Article Image

ಮಹಾವೀರ ಸ್ವಾಮಿ ಜನ್ಮಕಲ್ಯಾಣೋತ್ಸವ ಆಚರಣೆ

Article Image

ಮಹಾವೀರ ಸ್ವಾಮಿ ಜನ್ಮಕಲ್ಯಾಣೋತ್ಸವ ಆಚರಣೆ

ವೇಣೂರು: ಭಾರತೀಯ ಜೈನ್‌ ಮಿಲನ್‌ ಇವರು ಶ್ರೀ ದಿಗಂಬರ ಜೈನ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ (ರಿ.) ವೇಣೂರು, ಶ್ರೀ ಬಾಹುಬಲಿ ಯುವಜನ ಸಂಘ ವೇಣೂರು, ಬ್ರಾಹ್ಮಿ ಮಹಿಳಾ ಸಂಘ ವೇಣೂರು, ಕಲ್ಲುಬಸದಿ ಬ್ರಿಗೇಡಿಯರ್ಸ್‌ ವೇಣೂರು ಇವರ ಸಹಯೋಗದೊಂದಿಗೆ ಭ| ೧೦೦೮ ಶ್ರೀ ಮಹಾವೀರ ಸ್ವಾಮಿ ಜನ್ಮಕಲ್ಯಾಣೋತ್ಸವ ಆಚರಣೆಯು ದಿನಾಂಕ 10-04-2025ನೇ ಗುರುವಾರ ಶ್ರೀ ಬಾಹುಬಲಿ ಸಭಾ ಭವನದಲ್ಲಿ ಜರಗಲಿರುವುದು. ಕಾರ್ಯಕ್ರಮಗಳು : ಪೂರ್ವಾಹ್ನ ಗಂಟೆ 8.30ರಿಂದ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿಯಲ್ಲಿ ಪಾರ್ಶ್ವನಾಥ ಸ್ವಾಮಿಗೆ ಪಂಚಾಮೃತ ಅಭಿಷೇಕ ಮತ್ತು ಮಹಾವೀರ ಸ್ವಾಮಿಗೆ ಕ್ಷೇರಾಭಿಷೇಕ ಪೂರ್ವಾಹ್ನ ಗಂಟೆ 9.00ರಿಂದ : ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿಯಿಂದ ಶ್ರೀ ಬಾಹುಬಲಿ ಸಭಾಭವನಕ್ಕೆ ಜಿನ ಬಾಲಕನ ಪುರ ವಿಹಾರ ಪೂರ್ವಾಹ್ನ ಗಂಟೆ 9.30ರಿಂದ : ಶ್ರಾವಕ ಶ್ರಾವಕಿಯವರಿಂದ ಸಾಮೂಹಿಕ ಅಷ್ಟವಿಧಾರ್ಚನೆ ಪೂಜೆ ಪೂರ್ವಾಹ್ನ ಗಂಟೆ 10.45ರಿಂದ : ಪಾಂಡುಕ ಶಿಲೆಯಲ್ಲಿ ಜಿನ ಬಾಲಕನಿಗೆ ಜನ್ಮಾಭಿಷೇಕ, ನಾಮಕರಣೋತ್ಸವ ಮಧ್ಯಾಹ್ನ ಗಂಟೆ 12.00ಕ್ಕೆ : ಮಹಾಮಂಗಳಾರತಿ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವತಿಯಿಂದ ವಿವಿಧ ಸ್ಪರ್ಧೆಗಳು

Article Image

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವತಿಯಿಂದ ವಿವಿಧ ಸ್ಪರ್ಧೆಗಳು

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಹಾಗೂ ಕರಾವಳಿ ಮತ್ತು ಮಲೆನಾಡಿನ ಜೈನ ಸಮಾಜ ಬಾಂಧವರ ಸಹಕಾರದೊಂದಿಗೆ ಭಗವಾನ್ ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ ಆಚರಣೆ ಪ್ರಯುಕ್ತ ಸರ್ವಧರ್ಮೀಯರಿಗಾಗಿ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಏಪ್ರಿಲ್ 20ರ ಭಾನುವಾರದಂದು ಬೆಳಿಗ್ಗೆ 09.30ರಿಂದ ವಿದ್ಯಾಗಿರಿಯ ಕೃಷಿಸಿರಿ ವೇದಿಕೆಯಲ್ಲಿ ಸ್ಪರ್ಧೆಗಳು ನಡೆಯಲಿವೆ. ಸ್ಪರ್ಧೆಗಳ ವಿವರ: ೧) ಚಿತ್ರಕಲಾ ಸ್ಪರ್ಧೆ: • ಪ್ರಾಥಮಿಕ ಶಾಲಾ ವಿಭಾಗ: ವಿಷಯ: ಸುಂದರ ಪ್ರಕೃತಿ • ಪ್ರೌಢಶಾಲಾ ವಿಭಾಗ: ವಿಷಯ: ರಥೋತ್ಸವ ಸಮಯ: 1 ಗಂಟೆ ೨) ಭಾಷಣ ಸ್ಪರ್ಧೆ (ಕನ್ನಡ) • ಪ್ರೌಢಶಾಲಾ ವಿಭಾಗ: ವಿಷಯ: ಕ್ಷಮೆ ಮತ್ತು ಅಹಿಂಸೆಯ ಮಹತ್ವ • ಪಿಯುಸಿ/ಪದವಿ ವಿಭಾಗ: ವಿಷಯ: ವಿಶ್ವಶಾಂತಿ ಮತ್ತು ಜೈನಧರ್ಮ ಸಮಯ: 4+1 ನಿಮಿಷ ೩) ಭಾಷಣ ಸ್ಪರ್ಧೆ (ಇಂಗ್ಲೀಷ್) • ಪ್ರೌಢಶಾಲಾ ವಿಭಾಗ: ವಿಷಯ: ಕ್ಷಮೆ ಮತ್ತು ಅಹಿಂಸೆಯ ಮಹತ್ವ • ಪಿಯುಸಿ/ಪದವಿ ವಿಭಾಗ: ವಿಷಯ: ಜಾಗತಿಕ ಶಾಂತಿ ಹಾಗೂ ಜೈನಧರ್ಮ ಸಮಯ: 4+1 ನಿಮಿಷ ೪) ಪ್ರಬಂಧ ಸ್ಪರ್ಧೆ (ಕನ್ನಡ) • ಪ್ರೌಢಶಾಲಾ ವಿಭಾಗ: ವಿಷಯ: ಬದುಕಿ ಮತ್ತು ಬದುಕಲು ಬಿಡು ಸಮಯ: 30 ನಿಮಿಷಗಳು • ಪಿಯುಸಿ ಮತ್ತು ಪದವಿ ವಿಭಾಗ: ವಿಷಯ: ಭಾರತೀಯ ಸಂಸ್ಕೃತಿಗೆ-ಜೈನಧರ್ಮದ ಕೊಡುಗೆ ಸಮಯ: 45 ನಿಮಿಷಗಳು ೫) ಪ್ರಬಂಧ ಸ್ಪರ್ಧೆ (ಇಂಗ್ಲೀಷ್) • ಪ್ರೌಢಶಾಲಾ ವಿಭಾಗ: ವಿಷಯ: ಬದುಕಿ ಹಾಗೂ ಬದುಕಲು ಬಿಡಿ ಸಮಯ: 30 ನಿಮಿಷಗಳು • ಪಿಯುಸಿ ಮತ್ತು ಪದವಿ ವಿಭಾಗ: ವಿಷಯ: ಭಾರತೀಯ ಸಂಸ್ಕೃತಿಗೆ ಜೈನ ಧರ್ಮದ ಕೊಡುಗೆ ಸಮಯ: 45 ನಿಮಿಷಗಳು ಸ್ಪರ್ಧೆಗಳಲ್ಲಿ ಎಲ್ಲರಿಗೂ ಭಾಗವಹಿಸಲು ಮುಕ್ತ ಅವಕಾಶವಿದ್ದು, ಪ್ರತಿಯೊಂದು ವಿಭಾಗದ ಸ್ಪರ್ಧೆಗೂ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನಗಳಿರುತ್ತವೆ. ವಿದ್ಯಾರ್ಥಿಗಳು ಸ್ಪರ್ಧೆಗೆ ಬರುವಾಗ ತಪ್ಪದೇ ಶಾಲೆ ಅಥವಾ ಕಾಲೇಜಿನ ಗುರುತಿನ ಚೀಟಿ ಧರಿಸಿಕೊಂಡು ಬರಬೇಕು. ಒಬ್ಬರು ಒಂದು ಸ್ಪರ್ಧೆಯಲ್ಲಿ ಮಾತ್ರ ಭಾಗವಹಿಸುವ ಅವಕಾಶವಿದ್ದು, ಸ್ಪರ್ಧೆಯಲ್ಲಿ ಭಾಗವಹಿಸುವವರು ಏಪ್ರಿಲ್15ರ ಒಳಗೆ ತಮ್ಮ ಹೆಸರನ್ನು ಈ ವಾಟ್ಸಾಪ್ ನಂಬರ್ ಮೂಲಕ- 9448625888/ 9480600507 ತಿಳಿಸುವಂತೆ ಕೋರಲಾಗಿದೆ.

ತುಮಕೂರು: ಉಚಿತ ಬೇಸಿಗೆ ಶಿಬಿರ

Article Image

ತುಮಕೂರು: ಉಚಿತ ಬೇಸಿಗೆ ಶಿಬಿರ

ತುಮಕೂರು: ಇಲ್ಲಿಯ ಶ್ರೀ ಪದ್ಮಾಂಬ ಜೈನ ಮಹಿಳಾ ಸಮಾಜವು ಹಲವಾರು ವರ್ಷಗಳಿಂದ ಬೇಸಿಗೆ ಶಿಬಿರ ಏರ್ಪಡಿಸುತ್ತಿದ್ದು, ಈ ವರ್ಷವು ಸಹ ಉಚಿತ ಬೇಸಿಗೆ ಶಿಬಿರ ಆಯೋಜಿಸಿರುತ್ತಾರೆ ರಜಾ ದಿನಗಳಲ್ಲಿ ಮಕ್ಕಳಿಗೆ ಉತ್ತಮ ಮಾರ್ಗದರ್ಶನ ನೀಡುವ ಸದುದ್ದೇಶದಿಂದ ಈ ಸಂಸ್ಕಾರ ಶಿಬಿರದಲ್ಲಿ ನಿರ್ಯಾಪಕ ಮುನಿಗಳಾದ ಪರಮ ಪೂಜ್ಯ 108 ನಿಯಮಸಾಗರ ಮಹಾರಾಜರಿಂದ ತರಬೇತಿ ಹೊಂದಿ, ಅನೇಕ ಧಾರ್ಮಿಕ ಶಿಬಿರಗಳನ್ನು ಯಶಸ್ವಿಯಾಗಿ ನಡೆಸಿರುವ ಬೆಳಗಾವಿಯ ಸಂಪನ್ಮೂಲ ವ್ಯಕ್ತಿ ಸುಮನ್‌ಪತ್ರಾವಳಿಯವರು 5 ದಿನಗಳ ಕಾಲ ಮಕ್ಕಳ ಜೊತೆಯಲ್ಲಿದ್ದು ಅವರುಗಳ ಶ್ರೇಯೋಭಿವೃದ್ಧಿಗೆ ತಮ್ಮ ಅಮೂಲ್ಯ ಸಮಯವನ್ನು ಮೀಸಲಿಡುವರು. ಇದರೊಂದಿಗೆ ಚಿತ್ರಕಲೆ, ಆಟೋಟ, ನಾಟಕ ವಿವಿಧ ಮನೋರಂಜನೆಯಿಂದಲೂ ಸಹ ಹಲವು ಸಂಪನ್ಮೂಲ ವ್ಯಕ್ತಿಗಳು ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವರು. ಈ ವರ್ಷ ದಿನಾಂಕ: 11/04/2025 ರಿಂದ 20/04/2025ರ ವರೆಗೆ 10 ದಿನಗಳ ಶಿಬಿರದಲ್ಲಿ ಉಚಿತ ಊಟ, ವಸತಿ ಸೌಕರ್ಯ ಏರ್ಪಡಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ಕವಿತಾ ಅತ್ತಿಮಬ್ಬೆ ವಿದ್ಯಾಮಂದಿರ, ಚಿಕ್ಕಪೇಟೆ, ತುಮಕೂರು. ಮೊ. 8618408638

ಪ್ರವಕ್ತಾ ಜಿನಭಜನಾ ಕಲಿಕಾ ಕೇಂದ್ರದ ಉದ್ಘಾಟನಾ ಸಮಾರಂಭ

Article Image

ಪ್ರವಕ್ತಾ ಜಿನಭಜನಾ ಕಲಿಕಾ ಕೇಂದ್ರದ ಉದ್ಘಾಟನಾ ಸಮಾರಂಭ

ವೇಣೂರು: ಪ್ರವಕ್ತಾ ಜಿನಭಜನಾ ಕಲಿಕಾ ಕೇಂದ್ರದ ಉದ್ಘಾಟನಾ ಸಮಾರಂಭವು ಯಾತ್ರಿ ನಿವಾಸದಲ್ಲಿ ಮಾ.3೦ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ವೇಣೂರಿನ ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ ಕಾರ್ಯದರ್ಶಿಯವರಾದ ವಿ. ಪ್ರವೀಣ್‌ ಕುಮಾರ್‌ ಇಂದ್ರರವರು ನೆರವೇರಿಸಿ, ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಬ್ರಾಹ್ಮೀ ಜೈನ ಮಹಿಳಾ ಸಂಘದ ಸ್ಥಾಪಕಾಧ್ಯಕ್ಷರಾದ ಪ್ರಸನ್ನ ಆರ್.ಹೆಗ್ಡೆ , ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ದ.ಕ. ಜಿಲ್ಲಾ ವಿಭಾಗದ ನಿರ್ದೇಶಕಿ ಮತ್ತು ಬ್ರಾಹ್ಮೀ ಜೈನ ಮಹಿಳಾ ಸಂಘದ ಅಧ್ಯಕ್ಷರು ಆದ ಸರೋಜಾ ಗುಣಪಾಲ್‌ ಜೈನ್‌ ಅಗಮಿಸಿ, ಶುಭ ಹಾರೈಸಿದರು. ಸಂಗೀತಾ ಶಿಕ್ಷಕರಾದ ಮೂಡುಬಿದಿರೆಯ ಭಗೀರಥ ಮಣಕೋಣ್‌ ರವರು ಸಂಗೀತ ಕಲಿಕೆಯ ಬಗ್ಗೆ ಮಾಹಿತಿ ನೀಡಿದರು. ನಂತರ ಸುಮಧುರ ಗಾಯನವನ್ನು ಪ್ರಸ್ತುತ ಪಡಿಸಿದರು. ವೇದಿಕೆಯಲ್ಲಿ ಸುನೀತಾ ಎನ್.ಸಿ.ಬಲ್ಲಾಳ್‌ ಉಪಸ್ಥಿತರಿದ್ದರು. ಸುನೀತಾ ಎನ್.ಸಿ. ಬಲ್ಲಾಳ್‌, ಸುಜಯಭರತ್‌, ದೀಪಶ್ರಿ ಪ್ರಾರ್ಥಿಸಿದರು. ಚಂದ್ರಪ್ರಭ‌ ಜೈನ್ ರವರು ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಶ್ರಾವಕ- ಶ್ರಾವಕಿಯರು , ಮಕ್ಕಳು ಭಾಗವಹಿಸಿದ್ದರು. .ಕಾರ್ಯಕ್ರಮವು ಶಾಂತಿ ಮಂತ್ರದೊಂದಿಗೆ ಮುಕ್ತಾಯವಾಯಿತು.

ಬಂಟ್ವಾಳ: ಜೈನ್ ಮಿಲನ್ ಮಾಸಿಕ ಸಭೆ

Article Image

ಬಂಟ್ವಾಳ: ಜೈನ್ ಮಿಲನ್ ಮಾಸಿಕ ಸಭೆ

ಬಂಟ್ವಾಳ: ಜೈನ್ ಮಿಲನ್ ಮಾಸಿಕ ಸಭೆಯು ದಿನಾಂಕ 23.03.2025ನೇ ಭಾನುವಾರ ಶ್ರೀ ಆದಿನಾಥ ತೀರ್ಥ0ಕರ ಜಿನಚೈತ್ಯಾಲಯದ ವಾರ್ಷಿಕೋತ್ಸವದಂದು ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಿಲನ್ ಅಧ್ಯಕ್ಷರಾದ ಮಧ್ವರಾಜ್ ಜೈನ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜೈನ್ ಮಿಲನ್ ವಲಯ ಉಪಾಧ್ಯಕ್ಷರಾದ ಸುದರ್ಶನ್ ಜೈನ್, ಮಂಗಳೂರು ವಿಭಾಗ ಕಾರ್ಯದರ್ಶಿಗಳಾದ ಸುಭಾಶ್ಚಂದ್ರ ಜೈನ್,ವಲಯ ನಿರ್ದೇಶಕರಾದ ಪ್ರಮೋದ್ ಕುಮಾರ್ ಉಜಿರೆ ಸಭೆಯನ್ನುದ್ದೇಶಿಸಿ ಮಾತನಾಡಿದರು. ಮಂಗಳೂರು ವಿಭಾಗ ನಿರ್ದೇಶಕರಾದ ಸುಕುಮಾರ ಬಲ್ಲಾಳ್ ಧಾರ್ಮಿಕ ಚೌಕಟ್ಟಿನಲ್ಲಿ ಜೈನ ಸಮಾಜದ ಸಂಘಟನೆ ಎಂಬ ವಿಷಯದ ಬಗ್ಗೆ ಮಾತನಾಡುತ್ತಾ ಸಮಾಜದ ಯುವ ಜನರಲ್ಲಿ ಸಂಘಟನೆ, ಸಂಸ್ಕಾರ, ಸಂಸ್ಕೃತಿ ಮತ್ತು ಪರಂಪರೆ ಉಳಿಸುವ ಹಾಗೂ ಬೆಳೆಸುವ ಕೆಲಸಗಳು ಆಗಬೇಕು ಆಗ ಸಮಾಜ ಜಾಗೃತವಾಗುತ್ತದೆ ಎಂದು ತಿಳಿಸಿದರು . ಕಾರ್ಯಕ್ರಮದಲ್ಲಿ ಯಾವುದೇ ಪ್ರಚಾರವಿಲ್ಲದೆ ಸಮಾಜದ ಸೇವೆಯನ್ನು ಮಾಡುತ್ತಿರುವ ಪ್ರವೀಣ್ ಕುಮಾರ್ ಬಸ್ತಿಪಡ್ಫು , ಸಪ್ನ ಚಂದ್ರಪ್ರಭ ಬೈಪಾಸ್ ಬಂಟ್ವಾಳ ಇವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ವೇದಿಕೆಯಲ್ಲಿ ಜೈನ್ ಮಿಲನ್ ಕಾರ್ಯದರ್ಶಿಗಳಾದ ಭರತ್ ಕುಮಾರ್, ಕೋಶಾಧಿಕಾರಿ ಗೀತಾ ಜಿನಚಂದ್ರ ಉಪಸ್ಥಿತರಿದ್ದರು. ಕಾಂಚನಶ್ರೀಮದ್ವರಾಜ್ ಮತ್ತು ಮಮತಾ ಸುಭಾಶ್ಚಂದ್ರ ಜೈನ್ ಸನ್ಮಾನಿತರ ಪರಿಚಯವನ್ನು ಮಾಡಿದರು. ಶೈಲಜಾ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಶಿವಪ್ರಕಾಶ್ ಜೈನ್ ಸ್ವಾಗತಿಸಿ, ಗೀತಾ ಜಿನಚಂದ್ರ ಧನ್ಯವಾದವಿತ್ತರು. ವಿಭಾಗ ಕಾರ್ಯದರ್ಶಿಗಳಾದ ಸುಭಾಶ್ಚಂದ್ರ ಜೈನ್ ಕಾರ್ಯಕ್ರಮವನ್ನು ನಿರೂಪಿಸಿದರು.

ಮೈಸೂರು: ಬೇಸಿಗೆ ಧಾರ್ಮಿಕ ಶಿಬಿರ

Article Image

ಮೈಸೂರು: ಬೇಸಿಗೆ ಧಾರ್ಮಿಕ ಶಿಬಿರ

ಮೈಸೂರು ಜಿಲ್ಲೆ, ಸರಗೂರು ತಾಲೂಕಿನ ಶ್ರೀಕ್ಷೇತ್ರ ಕನಕಗಿರಿ, ದಿಗಂಬರ ಜೈನ ಮಠದ ಪೀಠಾಧ್ಯಕ್ಷರಾದ ಪ.ಪೂಜ್ಯ ಸ್ವಸ್ತಿಶ್ರೀ ಭುವನಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ಆಶೀರ್ವಾದ, ಪ್ರೇರಣೆ ಹಾಗೂ ಮಾರ್ಗದರ್ಶನದಲ್ಲಿ, ಭಾರತೀಯ ಜೈನ್ ಮಿಲನ್, ಮೈಸೂರು ವಿಭಾಗದ ನಿರ್ದೇಶಕರಾದ ಸರಗೂರಿನ ಎಸ್‌. ಎಸ್. ಸೋಮಪ್ರಭರವರು, ಅವರ ಸ್ವಗೃಹ "ಕನಕಾದ್ರಿ" ಯಲ್ಲಿ ಹಿಂದಿನ ವರ್ಷಗಳಂತೆ ಯಥಾಪ್ರಕಾರವಾಗಿ ಮಕ್ಕಳಿಗೆ ಬೇಸಿಗೆ ಧಾರ್ಮಿಕ ಶಿಬಿರವನ್ನು ಆಯೋಜಿಸಿದ್ದಾರೆ. ಬೇಸಿಗೆ ರಜೆಯ ಸಂದರ್ಭದಲ್ಲಿ ಮಕ್ಕಳು ಉತ್ತಮ ಸಂಸ್ಕಾರ ಪಡೆಯಲು ಈ ಧಾರ್ಮಿಕ ಶಿಬಿರ ಅತ್ಯಂತ ಉಪಯುಕ್ತವಾಗಿದೆ. ದಿ:01-04-2025 ರ ಮಂಗಳವಾರದಿಂದ 8.ದಿನಗಳ ಕಾಲ ಈ ಶಿಬಿರ ನಡೆಯಲಿದೆ. ಈ ಶಿಬಿರದಲ್ಲಿ ಅನುಭವಿ ಹಾಗೂ ಪ್ರಬುದ್ಧ ವಿದ್ವಾಂಸರು, ಉಪನ್ಯಾಸಕರುಗಳು, ಪಂಡಿತರುಗಳಿಂದ ಮಕ್ಕಳ ಅಭಿರುಚಿಗೆ ತಕ್ಕಂತೆ, ಅತ್ಯಂತ ಸರಳವಾಗಿ ಹಾಗೂ ಆಕರ್ಷಣೀಯವಾಗಿ ಧಾರ್ಮಿಕ ಪಾಠ ಪ್ರವಚನಗಳ ಜೊತೆಗೆ ಮನರಂಜನಾತ್ಮಕ ಹಾಗೂ ಭಕ್ತಿರಸ ಪ್ರಧಾನವಾದ ಭಕಿಗೀತೆಗಳು, ರೂಪಕಗಳು, ಕಥೆಗಳು, ಇತ್ಯಾದಿ ಜ್ಞಾನವರ್ಧನೆಯ ಪೂರಕ ಅಂಶಗಳು ಸಂಪನ್ಮೂಲ ವ್ಯಕ್ತಿಗಳಿಂದ ಕಲಿಕೆಯಾಗಲಿದೆ. ಶಿಬಿರದ ಉದ್ಘಾಟನೆ ದಿ:: 01-04-2025ರ ಮಂಗಳವಾರ ಬೆಳಿಗ್ಗೆ 9-30 ಕ್ಕೆ ಶುಭಾಶೀರ್ವಾದ, ಮಾರ್ಗದರ್ಶನ: ಸ್ವಸ್ತಿಶ್ರೀ ಭುವನಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಶ್ರೀಕ್ಷೇತ್ರ ಕನಕಗಿರಿ. ಗೌರವ ಉಪಸ್ಥಿತಿ : ಶ್ರೀ ಬಾಹುಬಲಿ ಬಯ್ಯಾಜಿ ತ್ಯಾಗಿಗಳು/ಬಾಲ ಬ್ರಹ್ಮಚಾರಿಗಳು,ಆಚಾರ್ಯಶ್ರೀ 108 ವಿದ್ಯಾಸಾಗರ ಮಹಾರಾಜರ ಶಿಷ್ಯರು, 5ನೇ ಪ್ರತಿಮಾಧಾರಿಗಳು. ಮುಖ್ಯ ಅತಿಥಿಗಳು: ಶೀಲಾ ಅನಂತರಾಜ್,ಮೈಸೂರು. ಗೌರವ ಉಪಾಧ್ಯಕ್ಷರು, ಭಾರತೀಯ ಜೈನ್ ಮಿಲನ್, ಕರ್ನಾಟಕ ರಾಜ್ಯ. ಬ್ರಹ್ಮದೇವಯ್ಯ ಜೈನ ಸಮಾಜದ ಹಿರಿಯ ಮುಖಂಡರು ಸರಗೂರು. ಪ್ರಥಮ ದಿನದ ಬೆಳಗ್ಗೆ ಅವಧಿ: ಪಾಠ ಪ್ರವಚನಗಳ ಬೋಧನೆ: ಮೈಸೂರು ವಿಶ್ವವಿದ್ಯಾನಿಲಯದ ಜೈನ ಶಾಸ್ತ್ರ ಮತ್ತು ಪ್ರಾಕೃತ ವಿಭಾಗದ ಉಪನ್ಯಾಸಕರಾದ ಡಾ. ಅರುಣಾಪ್ರಕಾಶ್ ರವರು ನಡೆಸಿಕೊಡಲಿದ್ದಾರೆ. ಮಧ್ಯಾಹ್ನದ ಅವಧಿ: ಶ್ರೀ ಬಾಹುಬಲಿ ಬಯ್ಯಾಜಿ ರವರಿಂದ, 5.ನೇ ತರಗತಿಯಿಂದ ಪಿ.ಯೂ.ಸಿ ತನಕ ಓದುತ್ತಿರುವ ವಿದ್ಯಾರ್ಥಿಗಳು ಈ ಶಿಬಿರದಲ್ಲಿ ಭಾಗವಹಿಸಬಹುದಾಗಿದೆ. ಶಿಬಿರ ಪ್ರತಿದಿನ ಬೆಳಿಗ್ಗೆ10-00 ಗಂಟೆಗೆ ಪ್ರಾರಂಭವಾಗಿ ಸಂಜೆ 4-00 ಗಂಟೆಗೆ ಮುಕ್ತಾಯವಾಗುತ್ತದೆ. ಮಕ್ಕಳಿಗೆ ಲೇಖನ ಸಾಮಗ್ರಿಗಳ ಜೊತೆಗೆ ಬಹುಮಾನಗಳನ್ನು ನೀಡಲಾಗುತ್ತದೆ. ಪಾಲಕರು/ಪೋಷಕರು ಮಕ್ಕಳನ್ನು ಬೆಳಿಗ್ಗೆ 9-30 ಗಂಟೆಗೆ ಶಿಬಿರಕ್ಕೆ ಕರೆತಂದು ಬಿಟ್ಟು, ಸಂಜೆ 4-00 ಗಂಟೆ ನಂತರ ಕರೆದುಕೊಂಡು ಹೋಗುವ ಜವಾಬ್ದಾರಿ ಅವರಿಗೆ ಸೇರಿರುತ್ತದೆ. ಶಿಬಿರದಲ್ಲಿ ಮಕ್ಕಳಿಗೆ ಬೆಳಿಗ್ಗೆ 11-00 ಗಂಟೆಗೆ ಕಾಫಿ/ ಟೀ/ ಬಿಸ್ಕತ್ತು, ಮಧ್ಯಾಹ್ನ ಊಟದ ವ್ಯವಸ್ಥೆ, ಸಂಜೆ ಸ್ನಾಕ್ಸ್ ವ್ಯವಸ್ಥೆ ಮಾಡಲಾಗಿದೆ. ಸರಗೂರು ಹಾಗೂ ಹೆಚ್.ಡಿ.ಕೋಟೆ ತಾ. ವ್ಯಾಪ್ತಿಯ ಗ್ರಾಮಾಂತರದ ಮಕ್ಕಳುಗಳು ಈ ಸದಾವಕಾಶವನ್ನು ಬಳಸಿಕೊಳ್ಳಬೇಕೆಂದು ಎಸ್‌. ಎಸ್. ಸೋಮಪ್ರಭರವರು ತಿಳಿಸಿರುತ್ತಾರೆ. .ರಜಾ-ಮಜಾ ಜೊತೆಗೆ ಉತ್ತಮ ಸಂಸ್ಕಾರ, ಜ್ಞಾನಾರ್ಜನೆಯ, ಸದಭಿರುಚಿಯ ಬಾಲ್ಯದ ಶಿಕ್ಷಣ ಮಕ್ಕಳ ಪ್ರತಿಭಾ ಅನಾವರಣಕ್ಕೆ ಪೂರಕವಾಗಲಿದೆ ಈ ಧಾರ್ಮಿಕ ಶಿಬಿರದಲ್ಲಿ ಭಾಗವಹಿಸಲು ಹಾಗೂ ಹೆಚ್ಚಿನ ಮಾಹಿತಿಗೆ ಈ ಕೆಳಕಂಡವರನ್ನು ಸಂಪರ್ಕಿಸಲು ಕೋರಿದೆ. ಎಸ್.ಎಸ್. ಸೋಮಪ್ರಭ, ಸರಗೂರು: ಮೊ: 94487 93649 ಸಿ.ಎಸ್. ನಾಗರಾಜು, ಚಕ್ಕೂರು: ಮೊ: 94489 58024 ಜಿ. ಬಿ.ಚಂದ್ರಪ್ರಕಾಶ್, ಗುಜ್ಜಪ್ಪನಹುಂಡಿ: ಮೊ: 99452 59709

ಬೆಳ್ತಂಗಡಿ: ವಿಶ್ವ ಮಹಿಳಾ ದಿನಾಚರಣೆ

Article Image

ಬೆಳ್ತಂಗಡಿ: ವಿಶ್ವ ಮಹಿಳಾ ದಿನಾಚರಣೆ

ಇಂದಿನ ಆಧುನಿಕ ಸಮಾಜದಲ್ಲಿ ಮಹಿಳೆಯೊಬ್ಬಳು ತನ್ನನ್ನು ತಾನು ತೊಡಗಿಸಿಕೊಂಡರೆ ಯಾವುದೇ ಕಾರ್ಯವನ್ನು ಮಾಡಲು ಸಾಧ್ಯ. ಅಂತಹ ಕಾರ್ಯವನ್ನು ಮಾಡುತ್ತಿರುವ ನಮ್ಮ ಬೆಳ್ತಂಗಡಿಯ ಶಾಂತಿಶ್ರೀ ಜೈನ ಮಹಿಳಾ ಸಮಾಜವು ಇಂದು ತಾಲೂಕಿನಲ್ಲಿ ಗುರುತಿಸುವಂತಾಗಿದೆ. ನಾವೆಲ್ಲರೂ ಆದರ್ಶ ಸಾಧಕ ಮಹಿಳೆರಾದಾಗ ಮಾತ್ರ ಸಮಾಜ ನಮ್ಮನ್ನು ಗುರುತಿಸಿ ಗೌರವಿಸುತ್ತದೆ. ಅಂತಹ ಗುರುತರವಾದ ಕಾರ್ಯಕ್ಕೆ ನಾವೆಲ್ಲ ಜೊತೆಯಾಗಿ ಕಾರ್ಯವನ್ನು ಮಾಡಬೇಕು ಎಂದು ವಿಶ್ವ ಮಹಿಳಾ ದಿನಾಚರಣೆಯನ್ನು ದೀಪ ಪ್ರಜ್ವಲನದೊಂದಿಗೆ ಉದ್ಘಾಟಿಸಿದ ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಅಭಿಯಂತರರಾಗಿದ್ದ ಚಂದ್ರರಾಜ್ ಜೈನ್ ಇವರ ಧರ್ಮಪತ್ನಿ ಸುಜಯ ಸಿ ಜೈನ್ ರವರು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ನ್ಯಾಯವಾದಿ ಸ್ವರ್ಣಲತಾ ಜೈನ್ ರವರು "ಇಂದಿನ ಸಮಾಜದಲ್ಲಿ ಮಹಿಳೆಯರ ಮುಂದಿರುವ ಸವಾಲುಗಳು, ಅದನ್ನು ನಿಭಾಯಿಸಬೇಕಾದ ತಂತ್ರಗಾರಿಕೆ, ಮಹಿಳೆಯರಿಗೆ ಪರವಾಗಿರುವ ಕಾನೂನುಗಳು, ಪೋಕ್ಸೋ ಕಾಯ್ದೆಯ ಮಹತ್ವ ಇತ್ಯಾದಿ ವಿಚಾರಗಳನ್ನು ಎಳೆ ಎಳೆಯಾಗಿ ಪ್ರತಿಯೊಬ್ಬರು ತಿಳಿದುಕೊಳ್ಳಲೇಬೇಕು. ಆಗ ಮಾತ್ರ ಸುಸ್ತಿರ ಸಮಾಜವನ್ನು ಕಟ್ಟಲು ಸಾಧ್ಯ ಎಂದರು. ಈ ಕಾರ್ಯಕ್ರಮದಲ್ಲಿ ಪೂರ್ವ ಪರಂಪರೆಯಲ್ಲಿ ಸಾಧನೆಗೈದ ಹಲವಾರು ಜೈನ ಮಹಿಳಾ ಸಾಧಕೀಯರಲ್ಲಿ ಕೆಲವರ ಸಾಧನೆಯ ತುಣುಕನ್ನು ಸಭೆಯಲ್ಲಿ ಪರಿಚಯಿಸಲಾಯಿತು. ಕಾಳು ಮೆಣಸಿನ ರಾಣಿ ಚೆನ್ನಬೈರಾ ದೇವಿ ಇವರನ್ನು ಉಷಾ ಹಾಗೂ ಜೈನ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿರುವ ಜೈನ ಮಹಿಳೆ ಬಿರುದಾಂಕಿತ ರಾಧಮ್ಮ ಇವರ ಬಗ್ಗೆ ಸುರಕ್ಷಿತರವರು ಸಭೆಗೆ ಪರಿಚಯಿಸಿದರು. ಮಹಿಳೆಯರು ಪ್ರತಿ ಕ್ಷೇತ್ರದಲ್ಲೂ ತನ್ನನ್ನು ತಾನು ತೊಡಗಿಸಿಕೊಂಡು ಸಮಾಜದಲ್ಲಿ ಗುರುತಿಸಿಕೊಳ್ಳುವಂತಾಗಬೇಕು ಎನ್ನುವ ಉದ್ದೇಶದಿಂದ ಈಗಾಗಲೇ ಶಾಂತಿಶ್ರೀ ತಂಡದಿಂದ ವಲಯ ಮಟ್ಟದ ಜಿನಭಜನ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ನಾಲ್ಕು ತಂಡಗಳನ್ನು ವಿಶೇಷ ರೀತಿಯಲ್ಲಿ ಗೌರವಿಸಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದ ಅಧ್ಯಕ್ಷರಾಗಿರುವ ಪ್ರೊಫೆಸರ್ ತ್ರಿಶಾಲ ಜೈನ್ ಕೆ ಎಸ್ ಇವರು "ಹತ್ತನೇ ಶತಮಾನದಿಂದ 21ನೇ ಶತಮಾನದವರೆಗೆ ದೇಶದ ನಾನಾ ಭಾಗಗಳಲ್ಲಿ ಆಳ್ವಿಕೆ ಮಾಡಿರುವ ಜೈನ ರಾಣಿಯರ ಧೈರ್ಯ, ಸಾಹಸ, ಚಾಣಕ್ಯತನ, ಆಡಳಿತ ಶೈಲಿ ಮುಂತಾದ ವಿಚಾರಗಳನ್ನು ನೆನಪಿಸಿಕೊಂಡರು. ಇದೇ ಸಂದರ್ಭದಲ್ಲಿ ಇಂದು ವಿಶ್ವದಲ್ಲಿ ಮಹಿಳೆಯರ ಸ್ಥಾನಮಾನ ಹಾಗೂ ಹಲವಾರು ಕ್ಷೇತ್ರಗಳಲ್ಲಿ ಮಹಿಳೆಯರು ಸಾಧಿಸುತ್ತಿರುವ ಸಾಧನೆಗಳು ನಮಗೆಲ್ಲರಿಗೂ ಹೆಮ್ಮೆಯ ವಿಚಾರವಾಗಿದೆ. ಮಾತ್ರವಲ್ಲದೆ ಇತ್ತೀಚೆಗೆ ಬಾಹ್ಯಾಕಾಶ ಯಾನವನ್ನು ಮಾಡಿ ಯಶಸ್ವಿಯಾಗಿ ಧರೆಗೆ ಬಂದಿಳಿದ ಸುನಿತಾ ವಿಲಿಯಮ್ಸ್ ಇವರ ಅದ್ಭುತ ಪೂರ್ವ ಸಾಧನೆಗೆ ಸಂಸ್ಥೆಯ ವತಿಯಿಂದ ವಿಶೇಷ ಅಭಿನಂದನೆಯನ್ನು ಸಲ್ಲಿಸಲಾಯಿತು. ನಾವೆಲ್ಲರೂ ಜೊತೆಯಾಗಿದ್ದಾಗ ಸರ್ವ ಕಾರ್ಯವನ್ನು ಮಾಡಲು ಸಾಧ್ಯ. ಅಂತಹ ಕಾರ್ಯಕ್ಕೆ ತಾವೆಲ್ಲರೂ ನಮ್ಮ ಜೊತೆ ಕೈಗೂಡಿಸಬೇಕು ಎಂದು ಹೇಳಿದರು. ಈ ಕಾರ್ಯಕ್ರಮವು ಸ್ವಪ್ನ ಬಳಗದವರ ಪ್ರಾರ್ಥನೆಯೊಂದಿಗೆ ಆರಂಭಗೊಂಡರೆ, ಸಂಸ್ಥೆ ನಡೆದು ಬಂದ ದಾರಿಯ ಕುರಿತು ಸಂಸ್ಥೆಯ ಕಾರ್ಯದರ್ಶಿ, ರಾಜಶ್ರೀ ಪ್ರಸ್ತಾಪಿಸಿದರೆ, ಗುಣಮ್ಮ ಪಿ ಜೈನ್ ರವರು ಸ್ವಾಗತಿಸಿ, ತ್ರಿಶಾಲ ಅತಿಕಾರಿ ವಂದಿಸಿ, ಅನುಪ ಕುಮಾರಿ ಸಂಘಟಿಸಿ, ಸಂಘದ ಸದಸ್ಯರ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ದವಳ ಇವರ ಕಾರ್ಯಕ್ರಮ ನಿರ್ವಹಣೆಯೊಂದಿಗೆ ಕಾರ್ಯಕ್ರಮ ಸಮಾಪನಗೊಂಡಿತು.

ನೆಲ್ಲಿಕಾರು ಮಹಾರಥಯಾತ್ರಾ ಮಹೋತ್ಸವ

Article Image

ನೆಲ್ಲಿಕಾರು ಮಹಾರಥಯಾತ್ರಾ ಮಹೋತ್ಸವ

ಮೂಡುಬಿದಿರೆ: ಅತಿಶಯ ಶ್ರೀ ಕ್ಷೇತ್ರ ನೆಲ್ಲಿಕಾರಿನಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ಭಗವಾನ್ ೧೦೦೮ ಶ್ರೀ ಅನಂತನಾಥ ಸ್ವಾಮಿ ಮತ್ತು ಶ್ರೀ ಬ್ರಹ್ಮಯಕ್ಷ ದೇವರ ಮಹಾರಥಯಾತ್ರಾ ಮಹೋತ್ಸವವು 30-03-2025ನೇ ಆದಿತ್ಯವಾರ ಮೊದಲ್ಗೊಂಡು ದಿನಾಂಕ 05-04-2025ನೇ ಶನಿವಾರ ಪರ್ಯಂತ ಜರಗಲಿರುವುದು. ದಿನಾಂಕ 04-04-2025ನೇ ಶುಕ್ರವಾರ ಮಹಾರಥಯಾತ್ರಾ ಮಹೋತ್ಸವವು ಕಾರ್ಕಳ ದಾನಶಾಲೆ ಶ್ರೀ ಜೈನ ಮಠದ ಪರಮಪೂಜ್ಯ ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಬೆಳಿಗ್ಗೆ ಗಂಟೆ 8-15ರಿಂದ ಭಗವಾನ್ ಶ್ರೀ ಅನಂತನಾಥ ಸ್ವಾಮಿಗೆ ಪಂಚಾಮೃತ ಅಭಿಷೇಕ, ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಗೆ ಕ್ಷೀರಾಭಿಷೇಕ, ಶ್ರೀ ಬ್ರಹ್ಮದೇವರಿಗೆ ಪಂಚಾಮೃತ ಅಭಿಷೇಕ. ಶ್ರೀಬಲಿ ವಿಧಾನ, ರಥ ಸಂಪ್ರೋಕ್ಷಣೆ, ಲಕ್ಷ ಹೂವಿನ ಪೂಜೆ, ರಥಾರೋಹಣಕ್ಕೆ ಪ್ರಸಾದ ಬೇಡಿಕೆ. ಮಧ್ಯಾಹ್ನ ಗಂಟೆ 12-00ಕ್ಕೆ ಮಹಾನೈವೇದ್ಯ ಪೂಜೆ, ಮಹಾಮಂಗಳಾರತಿ, ಶ್ರೀ ಸರ್ವಾಹ್ಣಯಕ್ಷರ ಶ್ರೀವಿಹಾರ, ಗ್ರಾಮ ಬಲಿ ಮಧ್ಯಾಹ್ನ ಗಂಟೆ 12-35ಕ್ಕೆ ಶ್ರೀ ಬ್ರಹ್ಮಯಕ್ಷ ದೇವರ ದರ್ಶನ ಪಾತ್ರಿಯೊಂದಿಗೆ ಭಗವಾನ್‌ ಶ್ರೀ ಅನಂತನಾಥ ಸ್ವಾಮಿಯ ರಥಾರೋಹಣ. ನಂತರ ಸಂಘಸಂತರ್ಪಣೆ ಹಾಗೂ ಸಾರ್ವಜನಿಕ ಅನ್ನ ಸಂತರ್ಪಣೆ. ರಾತ್ರಿ ಗಂಟೆ 7-00ಕ್ಕೆ ಸಮವಸರಣ ಪೂಜೆ. ರಾತ್ರಿ ಗಂಟೆ 10-00ಕ್ಕೆ ರಥೋತ್ಸವ. ನಂತರ ಭಗವಾನ್ ಶ್ರೀ ಅನಂತನಾಥ ಸ್ವಾಮಿಗೆ ೧೦೮ ಕಲಶಗಳಿಂದ ಮಹಾಭಿಷೇಕ, ಉತ್ಸವ. ದಿನಾಂಕ 04-04-2025ನೇ ಶುಕ್ರವಾರ ಸಂಗೀತ ಪೂಜಾಷ್ಟಕ ಶರ್ಮಿಳಾ ಜಿನೇಶ್ ಹಾಸನ ಮತ್ತು ಬಳಗದವರಿಂದ ದಿನಾಂಕ 04-04-2025ನೇ ಶುಕ್ರವಾರ ರಾತ್ರಿ ಗಂಟೆ 11.00ರಿಂದ ತುಳು ತೆಲಿಕೆದ ನಾಟಕ ಕಾಪಿಕಾಡ್‌ ವಾಮಂಜೂರು ಸಾಯಿ ಅಭಿನಯದ ಚಾಪರ್ಕ ಕಲಾವಿದರಿಂದ ತೆಲಿಕೆದ ಬೊಳ್ಳಿ ಡಾ|| ದೇವದಾಸ್ ಕಾಪಿಕಾಡ್‌ರವರ ವಿನೂತನ ಶೈಲಿಯ ತುಳು ಹಾಸ್ಯಮಯ ನಾಟಕ ಏರ್ಲಾ ಗ್ಯಾರಂಟಿ ಅತ್ತ್.

ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಪ್ರಯುಕ್ತ ಬೃಹತ್ ರಕ್ತದಾನ, ಆರೋಗ್ಯ ತಪಾಸಣೆ, ದಂತ ಚಿಕಿತ್ಸೆ ಶಿಬರಗಳು

Article Image

ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಪ್ರಯುಕ್ತ ಬೃಹತ್ ರಕ್ತದಾನ, ಆರೋಗ್ಯ ತಪಾಸಣೆ, ದಂತ ಚಿಕಿತ್ಸೆ ಶಿಬರಗಳು

ಭಗವಾನ್ ಶ್ರೀ 1008 ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ ಜೈನ್ ಪೇಟೆ ಮೂಡುಬಿದಿರೆ, ಜೈನ್ ಮಿಲನ್, ಶ್ರೀ ಮಹಾವೀರ ಸಂಘ (ರಿ.), ತೌಳವ ಇಂದ್ರ ಸಮಾಜ (ರಿ.), ತ್ರಿಭುವನ್ ಯೂತ್ ಅಸೋಸಿಯೆಶನ್, ರೋಟರಿ ಕ್ಲಬ್ ಟೆಂಪಲ್ ಟೌನ್, ಡಿ.ಜೆ.ಐ.ಐ ಸಂಘ (ನಿ.), ತ್ರಿಭುವನ್ ಹಾಗೂ ಬೆದ್ರ ಅಟೋ ಸ್ಪೋರ್ಟ್ಸ್ ಕ್ಲಬ್ (TASC-BAC), ತ್ರಿಭುವನ್ ಟ್ರಸ್ಟ್ (ರಿ.) ಬಸದಿ ಸ್ವಚ್ಚತಾ ತಂಡ, ಸರ್ವಮಂಗಳಾ ಮಹಿಳಾ ಸಂಘ, ಜೈನ್ ಮೆಡಿಕಲ್ ಸೆಂಟರ್‌ ಅಸ್ಪತ್ರೆ ಮೂಡುಬಿದಿರೆ ಇವರ ಸಹಭಾಗಿತ್ವದಲ್ಲಿ ಭ| ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಪ್ರಯುಕ್ತ ಎ. ಜೆ ಆಸ್ಪತ್ರೆ, ದಂತ ಕಾಲೇಜು, ಬ್ಲಡ್ ಬ್ಯಾಂಕ್, ಮಂಗಳೂರು ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ, ಆರೋಗ್ಯ ತಪಾಸಣೆ, ದಂತ ಚಿಕಿತ್ಸೆ ಶಿಬರಗಳು ದಿನಾಂಕ: 10-04-2025 ಗುರುವಾರ, ಬೆಳಗ್ಗೆ ಗಂಟೆ 9.30ರಿಂದ 1.00ರವರೆಗೆ, ಶ್ರೀ ಧವಳಾ ಕಾಲೇಜು, ಜೈನ್ ಪೇಟೆ, ಮೂಡುಬಿದಿರೆಯಲ್ಲಿ ನಡೆಯಲಿದೆ. ವಿಭಾಗಗಳು • ಬಿಪಿ/ ಬ್ಲಡ್ ಶುಗರ್ (BP ECG, BLOOD SUGAR) • ಕಿವಿ, ಮೂಗು, ಗಂಟಲು (ENT) • ಸಾಮಾನ್ಯ ಅರೋಗ್ಯ ವಿಭಾಗ (GRL MEDICINE) • ನೇತ್ರ ಚಿಕಿತ್ಸೆ (Eye) • ಸ್ತ್ರೀ ರೋಗ (OBG) ಎಲುಬು / ಕೀಲು(ARTHO) • ಚರ್ಮ (SKIN) • ದಂತ ಚಿಕಿತ್ಸೆ (DENTAL) ಮಾಹಿತಿಗಾಗಿ ಸಂಪರ್ಕಿಸಿ : ಡಾ| ಮಹಾವೀರ್ ಜೈನ್, ಮೊ: 9008384865 ಯತಿರಾಜ್ ಶೆಟ್ಟ, ಮೊ: 9448625888 ಪ್ರವೀಣ್ ಜೈನ್ ಬೆಳುವಾಯಿ, ಮೊ: 9886474143

ಸೌಟ್ಸ್ - ಗೈಡ್ಸ್ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭ

Article Image

ಸೌಟ್ಸ್ - ಗೈಡ್ಸ್ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭ

ದಿಗಂಬರ ಜೈನ ವಿದ್ಯಾ ವರ್ಧಕ ಸಂಘ (ರಿ) ಮೂಡಬಿದ್ರೆ ಇದರ ಆಡಳಿತಕ್ಕೆ ಒಳಪಟ್ಟ ದಿಗಂಬರ ಜೈನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮತ್ತು ದಿಗಂಬರ ಜೈನ ಆಂಗ್ಲ ಮಾಧ್ಯಮ ಶಾಲೆಯ ಜಂಟಿ ಆಶ್ರಯದಲ್ಲಿ 2025ನೇ ಸಾಲಿನ ಸ್ಕೌಟ್-ಗೈಡ್ಸ್ ಮತ್ತು ಕಬ್ಸ್- ಬುಲ್ ಬುಲ್ಸ್ ಐದು ದಿನಗಳ ಬೇಸಿಗೆ ಶಿಬಿರವು ದಿನಾಂಕ 24/03/25 ರಂದು ದಿಗಂಬರ ಜೈನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರಂಭಗೊಂಡಿತು. ಶಿಬಿರದ ಉದ್ಘಾಟನೆಯನ್ನು ಶಾಲಾ ತಾಯಂದಿರ ಸಮಿತಿಯ ಅಧ್ಯಕ್ಷರಾದ ಆರತಿ ಜೈನ್ ರವರು ದೀಪ ಬೆಳಗಿಸುವುದರ ಮೂಲಕ ನೆರವೇರಿಸಿದರು. ಹಾಗೂ ಎಸ್ ಡಿ ಎಂ ಸಿ ಅಧ್ಯಕ್ಷರಾದ ಪವನ್ ಕುಮಾರ್ ಇವರು ಧ್ವಜಾರೋಹಣ ಮಾಡುವುದರ ಮೂಲಕ ಶಿಬಿರಕ್ಕೆ ಚಾಲನೆಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಶಾಲಾ ಮುಖ್ಯೋಪಾಧ್ಯಾಯರಾದ ಶಶಿಕಾಂತ್ ವೈ ಜೈನ್ ಇವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಶಿಬಿರದ ಯಶಸ್ಸಿಗೆ ಸಂಪೂರ್ಣ ಸಹಕಾರ ನೀಡುವುದೆಂದು ತಿಳಿಸಿದರು. ದಿಗಂಬರ ಜೈನ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ವೀಣಾ ಪ್ರಮೋದ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಗೈಡ್ ಕ್ಯಾಪ್ಟನ್ ಮಂಜುಳಾ ಜೈನ್, ಬುಲ್ ಬುಲ್ ಕ್ಯಾಪ್ಟನ್ ಸಾಕ್ಷಿ ಉಪಸ್ಥಿತರಿದ್ದರು. ಸ್ಕೌಟ್ ಮಾಸ್ಟರ್ ಪದ್ಮಶ್ರೀ ಸ್ವಾಗತಿಸಿದರು. ಗೈಡ್ಸ್ ಕ್ಯಾಪ್ಟನ್ ಜಯಲಕ್ಷ್ಮಿ ಕಾರ‍್ಯಕ್ರಮ ನಿರೂಪಿಸಿದರು. ಶಿಬಿರದಲ್ಲಿ ಸುಮಾರು 100 ಕ್ಕೂ ಹೆಚ್ಚು ಮಕ್ಕಳು ಪಾಲ್ಗೊಂಡಿದ್ದರು.

ಕುಪ್ಪೆಪದವು ಜೈನ್ ಮಿಲನ್-ಮಾಸಿಕ ಸಭೆ

Article Image

ಕುಪ್ಪೆಪದವು ಜೈನ್ ಮಿಲನ್-ಮಾಸಿಕ ಸಭೆ

ಭಾರತೀಯ ಜೈನ್ ಮಿಲನ್ ನ ಕುಪ್ಪೆಪದವು ಶಾಖೆ -ಅನಂತಪಾರ್ಶ್ವ ಜೈನ್ ಮಿಲನ್ ನ ಮಾಸಿಕ ಸಭೆಯು ಇರುವೈಲ್ ಬಳಿಯ ಕನ್ನೆಪದವು ಗ್ರಾಮದ ಬಾವದಬೈಲುವಿನ ಕಲ್ಪವೃಕ್ಷ ಮನೆಯಲ್ಲಿ ದಿನಾಂಕ 23/3/2025 ನೇ ರವಿವಾರ ನಡೆಯಿತು. ಮುಖ್ಯ ಅತಿಥಿಯಾದ ಪ್ರೊ.ಅಕ್ಷಯ ಕುಮಾರ್ ರವರು ಜೈನ್ ಧರ್ಮದ ಕರ್ಮ ಸಿದ್ಧಾಂತದ ಮೋಹನೀಯ ಕರ್ಮದ ಬಗ್ಗೆ ವಿವರಿಸುತ್ತಾ "ಸಾಮ್ರಾಟ ಅಲೆಕ್ಸಾಂಡರ್ ಕೂಡಾ ಭಾರತಕ್ಕೆ ದಂಡೆತ್ತಿ ಸಂದರ್ಭದಲ್ಲಿ ಜೈನ ಧರ್ಮದ ತತ್ವ ಸಿದ್ಧಾಂತದಲ್ಲಿ ಆಸಕ್ತಿಯನ್ನು ವ್ಯಕ್ತಪಡಿಸಿದ್ದ ಮತ್ತು ಜೈನ ವಿದ್ವಾಂಸರನ್ನು ಗ್ರೀಕ್ ದೇಶಕ್ಕೆ ಕರೆದುಕೊಂಡು ಹೋಗಲು ಬಯಸಿದ್ದ" ಎಂದು ಇತಿಹಾಸದ ಪುಟಗಳಿಂದ ತಿಳಿದು ಬರುತ್ತದೆ ಎಂದರು. ಸ್ಥಾಪಕಾಧ್ಯಕ್ಷರಾದ ಭೋಜರಾಜ್ ಜೈನ್ ರವರು ದೈವೀ ಶಕ್ತಿ ಬಗ್ಗೆ ಮಾತನಾಡುತ್ತಾ "ಪಂಚ ನಮಸ್ಕಾರ" ನಮೋಕಾರ ಮಂತ್ರದ ಮಹತ್ವದ ಬಗ್ಗೆ ವಿವರಿಸಿದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಸ್ವರ್ಣಲತಾ ಅಜಿತ್ ರವರು ಮುಂದಿನ ಮಿಲನ್ ಕಾರ್ಯಚಟುವಟಿಕೆಗಳ ವಿವರ ನೀಡಿದರು. ಪಂಚ ನಮಸ್ಕಾರ ಮಂತ್ರದೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ಅತಿಥೇಯರ ಪರವಾಗಿ ಚರಣ್ ಅತಿಥಿಗಳನ್ನು ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ವರದಿ ಮಂಡಿಸಿದರು. ನಂತರ ಪ್ರಸ್ತುತ ತಿಂಗಳಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡವರನ್ನು ಅಭಿನಂದಿಸಲಾಯಿತು. ವೇದಿಕೆಯಲ್ಲಿ ಹಿರಿಯ ಮಾರ್ಗದರ್ಶಕರಾದ ಪ್ರವೀಣ್ ಅಗರಿ, ಆತಿಥೇಯ ಭರತ್ ಕುಮಾರ್ ದಂಪತಿಗಳು, ಕೋಶಾಧಿಕಾರಿ ವನಿತಾ ಭೋಜರಾಜ್, ಉಪಸ್ಥಿತರಿದ್ದರು. ವಕೀಲ ಅತಿಶಯ ಜೈನ್ ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಮಳಲಿ ಉದಯ ಕುಮಾರ್ ರವರು ಶಾಂತಿಮಂತ್ರ ಪಠಿಸಿದರು.

ಕಾರ್ಕಳ ಜೈನ್ ಮಿಲನ್ ಮಾಸಿಕ ಸಭೆಯಲ್ಲಿ ರಾಜ್ಯ ಮಟ್ಟದ ಜಿನ ಭಜನಾ ಸ್ಪರ್ಧಾ ವಿಜೇತರಿಗೆ ಸನ್ಮಾನ

Article Image

ಕಾರ್ಕಳ ಜೈನ್ ಮಿಲನ್ ಮಾಸಿಕ ಸಭೆಯಲ್ಲಿ ರಾಜ್ಯ ಮಟ್ಟದ ಜಿನ ಭಜನಾ ಸ್ಪರ್ಧಾ ವಿಜೇತರಿಗೆ ಸನ್ಮಾನ

23/3/2025 ರಂದು ನಡೆದ ಕಾರ್ಕಳ ಜೈನ್ ಮಿಲನ್ ಮಾಸಿಕ ಸಭೆಯಲ್ಲಿ ರಾಜ್ಯ ಮಟ್ಟದ ಜಿನ ಭಜನಾ ಸ್ಪರ್ಧೆ ಯಲ್ಲಿ ಪ್ರಥಮ ಸ್ಥಾನ ಪಡೆದ ಅನಂತ ಶ್ರೀ ಜಿನಭಜನಾ ತಂಡವನ್ನು ಅತ್ಯಂತ ಹೃದಯ ಸ್ಪರ್ಶಿಯಾಗಿ ಸಮಸ್ತ ಜೈನ ಬಾಂಧವರ ಪರವಾಗಿ ಗೌರವಿಸಲಾಯಿತು. ವೇದಿಕೆಯಲ್ಲಿದ್ದ ಅತಿಥಿಗಳು ಅವರ ಶಿಸ್ತು, ಭಕ್ತಿ, ಸಿದ್ಧತೆಗಳನ್ನು ಕೊಂಡಾಡಿದರು. ನಿರ್ದೇಶಕರಾದ ಯುವರಾಜ್ ಬಲಿಪ, ನಿರಂಜನ್ ಜೈನ್ ಕುದ್ಯಾಡಿ, ಶ್ರೀ ಪಾರ್ಶ್ವನಾಥ ಜೈನ್, ಅಧ್ಯಕ್ಷರಾದ ಅಶೋಕ್ ಯಚ್.ಯಮ್., ಯುವರಾಜ್ ಆರಿಗ, ಮಿತ್ರಪ್ರಭಾ ಮೇಡಂ, ವಸಂತರಾಜ್ ಜೈನ್, ಕಾರ್ಯದರ್ಶಿ ವಿಖ್ಯಾತ ಜೈನ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ರಾಜಧಾನಿ ದೆಹಲಿಯಲ್ಲಿ ಸನ್ಮಾನ

Article Image

ರಾಜಧಾನಿ ದೆಹಲಿಯಲ್ಲಿ ಸನ್ಮಾನ

ಬೆಳಗಾವಿ: ಇತ್ತೀಚೆಗೆ ಗ್ರೀನ್ ಪಾರ್ಕ್ ದಿಲ್ಲಿಯಲ್ಲಿ ಆಚಾರ್ಯ ಶ್ರೀ ಸೌಭಾಗ್ಯ ಸಾಗರಜಿ ನೇತೃತ್ವದಲ್ಲಿ ಜರುಗಿದ ಜೈನ ಜೋತಿಷಾಚಾರ್ಯರ ಸಮ್ಮೇಳನದಲ್ಲಿ ಭಾರತದ ವಿವಿಧ ರಾಜ್ಯಗಳಿಂದ ಆಗಮಿಸಿದ್ದ ಐವತ್ತಕ್ಕೂ ಹೆಚ್ಚು ಜೋತಿಷಿಗಳು ಭಾಗವಹಿಸಿ, ತಮ್ಮ ಪ್ರಬಂಧಗಳನ್ನು ಮಂಡಿಸಿದರು.‌ ಕರ್ನಾಟಕದ-ಬೆಳಗಾವಿಯಿಂದ ಮುಹೂರ್ತ ಸಾಧನೆ ವಿಷಯದ ಪ್ರಬಂಧ ಮಂಡಿಸಿದ ಡಾ. ಪ್ರತಿಷ್ಠಾಚಾರ್ಯ ಶಾಂತಿನಾಥ ಪಾರ್ಶ್ವನಾಥ ಉಪಾಧ್ಯೆ ಇವರು ಎಲ್ಲರ ಗಮನಸೆಳೆದರು. ಕನ್ನಡದಲ್ಲಿ ಮಾಡಿದ ಮಂಗಲಾಚರಣೆಗೆ ಎಲ್ಲರೂ ದನಿಗೂಡಿಸಿದ್ದು ವಿಶೇಷ. ಶ್ವೇತಪಿಚ್ಛಾಚಾರ್ಯ ವಿದ್ಯಾನಂದಜಿ ತಪೋಭೂಮಿ ಕುಂದ ಕುಂದ ಭಾರತೀಯ ಸಭಾಗೃಹದಲ್ಲಿ ಪಟ್ಟಾಚಾರ್ಯ ಶ್ರೀ ಶೃತಸಾಗರಜಿ ಮಹಾರಾಜರ ಕುಶಲ ಮಾರ್ಗದರ್ಶನದಲ್ಲಿ ನಡೆದ ಸಮ್ಮಾನ ಕಾ‌ರ್ಯಕ್ರಮದಲ್ಲಿ ಪಂ. ಶಾಂತಿನಾಥ ಅವರನ್ನು ವಿಶೇಷ ಸಾಧನೆಗಾಗಿ ಶೃತಪುರೋಹಿತ ಬಿರುದಿನೊಂದಿಗೆ ಸನ್ಮಾನಿಸಲಾಯಿತು. ಸಂಸ್ಥೆಯ ಅಧ್ಯಕ್ಷರು ರವೀಂದ್ರ ಗುರೂಜಿ ಮತ್ತು ಪದಾಧಿಕಾರಿಗಳು ಮುತುವರ್ಜಿ ವಹಿಸಿ ಕಾರ್ಯಕ್ರಮ ಆಯೋಜಿಸಿದ್ದರು. ಬಳಿಕ ಎರಡೂ ದಿವಸ ದೆಹಲಿಯ ಪ್ರಮುಖ ಪರ್ಯಟಣ ಸ್ಥಳಗಳ ವಾಸ್ತು ವೀಕ್ಷಣೆಯ ವ್ಯವಸ್ಥೆಯನ್ನು ಮಾಡಲಾಗಿತ್ತು.

ಕಾರ್ಕಳ ಜೈನ್ ಮಿಲನ್ ಮಾಸಿಕ ಸಭೆ

Article Image

ಕಾರ್ಕಳ ಜೈನ್ ಮಿಲನ್ ಮಾಸಿಕ ಸಭೆ

ದಿನಾಂಕ 23/3/2025 ಆದಿತ್ಯವಾರದಂದು ನಡೆದ ಕಾರ್ಕಳ ಜೈನ್ ಮಿಲನ್ ಮಾಸಿಕ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ, ಅಂತಾರಾಷ್ಟ್ರೀಯ ಮಟ್ಟದ ಜಿನ ಧರ್ಮ ಪ್ರಚಾರಕರಾದ ನಿರಂಜನ ಜೈನ್, ಕುದ್ಯಾಡಿಯವರನ್ನು ಮತ್ತು ಮಹಾಕವಿ ರತ್ನಾಕರವರ್ಣಿ ಪ್ರಶಸ್ತಿ ಪುರಸ್ಕೃತರಾದ ನೇರೆಂಕಿ ಪಾರ್ಶ್ವನಾಥ್ ಜೈನ್ ರವರನ್ನು,ಅವರ ನಿಸ್ವಾರ್ಥ ಸೇವೆಗಾಗಿ ಕಾರ್ಕಳದ ಸಮಸ್ತ ಜೈನ ಬಾಂಧವರ ಪರವಾಗಿ ಅತ್ಯಂತ ಪ್ರೀತಿ, ಗೌರವಗಳಿಂದ ಸನ್ಮಾನ ಪತ್ರವನ್ನಿತ್ತು ಗೌರವಿಸಲಾಯಿತು.

ಕವನ ಸಂಕಲನ ಮಣಿ ಮುಕುಟ ಬಿಡುಗಡೆ

Article Image

ಕವನ ಸಂಕಲನ ಮಣಿ ಮುಕುಟ ಬಿಡುಗಡೆ

ದಿನಾಂಕ 23/3/2025 ಆದಿತ್ಯವಾರದಂದು ನಡೆದ ಜೈನ್ ಮಿಲನ್ ಕಾರ್ಕಳ, ಇದರ ಮಾಸಿಕ ಸಭೆಯಲ್ಲಿ ಮಾಲತಿ ವಸಂತರಾಜ್‌ರವರ ಕವನ ಸಂಕಲನ ಮಣಿ ಮುಕುಟವನ್ನು ಎಸ್.ವಿ.ಟಿ.ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲೆಯಾದ ಮಿತ್ರಪ್ರಭಾ ಹೆಗ್ಡೆಯವರು ಲೋಕಾರ್ಪಣೆ ಮಾಡಿದರು.ಜೈನ್ ಮಿಲನಿನ ನಿರ್ದೇಶಕರು, ಅಧ್ಯಕ್ಷರು,ಕಾರ್ಯದರ್ಶಿಯವರು, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ನಿರಂಜನ ಜೈನ್, ಕುದ್ಯಾಡಿ, ನೇರೆಂಕಿ ಪಾರ್ಶ್ವನಾಥ ಜೈನ್, ವಸಂತರಾಜ್ ಜೈನ್ ರವರು ಉಪಸ್ಥಿತರಿದ್ದರು. ಶ್ರೀವರ್ಮ ಜೈನ್, ಯುವರಾಜ್ ಆರಿಗರವರು ಉಪಸ್ಥಿತರಿದ್ದರು.

ಬಂಟ್ವಾಳ: 33ನೇ ವರ್ಧಂತ್ಯುತ್ಸವ

Article Image

ಬಂಟ್ವಾಳ: 33ನೇ ವರ್ಧಂತ್ಯುತ್ಸವ

ಬಂಟ್ವಾಳ ತಾಲೂಕಿನ ಅತಿಶಯ ಶ್ರೀ ಕ್ಷೇತ್ರ ಅಜ್ಜಿಬೆಟ್ಟು ಬಸದಿ ಭಗವಾನ್ ಶ್ರೀ ಆದಿನಾಥ ತೀರ್ಥಂಕರರ ಜಿಂಬ ಪ್ರತಿಷ್ಠಾ ಮಹೋತ್ಸವದ 33ನೇ ವರ್ಧಂತ್ಯುತ್ಸವವು ಕಾರ್ಕಳ ಶ್ರೀ ಜೈನ ಮಠದ ಸ್ವಸ್ತಿ ಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ಪಾವನ ಸಾನಿಧ್ಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ 02-04-2025ನೇ ಬುಧವಾರ ಜರಗಲಿರುವುದು.

ಮಹಾವೀರ ತೀರ್ಥಂಕರರ ಬಗ್ಗೆ ಭಾಷಣ ಸ್ಪರ್ಧೆ

Article Image

ಮಹಾವೀರ ತೀರ್ಥಂಕರರ ಬಗ್ಗೆ ಭಾಷಣ ಸ್ಪರ್ಧೆ

ರಾಜ್ಯ ಜೈನ ಜಾಗೃತಿ ಸಂಘ (ರಿ) ಕರ್ನಾಟಕ ಬೆಳಗಾವಿ ಇದರ ವತಿಯಿಂದ ಶ್ರೀ ಭಗವಾನ್ ಮಹಾವೀರ ತೀರ್ಥಂಕರರ 2624ನೇಯ ಜನ್ಮ ಕಲ್ಯಾಣದ ಮಹೋತ್ಸವದ ಅಂಗವಾಗಿ 5 ರಿಂದ 16 ವರ್ಷದೊಳಗಿನ ಮಕ್ಕಳಿಗೆ ಮಹಾವೀರ ತೀರ್ಥಂಕರರ ಬಗ್ಗೆ ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ವಿಷಯ: ಭಗವಾನ್ ಮಹಾವೀರ ತೀರ್ಥಂಕರರ ಜೀವನ ಹಾಗೂ ಧರ್ಮೋಪದೇಶಗಳ ಕುರಿತು. 1) 5 ರಿಂದ 16 ವರ್ಷದೊಳಗಿನ ಮಕ್ಕಳು ಭಾಗವಹಿಸಬಹುದು (ಜೈನ ಧರ್ಮಿಯರು ಮಾತ್ರ) (ಜನನ ಪ್ರಮಾಣ ಪತ್ರ ಕಳುಹಿಸಬೇಕು) 2) ಸದರಿ ಭಾಷಣದ 5 ನಿಮಿಷಗಳ ವಿಡಿಯೋ ಮಾಡಿ ಈ ಕೆಳಗೆ ತಿಳಿಸಿದ ಮೊ: 9916176515 ಹಾಗೂ ಮೊ: 9448644206 ನಂಬರಗಳಿಗೆ ಕಳಿಸಿಕೊಡಬೇಕು 3) ಭಾಷಣದ ವಿಡಿಯೋಗಳನ್ನು ದಿನಾಂಕ 6-04-2025ರೊಳಗಾಗಿ ಕಳಿಸಿಕೊಡಬೇಕು 4) ಸದರಿ ವಿಡಿಯೋಗಳನ್ನು ತಜ್ಞ ವಿದ್ವಾಂಸರು ಹಾಗೂ ಸ್ವಾಮೀಜಿಗಳವರೊಂದಿಗೆ ಪರಿಶೀಲಿಸಿ ನೋಡಿ, ಅದರಲ್ಲಿ ಅತೀ ಉತ್ತಮ ವಿಡಿಯೋ ಮಾಡಿದ ಮಕ್ಕಳ ಭಾಷಣದ ವಿಡಿಯೋಗಳಲ್ಲಿ ಪ್ರಥಮ, ದ್ವಿತೀಯ, ತೃತೀಯ ಎಂದು ಆಯ್ಕೆ ಮಾಡಲಾಗುವುದು. 5) ಸದರಿ ಭಾಷಣದ ಫಲಿತಾಂಶವನ್ನು ದಿನಾಂಕ 10-04-2025 ರಂದು ಪ್ರಕಟಿಸಲಾಗುವುದು 6) ವಿಜೇತರಿಗೆ : ಪ್ರಥಮ ಬಹುಮಾನ ರೂ 1008, ದ್ವಿತೀಯ ಬಹುಮಾನ ರೂ 751, ತೃತೀಯ ಬಹುಮಾನ ರೂ 501ಗಳನ್ನು ನಗದು ರೂಪದಲ್ಲಿ ಕೊಡಲಾಗುವುದು. ವಿಜೇತ ಮಕ್ಕಳು ಅವರ ಬ್ಯಾಂಕಿನ ಅಥವಾ ಅವರ ಪಾಲಕರ ಬ್ಯಾಂಕಿನ ಖಾತೆ ಸಂಖ್ಯೆ ಹಾಗೂ ಐ ಎಫ್ ಎಸ್ ಸಿ ಕೋಡ್ ಹಾಗೂ ಬ್ಯಾಂಕಿನ ಹೆಸರನ್ನು ಮೇಲ್ದಂಡ ಮೊಬೈಲ್ ವಾಟ್ಸಾಪ್‌ಗೆ ಕಳಿಸಬೇಕು. 7) ಭಾಗವಹಿಸಿದ ಮಕ್ಕಳೆಲ್ಲರಿಗೂ ರಾಜ್ಯ ಜೈನ ಜಾಗೃತಿ ಸಂಘ (ರಿ) ವತಿಯಿಂದ ಪ್ರಶಸ್ತಿ ಪತ್ರಗಳನ್ನು ಕೊಡಲಾಗುವುದು.

ಮಂಚೇನಹಳ್ಳಿ: ಧಾರ್ಮಿಕ ಶಿಬಿರ

Article Image

ಮಂಚೇನಹಳ್ಳಿ: ಧಾರ್ಮಿಕ ಶಿಬಿರ

ಮಂಚೇನಹಳ್ಳಿ:‌ ಶ್ರೀ ಭಗವಾನ್ ಬಾಹುಬಲಿ ಟ್ರಸ್ಟ್, ಶ್ರೀ ಕೋಡಿಬ್ರಹ್ಮದೇವರ ಧರ್ಮಸಂಸ್ಥೆಯ ವತಿಯಿಂದ ಇದೇ ಏಪ್ರಿಲ್ 15ರಿಂದ 19ರವರೆಗೆ ಮಕ್ಕಳಿಗೆ ಮತ್ತು ಯುವಕರಿಗೆ ಧಾರ್ಮಿಕ ಶಿಬಿರವನ್ನು ಏರ್ಪಡಿಸಲಾಗಿದೆ. ಐದೂ ದಿನಗಳು ಊಟ ಮತ್ತು ವಸತಿಯ ವ್ಯವಸ್ಥೆ ಮಾಡಲಾಗಿದೆ. ಭಾಗವಹಿಸಲು ಇಚ್ಛಿಸುವವರು ಕೆಳಗಿನ ದೂರವಾಣಿ ಸಂಖ್ಯೆಯಲ್ಲಿ ಹೆಸರನ್ನು ನೀಡಿ ನೊಂದಾಯಿಸಿಕೊಳ್ಳತಕ್ಕದ್ದು. ಉಳಿದುಕೊಳ್ಳುವ ವ್ಯವಸ್ಥೆ ಸೀಮಿತವಾಗಿರುವುದರಿಂದ ಮೊದಲು ಕರೆ ಮಾಡಿದವರಿಗೆ ಆದ್ಯತೆ ನೀಡಲಾಗುವುದು. ದೂರವಾಣಿ ಸಂಖ್ಯೆ : ತ್ರಿಶಲಾ ಬ್ರಹ್ಮಯ್ಯ-94484 57738, ವಿ.ಜೆ. ಬ್ರಹ್ಮಯ್ಯ-94480 74801, ಕೆ.ಬಿ. ಅಶೋಕ್ ಕುಮಾರ್-95136 29196, ಪಿ.ಸಿ. ರಾಜೇಶ್-98454 84399, ವಿ.ಎಸ್. ಬ್ರಹ್ಮಪ್ರಕಾಶ್-98450 31482, ಎಂ.ಎಸ್‌. ದೇವರಾಜ್-92422 78089

ಪೆನಕೊಂಡ ಶ್ರೀ ಪಚ್ಚೆ ಪ್ರತಿಷ್ಠಾನದ ವತಿಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ

Article Image

ಪೆನಕೊಂಡ ಶ್ರೀ ಪಚ್ಚೆ ಪ್ರತಿಷ್ಠಾನದ ವತಿಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ

ಪೆನಕೊಂಡ ಶ್ರೀ ಪಚ್ಚೆ ಪ್ರತಿಷ್ಠಾನದ ವತಿಯಿಂದ ಪ್ರತಿವರ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರವನ್ನು ಮಾಡಿಕೊಂಡು ಬರುತ್ತಿದೆ. ಕಳೆದ 10 ವರ್ಷಗಳಿಂದ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. 11ನೆಯ ವರ್ಷದಲ್ಲಿ ಕೀರ್ತಿಶೇಷ‌ ಆರ್.‌ ಜೆ. ಅನಂತರಾಜಯ್ಯ ಸಂಸ್ಕರಣೆ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವನ್ನು ದಿನಾಂಕ 09-03-2025 ನೇ ಬುಧವಾರ ಮಧ್ಯಾಹ್ನ ತುಮಕೂರಿನ "ಸ್ನೇಹ ಸಂಗಮ ಕನ್ವೆನ್‌ಷನ್ ಹಾಲ್", ಶಿರಾ ರಸ್ತೆ, ತುಮಕೂರು ಇಲ್ಲಿ ಏರ್ಪಡಿಸಿ ವಿತರಣೆ ಮಾಡಲಾಯಿತು. ವೇದಿಕೆಯ ಗಣ್ಯರೆಲ್ಲಾ ಕಾರ್ಯಕ್ರಮವನ್ನು ಜ್ಯೋತಿ ಬೆಳಗುವುದರ ಮುಖಾಂತರ ಹಾಗೂ ಪಚ್ಚೆ ಪಾರ್ಶ್ವನಾಥ ಸ್ವಾಮಿ ಮತ್ತು ಆರ್.ಜೆ. ಅನಂತರಾಜಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮುಖಾಂತರ ಉದ್ಘಾಟನೆ ಮಾಡಿದರು. ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ ಪೆನುಗೊಂಡ ಪಚ್ಚೆ ಪಾರ್ಶ್ವನಾಥಸ್ವಾಮಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷರಾದ ಆರ್.ಪಿ. ಚಂದ್ರಕೀರ್ತಿರವರು ಮಾತನಾಡುತ್ತಾ ವಿದ್ಯಾರ್ಥಿ ವೇತನ ಪಡೆದ ವಿದ್ಯಾರ್ಥಿಗಳು ಈ ಟ್ರಸ್ಟ್‌ನ ಕೆಲಸವನ್ನು ಗಮನಿಸಿರುವುದರಿಂದ ನೀವು ಗಳಿಸುವಂತಾದಾಗ ಅದರಲ್ಲಿ ಒಮ್ಮೆಯಾದರೂ ಈ ಟ್ರಸ್ಟ್‌ಗೆ ಸಹಾಯ ಮಾಡಿದಲ್ಲಿ ಇನ್ನು ಹೆಚ್ಚು ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಅನುಕೂಲವಾಗುತ್ತದೆ ಎಂದು ತಿಳಿಸಿದರು. ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ವಿದ್ವಾಂಸರು ವಿದ್ಯೋದಯ ಸಂಸ್ಥೆಯ ಕಾರ್ಯನಿರ್ವಾಹಕ ಅಧಿಕಾರಿಗಳು ಆದ ಪ್ರೊ. ಕೆ. ಚಂದ್ರಣ್ಣನವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತಾನಾಡುತ್ತಾ ಅನಂತರಾಜಯ್ಯನವರು ವ್ಯಾಪಾರ ಧರ್ಮ, ಸಹಾಯ ಧರ್ಮ ಇವರೆಡನ್ನು ಮೈಗೂಡಿಸಿಕೊಂಡು ಇಷ್ಟು ದೊಡ್ಡ ಪ್ರತಿಷ್ಠಾನವನ್ನು ಕಟ್ಟಿ ಬೆಳೆಸಿದರು. ಅವರು ಮಾಡಿದ ಸಂಪಾದನೆಯಲ್ಲಿ ಕಿಂಚಿತ್ ಹಣ ಉಳಿಸಿ ಇವತ್ತು ನಿಮಗೆಲ್ಲಾ ವಿದ್ಯಾರ್ಥಿ ವೇತನವನ್ನು ನೀಡಲು ಕಾರಣ ಕರ್ತರಾಗಿದ್ದಾರೆ. ಅವರ ವೈಯಕ್ತಿಕ ಜೀವನವನ್ನು ಮಾದರಿ ಜೀವನವಾಗಿತ್ತು. ಅವರನ್ನು ಬಲ್ಲ ಎಲ್ಲರೂ ಅವರ ಗುಣಗಳಿಗೆ ತಲೆಬಾಗುತ್ತಿದ್ದರು. ಅಂತಹವರು ಇಂದು ನಮ್ಮ ಮುಂದೆ ದೈಹಿಕವಾಗಿ ಇಲ್ಲ ಮಾನಸಿಕವಾಗಿ ಉಳಿದಿದ್ದಾರೆ. ಅವರ ಆಸೆ ಕೈಗೂಡಬೇಕಾದರೆ ಈ ವಿದ್ಯಾರ್ಥಿ ವೇತನ ಪಡೆದ ವಿದ್ಯಾರ್ಥಿಗಳು ಶ್ರಮವಹಿಸಿ ಅಧ್ಯಯನ ಮಾಡಿ ಒಳ್ಳೆಯ ಪದವಿ ಪಡೆದು ಒಳ್ಳೆಯ ಕೆಲಸವನ್ನು ಪಡೆಯಬೇಕೆಂದು ಈ ಮೂಲಕ ಅವರ ಆತ್ಮಕ್ಕೆ ಶಾಂತಿ ನೀಡಿದಂತಾಗುತ್ತದೆ ಹಾಗೂ ನಿಮ್ಮ ತಂದೆ ತಾಯಿಗಳಿಗೂ ಗೌರವ ಸಿಗುತ್ತದೆ. ಈ ಕೆಲಸವನ್ನು ನೀವು ಮಾಡಬೇಕು ಎಂದು ಕಿವಿಮಾತು ಹೇಳಿದರು. ಆರ್.ಜೆ. ಅನಂತರಾಜಯ್ಯನವರ ಈ ಟ್ರಸ್ಟ್‌ನ ಸದಸ್ಯರುಗಳೆಲ್ಲಾ ಒಬ್ಬೊಬ್ಬರು ಒಂದು ಶಕ್ತಿಯಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಮಕ್ಕಳಾದ ನಾಗರಾಜು ಮತ್ತು ಪಾರ್ಶ್ವನಾಥ್ ಇವರುಗಳು ಕೂಡ ಆರ್.ಎ. ಸುರೇಶ್ ಕುಮಾರ್‌ರವರ ಜೊತೆ ಸೇರಿ ಟ್ರಸ್ಟ್‌ನ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿಕೊಂಡು ಬರುತ್ತಿದ್ದಾರೆ ಅದಕ್ಕೆ ಅವರ ತಾಯಿಯವರಾದ ಸಾದ್ವಿ ಸರೋಜಮ್ಮನವರ ಪೂರ್ಣ ಬೆಂಬಲ ಆಶೀರ್ವಾದವಿದೆ ಎಂದು, ಈ 11 ನೇ ವರ್ಷದಲ್ಲಿ 19 ವಿದ್ಯಾರ್ಥಿನಿಯರು 14 ಹುಡುಗರು ಒಟ್ಟು 33 ವಿದ್ಯಾರ್ಥಿಗಳಿಗೆ ರೂ. 7,20,000-00 ರೂಪಾಯಿಗಳನ್ನು ವಿತರಣೆ ಮಾಡಲಾಯಿತು. ಎ. ಎನ್. ರಾಜೇಂದ್ರಪ್ರಸಾದ್‌ರವರು ಕೀರ್ತಿಶೇಷ ಆರ್.ಜೆ. ಅನಂತರಾಜಯ್ಯನವರ ಸಮಗ್ರ ಜೀವನ ಚರಿತ್ರೆಯನ್ನು ಸಭೆಗೆ ವಿವರವಾಗಿ ಪರಿಚಯ ಮಾಡಿಕೊಟ್ಟರು. ಪ್ರೊ.ಪಿ.ಪಾರ್ಶ್ವನಾಥ್ ಸಪ್ತಗಿರಿ ಇಂಜಿನಿಯರಿಂಗ್ ಕಾಲೇಜಿನ ಗಣಿತ ಶಾಸ್ತ್ರದ ವಿಭಾಗದ ಮುಖ್ಯಸ್ಥರು ಇವರು ಸಭೆಯಲ್ಲಿ ಆಗಮಿಸಿದ ಮಕ್ಕಳಿಗೆ ಹಿತ ನುಡಿಯನ್ನು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಖ್ಯಾತ ನೇತ್ರ ತಜ್ಞರಾದ ಡಾ. ಕೆ. ಆರ್. ರಂಗನಾಥ್ ರವರು ಮಕ್ಕಳಿಗೆ ಶ್ರೇಯಸ್ಸು ಬರಲೆಂದು ಹಾಗೂ ಆರ್.ಜೆ. ಅನಂತರಾಜಯ್ಯನವರ ಕುಟುಂಬದವರು ಈ ಕಾರ್ಯಕ್ರಮವನ್ನು ಅನುಚಾನವಾಗಿ ನಡೆಸಿಕೊಂಡು ಬರುತ್ತಿರುವುದು ನಿಮಗೆಲ್ಲಾ ಒಂದು ಬೆಂಬಲವಾಗಿದೆ ಎಂದು ಆಶೀರ್ವಚನ ನೀಡಿದರು. ಜೈನ ಸಮಾಜದ ಹಿರಿಯರಾದ ಶ್ರೇಯಾಂಶ ಕುಮಾರ್‌ರವರು ಮಕ್ಕಳಿಗೆ ಹಿತ ವಚನ ನುಡಿದರು. ಪ್ರೇರಣಾ ಜೈನ್ ರವರು ಪ್ರಾರ್ಥಿಸಿ, ಪೆನಕೊಂಡ ಶ್ರೀ ಪಚ್ಚೆ ಪ್ರತಿಷ್ಠಾನದ ಅಧ್ಯಕ್ಷರಾದ ಆರ್.ಎ. ಸುರೇಶ್‌ ಕುಮಾರ್ ರವರು ಸ್ವಾಗತಿಸಿದರು. ಹಾಗೂ ಇದೇ ಸಂದರ್ಭದಲ್ಲಿ ಪಚ್ಚೆ ಪ್ರತಿಷ್ಠಾನದ ಉದ್ದೇಶ ಮತ್ತು ನಿಯಮಗಳಂತೆ ನಾವು ಪ್ರತಿವರ್ಷ ಈ ವಿದ್ಯಾರ್ಥಿ ವೇತನವನ್ನು ಪುರಸ್ಕರಿಸಿ ಕೊಡುತ್ತಲಿದ್ದೇವೆ. ಇದಕ್ಕೆ ಸಾಕ್ಷಿಭೂತರಾಗಿ ಆಗಮಿಸಿರುವ ಎಲ್ಲರಿಗೂ ಸ್ವಾಗತ ಬಯಸಿದರು. ಅಲ್ಲದೇ ಎಲ್ಲರೂ ನಮ್ಮ ತಂದೆಯವರ ಉದ್ದೇಶವನ್ನು ಈಡೇರಿಸಲು ಸಹಕರಿಸಬೇಕೆಂದು ಸಭೆಯಲ್ಲಿ ವಿನಂತಿಸಿಕೊಂಡರು. ಕಾರ್ಯಕ್ರಮದಲ್ಲಿ ಆರ್.‌ ಎಸ್. ಜ್ವಾಲನಪ್ಪನವರು ವಂದನಾರ್ಪಣೆ ಸಲ್ಲಿಸಿದರು. ಟ್ರಸ್ಟಿಗಳಾದ ಆರ್. ಎ. ಪಾರ್ಶ್ವನಾಥ, ಆರ್. ಎ. ನಾಗಾರಾಜುರವರು ಕಾರ್ಯಕ್ರಮ ನಿರ್ವಹಣೆಯನ್ನು ಮಾಡಿಕೊಟ್ಟರು. ಆರ್.ಎನ್. ಮಹಾವೀರ್ ಮತ್ತು ಆರ್.ಪಿ. ಮೋನಿಕಾರವರು ವೇದಿಕೆಯ ಮೇಲೆ ಉಪಸ್ಥಿತರಿದ್ದರು.

ದೈಹಿಕ ಶಿಕ್ಷಣ ಶಿಕ್ಷಕಿ ಪದ್ಮಶ್ರೀ ಜೈನ್ ಅವರು ರಾಜ್ಯಮಟ್ಟಕ್ಕೆ ಆಯ್ಕೆ

Article Image

ದೈಹಿಕ ಶಿಕ್ಷಣ ಶಿಕ್ಷಕಿ ಪದ್ಮಶ್ರೀ ಜೈನ್ ಅವರು ರಾಜ್ಯಮಟ್ಟಕ್ಕೆ ಆಯ್ಕೆ

ಮಂಗಳೂರಿನ ಮಂಗಳ ಸ್ಟೇಡಿಯಮ್ ನಲ್ಲಿ ನಡೆದ ದ.ಕ.ಜಿಲ್ಲಾ ಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಥ್ರೋಬಾಲ್ ಪಂದ್ಯಾಟದಲ್ಲಿ ಭಾಗವಹಿಸಿರುವ ಕಾಶಿಪಟ್ಣ ಹಿರಿಯ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪದ್ಮಶ್ರೀ ಜೈನ್ ಅವರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದ.ಕ.ಜಿಲ್ಲೆಯ ವಿವಿಧ ತಾಲೂಕುಗಳಿಂದ ಒಟ್ಟು 12 ಮಂದಿ ಶಿಕ್ಷಕಿಯರು ಆಯ್ಕೆಯಾಗಿದ್ದು ಬೆಳ್ತಂಗಡಿ ತಾಲೂಕಿನಿಂದ ಪದ್ಮಶ್ರೀ ಜೈನ್ ಆಯ್ಕೆಯಾಗಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ರಾಜ್ಯಮಟ್ಟದ ಥ್ರೋಬಾಲ್ ಪಂದ್ಯದಲ್ಲಿ ದ.ಕ.ಜಿಲ್ಲಾ ಮಹಿಳಾ ಥ್ರೋಬಾಲ್ ತಂಡವು ಪದ್ಮಶ್ರೀ ಅವರ ನೇತೃತ್ವದಲ್ಲಿ ಭಾಗವಹಿಸಲಿದೆ.

ನರಸಿಂಹರಾಜಪುರ: ಕೇವಲ ಜ್ಞಾನಕಲ್ಯಾಣ ಮಹೋತ್ಸವ

Article Image

ನರಸಿಂಹರಾಜಪುರ: ಕೇವಲ ಜ್ಞಾನಕಲ್ಯಾಣ ಮಹೋತ್ಸವ

ಶ್ರೀ ಜ್ವಾಲಾಮಾಲಿನಿ ಅತಿಶಯ ಕ್ಷೇತ್ರ ಸಿಂಹನಗದ್ದೆ ಬಸ್ತಿಮಠದಲ್ಲಿ ಭಗವಾನ್ ಶ್ರೀ ೧೦೦೮ ಚಂದ್ರಪ್ರಭ ಸ್ವಾಮಿ ಸ್ವಾಮಿಯವರ ಕೇವಲ ಜ್ಞಾನಕಲ್ಯಾಣ ಮಹೋತ್ಸವವು ಪ. ಪೂ. ಸ್ವಸ್ತಿಶ್ರೀ ಲಕ್ಷ್ಮೀಸೇನಾ ಭಟ್ಟಾರಕ ಪಟ್ಟಾ ಚಾರ್ಯವರ್ಯ ಮಹಾಸ್ವಾಮೀಜಿಗಳವರ ನೇತೃತ್ವ, ಮಾರ್ಗದರ್ಶನ ಹಾಗೂ ಪಾವನ ಸಾನ್ನಿಧ್ಯದಲ್ಲಿ ಇಂದು ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಬೆಂಗಳೂರು: ಕರ್ನಾಟಕ ಜೈನ ಅಸೋಸಿಯೇಷನ್ ವತಿಯಿಂದ ನಡೆದ ಸಮಸ್ತ ಕರ್ನಾಟಕ ಜೈನ ಸಮುದಾಯ ಸಭೆ

Article Image

ಬೆಂಗಳೂರು: ಕರ್ನಾಟಕ ಜೈನ ಅಸೋಸಿಯೇಷನ್ ವತಿಯಿಂದ ನಡೆದ ಸಮಸ್ತ ಕರ್ನಾಟಕ ಜೈನ ಸಮುದಾಯ ಸಭೆ

ರಾಜ್ಯದಲ್ಲಿ ಜೈನ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸರ್ಕಾರ ಬದ್ಧವಾಗಿದ್ದು ಶೀಘ್ರದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು. ಅವರಿಂದು ಇಲ್ಲಿನ ಕರ್ನಾಟಕ ಜೈನ ಅಸೋಸಿಯೇಷನ್ ವತಿಯಿಂದ ನಡೆದ ಸಮಸ್ತ ಕರ್ನಾಟಕ ಜೈನ ಸಮುದಾಯ ಸಭೆಯಲ್ಲಿ ಸಮುದಾಯದ ಪರವಾಗಿ ಮನವಿ ಪತ್ರ ಸ್ವೀಕರಿಸಿ ಮಾತನಾಡಿದರು. ರಾಜ್ಯದ 44 ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳಲ್ಲಿ ಪ್ರತಿ ಜಿಲ್ಲೆಯಲ್ಲಿ ಒಂದು ಅಥವಾ ಜೈನ ಜನಸಂಖ್ಯೆಗೆ ಅನುಗುಣವಾಗಿ ಜೈನರಿಗೆ ಪ್ರತ್ಯೇಕ ವಿದ್ಯಾರ್ಥಿ ನಿಲಯ ಮೀಸಲಿಡಬೇಕು, ಇಲ್ಲಿಯವರೆಗೆ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಸ್ಥಾನ ಜೈನ ಸಮಾಜಕ್ಕೆ ಸಿಕ್ಕಿಲ್ಲ ನಿಗಮದಲ್ಲಿ ಜೈನ ನಿರ್ದೇಶಕರು ಆಗಿಲ್ಲ ಸರ್ಕಾರ ಜೈನ ಶಿಕ್ಷಣ ಸಂಸ್ಥೆಗಳಲ್ಲಿ ಮೊಟ್ಟೆ ಕೊಡುವ ನಿರ್ಧಾರ ಸರ್ಕಾರ ಹಿಂತೆಗೆದ್ದುಕೊಳ್ಳಬೇಕೆಂದು ಪತ್ರದಲ್ಲಿ ತಿಳಿಸಲಾಗಿದೆ ಎಂದರು. ಮಾಜಿ ಮುಖ್ಯಮಂತ್ರಿ ಹಾಗೂ ಅಥಣಿ ಕ್ಷೇತ್ರದ ಶಾಸಕ ಲಕ್ಷ್ಮಣ್ ಸವದಿ ಮಾತನಾಡಿ ವರೂರು ಶ್ರೀ ಕ್ಷೇತ್ರದ ಗುಣದರ ನoದಿ ಮಹಾರಾಜರು ಸರ್ಕಾರ ಮೂರು ಬೇಡಿಕೆಗಳ ಈಡೇರಿಕೆಗೆ ತಿಳಿಸಿದ್ದು , ಈ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಪ್ರತ್ಯೇಕ ಹಾಸ್ಟೆಲ್‌ಗಳನ್ನು ನಿರ್ಮಿಸಲು ತಿಳಿಸಿದ್ದು, ಈ ಕಾರ್ಯಕ್ಕೆ ಸಚಿವರು ಉತ್ಸುಕರಾಗಿದ್ದಾರೆ ಎಂದರು. ಬೇರೆ ಸರ್ಕಾರಗಳಿಂದ ಉತ್ತರ ಸಿಗುತ್ತಿತ್ತು ಆದರೆ ಕಾರ್ಯಗತವಾಗುತ್ತಿರಲಿಲ್ಲ ಆದರೆ ಸಚಿವರಾದ ಜಮೀರ್ ಅಹಮದ್ ರವರಿಂದ ಇಂದು ಕಾರ್ಯಾಗತವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು. ಕೂಅಧಿವೇಶನಕ್ಕೆ ಮುನ್ನ ಒಂದು ಪ್ರಾಯೋಗಿಕ ಶಾಲೆ ಜೈನರಿಗಾಗಿ ನಿರ್ಮಿಸಲು ತಿಳಿಸಲಾಗಿತ್ತು ಆದರೆ ಪ್ರಾಯೋಗಿಕವಾಗಿ ಎರಡು ಶಾಲೆಗಳನ್ನು ಸರ್ಕಾರ ಮಂಜೂರು ಮಾಡಿದೆ ಎಂದರು. ಕರ್ನಾಟಕ ಜೈನ್ ಅಸೋಸಿಯೇಷನ್ ಅಧ್ಯಕ್ಷ ಎಸ್. ಜಿತೇಂದ್ರ ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕ್ಷೇತ್ರ ಕಂಬದಹಳ್ಳಿ ಜೈನಮಠದ ಸ್ವಸ್ತಿಶ್ರೀ ಬಾನುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳವರು ಪಾವನ ಸಾನ್ನಿಧ್ಯ ಆಶೀರ್ವಚನ ನೀಡಿದರು. ಪುರೋಹಿತ ರತ್ನ ದಿವ್ಯ ಪಂಡಿತ್ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಯೋಜನಾ ಹಾಗೂ ಸಂಖ್ಯೆಕ ಸಚಿವರಾದ ಡಿ. ಸುಧಾಕರ್, ಮಾಜಿ ಸಚಿವ ವೀರ್ ಕುಮಾರ್ ಪಾಟೀಲ್, ಕರ್ನಾಟಕ ಜೈನ್ ಅಸೋಸಿಯೇಷನ್ ಪದಾಧಿಕಾರಿಗಳಾದ ರಾಜಕೀರ್ತಿ ಕಲಾ ಗೌಡ, ಶೀತಲ್ ಗೌಡ ಪಾಟೀಲ್, ಆಶಾ ಪ್ರಭು, ಡಾ ನೀರಜಾ ನಾಗೇಂದ್ರ ಕುಮಾರ್, ಧರಣಿಂದ್ರ ಕುಮಾರ್ ಪ್ರಶಾಂತ್, ಎಂ. ಎಂ. ಜಿನೇಂದ್ರ, ಶೀತಲ ಕುಮಾರ್, ಮಾಳ ಹರ್ಷೇಂದ್ರ ಜೈನ್, ವಿ ಜೇ. ಬ್ರಹ್ಮಯ್ಯ, ಪದ್ಮಶ್ರೀ, ಪದ್ಮಿನಿ, ಅಜಿತ್ ಕುಮಾರ್, ಮಹಾವೀರ್, ಸ್ವರೂಪ್, ಜಿನೇಂದ್ರ, ಅನಿಲ್ ಕುಮಾರ್, ಕೋಮಲ ಬ್ರಹ್ಮದೇವಯ್ಯ, ಪ್ರಕಾಶ್ ಜೆ. ಪಿ. ರಾಜೇಶ್, ಅಶೋಕ್ ಕುಮಾರ್ ಸೇರಿದoತೆ ಕರ್ನಾಟಕದ ವಿವಿಧ ಭಾಗಗಳಿಂದ ಕಾರ್ಯಕಾರಿ ಸಮಿತಿಯ ಸದಸ್ಯರುಗಳು ಭಾಗವಹಿಸಿದ್ದರು. ಕರ್ನಾಟಕ ಜೈನ್ ಅಸೋಸಿಯೇಷನ್ ಸಹಕಾರ್ಯದರ್ಶಿ, ರತ್ನತ್ರಯ ಕ್ರಿಯೇಷನ್ ಡಾ. ನೀರಜಾ ನಾಗೇಂದ್ರ ಕುಮಾರ್ ಕಾರ್ಯಕ್ರಮ ನಿರೂಪಿಸಿದರು .

ಪಂಚಾಮೃತ ಅಭಿಷೇಕ ಹಾಗೂ ಮಸ್ತಕಾಭಿಷೇಕ ಮತ್ತು ಮಹಾ ಶಾಂತಿಮಂತ್ರ ಪಠಣ

Article Image

ಪಂಚಾಮೃತ ಅಭಿಷೇಕ ಹಾಗೂ ಮಸ್ತಕಾಭಿಷೇಕ ಮತ್ತು ಮಹಾ ಶಾಂತಿಮಂತ್ರ ಪಠಣ

ಹುಕ್ಕೇರಿ ತಾಲೂಕಿನ ಶಿಂಧಿಹಟ್ಟಿಯಲ್ಲಿರುವ ಶ್ರೀ ಮದ್ದೇವಾಧಿದೇವ ಭ| ಶ್ರೀ ೧೦೦೮ ಮುನಿಸುವೃತನಾಥ ತೀರ್ಥಂಕರ ಜಿನಮಂದಿರದಲ್ಲಿ ಪಂಚಾಮೃತ ಅಭಿಷೇಕ ಹಾಗೂ ಮಸ್ತಕಾಭಿಷೇಕ ಮತ್ತು ಮಹಾ ಶಾಂತಿಮಂತ್ರ ಪಠಣ, ಶ್ರೀ ಜ್ವಾಲಮಾಲಿನಿ ದೇವಿ ಹಾಗೂ ಶ್ರೀ ಪದ್ಮಾವತಿ ದೇವಿಯವರ ಪೂಜಾ, ಶೃಂಗಾರ, ಉಡಿತುಂಬುವ ಕಾರ್ಯಕ್ರಮವು ಪ. ಪೂ. ಆಚಾರ್ಯ ಶ್ರೀ ೧೦೮ ಜಿನಸೇನ ಮಹಾರಾಜರು ಹಾಗೂ ಪ. ಪೂ. ೧೦೮ ಸಂಯಮ ಸಾಗರ ಮುನಿಮಹಾರಾಜರುಗಳ ಮಂಗಳ ಆಶೀರ್ವಾದಗಳೊಂದಿಗೆ ಮತ್ತು ನಾಂದಣಿ ಶ್ರೀ ಜೈನ ಮಠದ ಪ. ಪೂ. ಸ್ವಸ್ತಿಶ್ರೀ ಜಿನಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರು, ಕೊಲ್ಹಾಪುರ ಶ್ರೀ ಜೈನ ಮಠದ ಪ. ಪೂ. ಸ್ವಸ್ತಿಶ್ರೀ ಲಕ್ಷ್ಮೀಸೇನಾ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ದಿವ್ಯಸಾನ್ನಿಧ್ಯದಲ್ಲಿ ಮಾ. 29ರಂದು ಜರಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಮಂಡ್ಯ: ಮೂಲ ನಕ್ಷತ್ರ ಪೂಜಾ ಮಹೋತ್ಸವ

Article Image

ಮಂಡ್ಯ: ಮೂಲ ನಕ್ಷತ್ರ ಪೂಜಾ ಮಹೋತ್ಸವ

ಮಂಡ್ಯ: ಶ್ರೀ ಅತಿಶಯ ಕ್ಷೇತ್ರವಾದ ಶ್ರೀ ರಂಗಪಟ್ಟಣ ಕಾವೇರಿ ನದಿಯ ದ್ವೀಪದಲ್ಲಿರುವ ಭ| ಶ್ರೀ ೧೦೦೮ ಆದಿನಾಥ ತೀರ್ಥಂಕರರ ಬಸದಿಯಲ್ಲಿ ಶ್ರೀ ಮೂಲ ನಕ್ಷತ್ರ ಪೂಜಾ ಮಹೋತ್ಸವ, ಶ್ರೀ 1008 ವೃಷಭ ತೀರ್ಥಂಕರರಿಗೆ ಮಹಾಭಿಷೇಕ ಪೂಜೆ 8-30 ಗಂಟೆಗೆ ಹಾಗೂ ಧರಣೇಂದ್ರ ಪದ್ಮಾವತಿ ಅಮ್ಮನವರಿಗೆ ವಿಶೇಷ ಅಭಿಷೇಕ ಪೂಜೆ, ಲಕ್ಷ ಹೂವಿನ ಅಲಂಕಾರ ಪೂಜೆ ಮತ್ತು ಮಧ್ಯಾಹ್ನ 12-00 ಗಂಟೆಗೆ ಪಲ್ಲಕ್ಕಿ ಉತ್ಸವ ಹಾಗೂ ಮಹಾ ಮಂಗಳಾರತಿ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಮಾ. 22ರಂದು ಜರಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಅಷ್ಟಮ ನಂದೀಶ್ವರದ ೫೨ ಜಿನಬಿಂಬಗಳಿಗೆ ೫೪ ಕಲಶಗಳಿಂದ ಮಹಾಭಿಷೇಕ

Article Image

ಅಷ್ಟಮ ನಂದೀಶ್ವರದ ೫೨ ಜಿನಬಿಂಬಗಳಿಗೆ ೫೪ ಕಲಶಗಳಿಂದ ಮಹಾಭಿಷೇಕ

ಮೂಡುಬಿದಿರೆ: ದರೆಗುಡ್ಡೆಯಲ್ಲಿರುವ ಶ್ರೀ ೧೦೦೮ ಅನಂತನಾಥ ಸ್ವಾಮಿ ಬಸದಿಯಲ್ಲಿ ಅಷ್ಟಮ ನಂದೀಶ್ವರದ ೫೨ ಜಿನಬಿಂಬಗಳಿಗೆ ೫೪ ಕಲಶಗಳಿಂದ ಮಹಾಭಿಷೇಕವು ಮೂಡುಬಿದಿರೆ ಶ್ರಿ ಜೈನ ಮಠದ ಪ. ಪೂ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯದಲ್ಲಿ ಮಾ. 23ರಂದು ನೆರವೇರಲಿದೆ. ದಿನಾಂಕ 22-03-2025ನೇ ಶನಿವಾರ ಗಂಟೆ 9ಕ್ಕೆ ನೂತನ ನಂದೀಶ್ವರ 52 ಅರಿಹಂತರ ಜಿನಬಿಂಬಗಳು ಪೂಜಾ ಸ್ಥಳಕ್ಕೆ ಆಗಮನ, ಗಂಟೆ 10ರಿಂದ ನಂದೀಶ್ವರರ 52 ಅರಿಹಂತರಿಗೆ ಪ್ರತ್ಯೇಕ ಪಂಚಾಮೃತ ಅಭಿಷೇಕ ನೆರವೇರಲಿರುವುದು ಎಂದು ಪ್ರಕಟಣೆ ತಿಳಿಸಿದೆ.

ಬೆಂಗಳೂರಿನ ಯಲಹಂಕದಲ್ಲಿ ನೂತನ ಜೈನ್ ಮಿಲನ್ ಶಾಖೆ ಪ್ರಾರಂಭ

Article Image

ಬೆಂಗಳೂರಿನ ಯಲಹಂಕದಲ್ಲಿ ನೂತನ ಜೈನ್ ಮಿಲನ್ ಶಾಖೆ ಪ್ರಾರಂಭ

ಬೆಂಗಳೂರು ಭಾರತೀಯ ಜೈನ್ ಮಿಲನ್ ವಲಯ ಎಂಟರ ಅಡಿಯಲ್ಲಿ ನೂತನವಾಗಿ ಬೆಂಗಳೂರಿನ ಯಲಹಂಕದಲ್ಲಿ ಜೈನ್ ಮಿಲನ್ ಶಾಖೆ ಪ್ರಾರಂಭಿಸಲಾಗಿದೆ. ಯಲಹಂಕ ಜೈನ್ ಮಿಲನ್ ಶಾಖೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಂಬದಹಳ್ಳಿ ಜೈನಮಠದ ಸ್ವಸ್ತಿಶ್ರೀ ಭಾನುಕೀರ್ತಿ ಭಟ್ಟಾರಕ ಮಹಾಸ್ವಾಮಿಜಿಗಳವರು ಪಾವನ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಕಾರ್ಯಧ್ಯಕ್ಷರಾದ ಧರ್ಮಸ್ಥಳ ಸುರೇಂದ್ರ ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಅಬ್ಬಕ್ಕ ರಾಣಿ ಪ್ರಶಸ್ತಿ ಪುರಸ್ಕೃತರು, ಬೆಂಗಳೂರು ತ್ಯಾಗಿ ಸೇವಾ ಸಮಿತಿಯ ಅಧ್ಯಕ್ಷರು ಹಾಗೂ ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಉಪಾಧ್ಯಕ್ಷರು ಆದ ಅನಿತಾ ಸುರೇಂದ್ರ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು. ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಉಪಾಧ್ಯಕ್ಷರು, ರತ್ಮಾತ್ರಯ ಧಾರವಾಹಿಯ ನಿರ್ದೇಶಕರಾದ ಡಾ. ನೀರಜಾ ನಾಗೇಂದ್ರ ಕುಮಾರ್ ಉಪನ್ಯಾಸ ನೀಡಿದರು. ಪ್ರೇಮ ಸುಖಾನಂದ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು ಕಾರ್ಯಕ್ರಮದಲ್ಲಿ ಭಾರತೀಯ ಜೈನ್ ಮಿಲನ್ ವಲಯ 8 ರ ಪ್ರದೀಪ್, ಶ್ಯಾಮಲಾ ಪ್ರಸಾದ್, ವಿಲಾಸ್ ಪಾಸಣ್ಣನವರ್, ಪಿ.ಚರಣ್, ವೃಷಭರಾಜು, ರೇಷ್ಮಾ, ಚಂದ್ರನಾಥ ಟ್ರಸ್ಟ್ ಭೀಮಣ್ಣ ಕೋಟೆ, ಜೈನ್ ಮಿಲನ್ ವಲಯ 8 ರ ಜoಟಿ ಕಾರ್ಯದರ್ಶಿ ಸುಖಾನಂದ, ಇನ್ನಿತರರು ಭಾಗವಹಿಸಿದ್ದರು.

ವೇಣೂರು: ಶ್ರೀ ಬಾಹುಬಲಿ ಬೆಟ್ಟದ ವಾರ್ಷಿಕ ರಥಯಾತ್ರಾ ಮಹೋತ್ಸವ ಸಂಪನ್ನ

Article Image

ವೇಣೂರು: ಶ್ರೀ ಬಾಹುಬಲಿ ಬೆಟ್ಟದ ವಾರ್ಷಿಕ ರಥಯಾತ್ರಾ ಮಹೋತ್ಸವ ಸಂಪನ್ನ

ವೇಣೂರು: ರಥೋತ್ಸವದಂತಹ ಪುಣ್ಯ ಕಾರ್ಯ ಗಳಲ್ಲಿ ನಿಷ್ಠೆ ಯಿಂದ ಶ್ರದ್ಧಾ ಭಕ್ತಿಯಿಂದ ಪಾಲ್ಗೊಂಡಲ್ಲಿ ಜಿನೇಂದ್ರ ಭಗವಂತರ ಅನುಗ್ರಹ ನಮಗೆ ಪ್ರಾಪ್ತವಾಗುತ್ತದೆ. ಸಮ್ಯಕ್ ಜ್ಞಾನ, ಸಮ್ತಕ್ ದರ್ಶನ ಮತ್ತು ಸಮ್ಯಕ್ ಚಾರಿತ್ರ್ಯದ ಪ್ರತೀಕವೇ ರಥೋತ್ಸವ. ಇದರಿಂದ ಶ್ರಾವಕ-ಶ್ರಾವಕಿಯರಾದ ನಮ್ಮಲ್ಲಿ ಧಾರ್ಮಿಕ ಪ್ರಜ್ಞೆಯು ಜಾಗೃತವಾಗುತ್ತದೆ ಎಂದು ಮೂಡಬಿದ್ರೆ ಶ್ರೀ ಜೈನಮಠದ ಪ. ಪೂ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರು ನುಡಿದರು. ಅವರು ಬಾಹುಬಲಿ ಬೆಟ್ಟದ ವಾರ್ಷಿಕ ರಥಯಾತ್ರಾ ಮಹೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನವಿತ್ತರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇಣೂರು ಶ್ರೀ ದಿಗಂಬರ ಜೈನ ತೀರ್ಥ ಕ್ಷೇತ್ರ ಸಮಿತಿಯ ಉಪಾಧ್ಯಕ್ಷರಾದ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು ವಹಿಸಿ, ಮಾತನಾಡಿ ಈ ವರ್ಷದಿಂದ ವೇಣೂರು ಯಾತ್ರಿ ನಿವಾಸದಲ್ಲಿ “ಶ್ರುತ ಭಂಡಾರ” ಸ್ವಾಧ್ಯಾಯ ಕೇಂದ್ರ ಪ್ರಾರಂಭಿಸಿದ್ದು, ಶ್ರಾವಕ-ಶ್ರಾವಕಿಯರು ಇದರ ಸದುಪಯೋಗ ಪಡೆದುಕೊಳ್ಳುವಂತೆ ವಿನಂತಿಸಿದರು. ಮುಖ್ಯ ಅತಿಥಿಗಳಾದ ಕರ್ನಾಟಕ ಸರಕಾರದ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಮೂಡುಬಿದಿರೆ ಇವರು “ಶ್ರುತ ಭಂಡಾರ” ಸ್ವಾಧ್ಯಾಯ ಕೇಂದ್ರವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಕಳೆದ ಬಾರಿಯ ಮಹಾಮಸ್ತಕಾಭಿಷೇಕದ ಕಾರ್ಯಕ್ರಮಗಳು ಅತ್ಯಂತ ಯಶಸ್ವಿಯಾಗಿ ನೆರವೇರಿರುವುದಕ್ಕೆ ಸಮಿತಿಯ ಪದಾಧಿಕಾರಿಗಳಿಗೆ ಅಭಿನಂದನೆಯನ್ನು ಸಲ್ಲಿಸಿದರು ಹಾಗೂ ವೇಣೂರು ತೀರ್ಥಕ್ಷೇತ್ರದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹಾಗೂ ಯಾತ್ರಾರ್ಥಿಗಳ ಅನುಕೂಲಕ್ಕೆ ಇನ್ನಷ್ಟು ಅಭಿವೃದ್ಧಿ ಕಾರ್ಯಗಳಿಗೆ ಸರಕಾರದ ಅನುದಾನಕ್ಕೆ ಪ್ರಯತ್ನಿಸಲಾಗುವುದು ಎಂದು ತಿಳಿಸಿದರು. ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ: ರಥೋತ್ಸವದ ಧಾರ್ಮಿಕ ಸಭೆಯಲ್ಲಿ 90ವರ್ಷ ದಾಟಿದ ಹಿರಿಯ ಶ್ರಾವಕಿ ಗುಣಾವತಿ ಪಿ.ಎ. ಆಳ್ವ ಪಂಜಾಲ್‌ಬೈಲು, ಹಿರಿಯ ಶ್ರಾವಕ ಜಗತ್ಪಾಲ ಮುದ್ಯ ಕತ್ತೋಡಿ ಹಾಗೂ ಹಿರಿಯ ಶ್ರಾವಕಿ ಗುಣಾವತಿ ಅಮ್ಮ ಬರಮೇಲು ಇವರನ್ನು ಕ್ಷೇತ್ರದ ವತಿಯಿಂದ ಗೌರವಿಸಲಾಯಿತು. ಇತ್ತೀಚೆಗೆ ಮಹಾಕವಿ ರತ್ನಾಕರವರ್ಣಿ ಪ್ರಶಸ್ತಿ ಪಡೆದ ಮಾಂಡೋವಿ ಮೋಟರ್ಸ್‌ನ ಚೀಫ್ ಜನರಲ್ ಮೇನೆಜರ್ ನೇರೆಂಕಿ ಪಾರ್ಶ್ವನಾಥ ಜೈನ್, ಸಿ.ಎ. ಪರೀಕ್ಷೆಯಲ್ಲಿ ಉತ್ತೀರ್ಣರಾದ ದ್ವಿಶಾನ್ ಜೈನ್ ಕಂಚ ಇವರನ್ನು ಗೌರವಿಸಲಾಯಿತು. 2024ರ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿಯ ಪ್ರತಿಭಾವಂತ ಜೈನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. ವಿದ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರದ ಪ್ರಾಯೋಜಕರುಗಳಾದ ದಿ. ಅಂತಪ್ಪ ಆಳ್ವರು, ಬಡಕೋಡಿ ದಿ. ಆದಿರಾಜ ಶೆಟ್ಟಿ, ಮಾರಗುತ್ತು ದಿ. ವಿಜಯರಾಜ ಅಧಿಕಾರಿ ಕುಟುಂಬಸ್ಥರನ್ನು ಹಾಗೂ ಅಕ್ಷಯ ಕುಮಾರ್ ಕಂಬಳಿ ಉಜಿರೆ ಮೂಡುಬಿದಿರೆಯ ಎಮ್. ವಿ. ಶೆಟ್ಟಿ ಇವರನ್ನು ಗೌರವಿಸಲಾಯಿತು. ಚಾರ್ವಿ ಪ್ರಾರ್ಥಿಸಿ, ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ ಕಾರ್ಯದರ್ಶಿ, ವಿ. ಪ್ರವೀಣ್ ಕುಮಾರ್ ಇಂದ್ರ ಸ್ವಾಗತಿಸಿದರು. ಸಮಿತಿ ಕೋಶಾಧಿಕಾರಿ ಪಿ. ಜಯರಾಜ್ ಕಂಬಳಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಮಿತಿ ಜೊತೆ ಕಾರ್ಯದರ್ಶಿ ಮಹಾವೀರ್ ಜೈನ್ ಮೂಡುಕೋಡಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ವೇಣೂರು, ಮೂಡುಬಿದಿರೆ, ಪರುಷಗುಡ್ಡೆ ಜಿನಭಜನಾ ತಂಡಗಳಿಂದ ಜಿನಭಜನಾ ಕಾರ್ಯಕ್ರಮ ನಡೆಯಿತು. ಬಳಿಕ ಉತ್ಸವ, ಶ್ರೀ ಕೊಡಮಣಿತ್ತಾಯ ದೈವದ ನೇಮ, ಬಾಹುಬಲಿ ಸ್ವಾಮಿಗೆ 24 ಕಲಶಗಳಿಂದ ಪಾದಾಭಿಷೇಕ, ದ್ವಜಾವರೋಹಣದೊಂದಿಗೆ ರಥಯಾತ್ರಾ ಮಹೋತ್ಸವ ಸಂಪನ್ನಗೊಂಡಿತು.

ಪೂಜಾ ಕಾರ್ಯಕ್ರಮ

Article Image

ಪೂಜಾ ಕಾರ್ಯಕ್ರಮ

ಮೂಡುಬಿದಿರೆ: ದರೆಗುಡ್ಡೆಯಲ್ಲಿರುವ ಶ್ರೀ 1008 ಅನಂತನಾಥ ಸ್ವಾಮಿ ಬಸದಿಯಲ್ಲಿ ಬೆಳಗ್ಗೆ ಗಂಟೆ 9ರಿಂದ ಶ್ರೀ 1008 ಅನಂತನಾಥ ಸ್ವಾಮಿಗೆ ಕ್ಷೀರಾಭಿಷೇಕ, ಅಷ್ಟಮ ನಂದೀಶ್ವರದ 52 ಜಿನಬಿಂಬಗಳಿಗೆ 54 ಕಲಶಗಳಿಂದ ಮಹಾಭಿಷೇಕವು ಮೂಡುಬಿದಿರೆ ಶ್ರಿ ಜೈನ ಮಠದ ಪ. ಪೂ. ಭಾರತಭೂಷಣ ಡಾ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯ, ನೇತೃತ್ವ ಮತ್ತು ಆ‌ಶೀರ್ವಚನದೊಂದಿಗೆ ಮಾ. 22ರಂದು ನೆರವೇರಲಿರುವುದು.

ಜೈನ ಧರ್ಮವು ವಿಶ್ವದ ಶ್ರೇಷ್ಠ ಧರ್ಮಗಳಲ್ಲಿ ಒಂದು: ಅಜಿತ್‌ ಜೈನ್‌ ಅಭಿಮತ

Article Image

ಜೈನ ಧರ್ಮವು ವಿಶ್ವದ ಶ್ರೇಷ್ಠ ಧರ್ಮಗಳಲ್ಲಿ ಒಂದು: ಅಜಿತ್‌ ಜೈನ್‌ ಅಭಿಮತ

ಜೈನ ಧರ್ಮವು ವಿಶ್ವದ ಶ್ರೇಷ್ಠ ಧರ್ಮಗಳಲ್ಲಿ ಒಂದಾಗಿದೆ. ಯಾವುದೇ ಆಸೆ ಪೂರೈಸಲು ಪೂಜೆ ಮಾಡಬಾರದು. ಬದಲಿಗೆ ಜಿನನ ಗುಣಗಳನ್ನು ಅನುಸರಿಸುತ್ತ ಅವರ ಹಾಗೆ ನಾನೂ ಕೂಡ ಆತ್ಮ ಸಾಕ್ಷತ್ಕಾರವನ್ನು ಹೊಂದುವ ಸಲುವಾಗಿ ಪ್ರಾರ್ಥಿಸಬೇಕು ಎಂದು ಅಜಿತ್‌ ಜೈನ್‌ ಕೊಕ್ರಾಡಿ ಇವರು ಮೂಡುಬಿದಿರೆಯ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಜೈನ ವಿದ್ಯಾರ್ಥಿಗಳಿಗೆ ನಡೆದ ಅಷ್ಟ ವಿಧಾರ್ಚನ ಪೂಜಾ ತರಬೇತಿ ಶಿಬಿರದ ಉದ್ಘಾಟನೆಯನ್ನು ಮಾಡಿ ಹೇಳಿದರು. ಮುಂದುವರಿದು ಮಾತಾನಾಡಿದ ಅವರು ಜೈನ ಧರ್ಮದ ವಿಧಿ ವಿಧಾನಗಳನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ಜನನಿಗೆ ಅರ್ಘ್ಯ ನೀಡುವ ಪ್ರಕ್ರಿಯೆಯ ಅರ್ಥವನ್ನು ವಿದ್ಯಾರ್ಥಿಗಳು ಅರಿಯಬೇಕು ಎಂದು ಸಲಹೆ ನೀಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಕೃಷ್ಣರಾಜ ಹೆಗ್ಗಡೆ ಮಾತನಾಡಿ ಸಂಸ್ಥೆಯ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳ ಪರಿಶ್ರಮವನ್ನು ಶ್ಲಾಘಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಕ್ಸಲೆಂಟ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್‌ ಜೈನ್ ಮಾತನಾಡಿ ವಿದ್ಯಾರ್ಥಿಗಳು ಧರ್ಮದ ಮಾರ್ಗವನ್ನು ಅನುಸರಿಸುತ್ತಾ ಸ್ಪರ್ಧಾತ್ಮಕ ಜಗತ್ತಿಗೆ ಸಜ್ಜಾಗಬೇಕೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ ರಶ್ಮಿತಾ ಜೈನ್ ಉಪಸ್ಥಿತರಿದ್ದು, ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಆಡಳಿತ ನಿರ್ದೇಶಕರಾದ ಡಾ. ಸಂಪತ್‌ ಕುಮಾರ್‌ ಕಾರ್ಯಕ್ರಮವನ್ನು ಸಂಘಟಿಸಿ ನಿರೂಪಿಸಿದರು. ಪಾವನ ಪಂಚನ್ಮೋಕಾರ ಮಂತ್ರ ಪಠಣದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

ವಾರ್ಷಿಕ ವರ್ಧಂತಿ ಪೂಜಾ ಮಹೋತ್ಸವ

Article Image

ವಾರ್ಷಿಕ ವರ್ಧಂತಿ ಪೂಜಾ ಮಹೋತ್ಸವ

ಉಳ್ಳಾಲ ಭಗವಾನ್ ಆದಿನಾಥ ಸ್ವಾಮಿ, ಭಗವಾನ್ ಪಾರ್ಶ್ವನಾಥ ಸ್ವಾಮಿ, ಮಾತೆ ಪದ್ಮಾವತೀ ದೇವಿ ಬಸದಿಯ ಪಂಚಕಲ್ಯಾಣ ಮಹೋತ್ಸವದ ವಾರ್ಷಿಕ ವರ್ಧಂತಿ ಪೂಜಾ ಮಹೋತ್ಸವವು ಮೂಡುಬಿದಿರೆ ಶ್ರೀ ಜೈನ ಮಠದ ಪ. ಪೂ. ಸ್ವಸ್ತಿಶೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನ ಹಾಗೂ ಪಾವನ ಸಾನ್ನಿಧ್ಯದೊಂದಿಗೆ ದಿನಾಂಕ 23-03-2025ನೇ ಆದಿತ್ಯವಾರ ಜರಗಲಿದೆ. ಪೂಜಾ ಕಾರ್ಯಕ್ರಮ ಮೂಲಸ್ವಾಮಿಗೆ ೨೪ ಕಲಶ ಅಭಿಷೇಕ, ಮಾತೆ ಶ್ರೀ ಪದ್ಮಾವತಿ ದೇವಿಗೆ ಲಕ್ಷ ಹೂವಿನ ಮಹಾಪೂಜೆ, ಶ್ರೀ ಕ್ಷೇತ್ರಪಾಲನಿಗೆ ಕ್ಷೀರಾಭಿಷೇಕ, ಶ್ರೀ ನಾಗಬ್ರಹ್ಮ ಸಾನ್ನಿಧ್ಯ ಪೂಜಾ ಸೇವೆ.

First Previous

Showing 8 of 20 pages

Next Last