ಯಸ್ಥರು, ಎಲ್ಲಾ ವೈದ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಎಸ್.ಡಿ.ಎಂ ವೈದ್ಯಕೀಯ ಮಹಾವಿಧ್ಯಾಲಯದ ಉಪ ಪ್ರಾಂಶುಪಾಲರಾದ ಡಾ. ವಿದ್ಯಾ ಪಾಟೀಲ ಅವರು ಅತಿಥಿಗಳನ್ನು ಸ್ವಾಗತಿಸಿದರು. ಡಾ. ಸುರೇಶ ಬಡಿಗೇರ, ಡಾ. ಸುನಿಲ್ ಎಂ. ಮತ್ತು ಡಾ. ಕಿರಣ ಐತಾಳ್ ಮೂವರು ಪ್ರಶಸ್ತಿ ಪುರಸ್ಕೃತರನ್ನು ಪರಿಚಯಿಸಿದರು. ಡಾ. ಪ್ರಿಯಾಂಕಾ ಮೋತಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಪ್ರಾಧ್ಯಾಪಕರಾದ ಡಾ. ಆಶಾ ನೆರವಿ ವಂದನಾರ್ಪಣೆ ಸಲ್ಲಿಸಿದರು.

ಚಾಮರಾಜನಗರ: 17ನೇ ವರ್ಷದ ವಾರ್ಷಿಕೋತ್ಸವ

Article Image

ಚಾಮರಾಜನಗರ: 17ನೇ ವರ್ಷದ ವಾರ್ಷಿಕೋತ್ಸವ

ದಿಗಂಬರ ಪಾರ್ಶ್ವನಾಥ ಜೈನ ಬಸದಿಯ ಜೀರ್ಣೋದ್ಧಾರದ 17ನೇ ವರ್ಷದ ವಾರ್ಷಿಕೋತ್ಸವದ ಪೂಜಾ ಕಾರ್ಯಕ್ರಮದಲ್ಲಿ ಕನಕಗಿರಿ ಜೈನ ಮಠದ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿಗಳವರು ಪಾವನ ಸಾನ್ನಿಧ್ಯ ವಹಿಸಿ, ಮಾತನಾಡಿದ ಅವರು ಧರ್ಮ, ರಾಜಕೀಯ, ಸಂಸ್ಕೃತಿಗೆ ಚಾಮರಾಜನಗರ ಪ್ರಸಿದ್ಧಿಯಾಗಿದ್ದು ಕರ್ನಾಟಕಕ್ಕೆ ಅದರ್ಶಪ್ರಾಯವಾಗಿದೆ. ಇಲ್ಲಿರುವ ಹರಳುಕೋಟೆ ಹಾಗೂ ಹರದವಹಳ್ಳಿಯಲ್ಲಿರುವ ದೇವಸ್ಥಾನಗಳು ಪುರಾತನವಾಗಿವೆ. ವಿಜಯ ಪಾರ್ಶ್ವನಾಥ ಸ್ವಾಮಿ ದೇವಸ್ಥಾನ 1116ರಲ್ಲಿ ನಿರ್ಮಾಣವಾಗಿರುವುದು ಇತಿಹಾಸದಿಂದ ತಿಳಿದು ಬರುತ್ತದೆ. ಜನಪದ ಕಲೆಗೂ ಜಿಲ್ಲೆ ಪ್ರಸಿದ್ಧಿ ಪಡೆದಿದೆ ಎಂದು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಜಿ. ಆರ್. ಆಶ್ವಥ್ ನಾರಾಯಣ್ ಮತ್ತು ವೆಂಕಟನಾಗಪ್ಪ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಜೈನ ಸಮಾಜದ ಅಧ್ಯಕ್ಷ ನಿರ್ಮಲ್ ಕುಮಾರ್ ಜೈನ್, ಜೈಶಾಮಾದೇವಿ ಸಂಘದ ಅಧ್ಯಕ್ಷೆ ಪದ್ಮಶ್ರೀ ಬ್ರಹ್ಮೇಶ್ ಉಪಸ್ಥಿತರಿದ್ದರು.

ಮಹಾವೀರ ಶಿಕ್ಷಣ ಸಂಸ್ಥೆಯ ಪದಾಧಿಕಾರಿಗಳಿಗೆ ಗೌರವ ಸನ್ಮಾನ

Article Image

ಮಹಾವೀರ ಶಿಕ್ಷಣ ಸಂಸ್ಥೆಯ ಪದಾಧಿಕಾರಿಗಳಿಗೆ ಗೌರವ ಸನ್ಮಾನ

ಜೈನ ಸಂಸ್ಕೃತಿ ಮತ್ತು ಸಾಹಿತ್ಯ ಟ್ರಸ್ಟ್ ಹುಬ್ಬಳ್ಳಿ- ಧಾರವಾಡ, ಕರ್ನಾಟಕ ವಿಶ್ವವಿದ್ಯಾಲಯದ ಜೈನ ಅಧ್ಯಯನ ಪೀಠ ಸಲಹಾ ಸಮಿತಿ ಇವುಗಳ ಸಂಯುಕ್ತ ಸಹಯೋಗದಲ್ಲಿ ಮಾಸಿಕ ಉಪನ್ಯಾಸ ಮಾಲಿಕೆ ದಿವ್ಯವಾಣಿ ೪ ಜೈನ ದರ್ಶನದಲ್ಲಿ ಅನೇಕಾಂತವಾದಕುರಿತು ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಚಾರ್ಯ ಡಾ. ಭರಮಪ್ಪ ಭಾವಿ ಇವರಿಂದ ಉಪನ್ಯಾಸ ಜರುಗಿತು. ಇದೇ ಸಂಧರ್ಭದಲ್ಲಿ ಮಹಾವೀರ ಶಿಕ್ಷಣ ಸಂಸ್ಥೆಗೆ ನೂತನವಾಗಿ ಇತ್ತೀಚಿಗೆ ಆಯ್ಕೆಯಾದ ಪದಾಧಿಕಾರಿಗಳನ್ನು ಹಾಗೂ ಧಾರವಾಡ ಜೈನ ಮಿಲನ್ ಅಧ್ಯಕ್ಷರಾಗಿ ಆಯ್ಕೆಯಾದ ಜಿನ್ನಪ್ಪ ಕುಂದಗೋಳ ಇವರನ್ನು ನವನಗರದ ನವಗ್ರಹ ಸಭಾ ಭವನದಲ್ಲಿ ಗೌರವ ಸನ್ಮಾನಮಾಡಿ ಅಭಿನಂದಿಸಲಾಯಿತು. ನವನಗರದ ಅಲ್ಪಸಂಖ್ಯಾತ ಜೈನ ಸೇವಾ ಸಂಘ ಈ ಸಂಸ್ಥೆಯೂ ಕೂಡಾ ಸನ್ಮಾನಿಸಿ ಗೌರವಿಸಿದರು. ಐದು ದಶಕಗಳಿಂದ ಹುಬ್ಬಳ್ಳಿಯಲ್ಲಿ ಸಮಾಜದ ಪ್ರತಿಷ್ಠಿತ ಈ ಸಂಸ್ಥೆ ಶೈಕ್ಷಣಿಕ ಕ್ಷೇತ್ರದಲ್ಲಿ ಅಪಾರವಾದ ಸಾಧನೆ ಮಾಡಿದೆ, ಪ್ರಸಕ್ತ ಅವಧಿಯಲ್ಲಿ ಅಧ್ಯಕ್ಷರಾದ ಆರ್ ಟಿ ತವನಪ್ಪನವರ, ಉಪಾಧ್ಯಕ್ಷರಾದ ಆರ್ ಟಿ ಅಣ್ಣಿಗೇರಿ ಕಾರ್ಯದರ್ಶಿ ವಿಮಲ ತಾಳಿಕೋಟಿ ಹಾಗೂ ಇತರರು ಅವಿರೋಧವಾಗಿ ಆಯ್ಕೆಯಾಗಿದ್ದು ಇವರ ಅವಧಿಯಲ್ಲಿ ಸಂಸ್ಥೆ ಸರ್ವತೋಮುಖ ಅಭಿವೃದ್ಧಿ ಹೊಂದಲಿ ಇನ್ನು ಹೆಚ್ಚು ಹೆಚ್ಚು ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲಿ ಮತ್ತು ಧಾರವಾಡ ಜೈನ ಮಿಲನ್ ಜೈನ ಸಂಸ್ಕೃತಿ ಪರಂಪರೆಗೆ ಧರ್ಮಪ್ರಭಾವನೆ ಕೊಡುಗೆ ನೀಡಲಿ ಎಂದು ಶುಭ ಹಾರೈಸಿ ಸತ್ಕರಿಸಲಾಯಿತು. ಸತ್ಕಾರ ಸಮಾರಂಭದಲ್ಲಿ ಟ್ರಸ್ಟ್ ಅಧ್ಯಕ್ಷ ಡಾ. ಜಿನದತ್ತ ಹಡಗಲಿ, ಉಪಾಧ್ಯಕ್ಷ ಡಾ. ಭರಮಪ್ಪ ಭಾವಿ, ಕಾರ್ಯದರ್ಶಿ ಶಾಂತರಾಜ ಮಲ್ಲಸಮುದ್ರ, ನಿರ್ದೇಶಕರಾದ ಧರಣೇoದ್ರ ಜವಳಿ, ಡಾ ಆರ್ ಎ ಬಾಳಿಕಾಯಿ, ತನುಜಾ ರೋಖಡೆ, ಶ್ರೀಧರ ಬಸ್ತಿ, ಡಾ. ಪ್ರತಿಭಾ ಹಳಿಂಗಳಿ, ಸಂಘಟನಾ ಕಾರ್ಯದರ್ಶಿಗಳಾದ ಶಾಂತರಾಜ ಹದಳಗಿ, ಸುಜಾತಾ ಹಡಗಲಿ, ಅಜಿತ್ ಹವಳಣ್ಣವರ, ನವನಗರ ಜೈನ ಸೇವಾ ಸಂಘದ ಉಪಾಧ್ಯಕ್ಷ ಅಜಿತ್ ಉಪಾಧ್ಯ ಕಾರ್ಯದರ್ಶಿ ಜೆ ಎ ಪಾಟೀಲ್ ಖಜಾಂಚಿ ರವಿ ರಾಯಪ್ಪನವರ ಸದಸ್ಯರಾದ ಬಿ ಎಸ್ ವರೂರ, ಡಿ ಆರ್ ಚೌದರಿ ಪ್ರಭು ಹಜಾರೆ, ಶುಭಮ್ ಬಸ್ತಿ, ಬಾಹುಬಲಿ ಹೊಂಬಣ್ಣವರ, ಆಂಬೊಜಿ, ರತ್ನಾಕರ ಪಾಟೀಲ ಮತ್ತು ಬಹುರೂಪಿಣಿ ಮಹಿಳಾ ಮಂಡಳದ ಸದಸ್ಯರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ನವನಗರದ ಬಹುರೂಪಿಣಿ ಮಹಿಳಾಮಂಡಲದ ಮತ್ತು ಗೋಕುಲ ರಸ್ತೆಯ ಸನ್ಮತಿ ಮಹಿಳಾ ಮಂಡಳದ ತಂಡಗಳಿಂದ ಜಿನಭಜನೆ ಜರುಗಿತು ಇದೇ ಸಂದರ್ಭದಲ್ಲಿ ಹಿರಿಯ ಸಾಹಿತಿ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಶ್ರೀಪಾಲ ಬೋಗಾರ ಇವರು ತಾವು ರಚಿಸಿದ "ಪಿಂಛಿ" ಕವನ ಸಂಕಲದ ಪುಸ್ತಕದ ವಿತರಿಸಿದರು. ಪ್ರಾರಂಭದಲ್ಲಿ ಶೋಭಾ ವರೂರ ಇವರಿಂದ ಪ್ರಾರ್ಥನೆ ಶಾಂತರಾಜ ಮಲ್ಲಸಮುದ್ರ ಇವರಿಂದ ಸ್ವಾಗತ ಕೊನೆಯಲ್ಲಿ ಮಹಾವೀರ ದೊದ್ದಮನಿ ಇವರು ವಂದಿಸಿದರು ತನುಜಾ ರೋಖಡೆ ಕಾರ್ಯಕ್ರಮ ನಿರೂಪಿಸಿದರು. ವರದಿ : ಶಾಂತರಾಜ ಮಲ್ಲಸಮುದ್ರ

ಉಜಿರೆ ಎಸ್. ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Article Image

ಉಜಿರೆ ಎಸ್. ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆಯನ್ನು ಜು.1 ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ವೈದ್ಯರ ಸೇವೆ ಮತ್ತು ತ್ಯಾಗ ಅಮೂಲ್ಯವಾದದ್ದು, ರೋಗಿಗಳ ಸೇವೆಗಾಗಿ ತನ್ನ ಹೆಚ್ಚಿನ ಸಮಯವನ್ನು ಮುಡಿಪಾಗಿಡುವ ವೈದ್ಯರದ್ದು ಒತ್ತಡದ ಜೀವನ. ಇಂತಹ ಗ್ರಾಮೀಣ ಪ್ರದೇಶದ ಆಸ್ಪತ್ರೆಯಲ್ಲಿ ವೈದ್ಯಕೀಯ ವೃತ್ತಿ ಮಾಡುತ್ತಾ, ರೋಗಿಗಳ ಸೇವೆಯ ವಿಷಯ ಬಂದಾಗ ಎಲ್ಲರು ಒಗ್ಗಟ್ಟಿನಿಂದ ರೋಗಿಯ ಸೇವೆಗೆ ಮುಂದಾಗುವ ನಮ್ಮ ಆಸ್ಪತ್ರೆಯ ವೈದ್ಯರ ಸೇವೆ ನಿಜವಾಗಿಯೂ ಶ್ಲಾಘನೀಯ ಎಂದರು. ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಹೇಮಾವತಿ ವಿ. ಹೆಗ್ಗಡೆಯವರ ಆಶೀರ್ವಾದ ಮತ್ತು ಆದೇಶದಂತೆ, ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯ ಹರ್ಷೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ ನಮ್ಮ ಆಸ್ಪತ್ರೆಯ ವೈದ್ಯಕೀಯ ತಂಡ ಅತ್ಯುತ್ತಮ ವೈದ್ಯಕೀಯ ಸೇವೆ ನೀಡುತ್ತಿದ್ದು, ಸ್ವತಃ ರೋಗಿಗಳೇ ವೈದ್ಯರ ಮತ್ತು ಆಸ್ಪತ್ರೆಯ ಸೇವೆಯನ್ನು ಶ್ಲಾಘಿಸುತ್ತಿದ್ದಾರೆ. ನಮ್ಮ ಆಸ್ಪತ್ರೆಯಲ್ಲಿ ಶೀಘ್ರದಲ್ಲಿ ಎಂ.ಆರ್.ಐ ‌ಸ್ಕ್ಯಾನಿಂಗ್ ಸೇವೆ ದೊರೆಯಲಿದ್ದು, ದೇಶದಲ್ಲಿಯೇ ಈ ಅತ್ಯಾಧುನಿಕ ಯಂತ್ರ ಹೊಂದಲಿರುವ 2ನೆಯ ಆಸ್ಪತ್ರೆ ನಮ್ಮದಾಗಲಿದೆ ಎಂದರು. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್ ಮಾತನಾಡಿ ಅತ್ಯುತ್ತಮ ಗುಣಮಟ್ಟದ ವೈದ್ಯಕೀಯ ಸೇವೆ ನೀಡಲು ಹಗಲಿರುಳು ದುಡಿಯುತ್ತಿರುವ ಎಲ್ಲಾ ವೈದ್ಯರಿಗೆ ಶುಭ ಹಾರೈಸಿದರು. ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ| ಸಾತ್ವಿಕ್ ಜೈನ್ ಮಾತನಾಡಿ, ಎಲ್ಲರಿಗೂ ವೈದ್ಯರ ದಿನಾಚರಣೆಯ ಶುಭಾಶಯ ತಿಳಿಸುತ್ತಾ, ಹಿರಿಯ ಅನುಭವಿ ವೈದ್ಯರೊಂದಿಗೆ ಯುವ ಮತ್ತು ಉತ್ಸಾಹಭರಿತ ವೈದ್ಯರ ತಂಡವೇ ಈ ಆಸ್ಪತ್ರೆಯಲ್ಲಿ ರೋಗಿಗಳ ಸೇವೆಗೆ ಸದಾ ಸಿದ್ಧವಾಗಿದೆ ಎಂದರು. ಈ ಸಂದರ್ಭದಲ್ಲಿ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ಎಲ್ಲಾ ವೈದ್ಯರನ್ನು ಸನ್ಮಾನಿಸಲಾಯಿತು. ವಿವಿಧ ಮನರಂಜನಾ ಹಾಗೂ ಫನ್ನಿ ಗೇಮ್ಸ್‌ಗಳಲ್ಲಿ ಆಸ್ಪತ್ರೆಯ ವೈದ್ಯರು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡು ಖುಷಿಪಟ್ಟರು. ಆಸ್ಪತ್ರೆಯ ವೈದ್ಯರು, ಎಲ್ಲಾ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು. ಜಗನ್ನಾಥ ಎಂ ಮತ್ತು ಸೃಜನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಪರಾಗ್ ಜೈನ್ ರಾ ಹೊಸ ಮುಖ್ಯ

Article Image

ಪರಾಗ್ ಜೈನ್ ರಾ ಹೊಸ ಮುಖ್ಯ

ಹೊಸದಿಲ್ಲಿ: ‘ಆಪರೇಷನ್ ಸಿಂದೂರ’ ಸೇನಾ ಕಾರ್ಯಾಚರಣೆ ಯಶಸ್ಸಿನಲ್ಲಿ ಮಹತ್ವದ ಪಾತ್ರವಹಿಸಿದ್ದ ಹಿರಿಯ ಐಪಿಎಸ್ ಅಧಿಕಾರಿ ಪರಾಗ್ ಜೈನ್ ಅವರನ್ನು ಗುಪ್ತಚರ ಸಂಸ್ಥ ‘ರಾ’ ಮುಖ್ಯಸ್ಥರನ್ನಾಗಿ ಕೇಂದ್ರ ಸರಕಾರ ನೇಮಿಸಿದೆ. ‘ರಾ’ ಹಾಲಿ ಮುಖ್ಯಸ್ಥ ರವಿ ಸಿನ್ಹಾ ಅವರು ಜೂನ್ 30ರಂದು ನಿವೃತ್ತಿ ಹೊಂದಲಿದ್ದಾರೆ. ಸದ್ಯ ‘ರಾ’ದ ವೈಮಾನಿಕ ಸಂಶೋಧನಾ ಕೇಂದ್ರದ ಮುಖ್ಯಸ್ಥರಾಗಿರುವ ಪರಾಗ್ ಅವರು ಜುಲೈ 1ರಂದು ‘ರಾ’ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡರು. ಇವರ ಅಧಿಕಾರ ಅವಧಿ ಎರಡು ವರ್ಷ ಇರಲಿದೆ. ಪರಾಗ್ 1989ನೇ ಸಾಲಿನ ಪಂಜಾಬ್ ಕೇಡರ್‌ನ ಐಪಿಎಸ್ ಅಧಿಕಾರಿಯಾಗಿದ್ದು, ಗುಪ್ತಚರ ಇಲಾಖೆಯಲ್ಲಿ ಮಾನವ ಬುದ್ಧಿಮತ್ತೆ ಹಾಗೂ ಕೃತಕ ಬುದ್ಧಿಮತ್ತೆಯನ್ನು ಪರಿಣಾಮಕಾರಿಯಾಗಿ ಸಂಯೋಜಿಸಿ ಬಳಸುವಲ್ಲಿ ಪರಿಣತಿ ಹೊಂದಿದ್ದಾರೆ.

ಇನ್ನರ್ ವೀಲ್ ಕ್ಲಬ್ ಮೂಡುಬಿದಿಯ ಜೈನ್ ಪೇಟೆಯಲ್ಲಿ ಸೋಲಾರ್ ಸ್ಟ್ರೀಟ್ ಲೈಟ್ ಅಳವಡಿಕೆ

Article Image

ಇನ್ನರ್ ವೀಲ್ ಕ್ಲಬ್ ಮೂಡುಬಿದಿಯ ಜೈನ್ ಪೇಟೆಯಲ್ಲಿ ಸೋಲಾರ್ ಸ್ಟ್ರೀಟ್ ಲೈಟ್ ಅಳವಡಿಕೆ

ಇನ್ನರ್ ವೀಲ್ ಕ್ಲಬ್ ಮೂಡುಬಿದಿರೆ ಯವರು ಸಾರ್ವಜನಿಕರಿಗೆ ಉಪಯೋಗ ಆಗುವಂತೆ ಸೋಲಾರ್ ಸ್ಟ್ರೀಟ್ ಲೈಟ್ ಅನ್ನು ಸಾವಿರ ಕಂಬದ ಬಸದಿಯ ಹತ್ತಿರ ಅಳವಡಿಸಿದರು. ಮೂಡುಬಿದಿರೆ ಜೈನ ಮಠದ ಪರಮಪೂಜ್ಯ ಸ್ವಸ್ತಿ ಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾ ಸ್ವಾಮೀಜಿಯವರು ಉದ್ಘಾಟಿಸಿ ಇನ್ನರ್ ವೀಲ್ ಕ್ಲಬ್ ಇನ್ನಷ್ಟು ಸಮಾಜ ಮುಖಿಯಾಗಿ ತೊಡಗಿಸಿಕೊಳ್ಳಲಿ ಎಂದು ಹಾಗೂ ನೂತನ ಅಧ್ಯಕ್ಷರಾದ ಶ್ವೇತಾ ಜೈನ್ ಹಾಗೂ ಕಾರ್ಯದರ್ಶಿ ಅನಿತಾರವರಿಗೆ ಶುಭವನ್ನು ಹಾರೈಸಿ ಆರ್ಶೀವದಿಸಿದರು. ಎಂ.ಸಿ.ಎಸ್ ಬ್ಯಾಂಕಿನ ಅಧ್ಯಕ್ಷರು ಹಾಗೂ ರೋಟರಿ ಕ್ಲಬ್‌ ಪೂರ್ವಾಧ್ಯಕ್ಷರಾದ ಎಂ ಬಾಹುಬಲಿ ಪ್ರಸಾದ್ ರವರು ಎಲ್ಲರಿಗೂ ಉಪಯೋಗವಾಗುವಂತಹ ಸಮಾಜಮುಖಿ ಕಾರ್ಯಕ್ರಮ ಇದಾಗಿದ್ದು ಸಾರ್ವಜನಿಕರಿಗೆ ಅತ್ಯಂತ ಉಪಯುಕ್ತವಾಗಿದೆ. ಇತಿಹಾಸ ಪ್ರಸಿದ್ಧ ಸಾವಿರ ಕಂಬದ ಬಸದಿಯ ಪಕ್ಕದಲ್ಲಿ ಇರುವಂತಹ ಈ ರಸ್ತೆಯಲ್ಲಿ ಸ್ಥಳೀಯರು ಮಾತ್ರವಲ್ಲದೆ ಹೊರ ಪ್ರದೇಶದಿಂದ ಬರುವವರು ಕೂಡ ಸಂಚರಿಸುತ್ತಾರೆ. ಇನ್ನರ್ ವೀಲ್ ಕ್ಲಬ್ ಕಳೆದ 33 ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ವರ್ಷವು ಸಾರ್ವಜನಿಕರಿಗೆ ಉಪಯೋಗವಾಗುವಂತಹ ಕೆಲಸವನ್ನು ಮುಂದುವರಿಸಲಿ ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ಮೂಡುಬಿದಿರೆ ಚೌಟರ ಅರಮನೆಯ ಕುಲದೀಪ್ ಎಮ್., ಮಾಜಿ ಸಚಿವರಾದ ಕೆ. ಅಭಯ ಚಂದ್ರ ಜೈನ್, ಪುರಸಭಾ ಸದಸ್ಯ ಶ್ವೇತಾ ಪ್ರವೀಣೆ, ರೋಟರಿ ಕ್ಲಬ್‌ ಪೂರ್ವಾಧ್ಯಕ್ಷರಾದ ಡಾ| ಹರೀಶ್ ನಾಯಕ್, ಡಾ| ವಿನಯ್ ಕುಮಾರ್ ಹೆಗ್ಡೆ, ರೋ. ಜಯರಾಜ್ ಕಂಬಳಿ, ಇನ್ನರ್ ವೀಲ್ ಕ್ಲಬ್‌ ಸದಸ್ಯರಾದ ಪ್ರಕಾಶಿನಿ ಹೆಗ್ಡೆ, ಸುಜಯ ವೇದ ಕುಮಾರ, ವೀಣಾ, ರೇಷ್ಮಾ, ರಮ್ಯಾ, ಅಪೇಕ್ಷೆ, ದಿವ್ಯಾ ಹಾಗೂ ಜೈನ್ ಮಿಲನ್‌ನ ಪದಾಧಿಕಾರಿಗಳು ಭಾಗವಹಿಸಿದ್ದರು.

ನಾರಾವಿ: ಸನ್ಮಾನ ಕಾರ್ಯಕ್ರಮ

Article Image

ನಾರಾವಿ: ಸನ್ಮಾನ ಕಾರ್ಯಕ್ರಮ

ನಾರಾವಿ ಜೈನ್‌ ಮಿಲನ್‌ ವತಿಯಿಂದ ಹೊಸ್ಮಾರು ಸಿದ್ಧರವನ ಕೂಟ ಬಸದಿಯಲ್ಲಿ ಕರಿಮಣೇಲು ಗುತ್ತು, ಕೆ. ಸನತ್‌ ಕುಮಾರ್‌ ಸೇಮಿತ, ಮರೋಡಿ ಗಾಳಿವನ ಎನ್.‌ ಕೆ. ಆರಿಗ, ರತ್ನರಾಜ್‌ ಆರಿಗ ಮತ್ತು ಲಲಿತಮ್ಮ (ಹೊಸ್ಮಾರು ಪ್ರೇಮ್‌ ಕುಮಾರ್‌ರವರ ತಾಯಿ) ಹಾಗೂ ಅಳಿಯೂರಿನ 102 ವರ್ಷದ ಹಿರಿಯ ಜೈನ ಮಹಿಳೆ, ನಾರಾವಿ ನಿರೀಕ್ಷಾ ಜಯವರ್ಮ ಇವರುಗಳನ್ನು ಊರಿನ ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.

ಮುಸಕೊಂಡ್ಲಿ ಶ್ರೀ ಪಾರ್ಶ್ವನಾಥ - ಉಡೆದಾರ್ ಪದ್ಮಾವತಿ ವಾರ್ಷಿಕ ಪೂಜಾ ಸಂಪನ್ನ

Article Image

ಮುಸಕೊಂಡ್ಲಿ ಶ್ರೀ ಪಾರ್ಶ್ವನಾಥ - ಉಡೆದಾರ್ ಪದ್ಮಾವತಿ ವಾರ್ಷಿಕ ಪೂಜಾ ಸಂಪನ್ನ

ತುಮಕೂರು ಜಿಲ್ಲೆ, ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ಮುಸಕೊಂಡ್ಲಿಯ ಇತಿಹಾಸ ಪ್ರಸಿದ್ಧ ಶ್ರೀ ಪಾರ್ಶ್ವನಾಥ ತೀರ್ಥಂಕರ, ಉಡೆದರ್ ಪದ್ಮಾವತಿ ಜೈನಬಸದಿಯ ವಾರ್ಷಿಕ ಪೂಜಾ ಮಹೋತ್ಸವ ಇಂದು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಪನ್ನಗೊಂಡಿತು. ಶ್ರೀ ಕ್ಷೇತ್ರ ನರಸಿಂಹರಾಜಪುರ ಸಿಂಹನಗದ್ದೆ ಬಸ್ತಿ ಮಠದ ಪೀಠಾಧ್ಯಕ್ಷರಾದ ಸ್ವಸ್ತಿಶ್ರೀ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಜಿಗಳವರ ದಿವ್ಯ ಆಶೀರ್ವಾದದೊಂದಿಗೆ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಬೆಳಗ್ಗೆ ನಿತ್ಯ ಅಭಿಷೇಕ, ಪೂಜೆ, ಉತ್ಸವ, ಆರಾಧನೆಗಳು, 108 ಕಳಶಗಳ ಅಭಿಷೇಕಗಳು ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಶ್ರೀ ಪಾರ್ಶ್ವನಾಥ, ಉಡೆದರ್ ಪದ್ಮಾವತಿ ಜೈನ ಬಸದಿ ಸಮಿತಿಯ ಅಧ್ಯಕ್ಷ ಕಾಂತರಾಜು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ತುಮಕೂರು ಶ್ರೀ ದಿಗಂಬರ ಜೈನ ಶ್ರೀ ಪಾರ್ಶ್ವನಾಥ ಜಿನಮಂದಿರ ಸಮಿತಿಯ ಮಹಾವೀರ್, ಮುಸಕೊಂಡ್ಲಿ ಜೈನ ಸಮಾಜದ ಎಂ.ಡಿ ಶಾಂತರಾಜು, ಪತ್ರಿಕಾ ವರದಿಗಾರ ಎಂ.ಡಿ. ಮೋಹನ್ ಎಂ.ಡಿ. ಚಂದ್ರಯ್ಯ. ಪಂಕಜ ಚಂದ್ರಯ್ಯ, ಉಡೆದರ್ ವಂಶಸ್ಥರಾದ ಧರಣಿಂದ್ರ, ಭರತ್ ಕುಮಾರ್, ಪದ್ಮಲತಾ, ಎಂ.ಎನ್. ಬಾಹುಬಲಿ, ಶ್ರೀ ಮಹಾವೀರ ಜೈ ನ ಬಸದಿ ಹಾಗೂ ಶ್ರೀ ಪಾರ್ಶ್ವನಾಥ- ಉಡೆದರ್ ಪದ್ಮಾವತಿ ಜೈನಬಸದಿಯ ಸದಸ್ಯರು, ಮುಸಕೊಂಡ್ಲಿ ಜೈನ ಸಮಾಜದ ಮುಖಂಡರು, ಪದ್ಮಾವತಿ ಮಹಿಳಾ ಸಮಾಜದ ಅಧ್ಯಕ್ಷರು, ಪದಾಧಿಕಾರಿಗಳು, ಉಡೇದಾರ್ ವಂಶಸ್ಥರು, ಮೈಸೂರು, ಮುಸಕೊಂಡ್ಲಿ, ತುಮಕೂರು, ಕುಣಿಗಲ್, ಬೆಂಗಳೂರು, ಸೇರಿದಂತೆ ರಾಜ್ಯದ ವಿವಿಧಡೆಗಳಿಂದ ವಿವಿಧ ಜೈನ ಸಂಘಟನೆಗಳ ಪದಾಧಿಕಾರಿಗಳು, ಶ್ರಾವಕ- ಶ್ರಾವಕಿಯರು ಭಾಗವಹಿಸಿದ್ದರು. ಪ್ರತಿಷ್ಠಾಪನಾಚಾರ್ಯ ಅನಿಲ್ ಕುಮಾರ್ ಹಾಗೂ ಸ್ಥಳೀಯ ಪುರೋಹಿತರಾದ ಅಮೃತ್ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ಜೆ. ರoಗನಾಥ, ತುಮಕೂರು.

ಕಾರ್ಕಳ: ಪೂಜಾ ಕಾರ್ಯಕ್ರಮ

Article Image

ಕಾರ್ಕಳ: ಪೂಜಾ ಕಾರ್ಯಕ್ರಮ

ಕಾರ್ಕಳ: ಅತಿಶಯ ಶ್ರೀ ಕ್ಷೇತ್ರ ನೆಲ್ಲಿಕಾರಿನ ಭ| 1008 ಶ್ರೀ ಅನಂತನಾಥ ಸ್ವಾಮಿ ಸನ್ನಿಧಿಯಲ್ಲಿ ನಾಳೆ (ಜೂ.24) ಮಂಗಳವಾರದಂದು ವರ್ಷಂಪ್ರತಿ ನಡೆಯುವ ಶ್ರೀ ಬ್ರಹ್ಮಯಕ್ಷ ದೇವರ ಸ್ಥಂಭಾರೋಹನ ಪೂಜಾ ಕಾರ್ಯಕ್ರಮವು ಜರಗಲಿರುವುದು ಕಾರ್ಯಕ್ರಮ: ದಿನಾಂಕ 24-06-2025ನೇ ಮಂಗಳವಾರ ಬೆಳಿಗ್ಗೆ ಗಂಟೆ 9.15ರಿಂದ ವಿಮಾನಶುದ್ಧಿ ಬೆಳಿಗ್ಗೆ ಗಂಟೆ 11.55ರಿಂದ ಶ್ರೀ ಬ್ರಹ್ಮಯಕ್ಷ ದೇವರಿಗೆ ಕಲಾರೋಪಣೆ ಮಧ್ಯಾಹ್ನ ಗಂಟೆ 12.30ಕ್ಕೆ ಲಕ್ಷ ಹೂವಿನ ಪೂಜೆ ಮಧ್ಯಾಹ್ನ ಗಂಟೆ 1.00ಕ್ಕೆ ಮಹಾಮಂಗಳಾರತಿ, ಪ್ರಸಾದ ವಿತರಣೆ ರಾತ್ರಿ ಗಂಟೆ 9.00ಕ್ಕೆ ವಿಶೇಷ ಮಂಗಳಾರತಿ, ಸ್ಥಂಭಾರೋಹಣ.

ಜೈನ ಪದವಿಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Article Image

ಜೈನ ಪದವಿಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಮೂಡುಬಿದರೆಯ ಜೈನ ಪದವಿಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ಮತ್ತು ಉಪನ್ಯಾಸಕರಿಗೆ ಪ್ರಾಣಾಯಾಮ ಮತ್ತು ಯೋಗದ ಮಹತ್ವವನ್ನು ತಿಳಿಸಲಾಯಿತು. ಆಳ್ವಾಸ್ ನ್ಯಾಚುರೋಪತಿ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ಪ್ರಜ್ಞ ಶೆಟ್ಟಿ ಹಾಗೂ ಡಾ. ಶಾಲಿನಿ ಅವರು ಪ್ರಾಣಾಯಾಮವನ್ನು ಮಾಡಿಸುವುದರ ಮೂಲಕ ಅದರ ಮಹತ್ವವನ್ನು ವಿವರಿಸಿದರು ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಭಾತ್ ಬಲ್ನಾಡು ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕಿ ನೀಶಾ ಜೈನ್ ನಿರೂಪಿಸಿದರು

ಸತ್ತೂರು, ಧಾರವಾಡ: 11ನೇ ಅಂತರರಾಷ್ಟ್ರೀಯ ಯೋಗ ದಿನ

Article Image

ಸತ್ತೂರು, ಧಾರವಾಡ: 11ನೇ ಅಂತರರಾಷ್ಟ್ರೀಯ ಯೋಗ ದಿನ

ಎಸ್.ಡಿ.ಎಂ. ವಿಶ್ವವಿದ್ಯಾಲಯವು 11ನೇ ಅಂತರರಾಷ್ಟ್ರೀಯ ಯೋಗ ದಿನವನ್ನು ಎಸ್.ಡಿ.ಎಂ. ದಂತ ಮಹಾವಿದ್ಯಾಲಯದಲ್ಲಿ “ಒಂದು ಭೂಮಿ - ಒಂದು ಆರೋಗ್ಯ” ಎಂಬ ಧ್ಯೇಯವಾಕ್ಯದಡಿಯಲ್ಲಿ ಆಚರಿಸಲಾಯಿತು. ಹೆಸರಾಂತ ದಂತ ಚಿಕಿತ್ಸಕರು ಮತ್ತು ಯೋಗ ತಜ್ಞೆಯಾದ ಡಾ. ಕೃತಿಕಾ ಗುತ್ತಲ್ ಅವರು ಮುಖ್ಯ ಅತಿಥಿಯಾಗಿದ್ದರು. ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾದ ಡಾ. ಕೃತಿಕಾ ಗುತ್ತಲ್, ಯೋಗದ ಮಹತ್ವವನ್ನು ತಿಳಿಸಿ ಮಾತನಾಡುತ್ತಾ: ಯೋಗವು ಆರೋಗ್ಯಕರ ಜೀವನಕ್ಕೆ ಸಮಗ್ರ ಜ್ಞಾನವನ್ನು ಒದಗಿಸುತ್ತದೆ, ಯೋಗಾಸನಗಳನ್ನು ಮಾಡುವ ಮೂಲಕ ನಮ್ಮ ದೇಹ ಮತ್ತು ಮನಸ್ಸು ಉಲ್ಲಾಸದಿಂದಿರುತ್ತದೆ, ಯೋಗವು ದೇಹ ಮತ್ತು ಮನಸ್ಸಿಗೆ ಸುಲಭವಾದ ವ್ಯಾಯಾಮವಾಗಿದ್ದು ಎಲ್ಲರೂ ಅದನ್ನು ರೂಢಿಸಿಕೊಳ್ಳಬಹುದು, ಯೋಗವು ದೇಹದ ಲವಲವಿಕೆಯನ್ನು ಹೆಚ್ಚಿಸಿ, ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ, ಮನಸ್ಸಿನ ಶಾಂತತೆಗೆ ಮತ್ತು ದಕ್ಷತೆಯ ಕಾರ್ಯನಿರ್ವಹಣೆಗೆ ಯೋಗಾಭ್ಯಸಗಳು ಅತ್ಯಾವಶ್ಯಕ, ನಿರಂತರ ಯೋಗ ಅಭ್ಯಾಸ ಹಾಗೂ ಪ್ರಾಚೀನ ಆಹಾರ ಸೇವನಾ ಪದ್ದತ್ತಿಯಿಂದ ಉತ್ತಮ ಜೀವನ ಶೈಲಿ ನಡೆಸಲು ಸಾಧ್ಯ ಎಸ್.ಡಿ.ಎಂ. ವಿಶ್ವವಿದ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್, ಸಹ ಉಪ ಕುಲಪತಿಗಳಾದ ವಿ. ಜೀವಂಧರ್ ಕುಮಾರ್, ಕುಲಸಚಿವರಾದ ಡಾ. ಚಿದೇಂದ್ರ ಎಂ ಶೆಟ್ಟರ್, ಡಾ. ಸತೀಶ್ ಪಾಟೀಲ್ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಸುಮಾರು 300ಕ್ಕೂ ಅಧಿಕ ವೈದ್ಯರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಎಸ್.ಡಿ.ಎಂ ದಂತ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಲರಾಮ್ ಡಿ. ನಾಯ್ಕ ಅತಿಥಿಗಳನ್ನು ಸ್ವಾಗತಿಸಿದರು. ಡಾ. ಪ್ರಶಾಂತ್ ಮೋಗಿ ಧನ್ಯವಾದ ಅರ್ಪಿಸಿದರು ಮತ್ತು ಡಾ. ಶ್ರೇಯಾ ಕಾರ್ಯಕ್ರಮ ನಿರೂಪಿಸಿದರು. ಉಜಿರೆಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ತಂಡದವರು ದೇವರ ನಾಮ ಸ್ತುತಿಸಿ, ಯೋಗಾಸನಗಳನ್ನು ಪ್ರಸ್ತುತಿಪಡಿಸಿದರು.

ಮೂಡುಬಿದಿರೆಯ ಎಕ್ಸಲೆಂಟ್ ಸಮೂಹ ಸಂಸ್ಥೆಯಲ್ಲಿ ಅಂತರಾ‌ಷ್ಟ್ರೀಯ ಯೋಗ ದಿನಾಚರಣೆ

Article Image

ಮೂಡುಬಿದಿರೆಯ ಎಕ್ಸಲೆಂಟ್ ಸಮೂಹ ಸಂಸ್ಥೆಯಲ್ಲಿ ಅಂತರಾ‌ಷ್ಟ್ರೀಯ ಯೋಗ ದಿನಾಚರಣೆ

ಯೋಗವು ವಿಶ್ವಕ್ಕೆ ಭಾರತೀಯರ ಅಮೂಲ್ಯ ಕೊಡುಗೆ, ವಿದ್ಯಾರ್ಥಿಗಳು ಯೋಗಭ್ಯಾಸ ಮಾಡುವುದರಿಂದ ದೈನಂದಿನ ಕಾರ್ಯಗಳು ಸುಲಲಿತವಾಗಿ ಸಾಗುತ್ತದೆ. ಯೋಗವನ್ನು ಕೇವಲ ಚಟುವಟಿಕೆ ಆಗಿ ಸ್ವೀಕರಿಸದೆ ದೈನಂದಿನ ಜೀವನ ಶೈಲಿಯಾಗಿ ಸ್ವೀಕರಿಸಿ ಎಂದು ಮೂಡುಬಿದಿರೆಯ ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ರಶ್ಮಿತಾ ಜೈನ್ ಇವರು ಅಭಿಪ್ರಾಯ ಪಟ್ಟರು. ಅಂತರಾ‌ಷ್ಟ್ರೀಯ ಯೋಗ ದಿನಾಚರಣೆಯ ಅವಸರದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ವಿಶ್ವದ್ಯಂತ 180 ಅಧಿಕ ರಾಷ್ಟ್ರಗಳು ಯೋಗಸಕ್ತರಾಗಿದ್ದು. ಯೋಗವು ಇಂದು ವಿಶ್ವಮಾನ್ಯವಾಗಿದೆ, ಪ್ರತಿಯೊಬ್ಬ ಮಗುವು ಕೂಡ ನಿತ್ಯ ಜೀವನದಲ್ಲಿ ಯೋಗಭ್ಯಾಸವನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಂಸ್ಥೆಯ ಹಳೆಯ ವಿದ್ಯಾರ್ಥಿನಿ ಕು. ದಿಶಾ ಪ್ರಶಾಂತ್, ಮಾತನಾಡಿ ಯೋಗಭ್ಯಾಸಕ್ಕೆ ವಯಸ್ಸಿನ ಮಿತಿ ಇಲ್ಲ, ದೇಹ ಮತ್ತು ಮನಸ್ಸಿನ ಶುಚಿತ್ವಕ್ಕೆ ಯೋಗ ಬಲು ಸಹಕಾರಿ, ಪ್ರತಿಯೊಬ್ಬರು ತಮ್ಮ ದಿನನಿತ್ಯದ ಚಟುವಟಿಕೆ ಸುಗಮವಾಗಿ ಸಾಗಲು ಅಭ್ಯಸಿಸುವುದು ಉತ್ತಮ ಎಂದು ತಿಳಿಸಿದರು. ಸಂಸ್ಥೆಯ ಯೋಗ ತರಬೇತುದಾರರಾದ ದಿವ್ಯ ಎಂ. ಇವರು ಉಪಸ್ಥಿತರಿದ್ದು ಆಂತರಿಕ ಮತ್ತು ಬಾಹ್ಯ ಯೋಗಗಳ ಕುರಿತಾಗಿ ಮಾಹಿತಿ ಹಂಚಿಕೊಂಡರು. ಇದೇ ಸಂದರ್ಭದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ಯೋಗ ಪ್ರದರ್ಶನ ಮತ್ತು ಯೋಗ ನೃತ್ಯ ಪ್ರದರ್ಶಿಸಿ ಯೋಗ ದಿನಾಚರಣೆಯ ಸಂಭ್ರಮದಲ್ಲಿ ಪಾಲ್ಗೊಂಡರು. ವಿದ್ಯಾರ್ಥಿ ಶಾಶ್ವತ್ ಕಾರ್ಯಕ್ರಮ ನಿರೂಪಿಸಿ ವಂದಿಸಿದ ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರಾದ ಶಿವಪ್ರಸಾದ್ ಭಟ್, ಸಿ ಬಿ ಎಸ್ ಇ ಶಾಲಾ ಪ್ರಾಂಶುಪಾಲರಾದ ಶ್ರೀಪ್ರಸಾದ್, ಉಪ ಮುಖ್ಯೋಪಾಧ್ಯಾಯರಾದ ಜಯಶೀಲ, ಜೀವಶಾಸ್ತ್ರ ಉಪನ್ಯಾಸಕರಾದ ಪ್ರಶಾಂತ್ ಆರ್ ಉಪಸ್ಥಿತರಿದ್ದರು.

ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ಮಾಹಿತಿ ಶಿಬಿರ ಕಾರ್ಯಕ್ರಮದಲ್ಲಿ ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಅಭಿನಂದನೆ

Article Image

ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ಮಾಹಿತಿ ಶಿಬಿರ ಕಾರ್ಯಕ್ರಮದಲ್ಲಿ ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಅಭಿನಂದನೆ

ಪರಮಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾ ಸ್ವಾಮೀಜಿಯವರು ಮೂಡಬಿದ್ರಿ ಶ್ರೀ ದಿಗಂಬರ ಜೈನ ಮಠದಲ್ಲಿ ನಡೆದ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ಮಾಹಿತಿ ಶಿಬಿರ ಕಾರ್ಯಕ್ರಮದಲ್ಲಿ ಸಂಘಟನಾ ಕಾರ್ಯದರ್ಶಿಗಳು ಕರ್ನಾಟಕ ಸರಕಾರಿ ನಿವೃತ್ತಿ ನೌಕರರ ಸಂಘ ಬೆಂಗಳೂರು ಹಾಗೂ ಬೆಳ್ತಂಗಡಿ ತಾಲೂಕು ರಾಜ್ಯ ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರು ಆದ ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಅಭಿನಂದಿಸಿದರು. ಈ ಸಂದರ್ಭದಲ್ಲಿ ರಾಜ್ಯ ಅಲ್ಪ ಸಂಖ್ಯಾತ ಆಯೋಗದ ಸದಸ್ಯರಾದ ಪರಿಮಳ, ಬಾಹುಬಲಿ ಪ್ರಸಾದ್, ಉಪಸ್ಥಿತರಿದ್ದರು.

ದ ಕ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಮಾಹಿತಿ ಶಿಬಿರ

Article Image

ದ ಕ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಮಾಹಿತಿ ಶಿಬಿರ

ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರು ಶ್ರೀ ದಿಗಂಬರ ಜೈನ ಮಠ ಮೂಡುಬಿದ್ರೆ ಇವರ ಪಾವನ ಸಾನಿಧ್ಯ ಹಾಗೂ ಮಾರ್ಗದರ್ಶನದಲ್ಲಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಮಾಹಿತಿ ಶಿಬಿರವು ಮೂಡಬಿದ್ರೆ ಜೈನ್ ಮಠದ ಶ್ರೀ ಭಟ್ಟಾರಕರ ಭವನದಲ್ಲಿ ಜರಗಿತು. ಕಾರ್ಯಕ್ರಮವನ್ನು ಪೂಜ್ಯ ಸ್ವಾಮೀಜಿಯವರು ಉದ್ಘಾಟಿಸಿದರು. ಶಿಬಿರದಲ್ಲಿ ರಾಜ್ಯ ಅಲ್ಪಸಂಖ್ಯಾತ ಆಯೋಗದ ಸದಸ್ಯರಾದ ಪರಿಮಳ ಅವರು ದ ಕ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಗಳಾದ ಜಿನೇಂದ್ರ ಕೋಟ್ಯಾನ್, ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಬಸದಿಯ ಆಡಳಿತ ಮಂಡಳಿಯ ಸಂಚಾಲಕರು ಡಾ. ಕೆ. ಜಯಕೀರ್ತಿ ಜೈನ್, ಶ್ರೀ ಜೈನ್ ಮಠದ ಸಲಹಾ ಸಮಿತಿ ಅಧ್ಯಕ್ಷರಾದ ಬಾಹುಬಲಿ ಪ್ರಸಾದ್, ಜಿಲ್ಲಾ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧಿಕಾರಿಗಳು ಭಾಗವಸಿದ್ದರು. ರಾಜ್ಯ ಅಲ್ಪ ಸಂಖ್ಯಾತ ಆಯೋಗದ ಸದಸ್ಯರಾದ ಪರಿಮಳರವರನ್ನು ಪೂಜ್ಯ ಸ್ವಾಮೀಜಿಯವರು ಸನ್ಮಾನಿಸಿದರು, ಜಿನೇಂದ್ರ ಕೋಟ್ಯಾನ್, ಡಾ. ಕೆ. ಜಯಕೀರ್ತಿ ಜೈನ್ ರವರನ್ನು ಪೂಜ್ಯ ಸ್ವಾಮೀಜಿಯವರು ಅಭಿನಂದಿಸಿದರು. ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪುರೋಹಿತರು ಹಾಗೂ ಶ್ರಾವಕ ಶ್ರಾವಕಿಯರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಪುರೋಹಿತರುಗಳಿಗೆ ಧಾರ್ಮಿಕ ಪ್ರಮಾಣ ಪತ್ರವನ್ನು ನೀಡಲಾಯಿತು. ಡಾ. ಕೆ. ಜಯಕೀರ್ತಿ ಜೈನ್ ಸ್ವಾಗತಿಸಿ, ಬಾಹುಬಲಿ ಪ್ರಸಾದ್ ವಂದನಾರ್ಪಣೆ ಸಲ್ಲಿಸಿ, ಸೌಮ್ಯಶ್ರೀ ಪ್ರಾoಶುಪಾಲರು ಸ್ವಸ್ತಿಶ್ರೀ ಪದವಿ ಪೂರ್ವ ವಸತಿ ಕಾಲೇಜು ಮೂಡುಬಿದ್ರಿ ಕಾರ್ಯಕ್ರಮ ನಿರೂಪಿಸಿದರು.

ಜೂನ್ 21: ಮೈಸೂರಿನಲ್ಲಿ ಹನ್ನೊಂದನೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Article Image

ಜೂನ್ 21: ಮೈಸೂರಿನಲ್ಲಿ ಹನ್ನೊಂದನೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಉಜಿರೆ: ಎಸ್.ಡಿ.ಎಂ. ಪ್ರಕೃತಿಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜು, ಉಜಿರೆ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳು, ಶಾಂತಿವನ ಟ್ರಸ್ಟ್‌ನ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು “ಪಯಣ” ವಿಂಟೇಜ್ ಕಾರುಗಳ ಸಂಗ್ರಹಾಲಯ, ಮೈಸೂರು-ಇವುಗಳ ಸಂಯುಕ್ತ ಆಶ್ರಯದಲ್ಲಿ ಜೂ.21 ರಂದು ಶನಿವಾರ ಬೆಳಿಗ್ಗೆ ಏಳು ಗಂಟೆಯಿಂದ ಮೈಸೂರಿನಲ್ಲಿ “ಪಯಣ” ಆವರಣದಲ್ಲಿರುವ ಸಭಾಭವನದಲ್ಲಿ ಹನ್ನೊಂದನೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಯೋಜಿಸಲಾಗಿದೆ ಎಂದು ಎಸ್.ಡಿ.ಎಂ. ಪ್ರಕೃತಿಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ ಶೆಟ್ಟಿ ಮತ್ತು ಯೋಗ ನಿರ್ದೇಶಕ ಡಾ. ಶಶಿಕಾಂತ ಜೈನ್ ತಿಳಿಸಿದ್ದಾರೆ. ಮೈಸೂರು ಶ್ರೀ ರಾಮಕೃಷ್ಣ ಆಶ್ರಮದ ಅಧ್ಯಕ್ಷರಾದ ಸ್ವಾಮಿ ಮುಕ್ತಿದಾನಂದಜೀ ಮಹಾರಾಜ್ ಸಮಾರಂಭವನ್ನು ಉದ್ಘಾಟಿಸುವರು. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯ ಸ್ವಾಮಿ, ಸಂಸದರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಬಂಡಿಸಿದ್ದೇಗೌಡ ಮತ್ತು ಮಾಜಿ ಸಚಿವ ಸಿ. ಎಸ್. ಪುಟ್ಟರಾಜು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭಾಶಂಸನೆ ಮಾಡುವರು. ಮೈಸೂರಿನಲ್ಲಿ ವಿವಿಧ ಕೇಂದ್ರಗಳಲ್ಲಿ ಈಗಾಗಲೆ ಸಾರ್ವಜನಿಕರಿಗೆ ಯೋಗ ತರಬೇತಿ ಶಿಬಿರ ನಡೆಸಿದ್ದು, ಇಲ್ಲಿ ತರಬೇತಿ ಪಡೆದ 3,500 ಮಂದಿ “ಪಯಣ”ದಲ್ಲಿ ನಡೆಯುವ ವಿಶ್ವಯೋಗ ದಿನಾಚರಣೆಯಲ್ಲಿ ಭಾಗವಹಿಸುವರು. ಉಜಿರೆಯ ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿ ಆಶ್ರಯದಲ್ಲಿ ನಡೆಸಲ್ಪಡುವ ಎಲ್ಲಾ 54 ಶಿಕ್ಷಣ ಸಂಸ್ಥೆಗಳಲ್ಲಿ ಕೂಡಾ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಣಿ ಅಬ್ಬಕ್ಕ ರಾಣಿ ಚೆನ್ನಭೈರಾದೇವಿ ನಾಡಿನ ರಕ್ಷಣೆ ಮಾಡಲಿಲ್ಲವೇ

Article Image

ರಾಣಿ ಅಬ್ಬಕ್ಕ ರಾಣಿ ಚೆನ್ನಭೈರಾದೇವಿ ನಾಡಿನ ರಕ್ಷಣೆ ಮಾಡಲಿಲ್ಲವೇ

ನಮ್ಮ ದೇಶದಲ್ಲಿ ಮಕ್ಕಳ ಶಾಲಾ ಪಠ್ಯ ಪುಸ್ತಕಗಳಲ್ಲೂ ಮಕ್ಕಳಿಗೆ ನಿಜವಾದ ಇತಿಹಾಸವನ್ನು ತಿಳಿಸಲಾಗುವುದಿಲ್ಲ. ಪಠ್ಯ ಪುಸ್ತಕ ರಚನೆಯಲ್ಲೂ ರಾಜಕೀಯ ಪಕ್ಷಪಾತವನ್ನು ಮಾಡಲಾಗುತ್ತಿದೆ. ಇಲ್ಲೂ ಕೂಡ ಧರ್ಮ, ಜಾತಿಗಳನ್ನು ನೋಡಲಾಗುತ್ತಿದೆ. ಇದನ್ನು ಉದಾಹರಣೆ ಸಹಿತ ವಿವರಿಸುತ್ತೇನೆ. ಇವತ್ತು ನಮ್ಮ ಮನೆಯ ಮಕ್ಕಳಿಗೆ ಓದಿಸುವಾಗ ಇಂಗ್ಲೀಷ್ ಮೀಡಿಯಂ 5 ನೇ ತರಗತಿಯ ಕನ್ನಡ ಪಠ್ಯ ಪುಸ್ತಕವನ್ನು ಗಮನಿಸುತ್ತಿರುವಾಗ ಈ ವಿಷಯ ತಿಳಿಯಿತು. ನಮ್ಮ ನಾಡಿನ ರಕ್ಷಣೆ ಮಾಡಿದವರ ಪಟ್ಟಿ ಗಮನಿಸಿದೆ. ಕಿತ್ತೂರು ಚೆನ್ನಮ್ಮ, ರಾಣಿ ಲಕ್ಷ್ಮೀಬಾಯಿ, ಟಿಪ್ಪುಸುಲ್ತಾನ್, ಭಗತ್ ಸಿಂಗ್, ಚಂದ್ರಶೇಖರ ಆಜಾದ್ ಇಷ್ಟು ಜನರ ಹೆಸರಿದೆ. ಇವರ ಹೆಸರಿನ ಬಗ್ಗೆ ನನ್ನದೇನೂ ಆಕ್ಷೇಪಣೆ ಇಲ್ಲ. ಇಲ್ಲಿ ಎಲ್ಲರ ಹೆಸರು ಹೇಳಲೂ ಕೂಡ ಅಸಾಧ್ಯ ಎಂಬುದೂ ಕೂಡ ನನಗೆ ತಿಳಿದಿದೆ. ಇಲ್ಲಿ ಮುಖ್ಯರಾದವರ ಹೆಸರನ್ನು ಪ್ರಸ್ತಾಪಿಸಲಾಗಿದೆ ಎಂಬ ವಿಚಾರವೂ ಕೂಡ ಸರಿ ಓಕೆ. ಆದರೆ ಇವರೆಲ್ಲರಿಗಿಂತ ಮೊದಲು ನಮ್ಮ ನಾಡಿನ ರಕ್ಷಣೆಗಾಗಿ ಜೀವವನ್ನೇ ತೆತ್ತ ಇಬ್ಬರು ಪ್ರಮುಖ ಮಹಿಳಾ ಹೋರಾಟಗಾರರಾದ ರಾಣಿ ಅಬ್ಬಕ್ಕ, ರಾಣಿ ಚೆನ್ನಾಭೈರಾದೇವಿಯರ ಹೆಸರು ಇತಿಹಾಸಕಾರರಿಗೆ ನೆನಪು ಆಗಲಿಲ್ಲವೇ. ರಾಣಿ ಅಬ್ಬಕ್ಕಳ ಪರಾಕ್ರಮಕ್ಕೆ ಪೋರ್ಚುಗೀಸರು ಧರಶಾಹಿಯಾಗಿದ್ದರು, ಆಕೆಯ ಪರಾಕ್ರಮವನ್ನು ವಿದೇಶದಿಂದ ಬಂದು ನೋಡಿದ್ದಂತಹ ಪ್ರವಾಸಿಗರೇ ತಮ್ಮ ಲೇಖನದಲ್ಲಿ ರಾಣಿ ಅಬ್ಬಕ್ಕಳನ್ನು ಹಾಡಿ ಹೊಗಳಿದ್ದಾರೆ. ಪೋರ್ಚುಗೀಸರೊಡನೆ ನಿರಂತರವಾಗಿ ಹೋರಾಡಿ ಗೇರುಸೊಪ್ಪೆಯನ್ನು ರಕ್ಷಿಸಿದ ಕಾಳು ಮೆಣಸಿನ ರಾಣಿ ಹಾಗೂ ಇಂಗ್ಲೆಂಡಿನ ರಾಣಿಗೆ ಸರಿಸಮಳು ಎಂದು ವಿದೇಶಿಗರಿಂದ ಬಣ್ಣಿಸಲ್ಪಟ್ಟ ಚೆನ್ನಾಭೈರಾದೇವಿಯನ್ನು ಇತಿಹಾಸಕಾರರು ಮರೆತಿದ್ದಾರೆ. ಮಹಿಳೆಯರಾಗಿದ್ದುಕೊಂಡು ಈ ನಾಡಿನ ರಕ್ಷಣೆಗಾಗಿಯೇ ಪ್ರಾಣತೆತ್ತ ಈ ಮಹಿಳಾ ಮಣಿಗಳನ್ನು ಪಠ್ಯಪುಸ್ತಕ ರಚನಾ ಸಮಿತಿಯವರು ಧರ್ಮದ ಆಧಾರದ ಮೇಲೆ ಪುಸ್ತಕದಿಂದ ಹೊರಗಿಟ್ಟಿರಬೇಕು ಅನಿಸುತ್ತೆ. ಖಂಡಿತವಾಗಿಯೂ ಅನೇಕರು ಈ ನಾಡುನುಡಿಗಾಗಿ ಪ್ರಾಣತೆತ್ತಿದ್ದಾರೆ. ಆದರೆ ಇಲ್ಲಿ ಬೇಕಂತಲೇ ತಾರತಮ್ಯ ಮಾಡಿ ಅಬ್ಬಕ್ಕ ಹಾಗೂ ಚೆನ್ನಾಭೈರಾದೇವಿಯ ಹೆಸರನ್ನು ಇತಿಹಾಸದಿಂದ ಮರೆಮಾಚಬೇಕೆಂಬ ಹುನ್ನಾರ ನಡೆಯುತ್ತಿದೆ ಎಂದು ಭಾಸವಾಗುತ್ತಿದೆ. ಮಹಾವೀರರ ಹೆಸರಿಲ್ಲ ಯಾಕೆ ಹಾಗೆಯೇ ದಾರ್ಶನಿಕರ ಹೆಸರನ್ನೂ ಕೂಡ ಉಲ್ಲೇಖಿಸಲಾಗಿದೆ. ಬುದ್ಧ, ಬಸವ, ಅಲ್ಲಮ, ಗಾಂಧಿ, ಅಂಬೇಡ್ಕರ್ ಹೆಸರನ್ನು ತಿಳಿಯಪಡಿಸಲಾಗಿದೆ. ಇಲ್ಲೂ ಕೂಡ ಕೊಟ್ಟಿರುವ ಹೆಸರಿನ ಬಗ್ಗೆ ಆಕ್ಷೇಪ ಇಲ್ಲ. ಆದರೆ ಜಗತ್ತಿನ ಮಹಾನ್ ದಾರ್ಶನಿಕ, ತ್ಯಾಗ ಅಹಿಂಸೆಯ ಪ್ರತಿಪಾದಕ ಮಹಾವೀರರ ಹೆಸರು ತೆಗೆದುಕೊಂಡಿಲ್ಲ. ಮಹಾವೀರರ ಉಪದೇಶದಂತೆ ನಡೆದರೆ ಈ ಜಗತ್ತು ಶಾಂತಿಯಿಂದ, ನೆಮ್ಮದಿಯಿಂದ ಇರುತ್ತದೆ ಎಂದು ಅನೇಕ ದಾರ್ಶನಿಕರು ಉಲ್ಲೇಖಿಸಿದ್ದಾರೆ. ಬುದ್ಧನಿಗಿಂತಲೂ ಮೊದಲೇ ಮಹಾವೀರರು ಅಹಿಂಸೆಯನ್ನು ಬೋಧಿಸಿದ್ದಾರೆ ಎಂಬುದು ಅತೀ ಬುದ್ಧಿವಂತ ಇತಿಹಾಸಕಾರರಿಗೆ ಗೊತ್ತಿಲ್ಲ ಅನಿಸುತ್ತೆ ಪಾಪ. ಆದರೆ ಈ ಪಠ್ಯಪುಸ್ತಕ ಸಮಿತಿಯವರು ಬೇಕಂತಲೇ ಧರ್ಮಜಾತಿಗಳನ್ನು , ರಾಜಕೀಯ ಮಾಡಿ ನೋಡಿ ಹೆಸರುಗಳನ್ನು ತೆಗೆದುಕೊಂಡಿರುವುದು ಅನಿಸುತ್ತೆ. ಮಕ್ಕಳಿಗೆ ನಿಜವಾದ ಇತಿಹಾಸ ತಿಳಿಸುವಂತಾಗಲಿ ಮಕ್ಕಳನ್ನು ನಿಜವಾದ ಇತಿಹಾಸ ತಿಳಿದುಕೊಳ್ಳುವಲ್ಲಿ ವಂಚನೆ ಮಾಡಲಾಗುತ್ತದೆ. ಮೊದಲಿನಿಂದಲೂ ಬ್ರಿಟಿಷರಿಂದ ಹಿಡಿದು ಈಗಿನವರೆಗೂ ನಿಜವಾದ ಇತಿಹಾಸವನ್ನು ಬಚ್ಚಿಡಲಾಗುತ್ತಿದೆ ಹಾಗೂ ತಿರುಚಲಾಗುತ್ತಿದೆ. ವಿವಾದಿತ ವ್ಯಕ್ತಿಗಳನ್ನು ಪಠ್ಯಪುಸ್ತಕಗಳಲ್ಲಿ ಅಳವಡಿಸಿ ನಾಡಿನಲ್ಲಿ ಅರಾಜಕತೆಯನ್ನು ಸೃಷ್ಟಿಸಲಾಗುತ್ತಿದೆ. ಅದರಲ್ಲೂ ಜೈನ ಧರ್ಮಕ್ಕೆ ಸಂಬಂಧಿಸಿದ ವಿಚಾರಗಳನ್ನು ಇರುವ ಪಠ್ಯಪುಸ್ತಕಗಳಿಂದಲೂ ಕೈಬಿಡುತ್ತಿರುವ ವಿಚಾರ ಬೆಳಕಿಗೆ ಬರುತ್ತಿದೆ. ರಾಜಕೀಯ ಪ್ರೇರಿತವಾಗಿ ಡೊಂಬರಾಟ ಆಡುತ್ತಿರುವ ಈ ವ್ಯವಸ್ಥೆಗೆ ನನ್ನ ಧಿಕ್ಕಾರವಿದೆ. ಅದರಲ್ಲೂ ಭಾರತದ ಎಲ್ಲಾ ರಾಜಕೀಯ ಪಕ್ಷಗಳ ಕಪಟ ಹಾಗೂ ನೀಚ ರಾಜಕೀಯಕ್ಕೆ ಧಿಕ್ಕಾರವಿದೆ. ನಿರಂಜನ್ ಜೈನ್ ಕುದ್ಯಾಡಿ

ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಪಿತೃದೇವೋಭವ ಕಾರ್ಯಕ್ರಮ

Article Image

ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಪಿತೃದೇವೋಭವ ಕಾರ್ಯಕ್ರಮ

ಮೂಡುಬಿದಿರೆ: ನಾವೆಲ್ಲಾ ಅಪ್ಪ ಎಂದರೆ ಪ್ರೀತಿ ಮಾಡುತ್ತೇವೆ. ನಮ್ಮ ಎಲ್ಲಾ ತಪ್ಪುಗಳನ್ನು ತಿದ್ದಿ ಸರಿದಾರಿಗೆ ತರುವ ಹೀರೋ ಅಪ್ಪ. ಅಮ್ಮನಿಂದ ಜೀವ ಲಭಿಸಿದರೆ, ಅಪ್ಪನಿಂದ ಜೀವನ ಲಭಿಸುತ್ತದೆ. ನಮ್ಮ ಧೈರ್ಯವೇ ಅಪ್ಪನ ಕೈ ಬೆರಳು. ಅಪ್ಪನ ಹೆಗಲ ಮೇಲೆ ಮಲಗಿದಾಗ ಆಗುವ ಆನಂದ ಮತ್ತೆಲ್ಲಿಯೂ ಸಿಗುವುದಿಲ್ಲ. ಅಪ್ಪ ನಮ್ಮ ಕಣ್ಣ ಮುಂದಿರುವ ನಿಜವಾದ ದೇವರು. ಅಪ್ಪನಿಂದ ಜೀವನದಲ್ಲಿ ಶಿಸ್ತು, ಬದುಕುವ ಕಲೆ ಎಲ್ಲವನ್ನೂ ಮಕ್ಕಳು ಕಲಿಯುತ್ತಾರೆ. ಎಂದು ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್ ಹೇಳಿದರು. ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ ಆಯೋಜಿಸಿದ್ದ ತಂದೆಗೆ ಗೌರವ ಸಲ್ಲಿಸುವ ವಿನೂತನ “ಪಿತೃ ದೇವೋಭವ” ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು, ಸಂಸ್ಥೆಯ ಕಾರ್ಯದರ್ಶಿಗಳಾದ ರಶ್ಮಿತಾ ಜೈನ್ ಮಾತನಾಡಿ, ತಂದೆಯೇ ನನಗೆ ದೇವರು. ತಂದೆಯೇ ನನ್ನ ಖುಷಿ, ಸಂತಸ ಎಲ್ಲವೂ ಆಗಿದ್ದಾರೆ. ಅವರ ಮಮತೆ, ಮಾರ್ಗದರ್ಶನ ಮತ್ತು ತಾಳ್ಮೆ ನನ್ನ ಜೀವನವನ್ನು ಬೆಳಗಿಸುತ್ತಿವೆ. ಅವರು ಬೋಧಿಸಿದ ಪ್ರತೀ ಪಾಠ, ತೋರಿಸಿದ ಪ್ರತೀ ದಾರಿಯಲ್ಲಿ ನಾ ನನ್ನ ಕನಸುಗಳನ್ನು ಸಾಕಾರಗೊಳಿಸಿಕೊಂಡು ಸಾಗುತ್ತಿದ್ದೇನೆ. ನನ್ನ ಕನಸುಗಳಿಗೆ ಚೆನ್ನಾಗಿ ನಿಂತು ನಾ ಓಡಿದಾಗ ಹಿಂದೆಯೇ ಓಡಿ ನೀಡಿದ ಆಶೀರ್ವಾದಗಳ ನೆರಳನ್ನು ನಾನು ಇಂದಿಗೂ ಅನುಭವಿಸುತ್ತಿದ್ದೇನೆ. ತಂದೆ ಮಕ್ಕಳ ನಡುವಿನ ಪ್ರೀತಿ, ಒಲುಮೆ, ಭಾಂದವ್ಯ ಎಂದಿಗೂ ಮರೆಯಲಾಗದು. ಮಕ್ಕಳಾದ ನಾವು ನಮ್ಮ ತಂದೆಯ ನೋವು-ನಲಿವುಗಳೆಲ್ಲವೂ ತಿಳಿದಿರಬೇಕು. ಅವರ ಪ್ರತೀ ಹೆಜ್ಜೆಯಲ್ಲಿಯೂ ನಾವೂ ಅವರ ಜೊತೆಯಾಗಿರಬೇಕು ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳವರ ತಂದೆ ಹಾಗೂ ಟ್ರಸ್ಟಿಯೂ ಆಗಿರುವ ಕೆ. ರಾಜರತ್ನ ಜೈನ್ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಆಡಳಿತ ನಿರ್ದೇಶಕರಾದ ಡಾ. ಬಿ. ಪಿ. ಸಂಪತ್ ಕುಮಾರ್, ಮುಖ್ಯೋಪಾಧ್ಯಾ ಯರಾದ ಶಿವಪ್ರಸಾದ್ ಭಟ್, ಉಪ ಮುಖ್ಯೋಪಾಧ್ಯಾಯ ಜಯ ಶೀಲ, ಕಾರ್ಕಳದ ಸೂಪರ್ ಮಾರ್ಕೆಟ್‌ನ ಮಾಲಿಕರಾದ ರೂಪೇಶ್ ಉಪಸ್ಥಿತರಿದ್ದರು. ನಂತರ ತಂದೆಯ ಮಹತ್ವವನ್ನು ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ವಿದ್ಯಾರ್ಥಿಗಳಾದ ಧನುಷ್ ನಿರೂಪಿಸಿದರು. ಸಾನ್ವಿ ಸ್ವಾಗತಿಸಿದರು. ವರುಣ್ ವಂದಿಸಿದರು.

ತುಮಕೂರು ಟಿ.ಎನ್. ಅಜಿತ್ ಜೈನ್ ರವರು ನಿಧನ

Article Image

ತುಮಕೂರು ಟಿ.ಎನ್. ಅಜಿತ್ ಜೈನ್ ರವರು ನಿಧನ

ತುಮಕೂರು ನಗರ ಅಗ್ರಹಾರದಲ್ಲಿ ವಾಸವಾಗಿದ್ದ ತುಮಕೂರಿನ ಹೆಸರಾಂತ ಸನ್ಮತಿ ಪೇಂಟ್ಸ್ ಮಾಲೀಕರಾದ, ಹಿರಿಯ ವಾಣಿಜ್ಯೋದ್ಯಮಿ ಟಿ.ಎನ್. ಅಜಿತ್ ಜೈನ್ ರವರು ಇಂದು (ಜೂ.13) ಶುಕ್ರವಾರ ಬೆಳಿಗ್ಗೆ ನಿಧನ ಹೊಂದಿದರು. ಇವರು ಪತ್ನಿ ಶಾಂತಲಾ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಪರಮಪೂಜ್ಯ ಯುಗಳ ಮನಿ ಮಹಾರಾಜರ ಸಂಘಪತಿಗಳಾಗಿದ್ದ ಇವರು ಧಾರ್ಮಿಕ, ಸಾಮಾಜಿಕ ವ್ಯವಹಾರಿಕ, ಇಂಜಿನಿಯರಿಂಗ್, ಶೈಕ್ಷಣಿಕ ಹಾಗೂ ಧರ್ಮ ಪ್ರಭಾವನೆಗೆ ಮಾಡಿದ ಶ್ರೇಷ್ಠ ಸೇವೆ ಹಾಗೂ ಸತ್ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.

ವೈ. ಡಿ.ರತ್ನಾಕರವರಿಗೆ ಸನ್ಮಾನ

Article Image

ವೈ. ಡಿ.ರತ್ನಾಕರವರಿಗೆ ಸನ್ಮಾನ

ಬೆಂಗಳೂರಿನ ಕರ್ನಾಟಕ ಪ್ರೆಸ್ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ಯುವ ರತ್ನ ಪ್ರಶಸ್ತಿಯ ಪ್ರದಾನ ಸಮಾರಂಭದಲ್ಲಿ ಬೆಂಗಳೂರಿನ ಪುಟ್ಟೇನ ಹಳ್ಳಿಯ ಸಿದ್ಧಾಂಥ ಧಾರ್ಮಿಕ ಪತ್ರಿಕೆಯ ಸಂಪಾದಕರಾದ ವೈ. ಡಿ.ರತ್ನಾಕರವರಿಗೆ ಸಂಘದ ಅಧ್ಯಕ್ಷರು ಹಾಗೂ ವೇದಿಕೆಯಲ್ಲಿನ ಗಣ್ಯರು ಪ್ರಶಸ್ತಿನೀಡಿ ಸನ್ಮಾನಿಸಿದರು.

ಜೈನ ಯುವ ಗೆಳೆಯರ ಬಳಗದಿಂದ ಬ್ಯಾಡ್ಮಿಂಟನ್ ಪಂದ್ಯಾವಳಿ

Article Image

ಜೈನ ಯುವ ಗೆಳೆಯರ ಬಳಗದಿಂದ ಬ್ಯಾಡ್ಮಿಂಟನ್ ಪಂದ್ಯಾವಳಿ

ಜೈನ ಯುವ ಗೆಳೆಯರ ಬಳಗ (ಯೂತ್ ವಿಂಗ್, ಜೈನ ಗೆಳೆಯರ ಬಳಗ) ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಜುಲೈ 13ರಂದು ಭಾನುವಾರ, ಬೆಳಿಗ್ಗೆ 9:30 ರಿಂದ ಸಂಜೆ 5:00ರವರೆಗೆ ಮಂಜುಷಾ ಸ್ಪೋರ್ಟ್ಸ್ ಕ್ಲಬ್ ಪಟೇಲ್ ಚಿನ್ನಪ್ಪ ರೋಡ್, ಆದಿತ್ಯ ಲೇಔಟ್, ರಾಜರಾಜೇಶ್ವರಿ ನಗರ, ಬೆಂಗಳೂರಿನಲ್ಲಿ ಆಯೋಜಿಸಿದೆ. ಕೇವಲ ದಿಗಂಬರ ಜೈನರಿಗೆ ಮಾತ್ರ, ಸ್ಪರ್ಧೆಯ ವಿಭಾಗಗಳು: ಪುರುಷರ ಡಬಲ್ಸ್: 40 ವರ್ಷಕ್ಕಿಂತ ಕಡಿಮೆ, 40 ವರ್ಷಕ್ಕಿಂತ ಹೆಚ್ಚು ಮಹಿಳೆಯರ ಡಬಲ್ಸ್: 35 ವರ್ಷಕ್ಕಿಂತ ಕಡಿಮೆ, 35 ವರ್ಷಕ್ಕಿಂತ ಹೆಚ್ಚು ಪ್ರವೇಶ ಶುಲ್ಕ: ₹ 800/- (ಪ್ರತಿ ತಂಡಕ್ಕೆ), ಸೀಮಿತ ಸ್ಥಾನಗಳು ಮಾತ್ರ ನಿರಾಶೆಯಾಗದಂತೆ ಮುಂಚಿತವಾಗಿ ನೋಂದಾಯಿಸಿ. ಗಮನಿಸಬೇಕಾದ ಸಂಗತಿಗಳು: - ವಯಸ್ಸಿನ ಪುರಾವೆಗಾಗಿ ಆಧಾರ್ ಪ್ರತಿ ಅಗತ್ಯ - ರಾಜ್ಯ/ರಾಷ್ಟ್ರೀಯ ಶ್ರೇಣಿಯ ಆಟಗಾರರಿಗೆ ಅನುಮತಿಯಿಲ್ಲ - ಯೋನೆಕ್ಸ್ ಮಾವಿಸ್ 350 ಶಟಲ್ ಬಳಸಲಾಗುವುದು - ಅಂಪೈರ್ ನಿರ್ಧಾರ ಅಂತಿಮ - ಆಟಕ್ಕೆ ಮಾರ್ಕ್ ಇಲ್ಲದ ಶೂಗಳು ಮಾತ್ರ ಅನುಮತಿ - ಎಲ್ಲಾ ಭಾಗವಹಿಸುವವರಿಗೆ ಪ್ರಮಾಣ ಪತ್ರ ಮತ್ತು ಪದಕ ನೀಡಲಾಗುವುದು - ಎಲ್ಲರಿಗೂ ಮಧ್ಯಾಹ್ನದ ಊಟ ಒದಗಿಸಲಾಗುವುದು ಪ್ರಶಸ್ತಿಗಳು: ವಿಜೇತರು, ಉಪವಿಜೇತರಿಗೆ ಟ್ರೋಫಿಗಳು ನೋಂದಣಿಗಾಗಿ ಸಂಪರ್ಕಿಸಿ: ಸನ್ಮತಿ - 91 98453 28203 ಮಹಾವೀರ್ ರಾಜಕೀರ್ತಿ- 91 97427 09709 ವಿದ್ಯಾನಂದ - 91 98450 81162 ಚಿರಂತ್ - 91 72046 96475

ಸ್ವಸ್ತಿಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ 2025-26ನೆ ಸಾಲಿನ ಶೈಕ್ಷಣಿಕ ತರಗತಿಗಳ ಶುಭಾರಂಭ ಕಾರ್ಯಕ್ರಮ

Article Image

ಸ್ವಸ್ತಿಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ 2025-26ನೆ ಸಾಲಿನ ಶೈಕ್ಷಣಿಕ ತರಗತಿಗಳ ಶುಭಾರಂಭ ಕಾರ್ಯಕ್ರಮ

ಮೂಡುಬಿದಿರೆ, ಜೂ.12: ಸ್ವಸ್ತಿಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ 2025-26ನೆ ಸಾಲಿನ ಶೈಕ್ಷಣಿಕ ತರಗತಿಗಳ ಶುಭಾರಂಭ ಕಾರ್ಯಕ್ರಮವನ್ನು ಪ. ಪೂ. ಜಗದ್ಗುರು ಡಾ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಮಹಾಸ್ವಾಮೀಜಿಗಳವರು ಅಧ್ಯಕ್ಷತೆ ವಹಿಸಿ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ವಿಧ್ಯೆ ಯಾರೂ ಅಪಹರಿಸಲಾಗದ ಅಮೂಲ್ಯ ನಿಧಿ ಅದನ್ನು ಉತ್ತಮ ಮನಸ್ಸೆಂಬ ಕುಂಭದಲ್ಲಿ ಭೋದಕರ ಅಮೃತವಾಣಿ ತುಂಬಿ ಉದಾಸೀನ ಮರೆವು ಎಂಬ ಕೊಳೆಯನ್ನು ತೊಳೆದು ಯಶಸ್ವಿ ಜೀವನಕ್ಕಾಗಿ ಉಪಯೋಗಿಸಿ ಎಂದು ಆಶೀರ್ವಾದ ನೀಡಿದರು. ಕಾರ್ಯಕ್ರಮವು ಬೆಳಿಗ್ಗೆ 10.00 ಗಂಟೆಗೆ ರಮಾ ರಾಣಿ ಶೋಧ ಸಂಸ್ಥಾನ ಬಳಿ ಸ್ವಸ್ತಿಶ್ರೀ ಭಟ್ಟಾರಕ ಭವನದಲ್ಲಿ ಶುಭಾರoಭಗೊಂಡು, ಧವಳತ್ರಯ ಜೈನ ಕಾಶಿ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿ ನೀಡಲಾಯಿತು. ಮೂಡಬಿದ್ರೆ ಎಂ.ಸಿ.ಸಿ. ಬ್ಯಾಂಕ್ ನ ಅಧ್ಯಕ್ಷರೊ ಸಂಸ್ಥೆ ಯ ಆಡಳಿತ ಮಂಡಳಿಯಾವರೂ ಅದ ಎಂ. ಬಾಹುಬಲಿ ಪ್ರಸಾದ್ ರವರು 2024-25ರ ಶೈಕ್ಷಣಿಕ ಸಾಲಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಾದ ಮನಸ್ವೀನಿ, ರೋಹಿತ್, ಶ್ರುತಿ ಇವರಿಗೆ ನಗದು ಮೊತ್ತ ಬಹುಮಾನ ವಿತರಿಸಿದರು ಹಾಗೂ ವಿದ್ಯಾರ್ಥಿಗಳಿಗೆ ವಿಧ್ಯೆಯ ಮಹತ್ವವನ್ನು ತಿಳಿಸಿಕೊಟ್ಟರು. ಮೂಡಬಿದಿರೆಯ ಖ್ಯಾತ ನ್ಯಾಯವಾದಿಗಳು ಹಾಗೂ ನೋಟರಿ ಹಾಗೂ ಸಂಸ್ಥೆಯ ನೂತನ ಬಾಲಕ ಪಾಲಕ ಸಮಿತಿ ಅಧ್ಯಕ್ಷರಾಗಿ ನಿಯುಕ್ತಗೊಂಡ ಶ್ವೇತಾ ಜೈನ್ ಇವರು ಇನ್ನೆರವೀಲ್ ಕ್ಲಬ್ ನ ಮೂಲಕ ಕಾಲೇಜ್ ಗೆ ಕುಡಿಯುವ ನೀರಿನ ಡ್ರಮ್ ಅನ್ನು ತಮ್ಮ ತಂಡ ಸದಸ್ಯರೊಂದಿಗೆ ಕೊಡುಗೆಯಾಗಿ ನೀಡಿ ಮಾತನಾಡಿದರು, ಮೂಡುಬಿದಿರೆ ವಿದ್ಯಾರ್ಥಿಗಳ ಎಲ್ಲಾ ಬೇಡಿಕೆಗಳನ್ನು ಈಡೇರಿಸುವ ವಿದ್ಯಾಕೇಂದ್ರ ಎಂದರು. ಸಂಜಯಂತ ಕುಮಾರ್ ಶೆಟ್ಟಿ ಶುಭಕೋರಿದರು ವಿದ್ಯಾರ್ಥಿಗಳಿಗೆ ಶ್ರೀ ದವಳತ್ರಯ ಟ್ರಸ್ಟ್ ವತಿಯಿಂದ ಉಚಿತ ಪುಸ್ತಕಗಳನ್ನು ನೀಡಲಾಯಿತು. ಉಪನ್ಯಾಸಕರಾದ ಹಿತೇಶ್ ರಾವ್ ಕಾರ್ಯಕ್ರಮ ನಿರೂಪಿಸಿದರು. ಸುಷ್ಮಾ ಇವರು ಸ್ವಾಗತಿದರು. ಉಪನ್ಯಾಸಕಿ ಸುಜಾತಾ ಇವರು ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಇನ್ನರ್ ವೀಲ್ ಪದಾಧಿಕಾರಿಗಳಾದ ಅನಿತಾ ಪೃಥ್ವಿರಾಜ್, ಸುಮಂಗಲ ತಂತ್ರಿ, ದಿವ್ಯ ಹರ್ಷಪಡಿವಾಳ, ಶೋಭಾ ಸಿಕ್ವೆರಾ, ರೇಷ್ಮಾ ಮಹೇಂದ್ರವರ್ಮ, ವೀಣಾ ರತ್ನರಾಜ್, ಪದ್ಮಜಾ ಮಹೇಂದ್ರ ಉಪಸ್ಥಿತರಿದ್ದರು.

ಮಹಾವೀರ ಜೈನ್‌ ಇಚ್ಲಂಪಾಡಿ ಇವರಿಗೆ ಪಿ.ಹೆಚ್.ಡಿ ಪದವಿ

Article Image

ಮಹಾವೀರ ಜೈನ್‌ ಇಚ್ಲಂಪಾಡಿ ಇವರಿಗೆ ಪಿ.ಹೆಚ್.ಡಿ ಪದವಿ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಮಹಾವೀರ ಜೈನ್‌ ಇಚ್ಲಂಪಾಡಿ ಇವರು ಹಂಪಿ ಕನ್ನಡ ವಿಶ್ವ ವಿದ್ಯಾಲಯದಿಂದ ಪಿ.ಹೆಚ್.ಡಿ ಪದವಿ ಪಡೆದಿದ್ದಾರೆ. ಉಜಿರೆಯ ಡಾ. ಹಾಮಾನಾ ಸಂಶೋಧನಾ ಕೇಂದ್ರದ ಮೂಲಕ ಡಾ.ಬಿ.ಪಿ ಸಂಪತ್ ಕುಮಾರ ಅವರ ಮಾರ್ಗದರ್ಶನದಲ್ಲಿ ಕನ್ನಡ ವಿಶ್ವವಿದ್ಯಾಲಯ ಹಂಪಿಗೆ ಸಲ್ಲಿಸಿದ "ಕನ್ನಡ ಜೈನ ಸಾಹಿತ್ಯದಲ್ಲಿ ಕರ್ಮಸಿದ್ಧಾಂತದ ಸ್ವರೂಪ" ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಹಂಪಿ ವಿಶ್ವವಿದ್ಯಾಲಯವು ಪಿಹೆಚ್.ಡಿ ಪದವಿಯನ್ನು ನೀಡಿದೆ. ಇವರು ಧಾರ್ಮಿಕ ಉಪನ್ಯಾಸಕ, ಅನೇಕ ಶಾಸ್ತ್ರದಾನ ಪುಸ್ತಕಗಳ ಸಂಪಾದಕರು, ಚಾವಡಿ ಚರ್ಚೆ ಕಾರ್ಯಕ್ರಮಗಳಲ್ಲಿಯೂ ಭಾಗವಹಿಸಿದ್ದಾರೆ. ನೆಲ್ಯಾಡಿ ಜೇಸಿಐ ಇದರ ಪೂರ್ವಾಧ್ಯಕ್ಷರು ಹಾಗೂ ಭಾರತೀಯ ಜೈನ್‌ ಮಿಲನ್ ಇದರ ಇಚ್ಲಂಪಾಡಿ ಶಾಖೆಯ ಪೂರ್ವಾಧ್ಯಕ್ಷರು ಆಗಿದ್ದರು.

ಕರಿಮಣೇಲು ಗುತ್ತು ಸನತ್ ಕುಮಾರ್ ಸೇಮಿತ ಅವರಿಗೆ ಸನ್ಮಾನ

Article Image

ಕರಿಮಣೇಲು ಗುತ್ತು ಸನತ್ ಕುಮಾರ್ ಸೇಮಿತ ಅವರಿಗೆ ಸನ್ಮಾನ

ನಾರಾವಿ ಜೂ. 7: ನಾರಾವಿ ರಾಮೇರುಗುತ್ತು ಪದ್ಮರಾಜ ಅಧಿಕಾರಿ ಮತ್ತು ಕರಿಮಣೇಲುಗುತ್ತು ಅನಂತಮತಿಯವರ ದ್ವಿತೀಯ ಪುತ್ರರಾದ ಕರಿಮಣೇಲುಗುತ್ತು ಕೆ. ಸನತ್ ಕುಮಾರ್ ಸೇಮಿತರವರ 96ನೇ ಹುಟ್ಟುಹಬ್ಬದ ಪ್ರಯುಕ್ತ ಭ| ಶ್ರೀ ೧೦೦೮ ಧರ್ಮನಾಥ ಸ್ವಾಮಿಯಲ್ಲಿ ನವಗ್ರಹ ಶಾಂತಿ ಮತ್ತು ಪದ್ಮಾವತಿ ಅಮ್ಮನವರಿಗೆ ಲಕ್ಷ ಹೂವಿನಪೂಜೆ ನಡೆದು ಬಳಿಕ ಮೂಡುಬಿದಿರೆ ಶ್ರೀ ಜೈನ ಮಠದ ಪ.ಪೂ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳು, ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು ಮತ್ತು ಬಸದಿಯ ಆಡಳಿತ ಮಂಡಳಿಯ ಸರ್ವ ಸದಸ್ಯರ ಸಮ್ಮುಖದಲ್ಲಿ ಇವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಊರ-ಪರವೂರ ಗಣ್ಯರು ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.

ಜೈನ ಶೋಭಾನೆ ಹಾಡುಗಳ ಪುಸ್ತಕ ಬಿಡುಗಡೆ

Article Image

ಜೈನ ಶೋಭಾನೆ ಹಾಡುಗಳ ಪುಸ್ತಕ ಬಿಡುಗಡೆ

ಜೈನ ಧರ್ಮದ ಸಂಪ್ರದಾಯದಲ್ಲಿ ಶೋಭಾನೆಗೆ ಬಹಳ ಮಹತ್ವವಿದೆ ಈ ಶೋಭಾನೆಗಳನ್ನು ಪಂಚಕಲ್ಯಾಣದ ವಿಧಿ-ವಿಧಾನಗಳಲ್ಲಿಯೂ ಕೂಡಾ ಹಾಡುತ್ತಾರೆ ಮದುವೆ, ಸೀಮಂತ, ನಾಮಕರಣ, ಉಪನಯನದ ಕಾರ್ಯಕ್ರಮಗಳಲ್ಲಿ ಶೋಭಾನೆ ಹಾಡುಗಳು ಬಹಳ ಪ್ರಾಮುಖ್ಯತೆಯನ್ನು ಪಡೆದಿರುತ್ತದೆ ಎಂದು ಮೂಡಬಿದಿರೆಯ ಪರಮಪೂಜ್ಯ ಸ್ವಸ್ತಿಶ್ರೀ ಡಾ. ಚಾರುಕೀರ್ತಿ ಭಟ್ಟಾರಕ ಸ್ವಾಮಿಜೀಯವರು ಪುಸ್ತಕವನ್ನು ಶ್ರುತ ಪಂಚಮಿಯ ದಿನದಂದು ಶ್ರೀ ಜೈನ ಮಠ ಮೂಡಬಿದಿರೆಯಲ್ಲಿ ಬಿಡುಗಡೆ ಮಾಡಿ ಶುಭ ಹಾರೈಸಿದರು. ಈ ಶೋಭಾನೆ ಹಾಡುಗಳ ಪುಸ್ತಕವನ್ನು ರಚಿಸಿದ ವಾಣಿಶ್ರೀ ಅಭಯ ಕುಮಾರ್ ಮೂಡಬಿದಿರೆ ಇವರನ್ನು ಶಾಲು ಹೊದಿಸಿ ಗೌರವಿಸಿದರು ಈ ಸಂದರ್ಭದಲ್ಲಿ ಪಟ್ನ ಶೆಟ್ಟಿ ಸುಧೇಶ್ ಕುಮಾರ್, ಬಾಹುಬಲಿ ಪ್ರಸಾದ್, ಅಭಯ ಕುಮಾರ್, ವೀಣಾ ರಘ ಚಂದ್ರ, ವೃಂದಾ ರಾಜೇಂದ್ರ, ರೇಖಾ ಸುಧೇಶ್ ಕುಮಾರ್, ಮಂಜುಳ ಅಭಯ ಚಂದ್ರ, ಶ್ಚೇತಾ ಜೈನ್, ಉಷಾ ಜಯ ವೀರ್, ಮಂಜುಳ ಯಶೋಧರ್, ರಾಜೇಶ್ವರಿ ಶಂಭವ ಕುಮಾರ್, ಸುಧಾ ಪೃಥ್ವಿರಾಜ್ ಶಕುಂತಳಾ ಪ್ರಸನ್ನ ಕುಮಾರ್ ಉಪಸ್ಥಿತರಿದ್ದರು.

ಶಾಲಾ ಪ್ರಾರಂಭೋತ್ಸವ ದಿಗಂಬರ ಜೈನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ

Article Image

ಶಾಲಾ ಪ್ರಾರಂಭೋತ್ಸವ ದಿಗಂಬರ ಜೈನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ

ಮೂಡುಬಿದಿರೆ, ದ.ಕ ಇಲ್ಲಿಯ 2025-26ನೇ ಸಾಲಿನ ಶಾಲಾ ಪ್ರಾರಂಭೋತ್ಸವವು ದಿನಾಂಕ 02-06-2025ನೇ ಸೋಮವಾರದಂದು ಶಾಲಾ ಅಮೃತ ಮಹೋತ್ಸವ ಕಟ್ಟಡದಲ್ಲಿ ನಡೆಸಲಾಯಿತು. ಶಾಲೆಗೆ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳನ್ನು ಬ್ಯಾಂಡ್ ಸೆಟ್ ನೊಂದಿಗೆ ಮೆರವಣಿಗೆಯ ಮೂಲಕ ಶಾಲಾ ಸಭಾಭವನಕ್ಕೆ ಕರೆತರಲಾಯಿತು. ಸಮಾರಂಭದ ಉದ್ಘಾಟನೆಯನ್ನು ಪುರಸಭೆಯ ಸದಸ್ಯರಾದ ಶ್ವೇತಾ ಪ್ರವೀಣ್ ರವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಶಾಲೆಯ ಕೀರ್ತಿಯನ್ನು ಹೆಚ್ಚಿಸುವ ಎಲ್ಲಾ ಚಟುವಟಿಕೆಗಳಲ್ಲೂ ಭಾಗವಹಿಸುವಂತೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕ ಮಾತುಗಳನ್ನಾಡಿದರು. ಎಸ್.ಡಿ.ಎಂ.ಸಿಯ ಅಧ್ಯಕ್ಷರಾದ ಪವನ್ ಕುಮಾರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಿಸಿದರು. ಶಾಲೆಯ ಎಲ್ಲಾ ಪಠ್ಯ-ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ವಿದ್ಯಾರ್ಥಿಗಳಿಗೆ ಹಿತ ನುಡಿಗಳನ್ನಾಡಿದರು. ತಾಯಂದಿರ ಸಮಿತಿಯ ಅಧ್ಯಕ್ಷರಾದ ಆರತಿ ಜೈನ್ ಉಪಸ್ಥಿತರಿದ್ದರು. 2025-26ನೆ ಶೈಕ್ಷಣಿಕ ಸಾಲಿನಲ್ಲಿ ಉತ್ತಮ ಕಾರ್ಯಗಳು ನಡೆಯಲಿ ಎಂದು ಶುಭ ಹಾರೈಸಿದರು. ಶಾಲೆಯ ಹಿರಿಯ ಶಿಕ್ಷಕಿಯಾದ ಮಂಜುಳ ಜೈನ್ ಕಾರ್ಯಕ್ರಮದ ಅದ್ಯಕ್ಷಸ್ಥಾನವನ್ನು ವಹಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಗಣ್ಯರನ್ನು ಸ್ವಾಗತಿಸಿ ತಮ್ಮ ಪ್ರಾಸ್ತವಿಕ ನುಡಿಯಲ್ಲಿ 2025-26ನೇ ಸಾಲಿನ ಯೋಜನೆಯ ಬಗ್ಗೆ ತಿಳಿಸಿದರು. 1 ರಿಂದ 7ನೇ ತರಗತಿಯವರೆಗೆ ನೂತನವಾಗಿ ದಾಖಲಾದ ವಿದ್ಯಾರ್ಥಿಗಳು ವೇದಿಕೆಯಲ್ಲಿ ತಮ್ಮ ಸ್ವ-ಪರಿಚಯ ಮಾಡಿಕೊಂಡರು ಕಾರ್ಯಕ್ರಮದ ನಿರೂಪಣೆಯನ್ನು ಮಂಜುಳ ಶಶೀಂದ್ರರವರು ನೆರವೇರಿಸಿದರು ಸಂದ್ಯಾರವರು ಧನ್ಯವಾದ ಗೈದರು.

ಡಾ. ಜೀವಂಧ‌ರ್ ಬಳ್ಳಾಲ್ ಅವರಿಗೆ ಸಮ್ಮಾನ

Article Image

ಡಾ. ಜೀವಂಧ‌ರ್ ಬಳ್ಳಾಲ್ ಅವರಿಗೆ ಸಮ್ಮಾನ

ಕೊಡಿಯಾಲ್‌ಬೈಲ್‌: ಭಾರತೀಯ ಜೈನ್ ಮಿಲನ್ ಮಂಗಳೂರು ಆಶ್ರಯದಲ್ಲಿ ಲಾರ್ಡ್ ಮಹಾವೀರ ಜೈನ್ ಬೋರ್ಡಿಂಗ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಡಾ| ಜೀವಂಧ‌ರ್ ಬಳ್ಳಾಲ್ ಅವರನ್ನು ಸಮ್ಮಾನಿಸಲಾಯಿತು. ಭಾರತೀಯ ಜೈನ್ ಮಿಲನ್ ಮಂಗಳೂರು ಇದರ ಅಧ್ಯಕ್ಷ ರತ್ನಾಕರ ಜೈನ್, ಪ್ರಮುಖರಾದ ಸುದರ್ಶನ್ ಜೈನ್, ಸುಕುಮಾ‌ರ್ ಬಳ್ಳಾಲ್, ಮಿಲನ್, ವೈಶಾಲಿ ಪಡಿವಾಳ್, ಪುಷ್ಪರಾಜ್ ಜೈನ್, ಸನತ್ ಕುಮಾರ್ ಜೈನ್ ಮುಂತಾದವರು ಉಪಸ್ಥಿತರಿದ್ದರು.

ಶಿಲಾನ್ಯಾಸ ಪೂಜಾ ಕಾರ್ಯಕ್ರಮ

Article Image

ಶಿಲಾನ್ಯಾಸ ಪೂಜಾ ಕಾರ್ಯಕ್ರಮ

ಪಾಣೆಮಂಗಳೂರು: ಶ್ರೀ ಕ್ಷೇತ್ರ ಪಾಣೇರ್ ಭ। ೧೦೦೮ ಶ್ರೀ ಅನಂತನಾಥ ತೀರ್ಥಂಕರ ಜಿನ ಚೈತ್ಯಾಲಯ, ಭ। ೧೦೦೮ ಶ್ರೀ ಚಂದ್ರನಾಥ ತೀರ್ಥಂಕರ ಶ್ರೀ ಮಹಾಮಾತೆ ಪದ್ಮಾವತಿ ಅಮ್ಮನವರ ಜಿನ ಚೈತ್ಯಾಲಯದಲ್ಲಿ ಪರಮಪೂಜ್ಯ ಮುನಿಶ್ರೀ ೧೦೮ ಚಂದ್ರ ಸಾಗರ ಮುನಿ ಮಹಾರಾಜರ ಪುಣ್ಯಸ್ಮರಣೆಯೊಂದಿಗೆ, ಪರಮಪೂಜ್ಯ ಆಚಾರ್ಯ ೧೦೮ ಶ್ರೀ ಚಂದ್ರಪ್ರಭ ಸಾಗರ ಮುನಿ ಮಹಾರಾಜರ ಪರಮಶಿಷ್ಯರಾದ ಯುವಸಂತ ಪರಮಪೂಜ್ಯ ಮುನಿಶ್ರೀ ೧೦೮ ವೀರ ಸಾಗರ ಮುನಿ ಮಹಾರಾಜರು ಮತ್ತು ಪರಮಪೂಜ್ಯ ಮುನಿಶ್ರೀ ೧೦೮ ಪರಮ ಸಾಗರ ಮುನಿ ಮಹಾರಾಜರ ಶುಭಾಶೀರ್ವಾದಗಳೊಂದಿಗೆ, ಸೀಮೆಯ ಗುರುಗಳಾದ ಪರಮಪೂಜ್ಯ ಭಾರತಭೂಷಣ ಡಾ| ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರು ಶ್ರೀ ಜೈನ ಮಠ ಮೂಡಬಿದಿರೆ ಇವರ ಮಾರ್ಗದರ್ಶನ ಮತ್ತು ದಿವ್ಯ ಉಪಸ್ಥಿತಿಯಲ್ಲಿ, ಕಾರ್ಯಕಾರಿ ಸಮಿತಿಯ ಗೌರವಾದ್ಯಕ್ಷರಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಮುಂದಾಳತ್ವ ಹಾಗೂ ಸಹಕಾರದೊಂದಿಗೆ ತ್ಯಾಗಿ ನಿವಾಸ, ಸಭಾಭವನ, ಭೋಜನ ಶಾಲೆ, ತಡೆಗೋಡೆ ನಿರ್ಮಾಣದ ಶಿಲಾನ್ಯಾಸ ಪೂಜಾ ಕಾರ್ಯಕ್ರಮವು 30-5-2025ನೇ ಶುಕ್ರವಾರದಂದು ಜರಗಲಿರುವುದು.

First Previous

Showing 6 of 20 pages

Next Last