Article Image

ವೀರೇಂದ್ರ ಕುಮಾರ್ ಬೇಗೂರ್ ಅವರಿಗೆ ಗೌರವ ಸನ್ಮಾನ

Article Image

ವೀರೇಂದ್ರ ಕುಮಾರ್ ಬೇಗೂರ್ ಅವರಿಗೆ ಗೌರವ ಸನ್ಮಾನ

ಜೈನಧರ್ಮ ಸಿದ್ಧಾಂತದ ಬಗ್ಗೆ ವೀರೇಂದ್ರ ಕುಮಾರ್ ಬೇಗೂರ್ ರವರು ಶಾಸನೋಕ್ತ ಮಾಹಿತಿಯ ಉಪನ್ಯಾಸವನ್ನು ದಿನಾಂಕ 10 -5- 2025 ಶನಿವಾರ ಹಾಗೂ 11-5-2025 ರ ಭಾನುವಾರ ನೀಡಿದರು. ಐತಿಹಾಸಿಕ ಜ್ಞಾನವನ್ನು ಪ್ರಶಂಸಿಸಿ ತ್ರಿಲೋಕ ಜೈನ್ ಮಿಲನ್ ಹಾಗೂ ಹಾಸನದ ಜೈನ ಸಮಾಜದ ವತಿಯಿಂದ ಗೌರವ ಸನ್ಮಾನ ಮಾಡಲಾಯಿತು. ತ್ರಿಲೋಕ್ ಜೈನ್ ಮಿಲನ್ ಹಾಸನದವರು ಈಎರಡೂ ದಿನದ ಕಾರ್ಯಕ್ರಮವನ್ನು ಹಿರಿಯ ಶ್ರಾವಕ ಶ್ರಾವಕೀಯರಿಗಾಗಿ ಹಾಸನ ಜೈನ್ ಭವನದಲ್ಲಿ ಹಮ್ಮಿಕೊಂಡಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ವಾಣಿ ರತ್ನಾಕರ್ ರವರು ನಿರ್ವಹಿಸಿದರು. ವೀರೇಂದ್ರ ಕುಮಾರ್ ಬೇಗೂರ್ ಮಿಲನ್ ವತಿಯಿಂದ ಡಾ. ಅಶ್ವಿನ್ ಕುಮಾರ್ ರವರು ಗೌರವಿಸಿದರು.

ಧರ್ಮಸ್ಥಳ: ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ

Article Image

ಧರ್ಮಸ್ಥಳ: ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ

ಜೈನರ ಶ್ರದ್ಧಾಕೇಂದ್ರಗಳಾದ ಬಸದಿಗಳು ಸಮವಸರಣದ ಪ್ರತೀಕವಾಗಿದ್ದು, ಪರಿಶುದ್ಧ ಮನಸ್ಸಿನಿಂದ ಬಸದಿಗೆ ಹೋಗಿ ಅಷ್ಟದ್ರವ್ಯಗಳಿಂದ ಅಷ್ಟವಿಧಾರ್ಚನೆ ಪೂಜೆ ಮಾಡಿದಾಗ ಅಷ್ಟಕರ್ಮಗಳ ನಾಶವಾಗುತ್ತದೆ. ಸಕಲಕರ್ಮಗಳ ಕ್ಷಯದೊಂದಿಗೆ ಅಕ್ಷಯ ಸುಖವನ್ನೀಯುವ ಮೋಕ್ಷ ಪ್ರಾಪ್ತಿಯೇ ಜೀವನದ ಗುರಿಯಾಗಬೇಕು ಎಂದು ಶ್ರವಣಬೆಳಗೊಳ ಜೈನಮಠದ ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು. ಅವರು ಭಾನುವಾರ ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ ಸಂದರ್ಭದಲ್ಲಿ ಆಯೋಜಿಸಿದ ಸಾಮೂಹಿಕ ಋಷಿಮಂಡಲ ಪುಷ್ಪಾರ್ಚನೆಯಲ್ಲಿ ಭಾಗವಹಿಸಿ ಮಂಗಲ ಪ್ರವಚನ ನೀಡಿದರು. ದಾನ ಮತ್ತು ದೇವರ ಪೂಜೆ ಶ್ರಾವಕರ ಧರ್ಮವಾಗಿದೆ. ಗೃಹಸ್ಥರು ದಾನ, ಧರ್ಮಾದಿ ಸತ್ಕಾರ್ಯಗಳಿಂದ ಶೋಭಿಸುತ್ತಾರೆ. ದಾನದಿಂದ ದುರ್ಗತಿಯ ನಾಶವಾಗಿ ಸದ್ಗತಿ ಪ್ರಾಪ್ತವಾಗುತ್ತದೆ. ಪೂಜೆಯಲ್ಲಿ ದ್ರವ್ಯಪೂಜೆ ಮತ್ತು ಭಾವಪೂಜೆ ಎಂಬ ಎರಡು ವಿಧಗಳಿದ್ದು ದ್ರವ್ಯಪೂಜೆಯು ಭಾವಪೂಜೆಗೆ ನಾಂದಿಯಾಗಿದೆ. ಸತ್ಯ, ಧರ್ಮ, ನ್ಯಾಯ, ನೀತಿ ನೆಲೆನಿಂತ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಅನ್ನದಾನ, ವಿದ್ಯಾದಾನ, ಔಷಧಿದಾನ ಮತ್ತು ಅಭಯದಾನ ಎಂಬ ಚತುರ್ವಿಧ ದಾನ ಪರಂಪರೆ ವಿಶ್ವವಿಖ್ಯಾತವಾಗಿದೆ. ಧರ್ಮಾಧಿಕಾರಿಗಳಾದ ಹೆಗ್ಗಡೆಯವರ ಮೂಲಕ ದಾನವೇ ಧರ್ಮವಾಗಿ ಧರ್ಮಸ್ಥಳದಲ್ಲಿ ನೆಲೆನಿಂತಿದೆ. ತೀರ್ಥಂಕರರು ತಮ್ಮ ಆತ್ಮಕಲ್ಯಾಣದೊಂದಿಗೆ ಲೋಕಕಲ್ಯಾಣ ಮಾಡಿದಂತೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಕೂಡಾ ತಮ್ಮ ಅವಿರತ ಸೇವಾಕಾಯಕ ಹಾಗೂ ಲೋಕಕಲ್ಯಾಣ ಕಾರ್ಯಗಳಿಂದ ತೀರ್ಥಂಕರರಾಗುವ ಎಲ್ಲಾ ಯೋಗ್ಯತೆ ಹಾಗೂ ಮಾನ್ಯತೆ ಹೊಂದಿದ್ದಾರೆ ಎಂದು ಸ್ವಾಮೀಜಿ ಬಣ್ಣಿಸಿದರು. ಧರ್ಮಸ್ಥಳಕ್ಕೆ ಬಂದಾಗ ತವರು ಮನೆಗೆ ಬಂದ ಅನುಭವ ತಮಗಾಗಿದೆ. ಹೆಗ್ಗಡೆಯವರು ಮತ್ತು ಕುಟುಂಬದವರ ಸೇವಾವೈಖರಿ ಶ್ಲಾಘಿಸಿ ಅಭಿನಂದಿಸಿದರು. ತಮ್ಮ ಪೂರ್ವಾಶ್ರಮದಲ್ಲಿ ಸಿದ್ಧವನ ಗುರುಕುಲದಲ್ಲಿ ವಿದ್ಯೆಯೊಂದಿಗೆ ತಮಗೆ ದೊರೆತ ಸಂಸ್ಕಾರ, ಶಿಸ್ತು ಮತ್ತು ಮಾರ್ಗದರ್ಶನದಿಂದ ತಮ್ಮ ಇಂದಿನ ಸ್ಥಾನಕ್ಕೆ ಶೋಭೆ ತಂದಿದೆ ಎಂದರು. ಸಿದ್ಧವನ ಗುರುಕುಲದಲ್ಲಿ ತಮ್ಮ ಮುತ್ತಜ್ಜ ನೇಮಿಸಾಗರವರ್ಣೀಜಿಯವರ ಸ್ಮಾರಕವನ್ನು ನಿರ್ಮಿಸಬೇಕೆಂದು ಸ್ವಾಮೀಜಿ ಹೆಗ್ಗಡೆಯವರಿಗೆ ಸಲಹೆ ನೀಡಿದರು. ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಉಪಸ್ಥಿತರಿದ್ದರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಪಂಚನಮಸ್ಕಾರ ಮಂತ್ರ ಪಠಣದಿಂದ ಅಪಾರ ಶಕ್ತಿ ದೊರಕಿ ನಮಗೆ ಪುಣ್ಯ ಸಂಚಯವಾಗುತ್ತದೆ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಕೂಡಾ ಪಂಚನಮಸ್ಕಾರ ಮಂತ್ರ ಪಠಣದ ಬಗ್ಗೆ ವಿಶೇಷ ಉಪನ್ಯಾಸ ನೀಡಿರುವುದನ್ನು ಅವರು ಧನ್ಯತೆಯಿಂದ ಸ್ಮರಿಸಿದರು. ಉಭಯ ಸ್ವಾಮೀಜಿಯವರ ಪಾದಪೂಜೆ ಮಾಡಿ, ಧರ್ಮಸ್ಥಳದ ವತಿಯಿಂದ ಗೌರವಿಸಲಾಯಿತು. ಹೇಮಾವತಿ ವೀ. ಹೆಗ್ಗಡೆಯವರು, ಶ್ರದ್ಧಾಅಮಿತ್, ಡಿ. ಹರ್ಷೇಂದ್ರ ಕುಮಾರ್, ಶ್ರುತಾಜಿತೇಶ್, ಸೋನಿಯಾವರ್ಮ ಉಪಸ್ಥಿತರಿದ್ದರು. ಪ್ರಥಮ ಬಾರಿ ಧರ್ಮಸ್ಥಳ ಪುರಪ್ರವೇಶ ಮಾಡಿದ ಶ್ರವಣಬೆಳಗೊಳದ ಪೂಜ್ಯ ಸ್ವಾಮೀಜಿಯವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು. ಉಪನ್ಯಾಸಕ ಮಹಾವೀರ ಜೈನ್ ಇಚಿಲಂಪಾಡಿ ಕಾರ್ಯಕ್ರಮ ನಿರ್ವಹಿಸಿದರು. ಶ್ರವಣಬೆಳಗೊಳದ ಸ್ವಾಮೀಜಿಯವರು ಸಿದ್ಧವನ ಗುರುಕುಲಕ್ಕೂ ಭೇಟಿ ನೀಡಿದರು.

ಮೂಡುಬಿದಿರೆ: ಶ್ರೀ ದಿಗಂಬರ ಜೈನ ಮಠದಲ್ಲಿ ಸಾಮೂಹಿಕ ಪ್ರಾರ್ಥನೆ

Article Image

ಮೂಡುಬಿದಿರೆ: ಶ್ರೀ ದಿಗಂಬರ ಜೈನ ಮಠದಲ್ಲಿ ಸಾಮೂಹಿಕ ಪ್ರಾರ್ಥನೆ

ನಮ್ಮ ರಾಷ್ಟ್ರದ ಯುದ್ಧ ಸನ್ನಿವೇಶದ ಸಂದರ್ಭದಲ್ಲಿ ಜೈನ ಕಾಶಿ ಶ್ರೀ ದಿಗಂಬರ ಜೈನ ಮಠದಲ್ಲಿ 11.5.2025 ರಂದು ಬೆಳಿಗ್ಗೆ 8.45ಕ್ಕೆ ಸಾಮೂಹಿಕ ಪ್ರಾರ್ಥನೆಯನ್ನು ಮಾಡಲಾಯಿತು ಜಗದ್ಗುರು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಾಚಾರ್ಯವರ್ಯ ಮಹಾ ಸ್ವಾಮೀಜಿ, ಉಪಸ್ಥಿತಿಯಲ್ಲಿ ಭಗವಾನ್ ಪಾರ್ಶ್ವನಾಥ ಸ್ವಾಮಿಗೆ ಕ್ಷೀರ ಅಭಿಷೇಕ ನೆರವೇರಿಸಿ, ಪಟ್ಟದ ಮಹಾ ಮಾತೆ ಅಭಿಷ್ಟವರ ಪ್ರಧಾಯಿನಿ ಯಕ್ಷಿ ಕೂಷ್ಮಾoಡಿನೀದೇವಿ, ಪದ್ಮಾವತಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಸಾಮೂಹಿಕ ಪ್ರಾರ್ಥನೆ ಮಾಡಿ, ಯುದ್ಧ ಸಂಧರ್ಭ ಎಲ್ಲಾ ಭಯೋತ್ಪದನೆ ದೂರವಾಗಲಿ ಸರ್ವ ಧರ್ಮಿಯರು ಸರ್ವ ಭಾಷೆಯವರು ನಾವೆಲ್ಲರೂ ಐಕ್ಯತೆಯಿಂದ ಭಾರತ ದೇಶದ ವಿಜಯ ಪ್ರಾಪ್ತಿಗಾಗಿ ಪ್ರಾರ್ಥಿಸೋಣ ಲೋಕದಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಯಾಗಲಿ ಇಂತಹ ವಿಷಮ ಸ್ಥಿತಿಯಲ್ಲಿ ರಾಷ್ಟ್ರ ಧರ್ಮದ ಏಕತೆಗಾಗಿ ಶ್ರಮಿಸೋಣ ಭಾರತ ಸರಕಾರ ಹಾಗೂ ಸೈನಿಕರ ಆತ್ಮ ಸ್ಥೈರ್ಯ ಹೆಚ್ಚಿಸೋಣ ಎಂದು ಶ್ರೀ ಗಳವರು ನುಡಿದರು ಅಭಯ ಚಂದ್ರ ಜೈನ್, ದಯಾನಂದ ಪೈ, ವಿಜಯ ಕುಮಾರ್, ಬಾಹುಬಲಿ ಪ್ರಸಾದ್, ಎ ಗುಣಪಾಲ್ ಹೆಗ್ಡೆ, ಗುಣಪಾಲ್ ಮುದ್ಯ ನಿರಂಜನ್, ರಾಘವೇಂದ್ರ ಭಂಡಾರ್ಕರ್, ಶ್ರೀಧರ್ ಅರಮನೆ, ವೃoದ ರಾಜೇಂದ್ರ, ಶ್ವೇತಾ ಜೈನ್ ,ವೀಣಾ, ಸುದಾ, ಮಂಜುಳಾ ಅಭಯ ಚಂದ್ರ ಮೊದಲಾದವರಿದ್ದರು ವರದಿ: ಸಂಜಯಂತ ಕುಮಾರ್ ಶೆಟ್ಟಿ ವ್ಯವಸ್ಥಾಪಕರು, ಸ್ವಸ್ತಿಶ್ರೀ ಭಟ್ಟಾರಕ ನಗರ, ಶ್ರೀ ದಿಗಂಬರ ಜೈನ ಮಠ ಮೂಡುಬಿದಿರೆ

ಅಹಿಂಸಾಮಯೀ ಭಾರತ ಜಗತ್ತಿಗೆ ಮಾದರಿ ರಾಷ್ಟ್ರ : ನಿರಂಜನ್‌ ಜೈನ್‌ ಕುದ್ಯಾಡಿ

Article Image

ಅಹಿಂಸಾಮಯೀ ಭಾರತ ಜಗತ್ತಿಗೆ ಮಾದರಿ ರಾಷ್ಟ್ರ : ನಿರಂಜನ್‌ ಜೈನ್‌ ಕುದ್ಯಾಡಿ

ಭಾರತ ದೇಶ ಮೂಲತಃ ಅಹಿಂಸೆಯನ್ನು ಬಯಸುತ್ತಿದೆ. ಈ ಅಹಿಂಸೆಗೆ ತೊಡಕಾಗಿರುವ ಪಾಕಿಸ್ಥಾನ ಪ್ರಚೋದಿತ ಭಯೋತ್ಪಾದನೆ ತೊಡಕಾಗಿದೆ. ಭಗವಾನ್ ಮಹಾವೀರ, ಬುದ್ಧ, ಶ್ರೀರಾಮಚಂದ್ರ ಇವರೆಲ್ಲ ಅಹಿಂಸೆಯ ಪ್ರತಿಪಾದಕರಾಗಿದ್ದರೂ ಹಿಂಸೆಗೆ ಕಾರಣವಾಗುವ ವಿಚಾರಗಳನ್ನು ವಿರೋಧಿಸಿದವರಾಗಿದ್ದಾರೆ. ಪಾಕಿಸ್ಥಾನಕ್ಕೆ ತನ್ನ ಪ್ರಜೆಗಳ ಹಿತಕ್ಕಿಂತ ನೆರೆಯ ರಾಷ್ಟ್ರ ಭಾರತಕ್ಕೆ ಕಿರುಕುಳ ನೀಡುವ ಮಾನಸಿಕ ವಿಕೃತಿಯಲ್ಲಿ ಸಂತೋಷವನ್ನು ಹೊಂದಿದೆ. ಈ ನಿಟ್ಟಿನಲ್ಲಿ ಭಾರತದ ಆಪರೇಷನ್ ಸಿಂಧೂರ ಸರಿಯಾದ ಕ್ರಮವಾಗಿದೆ. ಇದರಿಂದಾಗಿ ಭಯೋತ್ಪಾದಕ ಮನಸ್ಸುಗಳು ನಿರ್ನಾಮವಾಗಿ ಶಾಂತಿ ನೆಲೆಸಲಿ. ಅಹಿಂಸಾಮಯೀ ಭಾರತ ಜಗತ್ತಿಗೆ ಮಾದರಿ ರಾಷ್ಟ್ರವಾಗಿಯೇ ಇರಲಿದೆ. ಜೈ ಹಿಂದ್

'ಆಪರೇಶನ್ ಸಿಂಧೂರ' ಯಶಸ್ವಿ ಕಾರ್ಯಾಚರಣೆ: ಧರ್ಮಸ್ಥಳದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ

Article Image

'ಆಪರೇಶನ್ ಸಿಂಧೂರ' ಯಶಸ್ವಿ ಕಾರ್ಯಾಚರಣೆ: ಧರ್ಮಸ್ಥಳದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ

ಪ್ರಧಾನಿ ನರೇಂದ್ರಮೋದಿಯವರ ದಕ್ಷ ಮಾರ್ಗದರ್ಶನದಲ್ಲಿ “ಆಪರೇಶನ್ ಸಿಂಧೂರ” ಕಾರ್ಯಾಚರಣೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಸೈನಿಕರನ್ನು ಅಭಿನಂದಿಸಿ, ಅವರಿಗೆ ಮುಂದೆಯೂ ಸರ್ವರೀತಿಯ ಯಶಸ್ಸನ್ನು ಕೋರಿ ಗುರುವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆಯೊಂದಿಗೆ ಪೂಜೆ ಸಲ್ಲಿಸಿದರು. ಸೈನಿಕರಿಂದ ದೇಶದ ರಕ್ಷಣಾಕಾರ್ಯ ಯಶಸ್ವಿಯಾಗಲಿ ಹಾಗೂ ಭಯ ಮತ್ತು ಆತಂಕ ನಿವಾರಣೆಯಾಗಿ ಎಲ್ಲೆಲ್ಲೂ ಸದಾ ಶಾಂತಿ, ನೆಮ್ಮದಿ ಮತ್ತು ಸಾಮರಸ್ಯ ನೆಲೆಗೊಳ್ಳಲಿ ಎಂದು ಹೆಗ್ಗಡೆಯವರು ಹಾರೈಸಿದ್ದಾರೆ.

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಜಿನ ಮಂದಿರದಲ್ಲಿ ವಿಶೇಷ ಪೂಜೆ

Article Image

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಜಿನ ಮಂದಿರದಲ್ಲಿ ವಿಶೇಷ ಪೂಜೆ

ನಮ್ಮ ಭಾರತದ ಹೆಮ್ಮೆಯ ಸೇನಾ ಕಾರ್ಯಾಚರಣೆಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ ಭಾರತೀಯ ಸೇನೆಯ ಹೆಸರಿನಲ್ಲಿ ಹಾಗೂ ಭಾರತೀಯ ಯೋಧರಿಗೆ ಒಳಿತಾಗಲಿ ಎಂದು ಹಾರೈಸುತ್ತ ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿಯನ್ನು ಭಗವಂತನು ಅನುಗ್ರಹಿಸಲಿ ಎಂದು ದೇವರಲ್ಲಿ ಪ್ರಾರ್ಥಿಸಿ ವಿಶೇಷ ಸಂಕಲ್ಪದೊಂದಿಗೆ ಪೂಜೆಯನ್ನು ದಿನಾಂಕ 8.5.25 ರಂದು ಬೆಳಿಗ್ಗೆ 8 ಗಂಟೆಗೆ ಶ್ರೀ ಕ್ಷೇತ್ರ ಚಂದ್ರಪುರದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಹಾಗೂ ಭಗವಾನ್ ೧೦೦೮ ಶ್ರೀ ಪಾರ್ಶ್ವನಾಥ ಸ್ವಾಮಿ ಮತ್ತು ಮಹಾಮಾತೆ ಪದ್ಮಾವತಿ ಅಮ್ಮನವರ ಸನ್ನಿಧಿಯಲ್ಲಿ ನಡೆಸಲಾಯಿತು.. ಈ ಸಂದರ್ಭದಲ್ಲಿ ಎಲ್ಲಾ ಆಡಳಿತ ಮಂಡಳಿಯ ಸದಸ್ಯರು ಭಾಗವಹಿಸಿದರು.

ಮಂಗಳೂರು: ರಾಜೇಶ್ ಎಮ್.ರವರು ಅಧ್ಯಕ್ಷರಾಗಿ ಆಯ್ಕೆ

Article Image

ಮಂಗಳೂರು: ರಾಜೇಶ್ ಎಮ್.ರವರು ಅಧ್ಯಕ್ಷರಾಗಿ ಆಯ್ಕೆ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ನ್ಯಾಯಾಂಗ ಇಲಾಖಾ ಅಧಿಕಾರಿಗಳ ಸಹಕಾರ ಸಂಘದ ಅಧ್ಯಕ್ಷರಾಗಿ ಸತತವಾಗಿ ಮೂರನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾದ ರಾಜೇಶ್ ಎಮ್.ರವರು ಪ್ರಸ್ತುತ ಮಂಗಳೂರು ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಮುಖ್ಯ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ವಾರ್ಷಿಕೋತ್ಸವ ಸಮಾರಂಭ

Article Image

ವಾರ್ಷಿಕೋತ್ಸವ ಸಮಾರಂಭ

ಧರ್ಮಸ್ಥಳದಲ್ಲಿರುವ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ ಸಮಾರಂಭವು ಮೇ. 10, 11 ಮತ್ತು 12ರಂದು ನಡೆಯಲಿದೆ. ಮೇ, 10 : ಶನಿವಾರ: ಬೆಳಿಗ್ಗೆ ಗಂಟೆ 8.45ಕ್ಕೆ ತೋರಣಮುಹೂರ್ತ, ವಿಮಾನಶುದ್ಧಿ, ಮುಖವಸ್ತ್ರ ಉದ್ಘಾಟನೆ, ನವಕಲಶ ಅಭಿಷೇಕ. ಸಂಜೆ ಗಂಟೆ 4 ರಿಂದ ನಾಂದಿಮಂಗಲ, ಪೂಜಾವಿಧಾನ, ಮಹಾಮಂಗಳಾರತಿ ಮೇ, 11 : ಭಾನುವಾರ : ಬೆಳಿಗ್ಗೆ ಗಂಟೆ 8.30 ರಿಂದ ವಾಸ್ತುಪೂಜಾ ವಿಧಾನ, ಋಷಿಮಂಡಲ ಯಂತ್ರಾರಾಧನೆ, 16 ಕಲಶಾಭಿಷೇಕ. ಸಂಜೆ ಗಂಟೆ 4 ರಿಂದ ನವಗ್ರಹ ಮಹಾಶಾಂತಿ, ಗ್ರಾಮ ಬಲಿವಿಧಾನ, ಮಹಾಮಂಗಳಾರತಿ ಮೇ, 12: ಸೋಮವಾರ: ಬೆಳಿಗ್ಗೆ ಗಂಟೆ 9 ರಿಂದ ಕಲಿಕುಂಡ ಯಂತ್ರಾರಾಧನೆ ಸಂಜೆ ಗಂಟೆ 5.30ರಿಂದ ಭವ್ಯ ಅಗ್ರೋದಕ ಮೆರವಣಿಗೆ, 108 ಕಲಶ ಮಹಾಭಿಷೇಕ, ಮಹೋತ್ಸವ, ಮಹಾಮಂಗಳಾರತಿ

ಧಾರವಾಡ: ಸಾಂಸ್ಕೃತಿಕ ಕಾರ್ಯಕ್ರಮ

Article Image

ಧಾರವಾಡ: ಸಾಂಸ್ಕೃತಿಕ ಕಾರ್ಯಕ್ರಮ

ಸತ್ತೂರು, ಧಾರವಾಡ: ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಅಲೈಡ ಹೆಲ್ತ್ ಸೈನ್ಸಸ್ ವಿಭಾಗದವರಿಂದ “ಪರ್ವ 2025” ಅನ್ನು “ದಿ ಫ್ರಾಸ್ಟಿವಲ್ - ವಿಂಟರ್ಸ್ ಸಿಂಫನಿ” ಎಂಬ ಧ್ಯೇಯೆಯೊಂದಿಗೆ ಎರಡು ದಿನಗಳ ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್ ಅವರು ಸಾಂಸ್ಕೃತಿಕ ಉತ್ಸವವನ್ನು ಉದ್ಘಾಟಿಸಿದರು. ಪದ್ಮಲತಾ ನಿರಂಜನ್ ಮತ್ತು ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ. ರತ್ನಮಾಲಾ ದೇಸಾಯಿ ಅವರು ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡುತ್ತಾ, ವಿದ್ಯಾರ್ಥಿಗಳು ಸೃಜನಶೀಲತೆಯಿಂದ ಏನು ಬೇಕಾದರೂ ಸಾಧಿಸಬಹುದು. ಎಲ್ಲಾ ಆರೋಗ್ಯ ವೃತ್ತಿಪರರು ರೋಗಿಗಳನ್ನು ನೋಡಿಕೊಳ್ಳಲು ಉತ್ತಮ ಮನಸ್ಸಿನಿಂದ ಕೆಲಸ ಮಾಡಬೇಕು ಪೂರ್ಣ ಸಮರ್ಪಣೆ ಮತ್ತು ನಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಬೇಕು. ನಿಮ್ಮ ಜ್ಞಾನ ಮತ್ತು ನವೀನ ಕೌಶಲ್ಯಗಳನ್ನು ನವೀಕರಿಸುತ್ತಿರಬೇಕು. ಅಭಿವೃದ್ಧಿ ಒಳ್ಳೆಯ ಉದ್ದೇಶಕ್ಕಾಗಿ ನಡೆಯಬೇಕು. ಶಿಸ್ತಿನಿಂದ ಎಸ್.ಡಿ.ಎಂ. ಹೆಸರು ಮತ್ತು ಖ್ಯಾತಿಯನ್ನು ಜಾಗತಿಕವಾಗಿ ಮುಂದೆ ತರಬೇಕು. ರೋಗಿಯ ಸುರಕ್ಷತೆ ಮತ್ತು ಉತ್ತಮ ಅಭ್ಯಾಸಗಳು ವಿದ್ಯಾರ್ಥಿಗಳ ಮೂಲ ಉದ್ದೇಶ. ಬುದ್ಧಿವಂತ ವ್ಯಕ್ತಿಯಾಗುವುದಕ್ಕಿಂತ ಜ್ಞಾನವುಳ್ಳ ವ್ಯಕ್ತಿಯಾಗುವುದು ಹೆಚ್ಚು ಮುಖ್ಯ ಎಂದು ಹೇಳಿದರು. ವೈದ್ಯಕೀಯ ಅಧೀಕ್ಷಕರಾದ ಡಾ. ಕಿರಣ್ ಹೆಗ್ಡೆ, ಅಲೈಡ್ ಹೆಲ್ತ್ ಸೈನ್ಸಸ್‌ನ ಸಂಯೋಜಕರಾದ ಡಾ. ವಿದ್ಯಾ ಎಸ್. ಪಾಟೀಲ್ ಅವರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಸೂರಜ್ ಮತ್ತು ಎಲ್ಹಾಮ್ ಖಾನ್ ಕಾರ್ಯಕ್ರಮವನ್ನು ನಿರೂಪಿಸಿದರು ಮತ್ತು ಅತಿಥಿಗಳನ್ನು ಸ್ವಾಗತಿಸಿದರು. ಆಂಜೆಲ್ ಬ್ಲಿಸ್ಸಿ ವಂದನಾರ್ಪಣೆ ಸಲ್ಲಿಸಿದರು.

ಬಳ್ಳಮಂಜ: ಬಸದಿಯಲ್ಲಿ ವಾರ್ಷಿಕೋತ್ಸವ, ವಿಶೇಷ ಪೂಜೆ

Article Image

ಬಳ್ಳಮಂಜ: ಬಸದಿಯಲ್ಲಿ ವಾರ್ಷಿಕೋತ್ಸವ, ವಿಶೇಷ ಪೂಜೆ

ಉಜಿರೆ: ಬೆಳ್ತಂಗಡಿ ತಾಲ್ಲೂಕಿನ ಬಳ್ಳಮಂಜ ಗ್ರಾಮದಲ್ಲಿರುವ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರ ಪ್ರತಿಷ್ಠಾ ಮಹೋತ್ಸವದ 39ನೆ ವಾರ್ಷಿಕೋತ್ಸವದ ಅಂಗವಾಗಿ ಮೇ. 3ರಂದು ಶನಿವಾರ ಬೆಳಿಗ್ಗೆಯಿಂದ ಭಗವಾನ್ ಪಾರ್ಶ್ವನಾಥ ಸ್ವಾಮಿಗೆ 24 ಕಲಶಾಭಿಷೇಕ, ಅಷ್ಟವಿಧಾರ್ಚನೆ ಪೂಜೆ, ಜಿನಭಜನೆ, ಮಹಾಪೂಜೆ ಮೊದಲಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ನಿವೃತ್ತ ಪ್ರಾಂಶುಪಾಲ ಕೆ. ರಾಜವೀರ ಇಂದ್ರ ತಿಳಿಸಿದ್ದಾರೆ. ಅಳಿಯೂರು ಆದಿರಾಜ ಜೈನ್ ನೇತೃತ್ವದಲ್ಲಿ ಸಂಗೀತ ಮತ್ತು ಭಜನೆಯೊಂದಿಗೆ ಶ್ರಾವಕರು ಮತ್ತು ಶ್ರಾವಕಿಯರಿಂದ ಹನ್ನೆರಡು ವೃತಗಳ ಪೂಜೆ ನಡೆಯಲಿದೆ. ಧಾರ್ಮಿಕ ಸಭೆ: ಭಾರತೀಯ ಜೈನ್ ಮಿಲನ್, ಮಂಗಳೂರು ವಲಯದ ಉಪಾಧ್ಯಕ್ಷ ಸುದರ್ಶನ್ ಜೈನ್ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭೆ ನಡೆಯಲಿದೆ. ನಾರಾವಿ ಅಜಿತ್ ಕುಮಾರ್ ಜೈನ್ ಧಾರ್ಮಿಕ ಉಪಾನ್ಯಾಸ ನೀಡುವರು.

ವೈದ್ಯರಿಂದ ಸಮಾಲೋಚನೆ ಹಾಗೂ ಉಚಿತ ಶಿಬಿರ

Article Image

ವೈದ್ಯರಿಂದ ಸಮಾಲೋಚನೆ ಹಾಗೂ ಉಚಿತ ಶಿಬಿರ

ತುಮಕೂರು: ಚಿಕ್ಕಪೇಟೆಯ ಶ್ರೀ ದಿಗಂಬರ ಜೈನ ಶ್ರೀ ಪಾರ್ಶ್ವನಾಥ ಸ್ವಾಮಿ ಜಿನ ಮಂದಿರ ಹೃದಯ ಸಂಬಂಧಿತ ರೋಗದ ಬಗ್ಗೆ ವೈದ್ಯರಿಂದ ಸಮಾಲೋಚನೆ ಹಾಗೂ ಉಚಿತ ಶಿಬಿರವು 27.04.2025ನೇ ಭಾನುವಾರ ಜೈನ ಭವನದಲ್ಲಿ ಯಶಸ್ವಿಯಾಗಿ ನಡೆಯಿತು. ಟಸ್ಟ್ ವೆಲ್ ಹಾಸ್ಪಿಟಲ್ ವತಿಯಿಂದ ಡಾಕ್ಟರ್ ಅಮಿತ್ ಕುಮಾರ್ ಎಂ. ಒಸ್ವಾಲ್ ರವರು ಯುವಕರಲ್ಲಿ ಹೆಚ್ಚುತ್ತಿರುವ ಹೃದಯ ಕಾಯಿಲೆಯ ಬಗ್ಗೆ ಹೆಚ್ಚಿನ ಮಾಹಿತಿ ಹಾಗೂ ಮುನ್ನೆಚ್ಚರಿಕೆಯನ್ನು ನೀಡಿದರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಉಚಿತವಾಗಿ ಮಧುಮೇಹ,ರಕ್ತದೊತ್ತಡ, ಹಾಗೂ ಇಸಿಜಿ ಪರೀಕ್ಷೆಗಳನ್ನು ಮಾಡಲಾಯಿತು. ಉಚಿತ ವೈದ್ಯಕೀಯ ಶಿಬಿರವನ್ನು ಮಾಡಿಕೊಟ್ಟ ಟ್ರಸ್ಟ್ ಆಸ್ಪತ್ರೆಯ ಡಾ. ಅಮಿತ್ ಕುಮಾರ್ ಎಂ ಒಸ್ಪಾಲ್ ರವರು ಮತ್ತು ಅವರ ತಂಡಕ್ಕೆ ಜೈನ ಸಮಾಜದ ವತಿಯಿಂದ ಸನ್ಮಾನಿಸಲಾಯಿತು.

ವೇಣೂರು: ಬಾಹುಬಲಿ ಸಭಾಭವನದಲ್ಲಿ ಸಾಮೂಹಿಕ ವೃತೋಪದೇಶ

Article Image

ವೇಣೂರು: ಬಾಹುಬಲಿ ಸಭಾಭವನದಲ್ಲಿ ಸಾಮೂಹಿಕ ವೃತೋಪದೇಶ

ಉಜಿರೆ: ಸಮ್ಯಕ್‌ದರ್ಶನ, ಸಮ್ಯಕ್‌ಜ್ಞಾನ ಮತ್ತು ಸಮ್ಯಕ್‌ಚಾರಿತ್ರ್ಯಂ ಎಂಬ ರತ್ನತ್ರಯ ಧರ್ಮದ ಪಾಲನೆಯೊಂದಿಗೆ ರಾಗ-ದ್ವೇಷ ರಹಿತನಾದ ವೀತರಾಗ ಭಗವಂತನ ಶ್ರದ್ಧಾ-ಭಕ್ತಿಯ ಧ್ಯಾನದಿಂದ ಮೋಕ್ಷ ಪ್ರಾಪ್ತಿ ಸಾಧ್ಯವಾಗುತ್ತದೆ ಎಂದು ಮೂಡಬಿದ್ರೆ ಜೈನಮಠದ ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು. ಅವರು ಶುಕ್ರವಾರ ವೇಣೂರಿನಲ್ಲಿ ಬಾಹುಬಲಿ ಸಭಾಭವನದಲ್ಲಿ ಬಾಹುಬಲಿ ಯುವಜನ ಸಂಘ, ದಿಗಂಬರ ಜೈನತೀರ್ಥಕ್ಷೇತ್ರ ಸಮಿತಿ ಹಾಗೂ ಬ್ರಾಹ್ಮಿ ಮಹಿಳಾ ಮಂಡಲದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ಸಾಮೂಹಿಕ ವೃತೋಪದೇಶ ಸಮಾರಂಭದಲ್ಲಿ 53 ಮಂದಿ ಬಾಲಕರು ಮತ್ತು ಬಾಲಕಿಯರಗೆ ವೃತೋಪದೇಶ ನೀಡಿ ಆಶೀರ್ವದಿಸಿದರು. ವೃತ ಸ್ವೀಕಾರದಿಂದ ವರ್ತನೆಗಳ ಪರಿವರ್ತನೆ ಹಾಗೂ ಸುಧಾರಣೆಯಾಗುತ್ತದೆ. ಮನ, ವಚನ, ಕಾಯದಿಂದ ಪರಿಶುದ್ಧರಾಗಿ ದೇವರು, ಗುರುಗಳು ಮತ್ತು ಶಾಸ್ತçದಲ್ಲಿ ಅಚಲ ನಂಬಿಕೆ ಇಟ್ಟು ನಿತ್ಯವೂ ಜಪ, ತಪ, ಧ್ಯಾನದ ಮೂಲಕ ಆತ್ಮನಿಗಂಟಿದ ಸಕಲ ಪಾಪ ಕರ್ಮಗಳ ಕೊಳೆ ಕಳೆದುಕೊಂಡಾಗ ಮೋಕ್ಷ ಪ್ರಾಫ್ತಿಯಾಗುತ್ತದೆ. ನಿತ್ಯವೂ ಪಂಚಾಣುವೃತಗಳ ಪಾಲನೆ ಮಾಡಬೇಕು. ನೀರನ್ನು ಸೋಸಿ ಕುಡಿಯಬೇಕು ಹಾಗೂ ರಾತ್ರಿ ಭೋಜನ ತ್ಯಾಗ ಮಾಡಿ “ಬದುಕು ಮತ್ತು ಬದುಕಲು ಬಿಡು” ಎಂಬ ತತ್ವದೊಂದಿಗೆ ಸಾತ್ವಿಕ ಜೀವನ ನಡೆಸಬೇಕು ಎಂದು ಸ್ವಾಮೀಜಿ ಸಲಹೆ ನೀಡಿದರು. ಜನಿವಾರ ಎಂಬುದು ರತ್ನತ್ರಯ ಧರ್ಮ ಧಾರಣೆಯ ಸಂಕೇತ. ಬೀಗದ ಕೀ ಹಾಕಲು ಅಥವಾ ಬೆನ್ನು ತುರಿಸಲು ಅದನ್ನು ಬಳಸಬಾರದು ಎಂದು ಅವರು ಕಿವಿಮಾತು ಹೇಳಿದರು. ಮಾತಾ-ಪಿತರನ್ನು ಹಾಗೂ ಗುರು-ಹಿರಿಯರನ್ನು ಗೌರವಿಸಿ ಎಲ್ಲರೊಂದಿಗೂ ಪ್ರೀತಿ-ವಿಶ್ವಾಸದೊಂದಿಗೆ ಆದರ್ಶ ಜೀವನ ನಡೆಸಬೇಕು ಎಂದು ಸ್ವಾಮೀಜಿ ಹೇಳಿದರು. ಎಲ್ಲರಿಗೂ ಜನಿವಾರ ವಿತರಿಸಿ, ಸಾಮೂಹಿಕವಾಗಿ ಪಂಚನಮಸ್ಕಾರ ಮಂತ್ರ ಪಠಣ ನಡೆಸಲಾಯಿತು.

ಕಾರ್ಕಳ, ಹಿರಿಯಂಗಡಿ: ವಿದ್ಯಾರ್ಥಿಗಳ ನೋಂದಾವಣೆ ಆರಂಭ

Article Image

ಕಾರ್ಕಳ, ಹಿರಿಯಂಗಡಿ: ವಿದ್ಯಾರ್ಥಿಗಳ ನೋಂದಾವಣೆ ಆರಂಭ

ಕಾರ್ಕಳ ತಾಲೂಕಿನ ಹಿರಿಯಂಗಡಿಯಲ್ಲಿರುವ ಶ್ರೀ ಭುಜಬಲಿ ಬ್ರಹ್ಮಚರ್ಯಾಶ್ರಮ ಮತ್ತು ಇದರ ಆಡಳಿತಕ್ಕೊಳಪಟ್ಟ ಎಸ್ ಎನ್ ವಿ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ 2025-26 ನೇ ಸಾಲಿಗೆ ವಿದ್ಯಾರ್ಥಿಗಳ ನೋಂದಾವಣೆ ಆರಂಭಗೊಂಡಿದೆ. ನಿಲಯದಲ್ಲಿ 6ನೇ ತರಗತಿಯಿಂದ ಪಿಯುಸಿ ತರಗತಿವರೆಗೆ ಪ್ರವೇಶ ನೀಡಲಾಗುತ್ತದೆ. ಕಳೆದ 80 ವರ್ಷಗಳಿಂದ ಗುರುಕುಲ ಪದ್ಧತಿಯೊಂದಿಗೆ ಸಂಸ್ಕಾರಯುತ ಜೀವನದ ಮೌಲ್ಯಗಳನ್ನು ಸಾವಿರಾರು ವಿದ್ಯಾರ್ಥಿಗಳಿಗೆ ದಯಪಾಲಿಸಿ ನಾಡಿನಾದ್ಯಂತ ಉತ್ತಮ ಶಿಕ್ಷಣ ಸಂಸ್ಥೆ ಎಂದು ಗುರುತಿಸಲ್ಪಟ್ಟಿರುತ್ತದೆ. ಗುಣಮಟ್ಟದ ಶಾಲಾ ಶಿಕ್ಷಣದೊಂದಿಗೆ ಕಡ್ಡಾಯ ಧಾರ್ಮಿಕ ಶಿಕ್ಷಣ, ನೈತಿಕತೆ, ಕ್ರೀಡೆ, ಭಾಷಣ ಕಲೆ, ಭಜನೆ, ಸಮಾಜ ಸೇವೆ, ಪೌರೋಹಿತ್ಯ ಅಧ್ಯಯನದ ಬಗ್ಗೆಯೂ ಗಮನಕೊಡಲಾಗುವುದು. ಉತ್ತಮ ವಸತಿ, ಊಟ – ತಿಂಡಿ, ಸ್ನಾನಕ್ಕೆ ಬಿಸಿನೀರು, ಶುದ್ಧ ಕುಡಿಯುವ ನೀರು, ಸುಸಜ್ಜಿತ ರೂಮಿನ ವ್ಯವಸ್ಥೆ, ಕ್ರೀಡೆ ಮತ್ತು ಮನೋರಂಜನ ಚಟುವಟಿಕೆಗಳೊಂದಿಗೆ ಪ್ರಶಾಂತ ವಾತಾವರಣದಲ್ಲಿ ಜ್ಞಾನಾರ್ಜನೆಗೆ ಸರ್ವ ರೀತಿಯ ಪ್ರೋತ್ಸಾಹ ನೀಡಲಾಗುತ್ತದೆ. ಸಂಸ್ಥೆಯ ವತಿಯಿಂದ ನಡೆಯುತ್ತಿರುವ ಸ್ವಸ್ತಿ ಶ್ರೀ ನೇಮಿಸಾಗರ ವರ್ಣೀಜಿ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಲ್ಲಿ ಪ್ರಸ್ತುತ ಸಾಲಿನ ಪ್ರವೇಶಕ್ಕಾಗಿ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಆಸಕ್ತ ಪೋಷಕರು ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ದಿನಾಂಕ 20.05.2025 ರೊಳಗೆ ಕಚೇರಿಯನ್ನು ದೂರವಾಣಿ ಸಂಖ್ಯೆ 8197500498 ಮೂಲಕ ಸಂಪರ್ಕಿಸಲು ಕೋರಲಾಗಿದೆ.

ನಾರಾವಿಯಲ್ಲಿ ಅದ್ದೂರಿಯಾಗಿ ನಡೆದ ಭ. ಶ್ರೀ ಮಹಾವೀರ ಸ್ವಾಮಿಯ ಜನ್ಮಕಲ್ಯಾಣ ಮಹೋತ್ಸವ

Article Image

ನಾರಾವಿಯಲ್ಲಿ ಅದ್ದೂರಿಯಾಗಿ ನಡೆದ ಭ. ಶ್ರೀ ಮಹಾವೀರ ಸ್ವಾಮಿಯ ಜನ್ಮಕಲ್ಯಾಣ ಮಹೋತ್ಸವ

ನಾರಾವಿ: ಭಗವಾನ್ ಶ್ರೀ ಮಹಾವೀರ ಸ್ವಾಮಿಯ ಜನ್ಮ ಕಲ್ಯಾಣ ಮಹೋತ್ಸವವು ಅತ್ಯಂತ ಅದ್ದೂರಿಯಾಗಿ ನೆರೆವೇರಿತು. ಜಿನ ಭಗವಂತರಿಗೆ ಶ್ರಾವಕ ಬಂಧುಗಳು ಹಾಗೂ ಮಕ್ಕಳು ಜಿನಭಿಷೇಕ ಮಾಡುವುದರ ಮೂಲಕ ಪುಣ್ಯ ಪಡೆದುಕೊಂಡರು. ಜೈನ ಯುವಜನ ಸಂಘದ ಪದಾಧಿಕಾರಿಗಳು ಕಾರ್ಯಕ್ರಮ ಆಯೋಜಿಸಿದ್ದರು. ಆಡಳಿತ ಸಮಿತಿ ನಾರಾವಿ ಹಾಗೂ ಜೈನ್ ಮಿಲನ್ ನಾರಾವಿ ಮತ್ತು ಊರ ಹಾಗೂ ಪರವೂರ ಶ್ರಾವಕ ಬಂಧುಗಳ ಸಹಕಾರದಿಂದ ಅತ್ಯಂತ ವಿಜೃಂಭಣೆಯಿಂದ ನೆರವೇರಿತು.

ತುಮಕೂರು: ವೈಭವದ ಭಗವಾನ್ ಶ್ರೀ ಮಹಾವೀರ ತೀರ್ಥಂಕರ ಜಯಂತಿ ಆಚರಣೆ

Article Image

ತುಮಕೂರು: ವೈಭವದ ಭಗವಾನ್ ಶ್ರೀ ಮಹಾವೀರ ತೀರ್ಥಂಕರ ಜಯಂತಿ ಆಚರಣೆ

ಶಾಂತಿ ಮತ್ತು ಅಹಿಂಸೆಯ ಪ್ರತಿಪಾದಕ ಭಗವಾನ್ ಮಹಾವೀರರ 2624 ನೆಯ ಜನ್ಮ ಜಯಂತಿಯನ್ನು ತುಮಕೂರು ದಿಗಂಬರ ಜೈನ ಶ್ರೀ ಪಾರ್ಶ್ವನಾಥ ಜಿನ ಮಂದಿರ ಸಮಿತಿಯ ವತಿಯಿಂದ ವೈಭವದಿಂದ ಆಚರಿಸಲಾಯಿತು. ಶ್ರೀ ಕ್ಷೇತ್ರ ನರಸಿಂಹರಾಜಪುರ ಸಿಂಹನಗದ್ದೆ ಬಸ್ತಿ ಮಠದ ಪೀಠಾಧ್ಯಕ್ಷರಾದ ಸ್ವಸ್ತಿಶ್ರೀ ಲಕ್ಷ್ಮಿ ಸೇನಾ ಭಟ್ಟಾರಕ ಮಹಾಸ್ವಾಮೀಜಿಗಳವರ ಮಾರ್ಗದರ್ಶನದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪೂಜೆ, ಅಭಿಷೇಕ, ಆರಾಧನೆಗಳು ನಡೆದವು. ನಂತರ ನಗರದ ಚಿಕ್ಕಪೇಟೆಯ ಶ್ರೀ ಪಾರ್ಶ್ವನಾಥ ಜಿನ ಮಂದಿರದ ತ್ರಿಲೋಕ್ ಭವನದಿಂದ ಮೆರವಣಿಗೆ ಸಾಗಿದ ಭಕ್ತರು, ಗ್ರಾಮ ದೇವತೆ ವೃತ್ತ, ಚಿಕ್ಕಪೇಟೆ ವೃತ್ತ, ಚಿಕ್ಕಪೇಟೆಯ ಮುಖ್ಯರಸ್ತೆ, ಕೋಟೆ ಆಂಜನೇಯ ವೃತ್ತ, ಡಾ. ಬಿ.ಆರ್. ಅಂಬೇಡ್ಕರ್ ರಸ್ತೆ, ಎಂ.ಜಿ. ರಸ್ತೆ, ಬಿ.ಎಚ್. ರಸ್ತೆಯ ಮೂಲಕ ಸಾಗಿ ಜೈನ ಭವನದಲ್ಲಿ ಸಮಾವೇಶಗೊಂಡರು. ತುಮಕೂರು ಶಾಸಕ ಜಿ.ಬಿ. ಜ್ಯೋತಿ ಗಣೇಶ್ ಸಭೆಯನ್ನ ಉದ್ದೇಶಿಸಿ ಮಾತನಾಡಿ ಭಗವಾನ್ ಶ್ರೀ ಮಹಾವೀರರ ತತ್ವ ಆದರ್ಶಗಳನ್ನ ಜೀವನದಲ್ಲಿ ಅಳವಡಿಸಿಕೊಂಡು ಸಮಾಜದ ಅಭಿವೃದ್ಧಿಗೆ ಶಾಂತಿ, ಅಹಿಂಸೆಗೆ ಸಹಕರಿಸಬೇಕೆಂದರು. ಸವಿತಾ, ಸುಭೋದ್ ಕುಮಾರ್ ಜೈನ್ ಇಂದ್ರ ಇಂದ್ರಾಣಿಯರಾಗಿ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಮಹಾವೀರ ಜಯಂತಿ ಅಂಗವಾಗಿ ನಗರದ ಸುರೇಶ್ ಬಾಂಡ್ ಟೀ ವತಿಯಿಂದ ಹಾಗೂ ಜೈನ ಸಮಾಜದ ವತಿಯಿಂದ ಜಿಲ್ಲಾ ಆಸ್ಪತ್ರೆ ರೋಗಿಗಳಿಗೆ ಹಣ್ಣು- ಹಂಪಲುಗಳನ್ನು ವಿತರಿಸಲಾಯಿತು. ಪಿ.ಯು.ಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು. ಶ್ರೀ ಪಾರ್ಶ್ವನಾಥ ಜಿನಮಂದಿರ ಸಮಿತಿಯ ಅಧ್ಯಕ್ಷ ಟಿ. ಡಿ. ಬಾಹುಬಲಿ ಬಾಬು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶ್ರೀ ಮಂದರಗಿರಿ ಯಾತ್ರಾ ಸಂಘದ ಅಧ್ಯಕ್ಷ ಕೆ.ಪಿ. ವೀರೇಂದ್ರ, ಡೈರಿ ರಾಜೇಂದ್ರ ಪ್ರಸಾದ್, ಟಿ.ಜೆ. ನಾಗರಾಜ್, ಎ. ಆರ್. ಬ್ರಹ್ಮಪ್ರಕಾಶ್, ಜ್ವಾಲಾಮಾಲಿನಿ, (ಎಂ.ಎಲ್.ಎ. ಮಾಲಮ್ಮ)ಮಂಜುಳಾ ಚಂದ್ರಪ್ರಭ, ಎಸ್‌.ವಿ. ಜಿನೇಶ್, ಬಿ .ಎಸ್ ಪಾರ್ಶ್ವನಾಥ, ವಿನಯ್ ಸೇರಿದ್ದಂತೆ ಶ್ರೀ ಪಾರ್ಶ್ವನಾಥ ಜಿನ ಮಂದಿರ ಸಮಿತಿಯ ಸದಸ್ಯರುಗಳು, ವಿವಿಧ ಜೈನ ಸಂಘಟನೆಗಳ ಪದಾಧಿಕಾರಿಗಳು, ಜೈನ ಮಹಿಳಾ ಸಂಘಟನೆಗಳ ಪದಾಧಿಕಾರಿಗಳು ಶ್ರಾವಕ-ಶ್ರಾವಕಿಯರು ಭಾಗವಹಿಸಿದ್ದರು. ಜೆ. ರoಗನಾಥ - ತುಮಕೂರು.

ಎಕ್ಸಲೆ0ಟ್ ಮೂಡುಬಿದಿರೆಯಲ್ಲಿ ಮಹಾವೀರ ಜಯ0ತಿ ದಿನಾಚರಣೆ

Article Image

ಎಕ್ಸಲೆ0ಟ್ ಮೂಡುಬಿದಿರೆಯಲ್ಲಿ ಮಹಾವೀರ ಜಯ0ತಿ ದಿನಾಚರಣೆ

ಮೂಡುಬಿದಿರೆ: ಚೈತ್ರ ಮಾಸದ ಶುಕ್ಲ ಪಕ್ಷದ ತ್ರಯೋದಶಿಯ0ದು ನಡೆಯುವ ಶ್ರೀ ಮಹಾವೀರ ಸ್ವಾಮಿಯ 2624 ನೇ ಜನ್ಮ ಕಲ್ಯಾಣ ಮಹೋತ್ಸವ ಎಕ್ಸಲೆ0ಟ್ ಮೂಡುಬಿದಿರೆಯಲ್ಲಿಸ0ಭ್ರಮದಿ0ದ ಸ0ಪನ್ನಗೊ0ಡಿತು. ಕಾರ್ಯಕ್ರಮದಲ್ಲಿ ಎಕ್ಸಲೆ0ಟ್ ಮೂಡುಬಿದಿರೆ ಈ ವರ್ಷದಿ0ದ ಕೊಡಮಾಡುವ ಸನ್ಮತಿ ಮಹಾವೀರ ಶಾ0ತಿ ಪುರಸ್ಕಾರ -2025 ನ್ನು ಶ್ರೀ ಧರ್ಮಸ್ಥಳ ಮ0ಜುನಾಥೇಶ್ವರ ಕಾನೂನು ಮಹಾವಿದ್ಯಾಲಯ ಮ0ಗಳೂರಿನ ವಿಶ್ರಾ0ತ ಪ್ರಾ0ಶುಪಾಲರಾದ ಪ್ರೊ ಅರಳ ರಾಜೇ0ದ್ರ ಶೆಟ್ಟಿಯವರಿಗೆ ನೀಡಿ ಅಭಿವ0ದಿಸಲಾಯಿತು. ಪುರಸ್ಕಾರಕ್ಕೆ ಪ್ರತಿಕ್ರಿಯಿಸಿದ ಅರಳ ರಾಜೇ0ದ್ರ ಶೆಟ್ಟಿಯವರು ಚೈತನ್ಯ ಈ ನೆಲದ ಕಣಕಣದಲ್ಲೂ ಅ0ತರ್ಯಾಮಿಯಾಗಿದೆ. ಅದನ್ನು ಕಾಣುವ ಕಣ್ಣಿರಬೇಕು. ಕಲ್ಲಿನೊಳಗಿನ ದೈವನಿಹಿತ ಶಕ್ತಿಯನ್ನು ಕ0ಡ ಯುವರಾಜರು ಅದರ ಸಾಕ್ಷಾತ್ಕಾರದ ಪಣ ತೊಟ್ಟರು. ಅವರ ಧರ್ಮ ಪತ್ನಿ ರಶ್ಮಿತಾ ಜೈನ್ ಜೊತೆಗೂಡಿದರು. ಅಭಯಚ0ದ್ರರು ಅಭಯ ನೀಡಿದರು. ಮು0ದಿನದ್ದು ಇತಿಹಾಸ. ಈ ನೆಲದಲ್ಲಿ ಕಲ್ಲರಳಿ ಹೂವಾಯಿತು. ನನಗೆ ಕರ್ಮಸ್ಥಳವೇ ಧರ್ಮಸ್ಥಳ. ಪೂಜ್ಯ ವೀರೆ0ದ್ರ ಹೆಗ್ಗಡೆಯವರಿಗೆ ನನ್ನೆಲ್ಲಾ ಸ0ತೋಷವನ್ನು ಅರ್ಪಿಸುತ್ತಿದ್ದೇನೆ. ನಮ್ಮ ಕೆಲಸವನ್ನು ತೃಪ್ತಿಯಿ0ದ ನಿಷ್ಠೆಯಿ0ದ ಮಾಡಿದರೆ ಸ0ತೋಷ ನಮ್ಮನ್ನು ಅರಸಿಕೊ0ಡು ಬರುತ್ತದೆ. ನಿರೀಕ್ಷೆಗಳ ಹಿ0ದೆ ಓಡಕೂಡದು. ಬದುಕಿನ ಬಹಳ ದೊಡ್ಡ ಗುಟ್ಟು ಸ0ತೋಷದಲ್ಲಿದೆ. ಮನಸ್ಸು ಸ0ತೋಷದಲ್ಲಿದ್ದರೆ ಬದುಕು ಸಾರ್ಥಕ್ಯವನ್ನು ಕಾಣುತ್ತದೆ. ನಾವು ನಮ್ಮ ದೃಷ್ಟಿ ಬದಲಾಯಿಸಿದರೆ ನಮ್ಮ ಸೃಷ್ಟಿ ಬದಲಾಗುತ್ತದೆ. ಸೃಷ್ಟಿಯಲ್ಲಿ ಸೌ0ದರ್ಯವೇ ಇರುತ್ತದೆ. ನಾವು ನಮ್ಮ ಅನಾವಶ್ಯಕ ಮಾತು, ಯೋಚನೆ, ಚಿ0ತನೆಗಳಿ0ದ ಆ ಸೌ0ದರ್ಯವನ್ನು ಕಾಣದಾಗಿದ್ದೇವೆ. ಅಹಿ0ಸೆ ಎ0ಬ ಒ0ದು ಬಾಗಿಲು ಸಾಕು ಭಗವ0ತನ ಸಾಕ್ಷಾತ್ಕಾರಕ್ಕೆ. ಅಹಿ0ಸೆಯ ರಾಜ ಮಾರ್ಗದಲ್ಲಿ ಪ್ರೀತಿ ಇದೆ, ಸಹನೆ ಇದೆ, ವಿಶ್ವಾಸ, ಭರವಸೆ ಇದೆ. ಆ ಮಾರ್ಗದಲ್ಲಿ ಪಥಿಕರಾಗೋಣ. ಮಣ್ಣ ಕಣಕಣದಲ್ಲೂ ತ0ಪು ತಣಿವುಗಳಿರಲಿ. ಒಲವಿನೊರತೆಯು ಹೊಳೆಯಾಗಿ ಹರಿದು ಬರಲಿ. ಭ್ರಮೆಯ ಬದುಕನ್ನು ಕಳಚಿ ಹೊರಡೋಣ, ಪ್ರೀತಿ ಎ0ಬ ಬೆಳಕಿನ ಬಟ್ಟೆ ನಮ್ಮನ್ನು ಭಗವ0ತನ ಕಡೆ ಒಯ್ಯುತ್ತದೆ. ಈ ಎಕ್ಸಲೆ0ಟ್ ನಲ್ಲಿ ನೀವು ಕಲಿಯುವುದರೊ0ದಿಗೆ ಬೆಳೆಯಿರಿ, ಎಕ್ಸಲೆ0ಟ್ ಗಳಾಗಿ ಎ0ದರು. ಪ್ರತಿ ಮಗುವೂ ಪ್ರಪ್ರಥಮವಾಗಿ ಒಳ್ಳೆಯವರೇ. ಸುತ್ತಲಿನ ಋಣಾತ್ಮಕ ಸ0ಗತಿಗಳು ನಿಮ್ಮನ್ನು ಕೆಡಿಸದಿರಲಿ. ಆಯ್ಕೆ ನಿಮ್ಮ ಕೈಯಲ್ಲಿದೆ. ಒಳ್ಳೆಯ ಆಯ್ಕೆ ಒಳ್ಳೆಯ ಜೀವನ. ಬೆಳಕಿನ ಬಟ್ಟೆಯಲ್ಲಿ ನಡೆಯುವ ಎಕ್ಸಲೆ0ಟ್ ನ ಈ ದೀಪಗಳು ಸಮಾಜಕ್ಕೆ ಬೆಳಕಾಗಲಿ ಎ0ದರು. ಮುಖ್ಯ ಅತಿಥಿಗಳಾದ ಮಾಜಿ ಸಚಿವರಾದ ಕೆ ಅಭಯಚ0ದ್ರ ಜೈನ್ ಸರಳ ಜೀವನ ಶ್ರೇಷ್ಠ ಜೀವನ. ಸರಳ ಜೀವನ ಘನತೆ, ಗೌರವ ಎಲ್ಲವನ್ನು ತ0ದುಕೊಡುತ್ತದೆ. ಭಾರತೀಯತೆ, ರಾಷ್ಟ್ರೀಯ ಚಿ0ತನೆಗಳೊ0ದಿಗೆ ಸರಳ ಬದುಕು ನಮ್ಮದಾಗಲಿ ಎ0ದರು. ಸ0ಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್ ಸಭೆಯ ಅಧ್ಯಕ್ಷರಾಗಿ ಬದುಕು ಮತ್ತು ಬದುಕಲು ಬಿಡಿ ಎ0ಬ ಸಿದ್ಧಾ0ತ ನಮ್ಮ ಬದುಕಿಗೆ ದಾರಿ ದೀಪಗಳಾಗಲಿ. ಭಗವತ್ ಸಾಕ್ಷಾತ್ಕಾರಕ್ಕೆ ಮುನ್ನುಡಿ ಇರುವುದೇ ಆತ್ಮತೃಪ್ತಿಯ ಸನ್ನಿಧಿಯಲ್ಲಿ. ಗುಣವ0ತರಾಗಿ, ಕಷ್ಟದಲ್ಲಿರುವವರಿಗೆ ಬಲವಾಗಿ, ಸೌಜನ್ಯ, ಸೌಶೀಲ್ಯ, ಸೌಮನಸ್ಸುಗಳು ನಮ್ಮ ಸ0ಸಾರವಾದರೆ ನಮ್ಮ ಹೃದಯದಲ್ಲಿಭಗವ0ತ ನೆರೆಗೊ0ಡು ನಮ್ಮ ಎಲ್ಲಾ ಕೆಲಸಗಳಿಗೆ ಭಗವದನುಗ್ರಹ ಇರುತ್ತದೆ. ಮಹಾತ್ಮರ, ಸ0ತರ ಜೀವನ ನಮ್ಮ ಬದುಕಿಗೆ ಹೊಸ ಬೆಳಕಿನ ದಾರಿ ತೋರಿಸಲಿ. ನಾವು ಅದರಲ್ಲಿ ಮು0ದುವರೆಯೋಣ ಎ0ದರು. ಆಧ್ಯಾತ್ಮಿಕತೆಯ ಪರಮ ಸತ್ಯವನ್ನು ಪ್ರಾಪ0ಚಿಕರಿಗೆ ಬೋಧಿಸಿದ ಅಹಿ0ಸೆ, ಸತ್ಯ, ಅಪರಿಗ್ರಹ, ಬ್ರಹ್ಮಚರ್ಯದ ಮೂಲಕ ಸೈತಿಕ ನಡವಳಿಕೆಯ ಸಹೋದರ, ಸಮನ್ವತೆಯ ಉದಾತ್ತ ಧರ್ಮ ತೋರಿಕೊಟ್ಟ, ವಿಶ್ವಮಾನ್ಯ ಚೇತನವಾದ ಜೈನಧರ್ಮದ 24 ನೇ ತೀರ್ಥ0ಕರರಾದ ಶ್ರೀ ಮಹಾವೀರ ಸ್ವಾಮಿಯ 2624 ನೇ ಜನ್ಮ ಕಲ್ಯಾಣೋತ್ಸವ ಶ್ರಾವಕರಾದ ಅಜಿತ್ ನಾರಾವಿಯವರ ಮಾರ್ಗದರ್ಶನದಲ್ಲಿ ಅಷ್ಟವಿಧ ಅರ್ಚನೆಯೊ0ದಿಗೆ ಶ್ರದ್ಧೆಯಿ0ದ ಶ್ರೀಮತಿ ಪದ್ಮಪ್ರಿಯ, ಕು ಋದ್ಧಿ ಕೇರ ಅವರ ಮ0ತ್ರ ಪಠಣದೊ0ದಿಗೆ ಸ0ಪನ್ನಗೊ0ಡಿತು. ಇದೇ ಸ0ದರ್ಭದಲ್ಲಿ ಮಹಾಕವಿ ರತ್ನಾಕರವರ್ಣಿ ಪ್ರಶಸ್ತಿ ಪುರಸ್ಕೃತರಾದ ನೇರ0ಕಿ ಪಾರ್ಶ್ವನಾಥ, ಸುಧಾ ಪಾರ್ಶ್ವನಾಥ ದ0ಪತಿಯನ್ನು ವಿಶೇಷ ಗೌರವ ಪುರಸ್ಕಾರಗಳೊ0ದಿಗೆ ಅಭಿನ0ದಿಸಲಾಯಿತು. ವಿದ್ಯಾರ್ಥಿನಿ ಶ್ರೇಯಾ ಪ್ರಕಾಶ್ ನೀಲಗೌಡರ್ ಅವರನ್ನು ಅವರ ಬಹುಮುಖೀ ಪ್ರತಿಭೆಗಾಗಿ ಗೌರವಿಸಲಾಯಿತು. ಭಾರತೀಯ ಅ0ಚೆ ಇಲಾಖೆ ದಿನದ ಪ್ರಯುಕ್ತ ಎಕ್ಸಲೆ0ಟ್ ಸ0ಸ್ಥೆಗೆ ವಿಶ್ವನಮೋಕಾರ ಮ0ತ್ರ ದಿನದ ಪ್ರಯುಕ್ತ ಎಕ್ಸಲೆ0ಟ್ ಸ0ಸ್ಥೆಗೆ ವಿಶೇಷ ಗೌರವವನ್ನು ಸ0ಸ್ಥೆಯ ಗೌರವಾಧ್ಯಕ್ಷರಾದ ಅಭಯಚ0ದ್ರ ಜೈನ್ ಹಾಗೂ ಅಧ್ಯಕ್ಷರಾದ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್ ಅವರಿಗೆ ಹಸ್ತಾ0ತರಿಸಲಾಯಿತು. ಸ0ಸ್ಥೆಯ ರಕ್ಷಣಾ ಸಿಬ್ಬ0ದಿಗಳಿಗೆ ಹಾಗೂ ಸ್ವಚ್ಛತಾ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲರನ್ನೂ ಗೌರವಿಸಲಾಯಿತು. ವೇದಿಕೆಯಲ್ಲಿ ಕೃಷ್ಣರಾಜ ಹೆಗ್ಡೆ ಉಪಸ್ಥಿತರಿದ್ದರು. ಸ0ಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಪ್ರಾಸ್ತಾವಿಕ ಮಾತಿನೊ0ದಿಗೆ ಸ್ವಾಗತಿಸಿದರು. ಉಪನ್ಯಾಸಕ ಸುನಾದ್ ರಾಜ್ ಜೈನ್ ವ0ದಿಸಿದರು. ಸ0ಸ್ಥೆಯ ಆಡಳಿತ ನಿರ್ದೇಶಕರಾದ ಡಾ ಬಿ.ಪಿ ಸ0ಪತ್ ಕುಮಾರ್ ನಿರೂಪಿಸಿದರು.

ಮಹಾವೀರ ಜನ್ಮ ಕಲ್ಯಾಣೋತ್ಸವ

Article Image

ಮಹಾವೀರ ಜನ್ಮ ಕಲ್ಯಾಣೋತ್ಸವ

ಧರ್ಮಸ್ಥಳ, ಏಪ್ರಿಲ್ 10: ಇಂದು ಮಹಾವೀರ ಜಯಂತಿಯ ಶುಭ ಸಂದರ್ಭದಲ್ಲಿ, ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಧರ್ಮಸ್ಥಳದ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜನ್ಮ ಕಲ್ಯಾಣೋತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು. ಭವ್ಯ ಮೆರವಣಿಗೆಯೊಂದಿಗೆ ಆರಂಭಗೊಂಡ ಈ ಧಾರ್ಮಿಕ ಕಾರ್ಯಕ್ರಮದಲ್ಲಿ, ತೀರ್ಥಂಕರರಿಗೆ ವಿಶೇಷ ಅಭಿಷೇಕ ಮತ್ತು ಅಷ್ಟವಿಧಾರ್ಚನೆ ಪೂಜೆಗಳನ್ನು ಸಲ್ಲಿಸಲಾಯಿತು. ಬಳಿಕ, ಬಾಲ ತೀರ್ಥಂಕರನಿಗೆ ವೈಭವಯುತವಾದ ನಾಮಕರಣೋತ್ಸವವನ್ನು ಆಚರಿಸಲಾಯಿತು. ಈ ಪವಿತ್ರ ಕಾರ್ಯಕ್ರಮದಲ್ಲಿ ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್ ಹಾಗೂ ಸುಪ್ರಿಯಾ ಹರ್ಷೇಂದ್ರ ಕುಮಾರ್ ಅವರು ಉಪಸ್ಥಿತರಿದ್ದರು.

ಬೆಳ್ತಂಗಡಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

Article Image

ಬೆಳ್ತಂಗಡಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

ಉಜಿರೆ: ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಣೆಯ ಅಂಗವಾಗಿ ಗುರುವಾರ ತೋರಣಮುಹೂರ್ತ , ವಿಮಾನಶುದ್ಧಿ, ಭಗವಾನ್ ಮಹಾವೀರ ಸ್ವಾಮಿಗೆ ನವಕಲಾಶಾಭಿಷೇಕ, ಭಗವಾನ್ ಶಾಂತಿನಾಥ ಸ್ವಾಮಿಗೆ ೧೦೮ ಕಲಶಗಳಿಂದ ಮಹಾಭಿಷೇಕ, ಪದ್ಮಾವತಿ ಅಮ್ಮನವರಿಗೆ ಅಲಂಕಾರ ಪೂಜೆ ಹಾಗೂ ಬ್ರಹ್ಮಯಕ್ಷ ದೇವರಿಗೆ ವಿಶೇಷ ಪೂಜೆ ನಡೆಯಿತು. ಬಸದಿಯ ಆಡಳಿತ ಮೊಕ್ತೇಸರ ಕೆ. ಜಯವರ್ಮರಾಜ ಬಳ್ಳಾಲ್ ನೇತೃತ್ವದಲ್ಲಿ ಪ್ರಧಾನ ಅರ್ಚಕ ಕೆ. ಜಯರಾಜ ಇಂದ್ರರು ಮತ್ತು ಸಹಪುರೋಹಿತರಯ ಧಾರ್ಮಿಕ ವಿಧಿ-ವಿಧಾನಗನ್ನು ನೆರವೇರಿಸಿದರು. ಬಳಿಕ ನಡೆದ ಶಾಂತಿಚಕ್ರ ಆರಾಧನೆಯಲ್ಲಿ 26 ಮಂದಿ ಶ್ರಾವಕರು, ಶ್ರಾವಕಿಯರು ಭಾಗವಹಿಸಿ ಪುಣ್ಯಭಾಗಿಗಳಾದರು. ಭಗವಾನ್ ಮಹಾವೀರ ತೀರ್ಥಂಕರರ ಜೀವನ-ಸಾಧನೆ ಬಗ್ಯೆ ಉಪನ್ಯಾಸ ನೀಡಿದ ಅಳದಂಗಡಿ ಮಿತ್ರಸೇನ ಜೈನ್, ಮಹಾವೀರ ತೀರ್ಥಂಕರರು ಬೋಧಿಸಿದ ಅಹಿಂಸೆ, ಅನೇಕಾಂತವಾದ, ಬದುಕು ಮತ್ತು ಬದುಕಲು ಬಿಡು ಮೊದಲಾದ ಉಪದೇಶಗಳು ಸಾರ್ವಜನಿಕ ಮೌಲ್ಯ ಹೊಂದಿವೆ. ಸಕಲ ಪ್ರಾಣಿಪಕ್ಷಿಗಳಿಗೂ ನಮ್ಮಂತೆಯೇ ಬದುಕುವ ಹಕ್ಕಿದೆ. ಮಹಾವೀರರು ಬೋಧಿಸಿದ ತತ್ವಗಳಿಂದ ವಿಶ್ವಶಾಂತಿಯೊಂದಿಗೆ ಸುಖ-ಶಾಂತಿ, ನೆಮ್ಮದಿಯ ಜೀವನ ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು. ಕೆ. ಜಯವರ್ಮರಾಜ ಬಳ್ಳಾಲ್, ಡಾ. ಕೆ. ಜೀವಂಧರ ಬಳ್ಳಾಲ್, ಕೆ. ರಾಜವರ್ಮ ಬಳ್ಳಾಲ್, ಬೆಂಗಳೂರಿನ ವಕೀಲ ಕೆ.ಬಿ. ಯುವರಾಜ ಬಳ್ಳಾಲ್, ವಿಜಯಾ ಬ್ಯಾಂಕ್‌ನ ನಿವೃತ್ತ ಪ್ರಬಂಧಕ ಎಂ. ಜಿನರಾಜ ಶೆಟ್ಟಿ, ಸುಮತಿ ಕೆ.ಆರ್. ಬಳ್ಳಾಲ್ದ, ವಿನಯಾ ಜೆ. ಬಳ್ಳಾಲ್, ಡಾ. ಪ್ರಿಯಾ ಬಳ್ಳಾಲ್ ಮತ್ತು ಮಣಿಮಾಲ ಬಳ್ಳಾಲ್ ಹಾಗೂ ಬಳ್ಳಾಲ್ ಕುಟುಂಬಸ್ಥರು ಉಪಸ್ಥಿತರಿದ್ದರು.

ಣಮೋಕಾರ ಮಹಾಮಂತ್ರ ಪಠಣ ಸಮಾರಂಭ

Article Image

ಣಮೋಕಾರ ಮಹಾಮಂತ್ರ ಪಠಣ ಸಮಾರಂಭ

108 ದೇಶಗಳಲ್ಲಿ ಏಕಕಾಲದಲ್ಲಿ ಬೆಳಗ್ಗೆ ಏಳರಿಂದ ಹತ್ತು ಗಂಟೆಯವರೆಗೆ ನಮೋಕಾರ ಮಂತ್ರವನ್ನು ಪಠಿಸಲಾಯಿತು. ಭಾರತದಲ್ಲಿ ಪ್ರಧಾನಮಂತ್ರಿಯಾದ ಸನ್ಮಾನ್ಯ ನರೇಂದ್ರ ಮೋದಿಯವರು ನವ ದೆಹಲಿಯಲ್ಲಿ ವಿಜ್ಞಾನ ಭವನದಲ್ಲಿ ಈ ಕಾರ್ಯಕ್ರಮವನ್ನು ಉದ್ಘಾಟಿಸಿರುತ್ತಾರೆ. ಒಂದು ಜಗತ್ತು, ಒಂದು ಮಂತ್ರ, ಶಾಂತಿಗಾಗಿ ಜೊತೆಯಲ್ಲಿ ಎಂಬ ಧ್ಯೇಯದೊಂದಿಗೆ ಜೀತೋ ಸಂಸ್ಥೆ ವಿಶ್ವದಾದ್ಯಂತ ಏರ್ಪಡಿಸಿದ್ದ ವಿಶ್ವ ಣಮೋಕಾರ ಮಂತ್ರ ದಿವಸ ಇದರ ಅಂಗವಾಗಿ ಭಾರತೀಯ ಜೈನ್ ಮಿಲನ್ ಮೂಡುಬಿದರೆ, ಬಸದಿ ಸ್ವಚ್ಛತಾ ತಂಡ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಸಮಸ್ತ ಜೈನ ಬಾಂಧವರು ಮೂಡುಬಿದರೆ ಇವರಿಂದ ಜೈನ ಕಾಶಿ ಮೂಡುಬಿದರೆಯಲ್ಲಿ ಸಾವಿರ ಕಂಬದ ಬಸದಿ ಎಂದೇ ಪ್ರಸಿದ್ಧವಾಗಿರುವ ತ್ರಿಭುವನ ತಿಲಕ ಚೂಡಾಮಣಿ ಬಸದಿಯಲ್ಲಿ ಸಾಮೂಹಿಕವಾಗಿ ಣಮೋಕಾರ ಮಂತ್ರವನ್ನು ಪಠಿಸಲಾಯಿತು.

ಪಠ್ಯಕ್ರಮ ಅನುಷ್ಠಾನ ಬೆಂಬಲ ಕಾರ್ಯಕ್ರಮ

Article Image

ಪಠ್ಯಕ್ರಮ ಅನುಷ್ಠಾನ ಬೆಂಬಲ ಕಾರ್ಯಕ್ರಮ

ಸತ್ತೂರು, ಧಾರವಾಡ : ಎಸ್.ಡಿ.ಎಂ. ವೈದ್ಯಕೀಯ ಮಹಾವಿದ್ಯಾಲಯದ ವೈದ್ಯಕೀಯ ಶಿಕ್ಷಣ ಘಟಕವು ರಾಷ್ಟ್ರೀಯ ವೈದ್ಯಕೀಯ ಆಯೋಗದ ಪ್ರಾಂತೀಯ ನೋಡಲ್ ಕೇಂದ್ರ, ಜೆ.ಎನ್.ಎಂ.ಸಿ. ಬೆಳಗಾವಿಯ ಸಹಯೋಗದೊಂದಿಗೆ ಏಪ್ರಿಲ್ 03 ಮತ್ತು 04, 2025ರಂದು “ಪಠ್ಯಕ್ರಮ ಅನುಷ್ಠಾನ ಬೆಂಬಲ ಕಾರ್ಯಕ್ರಮ” ಎಂಬ ವಿಷಯದ ಮೇಲೆ 2 ದಿನಗಳ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಾಗಾರವು ಅಧ್ಯಾಪಕರಿಗೆ, ವೈದ್ಯಕೀಯ ವಿಷಯದಲ್ಲಿ ಹೊಸ ಬೋಧನೆ ಮತ್ತು ಕಲಿಕೆಯ ವಿಧಾನಗಳನ್ನು ಅಳವಡಿಸಿಕೊಳ್ಳಲು ಹೆಚ್ಚು ಸಹಕಾರಿಯಾಗಿದ್ದು, ಈ ಕಾರ್ಯಾಗಾರವು ರಾಷ್ಟ್ರೀಯ ವೈದ್ಯಕೀಯ ಆಯೋಗದಿಂದ ಅನುಮೋದಿಸಲ್ಪಟ್ಟಿದೆ. ಅಧ್ಯಾಪಕರು ತಮ್ಮ ದೈನಂದಿನ ವೈದ್ಯಕೀಯ ಜ್ಞಾನವನ್ನು ನವೀಕರಿಸಲು ಇದು ಉತ್ತಮ ವೇದಿಕೆಯಾಗಿದೆ. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಚಿದೇಂದ್ರ ಶೆಟ್ಟರ ಅವರು ಮುಖ್ಯ ಅತಿಥಿಗಳಾಗಿದ್ದು, ಜೆ.ಎನ್.ಎಂ.ಸಿಯ, ಎನ್.ಎಂ.ಸಿ. ಪ್ರಾಂತೀಯ ನೋಡಲ್ ಕೇಂದ್ರದ ಸಂಯೋಜಕರಾದ ಡಾ. ಸುನಿತಾ ಪಾಟೀಲ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾದ ಡಾ. ನಿರಂಜನ್ ಕುಮಾರ, ಉಪ ಕುಲಪತಿಗಳು ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡುತ್ತಾ: ಪ್ರೀತಿ ಮತ್ತು ಉತ್ಸಾಹದಿಂದ ಬೋದಿಸುತ್ತಾ ಉತ್ತಮ ಶಿಕ್ಷಕರಾಗಬೇಕು. ವೈದ್ಯಕೀಯ ಶಿಕ್ಷಕರು ಉತ್ತಮ ಜ್ಞಾನ ಮತ್ತು ಸಂವಹನ ಕೌಶಲ್ಯಗಳನ್ನು ಹೊಂದಿರಬೇಕು. ವಿದ್ಯಾರ್ಥಿಗಳನ್ನು ಸ್ವತಂತ್ರರಾಗುವಂತೆ ರೂಪಿಸುವುದು ಶಿಕ್ಷಕರಿಗೆ ಉತ್ತಮ ತೃಪ್ತಿಯನ್ನು ನೀಡುತ್ತದೆ. ಶಿಕ್ಷಣವು ವೃತ್ತಿಪರತೆ ಮತ್ತು ಜೀವನದ ಕಲೆಯನ್ನು ಕಲಿಸುತ್ತದೆ. ಬದಲಾಗುತ್ತಿರುವ ಶಿಕ್ಷಣ ವ್ಯವಸ್ಥೆಯಲ್ಲಿ ವಿಮರ್ಶಾತ್ಮಕ ಚಿಂತನೆ ಅಗತ್ಯ. ಶಿಕ್ಷಣದ ಜ್ಞಾನವನ್ನು ಹಂಚಿಕೊಳ್ಳಲು ಸಹಯೋಗ ಮತ್ತು ಸಹಕಾರ ಅಗತ್ಯ. ಉತ್ತಮ ಶಿಕ್ಷಣವು ವ್ಯಕ್ತಿಯ ಬುದ್ಧಿವಂತಿಕೆಯನ್ನು ಜಾಗೃತಗೊಳಿಸುತ್ತದೆ. ಎಸ್.ಡಿ.ಎಂ. ವೈದ್ಯಕೀಯ ಮಹಾವಿದ್ಯಾಲಯದ ಉಪ ಪ್ರಾಂಶುಪಾಲರಾದ ಡಾ. ದೀಪಕ ಕನಬೂರ, ಔಷಧಗುಣ ಶಾಸ್ತ್ರ ವಿಭಾಗದ ಮುಖ್ಯಸ್ಥರು ಮತ್ತು ವೈದ್ಯಕೀಯ ಶಿಕ್ಷಣ ಘಟಕದ ಸಂಯೋಜಕರಾದ ಡಾ. ರಾಧಿಕಾ ಶೇರ್ಖಾನೆ ಮತ್ತಿತರರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಡಾ. ಅರ್ಚನಾ ಡಂಬಳ ಅವರು ಅತಿಥಿಗಳನ್ನು ಸ್ವಾಗತಿಸಿ, ಎನ್.ಎಂ.ಸಿ. ಪ್ರಾಂತೀಯ ನೋಡಲ್ ಕೇಂದ್ರದ ಸಂಯೋಜಕರಾದ ಡಾ. ಸುನಿತಾ ಪಾಟೀಲ್ ಅವರನ್ನು ಪರಿಚಯಿಸಿದರು. ಡಾ. ಸ್ಮೀತಾ ಪ್ರಭು ಕಾರ್ಯಕ್ರವನ್ನು ನಿರೂಪಿಸಿದರು. ಡಾ. ಸ್ನೇಹಾ ವಂದನಾರ್ಪಣೆ ಸಲ್ಲಿಸಿದರು.

ಮಹಾವೀರ ಸ್ವಾಮಿ ಜನ್ಮಕಲ್ಯಾಣೋತ್ಸವ ಆಚರಣೆ

Article Image

ಮಹಾವೀರ ಸ್ವಾಮಿ ಜನ್ಮಕಲ್ಯಾಣೋತ್ಸವ ಆಚರಣೆ

ವೇಣೂರು: ಭಾರತೀಯ ಜೈನ್‌ ಮಿಲನ್‌ ಇವರು ಶ್ರೀ ದಿಗಂಬರ ಜೈನ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ (ರಿ.) ವೇಣೂರು, ಶ್ರೀ ಬಾಹುಬಲಿ ಯುವಜನ ಸಂಘ ವೇಣೂರು, ಬ್ರಾಹ್ಮಿ ಮಹಿಳಾ ಸಂಘ ವೇಣೂರು, ಕಲ್ಲುಬಸದಿ ಬ್ರಿಗೇಡಿಯರ್ಸ್‌ ವೇಣೂರು ಇವರ ಸಹಯೋಗದೊಂದಿಗೆ ಭ| ೧೦೦೮ ಶ್ರೀ ಮಹಾವೀರ ಸ್ವಾಮಿ ಜನ್ಮಕಲ್ಯಾಣೋತ್ಸವ ಆಚರಣೆಯು ದಿನಾಂಕ 10-04-2025ನೇ ಗುರುವಾರ ಶ್ರೀ ಬಾಹುಬಲಿ ಸಭಾ ಭವನದಲ್ಲಿ ಜರಗಲಿರುವುದು. ಕಾರ್ಯಕ್ರಮಗಳು : ಪೂರ್ವಾಹ್ನ ಗಂಟೆ 8.30ರಿಂದ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿಯಲ್ಲಿ ಪಾರ್ಶ್ವನಾಥ ಸ್ವಾಮಿಗೆ ಪಂಚಾಮೃತ ಅಭಿಷೇಕ ಮತ್ತು ಮಹಾವೀರ ಸ್ವಾಮಿಗೆ ಕ್ಷೇರಾಭಿಷೇಕ ಪೂರ್ವಾಹ್ನ ಗಂಟೆ 9.00ರಿಂದ : ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿಯಿಂದ ಶ್ರೀ ಬಾಹುಬಲಿ ಸಭಾಭವನಕ್ಕೆ ಜಿನ ಬಾಲಕನ ಪುರ ವಿಹಾರ ಪೂರ್ವಾಹ್ನ ಗಂಟೆ 9.30ರಿಂದ : ಶ್ರಾವಕ ಶ್ರಾವಕಿಯವರಿಂದ ಸಾಮೂಹಿಕ ಅಷ್ಟವಿಧಾರ್ಚನೆ ಪೂಜೆ ಪೂರ್ವಾಹ್ನ ಗಂಟೆ 10.45ರಿಂದ : ಪಾಂಡುಕ ಶಿಲೆಯಲ್ಲಿ ಜಿನ ಬಾಲಕನಿಗೆ ಜನ್ಮಾಭಿಷೇಕ, ನಾಮಕರಣೋತ್ಸವ ಮಧ್ಯಾಹ್ನ ಗಂಟೆ 12.00ಕ್ಕೆ : ಮಹಾಮಂಗಳಾರತಿ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವತಿಯಿಂದ ವಿವಿಧ ಸ್ಪರ್ಧೆಗಳು

Article Image

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವತಿಯಿಂದ ವಿವಿಧ ಸ್ಪರ್ಧೆಗಳು

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಹಾಗೂ ಕರಾವಳಿ ಮತ್ತು ಮಲೆನಾಡಿನ ಜೈನ ಸಮಾಜ ಬಾಂಧವರ ಸಹಕಾರದೊಂದಿಗೆ ಭಗವಾನ್ ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ ಆಚರಣೆ ಪ್ರಯುಕ್ತ ಸರ್ವಧರ್ಮೀಯರಿಗಾಗಿ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಏಪ್ರಿಲ್ 20ರ ಭಾನುವಾರದಂದು ಬೆಳಿಗ್ಗೆ 09.30ರಿಂದ ವಿದ್ಯಾಗಿರಿಯ ಕೃಷಿಸಿರಿ ವೇದಿಕೆಯಲ್ಲಿ ಸ್ಪರ್ಧೆಗಳು ನಡೆಯಲಿವೆ. ಸ್ಪರ್ಧೆಗಳ ವಿವರ: ೧) ಚಿತ್ರಕಲಾ ಸ್ಪರ್ಧೆ: • ಪ್ರಾಥಮಿಕ ಶಾಲಾ ವಿಭಾಗ: ವಿಷಯ: ಸುಂದರ ಪ್ರಕೃತಿ • ಪ್ರೌಢಶಾಲಾ ವಿಭಾಗ: ವಿಷಯ: ರಥೋತ್ಸವ ಸಮಯ: 1 ಗಂಟೆ ೨) ಭಾಷಣ ಸ್ಪರ್ಧೆ (ಕನ್ನಡ) • ಪ್ರೌಢಶಾಲಾ ವಿಭಾಗ: ವಿಷಯ: ಕ್ಷಮೆ ಮತ್ತು ಅಹಿಂಸೆಯ ಮಹತ್ವ • ಪಿಯುಸಿ/ಪದವಿ ವಿಭಾಗ: ವಿಷಯ: ವಿಶ್ವಶಾಂತಿ ಮತ್ತು ಜೈನಧರ್ಮ ಸಮಯ: 4+1 ನಿಮಿಷ ೩) ಭಾಷಣ ಸ್ಪರ್ಧೆ (ಇಂಗ್ಲೀಷ್) • ಪ್ರೌಢಶಾಲಾ ವಿಭಾಗ: ವಿಷಯ: ಕ್ಷಮೆ ಮತ್ತು ಅಹಿಂಸೆಯ ಮಹತ್ವ • ಪಿಯುಸಿ/ಪದವಿ ವಿಭಾಗ: ವಿಷಯ: ಜಾಗತಿಕ ಶಾಂತಿ ಹಾಗೂ ಜೈನಧರ್ಮ ಸಮಯ: 4+1 ನಿಮಿಷ ೪) ಪ್ರಬಂಧ ಸ್ಪರ್ಧೆ (ಕನ್ನಡ) • ಪ್ರೌಢಶಾಲಾ ವಿಭಾಗ: ವಿಷಯ: ಬದುಕಿ ಮತ್ತು ಬದುಕಲು ಬಿಡು ಸಮಯ: 30 ನಿಮಿಷಗಳು • ಪಿಯುಸಿ ಮತ್ತು ಪದವಿ ವಿಭಾಗ: ವಿಷಯ: ಭಾರತೀಯ ಸಂಸ್ಕೃತಿಗೆ-ಜೈನಧರ್ಮದ ಕೊಡುಗೆ ಸಮಯ: 45 ನಿಮಿಷಗಳು ೫) ಪ್ರಬಂಧ ಸ್ಪರ್ಧೆ (ಇಂಗ್ಲೀಷ್) • ಪ್ರೌಢಶಾಲಾ ವಿಭಾಗ: ವಿಷಯ: ಬದುಕಿ ಹಾಗೂ ಬದುಕಲು ಬಿಡಿ ಸಮಯ: 30 ನಿಮಿಷಗಳು • ಪಿಯುಸಿ ಮತ್ತು ಪದವಿ ವಿಭಾಗ: ವಿಷಯ: ಭಾರತೀಯ ಸಂಸ್ಕೃತಿಗೆ ಜೈನ ಧರ್ಮದ ಕೊಡುಗೆ ಸಮಯ: 45 ನಿಮಿಷಗಳು ಸ್ಪರ್ಧೆಗಳಲ್ಲಿ ಎಲ್ಲರಿಗೂ ಭಾಗವಹಿಸಲು ಮುಕ್ತ ಅವಕಾಶವಿದ್ದು, ಪ್ರತಿಯೊಂದು ವಿಭಾಗದ ಸ್ಪರ್ಧೆಗೂ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನಗಳಿರುತ್ತವೆ. ವಿದ್ಯಾರ್ಥಿಗಳು ಸ್ಪರ್ಧೆಗೆ ಬರುವಾಗ ತಪ್ಪದೇ ಶಾಲೆ ಅಥವಾ ಕಾಲೇಜಿನ ಗುರುತಿನ ಚೀಟಿ ಧರಿಸಿಕೊಂಡು ಬರಬೇಕು. ಒಬ್ಬರು ಒಂದು ಸ್ಪರ್ಧೆಯಲ್ಲಿ ಮಾತ್ರ ಭಾಗವಹಿಸುವ ಅವಕಾಶವಿದ್ದು, ಸ್ಪರ್ಧೆಯಲ್ಲಿ ಭಾಗವಹಿಸುವವರು ಏಪ್ರಿಲ್15ರ ಒಳಗೆ ತಮ್ಮ ಹೆಸರನ್ನು ಈ ವಾಟ್ಸಾಪ್ ನಂಬರ್ ಮೂಲಕ- 9448625888/ 9480600507 ತಿಳಿಸುವಂತೆ ಕೋರಲಾಗಿದೆ.

ತುಮಕೂರು: ಉಚಿತ ಬೇಸಿಗೆ ಶಿಬಿರ

Article Image

ತುಮಕೂರು: ಉಚಿತ ಬೇಸಿಗೆ ಶಿಬಿರ

ತುಮಕೂರು: ಇಲ್ಲಿಯ ಶ್ರೀ ಪದ್ಮಾಂಬ ಜೈನ ಮಹಿಳಾ ಸಮಾಜವು ಹಲವಾರು ವರ್ಷಗಳಿಂದ ಬೇಸಿಗೆ ಶಿಬಿರ ಏರ್ಪಡಿಸುತ್ತಿದ್ದು, ಈ ವರ್ಷವು ಸಹ ಉಚಿತ ಬೇಸಿಗೆ ಶಿಬಿರ ಆಯೋಜಿಸಿರುತ್ತಾರೆ ರಜಾ ದಿನಗಳಲ್ಲಿ ಮಕ್ಕಳಿಗೆ ಉತ್ತಮ ಮಾರ್ಗದರ್ಶನ ನೀಡುವ ಸದುದ್ದೇಶದಿಂದ ಈ ಸಂಸ್ಕಾರ ಶಿಬಿರದಲ್ಲಿ ನಿರ್ಯಾಪಕ ಮುನಿಗಳಾದ ಪರಮ ಪೂಜ್ಯ 108 ನಿಯಮಸಾಗರ ಮಹಾರಾಜರಿಂದ ತರಬೇತಿ ಹೊಂದಿ, ಅನೇಕ ಧಾರ್ಮಿಕ ಶಿಬಿರಗಳನ್ನು ಯಶಸ್ವಿಯಾಗಿ ನಡೆಸಿರುವ ಬೆಳಗಾವಿಯ ಸಂಪನ್ಮೂಲ ವ್ಯಕ್ತಿ ಸುಮನ್‌ಪತ್ರಾವಳಿಯವರು 5 ದಿನಗಳ ಕಾಲ ಮಕ್ಕಳ ಜೊತೆಯಲ್ಲಿದ್ದು ಅವರುಗಳ ಶ್ರೇಯೋಭಿವೃದ್ಧಿಗೆ ತಮ್ಮ ಅಮೂಲ್ಯ ಸಮಯವನ್ನು ಮೀಸಲಿಡುವರು. ಇದರೊಂದಿಗೆ ಚಿತ್ರಕಲೆ, ಆಟೋಟ, ನಾಟಕ ವಿವಿಧ ಮನೋರಂಜನೆಯಿಂದಲೂ ಸಹ ಹಲವು ಸಂಪನ್ಮೂಲ ವ್ಯಕ್ತಿಗಳು ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವರು. ಈ ವರ್ಷ ದಿನಾಂಕ: 11/04/2025 ರಿಂದ 20/04/2025ರ ವರೆಗೆ 10 ದಿನಗಳ ಶಿಬಿರದಲ್ಲಿ ಉಚಿತ ಊಟ, ವಸತಿ ಸೌಕರ್ಯ ಏರ್ಪಡಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ಕವಿತಾ ಅತ್ತಿಮಬ್ಬೆ ವಿದ್ಯಾಮಂದಿರ, ಚಿಕ್ಕಪೇಟೆ, ತುಮಕೂರು. ಮೊ. 8618408638

ಪ್ರವಕ್ತಾ ಜಿನಭಜನಾ ಕಲಿಕಾ ಕೇಂದ್ರದ ಉದ್ಘಾಟನಾ ಸಮಾರಂಭ

Article Image

ಪ್ರವಕ್ತಾ ಜಿನಭಜನಾ ಕಲಿಕಾ ಕೇಂದ್ರದ ಉದ್ಘಾಟನಾ ಸಮಾರಂಭ

ವೇಣೂರು: ಪ್ರವಕ್ತಾ ಜಿನಭಜನಾ ಕಲಿಕಾ ಕೇಂದ್ರದ ಉದ್ಘಾಟನಾ ಸಮಾರಂಭವು ಯಾತ್ರಿ ನಿವಾಸದಲ್ಲಿ ಮಾ.3೦ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ವೇಣೂರಿನ ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ ಕಾರ್ಯದರ್ಶಿಯವರಾದ ವಿ. ಪ್ರವೀಣ್‌ ಕುಮಾರ್‌ ಇಂದ್ರರವರು ನೆರವೇರಿಸಿ, ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಬ್ರಾಹ್ಮೀ ಜೈನ ಮಹಿಳಾ ಸಂಘದ ಸ್ಥಾಪಕಾಧ್ಯಕ್ಷರಾದ ಪ್ರಸನ್ನ ಆರ್.ಹೆಗ್ಡೆ , ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ದ.ಕ. ಜಿಲ್ಲಾ ವಿಭಾಗದ ನಿರ್ದೇಶಕಿ ಮತ್ತು ಬ್ರಾಹ್ಮೀ ಜೈನ ಮಹಿಳಾ ಸಂಘದ ಅಧ್ಯಕ್ಷರು ಆದ ಸರೋಜಾ ಗುಣಪಾಲ್‌ ಜೈನ್‌ ಅಗಮಿಸಿ, ಶುಭ ಹಾರೈಸಿದರು. ಸಂಗೀತಾ ಶಿಕ್ಷಕರಾದ ಮೂಡುಬಿದಿರೆಯ ಭಗೀರಥ ಮಣಕೋಣ್‌ ರವರು ಸಂಗೀತ ಕಲಿಕೆಯ ಬಗ್ಗೆ ಮಾಹಿತಿ ನೀಡಿದರು. ನಂತರ ಸುಮಧುರ ಗಾಯನವನ್ನು ಪ್ರಸ್ತುತ ಪಡಿಸಿದರು. ವೇದಿಕೆಯಲ್ಲಿ ಸುನೀತಾ ಎನ್.ಸಿ.ಬಲ್ಲಾಳ್‌ ಉಪಸ್ಥಿತರಿದ್ದರು. ಸುನೀತಾ ಎನ್.ಸಿ. ಬಲ್ಲಾಳ್‌, ಸುಜಯಭರತ್‌, ದೀಪಶ್ರಿ ಪ್ರಾರ್ಥಿಸಿದರು. ಚಂದ್ರಪ್ರಭ‌ ಜೈನ್ ರವರು ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಶ್ರಾವಕ- ಶ್ರಾವಕಿಯರು , ಮಕ್ಕಳು ಭಾಗವಹಿಸಿದ್ದರು. .ಕಾರ್ಯಕ್ರಮವು ಶಾಂತಿ ಮಂತ್ರದೊಂದಿಗೆ ಮುಕ್ತಾಯವಾಯಿತು.

ಬಂಟ್ವಾಳ: ಜೈನ್ ಮಿಲನ್ ಮಾಸಿಕ ಸಭೆ

Article Image

ಬಂಟ್ವಾಳ: ಜೈನ್ ಮಿಲನ್ ಮಾಸಿಕ ಸಭೆ

ಬಂಟ್ವಾಳ: ಜೈನ್ ಮಿಲನ್ ಮಾಸಿಕ ಸಭೆಯು ದಿನಾಂಕ 23.03.2025ನೇ ಭಾನುವಾರ ಶ್ರೀ ಆದಿನಾಥ ತೀರ್ಥ0ಕರ ಜಿನಚೈತ್ಯಾಲಯದ ವಾರ್ಷಿಕೋತ್ಸವದಂದು ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಿಲನ್ ಅಧ್ಯಕ್ಷರಾದ ಮಧ್ವರಾಜ್ ಜೈನ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜೈನ್ ಮಿಲನ್ ವಲಯ ಉಪಾಧ್ಯಕ್ಷರಾದ ಸುದರ್ಶನ್ ಜೈನ್, ಮಂಗಳೂರು ವಿಭಾಗ ಕಾರ್ಯದರ್ಶಿಗಳಾದ ಸುಭಾಶ್ಚಂದ್ರ ಜೈನ್,ವಲಯ ನಿರ್ದೇಶಕರಾದ ಪ್ರಮೋದ್ ಕುಮಾರ್ ಉಜಿರೆ ಸಭೆಯನ್ನುದ್ದೇಶಿಸಿ ಮಾತನಾಡಿದರು. ಮಂಗಳೂರು ವಿಭಾಗ ನಿರ್ದೇಶಕರಾದ ಸುಕುಮಾರ ಬಲ್ಲಾಳ್ ಧಾರ್ಮಿಕ ಚೌಕಟ್ಟಿನಲ್ಲಿ ಜೈನ ಸಮಾಜದ ಸಂಘಟನೆ ಎಂಬ ವಿಷಯದ ಬಗ್ಗೆ ಮಾತನಾಡುತ್ತಾ ಸಮಾಜದ ಯುವ ಜನರಲ್ಲಿ ಸಂಘಟನೆ, ಸಂಸ್ಕಾರ, ಸಂಸ್ಕೃತಿ ಮತ್ತು ಪರಂಪರೆ ಉಳಿಸುವ ಹಾಗೂ ಬೆಳೆಸುವ ಕೆಲಸಗಳು ಆಗಬೇಕು ಆಗ ಸಮಾಜ ಜಾಗೃತವಾಗುತ್ತದೆ ಎಂದು ತಿಳಿಸಿದರು . ಕಾರ್ಯಕ್ರಮದಲ್ಲಿ ಯಾವುದೇ ಪ್ರಚಾರವಿಲ್ಲದೆ ಸಮಾಜದ ಸೇವೆಯನ್ನು ಮಾಡುತ್ತಿರುವ ಪ್ರವೀಣ್ ಕುಮಾರ್ ಬಸ್ತಿಪಡ್ಫು , ಸಪ್ನ ಚಂದ್ರಪ್ರಭ ಬೈಪಾಸ್ ಬಂಟ್ವಾಳ ಇವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ವೇದಿಕೆಯಲ್ಲಿ ಜೈನ್ ಮಿಲನ್ ಕಾರ್ಯದರ್ಶಿಗಳಾದ ಭರತ್ ಕುಮಾರ್, ಕೋಶಾಧಿಕಾರಿ ಗೀತಾ ಜಿನಚಂದ್ರ ಉಪಸ್ಥಿತರಿದ್ದರು. ಕಾಂಚನಶ್ರೀಮದ್ವರಾಜ್ ಮತ್ತು ಮಮತಾ ಸುಭಾಶ್ಚಂದ್ರ ಜೈನ್ ಸನ್ಮಾನಿತರ ಪರಿಚಯವನ್ನು ಮಾಡಿದರು. ಶೈಲಜಾ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಶಿವಪ್ರಕಾಶ್ ಜೈನ್ ಸ್ವಾಗತಿಸಿ, ಗೀತಾ ಜಿನಚಂದ್ರ ಧನ್ಯವಾದವಿತ್ತರು. ವಿಭಾಗ ಕಾರ್ಯದರ್ಶಿಗಳಾದ ಸುಭಾಶ್ಚಂದ್ರ ಜೈನ್ ಕಾರ್ಯಕ್ರಮವನ್ನು ನಿರೂಪಿಸಿದರು.

ಮೈಸೂರು: ಬೇಸಿಗೆ ಧಾರ್ಮಿಕ ಶಿಬಿರ

Article Image

ಮೈಸೂರು: ಬೇಸಿಗೆ ಧಾರ್ಮಿಕ ಶಿಬಿರ

ಮೈಸೂರು ಜಿಲ್ಲೆ, ಸರಗೂರು ತಾಲೂಕಿನ ಶ್ರೀಕ್ಷೇತ್ರ ಕನಕಗಿರಿ, ದಿಗಂಬರ ಜೈನ ಮಠದ ಪೀಠಾಧ್ಯಕ್ಷರಾದ ಪ.ಪೂಜ್ಯ ಸ್ವಸ್ತಿಶ್ರೀ ಭುವನಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ಆಶೀರ್ವಾದ, ಪ್ರೇರಣೆ ಹಾಗೂ ಮಾರ್ಗದರ್ಶನದಲ್ಲಿ, ಭಾರತೀಯ ಜೈನ್ ಮಿಲನ್, ಮೈಸೂರು ವಿಭಾಗದ ನಿರ್ದೇಶಕರಾದ ಸರಗೂರಿನ ಎಸ್‌. ಎಸ್. ಸೋಮಪ್ರಭರವರು, ಅವರ ಸ್ವಗೃಹ "ಕನಕಾದ್ರಿ" ಯಲ್ಲಿ ಹಿಂದಿನ ವರ್ಷಗಳಂತೆ ಯಥಾಪ್ರಕಾರವಾಗಿ ಮಕ್ಕಳಿಗೆ ಬೇಸಿಗೆ ಧಾರ್ಮಿಕ ಶಿಬಿರವನ್ನು ಆಯೋಜಿಸಿದ್ದಾರೆ. ಬೇಸಿಗೆ ರಜೆಯ ಸಂದರ್ಭದಲ್ಲಿ ಮಕ್ಕಳು ಉತ್ತಮ ಸಂಸ್ಕಾರ ಪಡೆಯಲು ಈ ಧಾರ್ಮಿಕ ಶಿಬಿರ ಅತ್ಯಂತ ಉಪಯುಕ್ತವಾಗಿದೆ. ದಿ:01-04-2025 ರ ಮಂಗಳವಾರದಿಂದ 8.ದಿನಗಳ ಕಾಲ ಈ ಶಿಬಿರ ನಡೆಯಲಿದೆ. ಈ ಶಿಬಿರದಲ್ಲಿ ಅನುಭವಿ ಹಾಗೂ ಪ್ರಬುದ್ಧ ವಿದ್ವಾಂಸರು, ಉಪನ್ಯಾಸಕರುಗಳು, ಪಂಡಿತರುಗಳಿಂದ ಮಕ್ಕಳ ಅಭಿರುಚಿಗೆ ತಕ್ಕಂತೆ, ಅತ್ಯಂತ ಸರಳವಾಗಿ ಹಾಗೂ ಆಕರ್ಷಣೀಯವಾಗಿ ಧಾರ್ಮಿಕ ಪಾಠ ಪ್ರವಚನಗಳ ಜೊತೆಗೆ ಮನರಂಜನಾತ್ಮಕ ಹಾಗೂ ಭಕ್ತಿರಸ ಪ್ರಧಾನವಾದ ಭಕಿಗೀತೆಗಳು, ರೂಪಕಗಳು, ಕಥೆಗಳು, ಇತ್ಯಾದಿ ಜ್ಞಾನವರ್ಧನೆಯ ಪೂರಕ ಅಂಶಗಳು ಸಂಪನ್ಮೂಲ ವ್ಯಕ್ತಿಗಳಿಂದ ಕಲಿಕೆಯಾಗಲಿದೆ. ಶಿಬಿರದ ಉದ್ಘಾಟನೆ ದಿ:: 01-04-2025ರ ಮಂಗಳವಾರ ಬೆಳಿಗ್ಗೆ 9-30 ಕ್ಕೆ ಶುಭಾಶೀರ್ವಾದ, ಮಾರ್ಗದರ್ಶನ: ಸ್ವಸ್ತಿಶ್ರೀ ಭುವನಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಶ್ರೀಕ್ಷೇತ್ರ ಕನಕಗಿರಿ. ಗೌರವ ಉಪಸ್ಥಿತಿ : ಶ್ರೀ ಬಾಹುಬಲಿ ಬಯ್ಯಾಜಿ ತ್ಯಾಗಿಗಳು/ಬಾಲ ಬ್ರಹ್ಮಚಾರಿಗಳು,ಆಚಾರ್ಯಶ್ರೀ 108 ವಿದ್ಯಾಸಾಗರ ಮಹಾರಾಜರ ಶಿಷ್ಯರು, 5ನೇ ಪ್ರತಿಮಾಧಾರಿಗಳು. ಮುಖ್ಯ ಅತಿಥಿಗಳು: ಶೀಲಾ ಅನಂತರಾಜ್,ಮೈಸೂರು. ಗೌರವ ಉಪಾಧ್ಯಕ್ಷರು, ಭಾರತೀಯ ಜೈನ್ ಮಿಲನ್, ಕರ್ನಾಟಕ ರಾಜ್ಯ. ಬ್ರಹ್ಮದೇವಯ್ಯ ಜೈನ ಸಮಾಜದ ಹಿರಿಯ ಮುಖಂಡರು ಸರಗೂರು. ಪ್ರಥಮ ದಿನದ ಬೆಳಗ್ಗೆ ಅವಧಿ: ಪಾಠ ಪ್ರವಚನಗಳ ಬೋಧನೆ: ಮೈಸೂರು ವಿಶ್ವವಿದ್ಯಾನಿಲಯದ ಜೈನ ಶಾಸ್ತ್ರ ಮತ್ತು ಪ್ರಾಕೃತ ವಿಭಾಗದ ಉಪನ್ಯಾಸಕರಾದ ಡಾ. ಅರುಣಾಪ್ರಕಾಶ್ ರವರು ನಡೆಸಿಕೊಡಲಿದ್ದಾರೆ. ಮಧ್ಯಾಹ್ನದ ಅವಧಿ: ಶ್ರೀ ಬಾಹುಬಲಿ ಬಯ್ಯಾಜಿ ರವರಿಂದ, 5.ನೇ ತರಗತಿಯಿಂದ ಪಿ.ಯೂ.ಸಿ ತನಕ ಓದುತ್ತಿರುವ ವಿದ್ಯಾರ್ಥಿಗಳು ಈ ಶಿಬಿರದಲ್ಲಿ ಭಾಗವಹಿಸಬಹುದಾಗಿದೆ. ಶಿಬಿರ ಪ್ರತಿದಿನ ಬೆಳಿಗ್ಗೆ10-00 ಗಂಟೆಗೆ ಪ್ರಾರಂಭವಾಗಿ ಸಂಜೆ 4-00 ಗಂಟೆಗೆ ಮುಕ್ತಾಯವಾಗುತ್ತದೆ. ಮಕ್ಕಳಿಗೆ ಲೇಖನ ಸಾಮಗ್ರಿಗಳ ಜೊತೆಗೆ ಬಹುಮಾನಗಳನ್ನು ನೀಡಲಾಗುತ್ತದೆ. ಪಾಲಕರು/ಪೋಷಕರು ಮಕ್ಕಳನ್ನು ಬೆಳಿಗ್ಗೆ 9-30 ಗಂಟೆಗೆ ಶಿಬಿರಕ್ಕೆ ಕರೆತಂದು ಬಿಟ್ಟು, ಸಂಜೆ 4-00 ಗಂಟೆ ನಂತರ ಕರೆದುಕೊಂಡು ಹೋಗುವ ಜವಾಬ್ದಾರಿ ಅವರಿಗೆ ಸೇರಿರುತ್ತದೆ. ಶಿಬಿರದಲ್ಲಿ ಮಕ್ಕಳಿಗೆ ಬೆಳಿಗ್ಗೆ 11-00 ಗಂಟೆಗೆ ಕಾಫಿ/ ಟೀ/ ಬಿಸ್ಕತ್ತು, ಮಧ್ಯಾಹ್ನ ಊಟದ ವ್ಯವಸ್ಥೆ, ಸಂಜೆ ಸ್ನಾಕ್ಸ್ ವ್ಯವಸ್ಥೆ ಮಾಡಲಾಗಿದೆ. ಸರಗೂರು ಹಾಗೂ ಹೆಚ್.ಡಿ.ಕೋಟೆ ತಾ. ವ್ಯಾಪ್ತಿಯ ಗ್ರಾಮಾಂತರದ ಮಕ್ಕಳುಗಳು ಈ ಸದಾವಕಾಶವನ್ನು ಬಳಸಿಕೊಳ್ಳಬೇಕೆಂದು ಎಸ್‌. ಎಸ್. ಸೋಮಪ್ರಭರವರು ತಿಳಿಸಿರುತ್ತಾರೆ. .ರಜಾ-ಮಜಾ ಜೊತೆಗೆ ಉತ್ತಮ ಸಂಸ್ಕಾರ, ಜ್ಞಾನಾರ್ಜನೆಯ, ಸದಭಿರುಚಿಯ ಬಾಲ್ಯದ ಶಿಕ್ಷಣ ಮಕ್ಕಳ ಪ್ರತಿಭಾ ಅನಾವರಣಕ್ಕೆ ಪೂರಕವಾಗಲಿದೆ ಈ ಧಾರ್ಮಿಕ ಶಿಬಿರದಲ್ಲಿ ಭಾಗವಹಿಸಲು ಹಾಗೂ ಹೆಚ್ಚಿನ ಮಾಹಿತಿಗೆ ಈ ಕೆಳಕಂಡವರನ್ನು ಸಂಪರ್ಕಿಸಲು ಕೋರಿದೆ. ಎಸ್.ಎಸ್. ಸೋಮಪ್ರಭ, ಸರಗೂರು: ಮೊ: 94487 93649 ಸಿ.ಎಸ್. ನಾಗರಾಜು, ಚಕ್ಕೂರು: ಮೊ: 94489 58024 ಜಿ. ಬಿ.ಚಂದ್ರಪ್ರಕಾಶ್, ಗುಜ್ಜಪ್ಪನಹುಂಡಿ: ಮೊ: 99452 59709

ಬೆಳ್ತಂಗಡಿ: ವಿಶ್ವ ಮಹಿಳಾ ದಿನಾಚರಣೆ

Article Image

ಬೆಳ್ತಂಗಡಿ: ವಿಶ್ವ ಮಹಿಳಾ ದಿನಾಚರಣೆ

ಇಂದಿನ ಆಧುನಿಕ ಸಮಾಜದಲ್ಲಿ ಮಹಿಳೆಯೊಬ್ಬಳು ತನ್ನನ್ನು ತಾನು ತೊಡಗಿಸಿಕೊಂಡರೆ ಯಾವುದೇ ಕಾರ್ಯವನ್ನು ಮಾಡಲು ಸಾಧ್ಯ. ಅಂತಹ ಕಾರ್ಯವನ್ನು ಮಾಡುತ್ತಿರುವ ನಮ್ಮ ಬೆಳ್ತಂಗಡಿಯ ಶಾಂತಿಶ್ರೀ ಜೈನ ಮಹಿಳಾ ಸಮಾಜವು ಇಂದು ತಾಲೂಕಿನಲ್ಲಿ ಗುರುತಿಸುವಂತಾಗಿದೆ. ನಾವೆಲ್ಲರೂ ಆದರ್ಶ ಸಾಧಕ ಮಹಿಳೆರಾದಾಗ ಮಾತ್ರ ಸಮಾಜ ನಮ್ಮನ್ನು ಗುರುತಿಸಿ ಗೌರವಿಸುತ್ತದೆ. ಅಂತಹ ಗುರುತರವಾದ ಕಾರ್ಯಕ್ಕೆ ನಾವೆಲ್ಲ ಜೊತೆಯಾಗಿ ಕಾರ್ಯವನ್ನು ಮಾಡಬೇಕು ಎಂದು ವಿಶ್ವ ಮಹಿಳಾ ದಿನಾಚರಣೆಯನ್ನು ದೀಪ ಪ್ರಜ್ವಲನದೊಂದಿಗೆ ಉದ್ಘಾಟಿಸಿದ ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಅಭಿಯಂತರರಾಗಿದ್ದ ಚಂದ್ರರಾಜ್ ಜೈನ್ ಇವರ ಧರ್ಮಪತ್ನಿ ಸುಜಯ ಸಿ ಜೈನ್ ರವರು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ನ್ಯಾಯವಾದಿ ಸ್ವರ್ಣಲತಾ ಜೈನ್ ರವರು "ಇಂದಿನ ಸಮಾಜದಲ್ಲಿ ಮಹಿಳೆಯರ ಮುಂದಿರುವ ಸವಾಲುಗಳು, ಅದನ್ನು ನಿಭಾಯಿಸಬೇಕಾದ ತಂತ್ರಗಾರಿಕೆ, ಮಹಿಳೆಯರಿಗೆ ಪರವಾಗಿರುವ ಕಾನೂನುಗಳು, ಪೋಕ್ಸೋ ಕಾಯ್ದೆಯ ಮಹತ್ವ ಇತ್ಯಾದಿ ವಿಚಾರಗಳನ್ನು ಎಳೆ ಎಳೆಯಾಗಿ ಪ್ರತಿಯೊಬ್ಬರು ತಿಳಿದುಕೊಳ್ಳಲೇಬೇಕು. ಆಗ ಮಾತ್ರ ಸುಸ್ತಿರ ಸಮಾಜವನ್ನು ಕಟ್ಟಲು ಸಾಧ್ಯ ಎಂದರು. ಈ ಕಾರ್ಯಕ್ರಮದಲ್ಲಿ ಪೂರ್ವ ಪರಂಪರೆಯಲ್ಲಿ ಸಾಧನೆಗೈದ ಹಲವಾರು ಜೈನ ಮಹಿಳಾ ಸಾಧಕೀಯರಲ್ಲಿ ಕೆಲವರ ಸಾಧನೆಯ ತುಣುಕನ್ನು ಸಭೆಯಲ್ಲಿ ಪರಿಚಯಿಸಲಾಯಿತು. ಕಾಳು ಮೆಣಸಿನ ರಾಣಿ ಚೆನ್ನಬೈರಾ ದೇವಿ ಇವರನ್ನು ಉಷಾ ಹಾಗೂ ಜೈನ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿರುವ ಜೈನ ಮಹಿಳೆ ಬಿರುದಾಂಕಿತ ರಾಧಮ್ಮ ಇವರ ಬಗ್ಗೆ ಸುರಕ್ಷಿತರವರು ಸಭೆಗೆ ಪರಿಚಯಿಸಿದರು. ಮಹಿಳೆಯರು ಪ್ರತಿ ಕ್ಷೇತ್ರದಲ್ಲೂ ತನ್ನನ್ನು ತಾನು ತೊಡಗಿಸಿಕೊಂಡು ಸಮಾಜದಲ್ಲಿ ಗುರುತಿಸಿಕೊಳ್ಳುವಂತಾಗಬೇಕು ಎನ್ನುವ ಉದ್ದೇಶದಿಂದ ಈಗಾಗಲೇ ಶಾಂತಿಶ್ರೀ ತಂಡದಿಂದ ವಲಯ ಮಟ್ಟದ ಜಿನಭಜನ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ನಾಲ್ಕು ತಂಡಗಳನ್ನು ವಿಶೇಷ ರೀತಿಯಲ್ಲಿ ಗೌರವಿಸಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದ ಅಧ್ಯಕ್ಷರಾಗಿರುವ ಪ್ರೊಫೆಸರ್ ತ್ರಿಶಾಲ ಜೈನ್ ಕೆ ಎಸ್ ಇವರು "ಹತ್ತನೇ ಶತಮಾನದಿಂದ 21ನೇ ಶತಮಾನದವರೆಗೆ ದೇಶದ ನಾನಾ ಭಾಗಗಳಲ್ಲಿ ಆಳ್ವಿಕೆ ಮಾಡಿರುವ ಜೈನ ರಾಣಿಯರ ಧೈರ್ಯ, ಸಾಹಸ, ಚಾಣಕ್ಯತನ, ಆಡಳಿತ ಶೈಲಿ ಮುಂತಾದ ವಿಚಾರಗಳನ್ನು ನೆನಪಿಸಿಕೊಂಡರು. ಇದೇ ಸಂದರ್ಭದಲ್ಲಿ ಇಂದು ವಿಶ್ವದಲ್ಲಿ ಮಹಿಳೆಯರ ಸ್ಥಾನಮಾನ ಹಾಗೂ ಹಲವಾರು ಕ್ಷೇತ್ರಗಳಲ್ಲಿ ಮಹಿಳೆಯರು ಸಾಧಿಸುತ್ತಿರುವ ಸಾಧನೆಗಳು ನಮಗೆಲ್ಲರಿಗೂ ಹೆಮ್ಮೆಯ ವಿಚಾರವಾಗಿದೆ. ಮಾತ್ರವಲ್ಲದೆ ಇತ್ತೀಚೆಗೆ ಬಾಹ್ಯಾಕಾಶ ಯಾನವನ್ನು ಮಾಡಿ ಯಶಸ್ವಿಯಾಗಿ ಧರೆಗೆ ಬಂದಿಳಿದ ಸುನಿತಾ ವಿಲಿಯಮ್ಸ್ ಇವರ ಅದ್ಭುತ ಪೂರ್ವ ಸಾಧನೆಗೆ ಸಂಸ್ಥೆಯ ವತಿಯಿಂದ ವಿಶೇಷ ಅಭಿನಂದನೆಯನ್ನು ಸಲ್ಲಿಸಲಾಯಿತು. ನಾವೆಲ್ಲರೂ ಜೊತೆಯಾಗಿದ್ದಾಗ ಸರ್ವ ಕಾರ್ಯವನ್ನು ಮಾಡಲು ಸಾಧ್ಯ. ಅಂತಹ ಕಾರ್ಯಕ್ಕೆ ತಾವೆಲ್ಲರೂ ನಮ್ಮ ಜೊತೆ ಕೈಗೂಡಿಸಬೇಕು ಎಂದು ಹೇಳಿದರು. ಈ ಕಾರ್ಯಕ್ರಮವು ಸ್ವಪ್ನ ಬಳಗದವರ ಪ್ರಾರ್ಥನೆಯೊಂದಿಗೆ ಆರಂಭಗೊಂಡರೆ, ಸಂಸ್ಥೆ ನಡೆದು ಬಂದ ದಾರಿಯ ಕುರಿತು ಸಂಸ್ಥೆಯ ಕಾರ್ಯದರ್ಶಿ, ರಾಜಶ್ರೀ ಪ್ರಸ್ತಾಪಿಸಿದರೆ, ಗುಣಮ್ಮ ಪಿ ಜೈನ್ ರವರು ಸ್ವಾಗತಿಸಿ, ತ್ರಿಶಾಲ ಅತಿಕಾರಿ ವಂದಿಸಿ, ಅನುಪ ಕುಮಾರಿ ಸಂಘಟಿಸಿ, ಸಂಘದ ಸದಸ್ಯರ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ದವಳ ಇವರ ಕಾರ್ಯಕ್ರಮ ನಿರ್ವಹಣೆಯೊಂದಿಗೆ ಕಾರ್ಯಕ್ರಮ ಸಮಾಪನಗೊಂಡಿತು.

ನೆಲ್ಲಿಕಾರು ಮಹಾರಥಯಾತ್ರಾ ಮಹೋತ್ಸವ

Article Image

ನೆಲ್ಲಿಕಾರು ಮಹಾರಥಯಾತ್ರಾ ಮಹೋತ್ಸವ

ಮೂಡುಬಿದಿರೆ: ಅತಿಶಯ ಶ್ರೀ ಕ್ಷೇತ್ರ ನೆಲ್ಲಿಕಾರಿನಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ಭಗವಾನ್ ೧೦೦೮ ಶ್ರೀ ಅನಂತನಾಥ ಸ್ವಾಮಿ ಮತ್ತು ಶ್ರೀ ಬ್ರಹ್ಮಯಕ್ಷ ದೇವರ ಮಹಾರಥಯಾತ್ರಾ ಮಹೋತ್ಸವವು 30-03-2025ನೇ ಆದಿತ್ಯವಾರ ಮೊದಲ್ಗೊಂಡು ದಿನಾಂಕ 05-04-2025ನೇ ಶನಿವಾರ ಪರ್ಯಂತ ಜರಗಲಿರುವುದು. ದಿನಾಂಕ 04-04-2025ನೇ ಶುಕ್ರವಾರ ಮಹಾರಥಯಾತ್ರಾ ಮಹೋತ್ಸವವು ಕಾರ್ಕಳ ದಾನಶಾಲೆ ಶ್ರೀ ಜೈನ ಮಠದ ಪರಮಪೂಜ್ಯ ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಬೆಳಿಗ್ಗೆ ಗಂಟೆ 8-15ರಿಂದ ಭಗವಾನ್ ಶ್ರೀ ಅನಂತನಾಥ ಸ್ವಾಮಿಗೆ ಪಂಚಾಮೃತ ಅಭಿಷೇಕ, ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಗೆ ಕ್ಷೀರಾಭಿಷೇಕ, ಶ್ರೀ ಬ್ರಹ್ಮದೇವರಿಗೆ ಪಂಚಾಮೃತ ಅಭಿಷೇಕ. ಶ್ರೀಬಲಿ ವಿಧಾನ, ರಥ ಸಂಪ್ರೋಕ್ಷಣೆ, ಲಕ್ಷ ಹೂವಿನ ಪೂಜೆ, ರಥಾರೋಹಣಕ್ಕೆ ಪ್ರಸಾದ ಬೇಡಿಕೆ. ಮಧ್ಯಾಹ್ನ ಗಂಟೆ 12-00ಕ್ಕೆ ಮಹಾನೈವೇದ್ಯ ಪೂಜೆ, ಮಹಾಮಂಗಳಾರತಿ, ಶ್ರೀ ಸರ್ವಾಹ್ಣಯಕ್ಷರ ಶ್ರೀವಿಹಾರ, ಗ್ರಾಮ ಬಲಿ ಮಧ್ಯಾಹ್ನ ಗಂಟೆ 12-35ಕ್ಕೆ ಶ್ರೀ ಬ್ರಹ್ಮಯಕ್ಷ ದೇವರ ದರ್ಶನ ಪಾತ್ರಿಯೊಂದಿಗೆ ಭಗವಾನ್‌ ಶ್ರೀ ಅನಂತನಾಥ ಸ್ವಾಮಿಯ ರಥಾರೋಹಣ. ನಂತರ ಸಂಘಸಂತರ್ಪಣೆ ಹಾಗೂ ಸಾರ್ವಜನಿಕ ಅನ್ನ ಸಂತರ್ಪಣೆ. ರಾತ್ರಿ ಗಂಟೆ 7-00ಕ್ಕೆ ಸಮವಸರಣ ಪೂಜೆ. ರಾತ್ರಿ ಗಂಟೆ 10-00ಕ್ಕೆ ರಥೋತ್ಸವ. ನಂತರ ಭಗವಾನ್ ಶ್ರೀ ಅನಂತನಾಥ ಸ್ವಾಮಿಗೆ ೧೦೮ ಕಲಶಗಳಿಂದ ಮಹಾಭಿಷೇಕ, ಉತ್ಸವ. ದಿನಾಂಕ 04-04-2025ನೇ ಶುಕ್ರವಾರ ಸಂಗೀತ ಪೂಜಾಷ್ಟಕ ಶರ್ಮಿಳಾ ಜಿನೇಶ್ ಹಾಸನ ಮತ್ತು ಬಳಗದವರಿಂದ ದಿನಾಂಕ 04-04-2025ನೇ ಶುಕ್ರವಾರ ರಾತ್ರಿ ಗಂಟೆ 11.00ರಿಂದ ತುಳು ತೆಲಿಕೆದ ನಾಟಕ ಕಾಪಿಕಾಡ್‌ ವಾಮಂಜೂರು ಸಾಯಿ ಅಭಿನಯದ ಚಾಪರ್ಕ ಕಲಾವಿದರಿಂದ ತೆಲಿಕೆದ ಬೊಳ್ಳಿ ಡಾ|| ದೇವದಾಸ್ ಕಾಪಿಕಾಡ್‌ರವರ ವಿನೂತನ ಶೈಲಿಯ ತುಳು ಹಾಸ್ಯಮಯ ನಾಟಕ ಏರ್ಲಾ ಗ್ಯಾರಂಟಿ ಅತ್ತ್.

ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಪ್ರಯುಕ್ತ ಬೃಹತ್ ರಕ್ತದಾನ, ಆರೋಗ್ಯ ತಪಾಸಣೆ, ದಂತ ಚಿಕಿತ್ಸೆ ಶಿಬರಗಳು

Article Image

ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಪ್ರಯುಕ್ತ ಬೃಹತ್ ರಕ್ತದಾನ, ಆರೋಗ್ಯ ತಪಾಸಣೆ, ದಂತ ಚಿಕಿತ್ಸೆ ಶಿಬರಗಳು

ಭಗವಾನ್ ಶ್ರೀ 1008 ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ ಜೈನ್ ಪೇಟೆ ಮೂಡುಬಿದಿರೆ, ಜೈನ್ ಮಿಲನ್, ಶ್ರೀ ಮಹಾವೀರ ಸಂಘ (ರಿ.), ತೌಳವ ಇಂದ್ರ ಸಮಾಜ (ರಿ.), ತ್ರಿಭುವನ್ ಯೂತ್ ಅಸೋಸಿಯೆಶನ್, ರೋಟರಿ ಕ್ಲಬ್ ಟೆಂಪಲ್ ಟೌನ್, ಡಿ.ಜೆ.ಐ.ಐ ಸಂಘ (ನಿ.), ತ್ರಿಭುವನ್ ಹಾಗೂ ಬೆದ್ರ ಅಟೋ ಸ್ಪೋರ್ಟ್ಸ್ ಕ್ಲಬ್ (TASC-BAC), ತ್ರಿಭುವನ್ ಟ್ರಸ್ಟ್ (ರಿ.) ಬಸದಿ ಸ್ವಚ್ಚತಾ ತಂಡ, ಸರ್ವಮಂಗಳಾ ಮಹಿಳಾ ಸಂಘ, ಜೈನ್ ಮೆಡಿಕಲ್ ಸೆಂಟರ್‌ ಅಸ್ಪತ್ರೆ ಮೂಡುಬಿದಿರೆ ಇವರ ಸಹಭಾಗಿತ್ವದಲ್ಲಿ ಭ| ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಪ್ರಯುಕ್ತ ಎ. ಜೆ ಆಸ್ಪತ್ರೆ, ದಂತ ಕಾಲೇಜು, ಬ್ಲಡ್ ಬ್ಯಾಂಕ್, ಮಂಗಳೂರು ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ, ಆರೋಗ್ಯ ತಪಾಸಣೆ, ದಂತ ಚಿಕಿತ್ಸೆ ಶಿಬರಗಳು ದಿನಾಂಕ: 10-04-2025 ಗುರುವಾರ, ಬೆಳಗ್ಗೆ ಗಂಟೆ 9.30ರಿಂದ 1.00ರವರೆಗೆ, ಶ್ರೀ ಧವಳಾ ಕಾಲೇಜು, ಜೈನ್ ಪೇಟೆ, ಮೂಡುಬಿದಿರೆಯಲ್ಲಿ ನಡೆಯಲಿದೆ. ವಿಭಾಗಗಳು • ಬಿಪಿ/ ಬ್ಲಡ್ ಶುಗರ್ (BP ECG, BLOOD SUGAR) • ಕಿವಿ, ಮೂಗು, ಗಂಟಲು (ENT) • ಸಾಮಾನ್ಯ ಅರೋಗ್ಯ ವಿಭಾಗ (GRL MEDICINE) • ನೇತ್ರ ಚಿಕಿತ್ಸೆ (Eye) • ಸ್ತ್ರೀ ರೋಗ (OBG) ಎಲುಬು / ಕೀಲು(ARTHO) • ಚರ್ಮ (SKIN) • ದಂತ ಚಿಕಿತ್ಸೆ (DENTAL) ಮಾಹಿತಿಗಾಗಿ ಸಂಪರ್ಕಿಸಿ : ಡಾ| ಮಹಾವೀರ್ ಜೈನ್, ಮೊ: 9008384865 ಯತಿರಾಜ್ ಶೆಟ್ಟ, ಮೊ: 9448625888 ಪ್ರವೀಣ್ ಜೈನ್ ಬೆಳುವಾಯಿ, ಮೊ: 9886474143

ಸೌಟ್ಸ್ - ಗೈಡ್ಸ್ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭ

Article Image

ಸೌಟ್ಸ್ - ಗೈಡ್ಸ್ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭ

ದಿಗಂಬರ ಜೈನ ವಿದ್ಯಾ ವರ್ಧಕ ಸಂಘ (ರಿ) ಮೂಡಬಿದ್ರೆ ಇದರ ಆಡಳಿತಕ್ಕೆ ಒಳಪಟ್ಟ ದಿಗಂಬರ ಜೈನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮತ್ತು ದಿಗಂಬರ ಜೈನ ಆಂಗ್ಲ ಮಾಧ್ಯಮ ಶಾಲೆಯ ಜಂಟಿ ಆಶ್ರಯದಲ್ಲಿ 2025ನೇ ಸಾಲಿನ ಸ್ಕೌಟ್-ಗೈಡ್ಸ್ ಮತ್ತು ಕಬ್ಸ್- ಬುಲ್ ಬುಲ್ಸ್ ಐದು ದಿನಗಳ ಬೇಸಿಗೆ ಶಿಬಿರವು ದಿನಾಂಕ 24/03/25 ರಂದು ದಿಗಂಬರ ಜೈನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರಂಭಗೊಂಡಿತು. ಶಿಬಿರದ ಉದ್ಘಾಟನೆಯನ್ನು ಶಾಲಾ ತಾಯಂದಿರ ಸಮಿತಿಯ ಅಧ್ಯಕ್ಷರಾದ ಆರತಿ ಜೈನ್ ರವರು ದೀಪ ಬೆಳಗಿಸುವುದರ ಮೂಲಕ ನೆರವೇರಿಸಿದರು. ಹಾಗೂ ಎಸ್ ಡಿ ಎಂ ಸಿ ಅಧ್ಯಕ್ಷರಾದ ಪವನ್ ಕುಮಾರ್ ಇವರು ಧ್ವಜಾರೋಹಣ ಮಾಡುವುದರ ಮೂಲಕ ಶಿಬಿರಕ್ಕೆ ಚಾಲನೆಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಶಾಲಾ ಮುಖ್ಯೋಪಾಧ್ಯಾಯರಾದ ಶಶಿಕಾಂತ್ ವೈ ಜೈನ್ ಇವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಶಿಬಿರದ ಯಶಸ್ಸಿಗೆ ಸಂಪೂರ್ಣ ಸಹಕಾರ ನೀಡುವುದೆಂದು ತಿಳಿಸಿದರು. ದಿಗಂಬರ ಜೈನ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ವೀಣಾ ಪ್ರಮೋದ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಗೈಡ್ ಕ್ಯಾಪ್ಟನ್ ಮಂಜುಳಾ ಜೈನ್, ಬುಲ್ ಬುಲ್ ಕ್ಯಾಪ್ಟನ್ ಸಾಕ್ಷಿ ಉಪಸ್ಥಿತರಿದ್ದರು. ಸ್ಕೌಟ್ ಮಾಸ್ಟರ್ ಪದ್ಮಶ್ರೀ ಸ್ವಾಗತಿಸಿದರು. ಗೈಡ್ಸ್ ಕ್ಯಾಪ್ಟನ್ ಜಯಲಕ್ಷ್ಮಿ ಕಾರ‍್ಯಕ್ರಮ ನಿರೂಪಿಸಿದರು. ಶಿಬಿರದಲ್ಲಿ ಸುಮಾರು 100 ಕ್ಕೂ ಹೆಚ್ಚು ಮಕ್ಕಳು ಪಾಲ್ಗೊಂಡಿದ್ದರು.

First Previous

Showing 8 of 21 pages

Next Last