Article Image

ಕಾರ್ಕಳ : ಜಿನಭಜನಾ ಸ್ಪರ್ಧೆ ಸೀಸನ್-7ನ ಸೆಮಿಫೈನಲ್ಸ್ ಮತ್ತು ಫೈನಲ್ಸ್ ಸ್ಪರ್ಧೆ

Article Image

ಕಾರ್ಕಳ : ಜಿನಭಜನಾ ಸ್ಪರ್ಧೆ ಸೀಸನ್-7ನ ಸೆಮಿಫೈನಲ್ಸ್ ಮತ್ತು ಫೈನಲ್ಸ್ ಸ್ಪರ್ಧೆ

ಭಾರತೀಯ ಜೈನ್ ಮಿಲನ್, ವಲಯ-8ರ ಆಶ್ರಯದಲ್ಲಿ, ಮಂಗಳೂರು ವಿಭಾಗದ ಕಾರ್ಕಳ ಜೈನ್ ಮಿಲನ್ ಸಹಯೋಗದೊಂದಿಗೆ, ಯುಗಲ ಮುನಿಗಳಾದ ಪರಮಪೂಜ್ಯ ಮುನಿಶ್ರೀ ೧೦೮ ಅಮೋಘ ಕೀರ್ತಿ ಮಹಾರಾಜರು ಮತ್ತು ಪರಮಪೂಜ್ಯ ಮುನಿಶ್ರೀ ೧೦೮ ಅಮರ ಕೀರ್ತಿ ಮಹಾರಾಜರು, ಕಾರ್ಕಳ ಶ್ರೀ ಜೈನ ಮಠದ ಪರಮಪೂಜ್ಯ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳು ಇವರ ಆಶೀರ್ವಾದಗಳೊಂದಿಗೆ, ಭಾರತೀಯ ಜೈನ್ ಮಿಲನ್‌ನ ಪರಮಸಂರಕ್ಷಕರಾದ ಡಾ|| ಹೇಮಾವತಿ ಹೆಗ್ಗಡೆ ಮತ್ತು ಡಾ|| ವೀರೇಂದ್ರ ಹೆಗ್ಗಡೆಯವರು ಹಾಗೂ ಕುಟುಂಬ ವರ್ಗದವರ ಮಾರ್ಗದರ್ಶನದೊಂದಿಗೆ ಜಿನಭಜನಾ ಸ್ಪರ್ಧೆ ಸೀಸನ್-7ನ ಸೆಮಿಫೈನಲ್ಸ್ ಫೆಬ್ರವರಿ 3ರಂದು ಮತ್ತು ಫೆಬ್ರವರಿ 4ರಂದು ಫೈನಲ್ಸ್ ಸ್ಪರ್ಧೆಯು ಭಗವಾನ್ ಶ್ರೀ ಬಾಹುಬಲಿ ಪ್ರವಚನ ಮಂದಿರ ಕಾರ್ಕಳದಲ್ಲಿ ನಡೆಯಲಿದೆ.

ರಾಜ್ಯ ಬಜೆಟ್‌ನಲ್ಲಿ ಜೈನ ಅಭಿವೃದ್ಧಿ ನಿಗಮ ಸ್ಥಾಪನೆಗೆ ಅನುದಾನ ಮೀಸಲಿಡುವಂತೆ ಸಚಿವ ಡಿ. ಸುಧಾಕರ್‌ ಅವರಿಂದ ಮನವಿ

Article Image

ರಾಜ್ಯ ಬಜೆಟ್‌ನಲ್ಲಿ ಜೈನ ಅಭಿವೃದ್ಧಿ ನಿಗಮ ಸ್ಥಾಪನೆಗೆ ಅನುದಾನ ಮೀಸಲಿಡುವಂತೆ ಸಚಿವ ಡಿ. ಸುಧಾಕರ್‌ ಅವರಿಂದ ಮನವಿ

ಕ್ರಿ.ಪೂ. 3ನೇ ಶತಮಾನದಿಂದ ಜೈನ ಧರ್ಮವು ಐತಿಹಾಸಿಕ, ಸಾಮಾಜಿಕ, ಸಾಂಸ್ಕೃತಿಕ ಮತ್ತು ಸಾಹಿತ್ಯಕ ಕ್ಷೇತ್ರದಲ್ಲಿ ವಿಶಿಷ್ಟ ಕೊಡುಗೆಗಳನ್ನು ನಾಡಿಗೆ ನೀಡಿದ್ದು, ಕರ್ನಾಟಕ ರಾಜ್ಯವನ್ನು ಶ್ರೀಮಂತಗೊಳಿಸಿದೆ. ಪ್ರಸ್ತುತ ರಾಜ್ಯದಲ್ಲಿ 25-30 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ಜೈನ ಸಮುದಾಯವು ಆರ್ಥಿಕವಾಗಿ ಹಿಂದುಳಿದಿರುತ್ತದೆ. ಕರ್ನಾಟಕದಾದ್ಯಂತ ಜೈನ ಸಮುದಾಯಕ್ಕೆ ಸೇರಿದ ಬಸದಿಗಳು, ಸ್ಮಾರಕಗಳು ತುಂಬಾ ಶಿಥಿಲಾವಸ್ಥೆಯಲ್ಲಿದ್ದು, ಅವುಗಳ ಜೀರ್ಣೋದ್ದಾರ ಆಗಬೇಕಿದೆ. ಕರುನಾಡಿನ ಇತಿಹಾಸ ಮತ್ತು ಸಾಹಿತ್ಯದ ಪುಟಗಳಲ್ಲಿ ಆನೇಕ ರಾಜರು, ಸಾಮಂತರು ಮತ್ತು ದಂಡನಾಯಕರ ಆಳ್ವಿಕೆಯಲ್ಲಿ ಜೈನ ಧರ್ಮವು ಕನ್ನಡ ನಾಡಿಗೆ ಅತ್ಯಮೂಲ್ಯವಾದ ಕಲೆ ಮತ್ತು ಸಾಹಿತ್ಯಗಳ ಮೂಲಕ ಅಪಾರ ಕೊಡುಗೆಯನ್ನು ನೀಡಿದೆ. ಆದ್ದರಿಂದ, ಜೈನ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ 2024-25ನೇ ಸಾಲಿನ ಆಯವ್ಯಯದಲ್ಲಿ "ಜೈನ ಅಭಿವೃದ್ಧಿ ನಿಗಮ"ವನ್ನು ಸ್ಥಾಪಿಸಲು ಘೋಷಣೆ ಮಾಡಿ ರೂ. 100 ಕೋಟಿಗಳ ಅನುದಾನವನ್ನು ಮೀಸಲಿಡಬೇಕೆಂದು ಹಾಗೂ ಶ್ರೀಕ್ಷೇತ್ರ ಶ್ರವಣಬೆಳಗೊಳವನ್ನು ಸಾಂಸ್ಕೃತಿಕ ಪಾರಂಪರಿಕ ನಗರವನ್ನಾಗಿ ಘೋಷಣೆ ಮಾಡಬೇಕೆಂದು ಜೈನ ಸಮುದಾಯದ ಪರವಾಗಿ ಕರ್ನಾಟಕ ಸರಕಾರದ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಡಿ. ಸುಧಾಕರ್‌ ಅವರು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಗೆ ಮನವಿಯನ್ನು ಜ. 31ರಂದು ಸಲ್ಲಿಸಿದರು. ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಶ್ರೀ ಮಠದ ವತಿಯಿಂದ ರಾಜೇಶ ಖನ್ನಾ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ರಾಜ್ಯ ಉಪಾಧ್ಯಕ್ಷ ಅಶ್ವಿತ್ ಜೈನ್, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ನಿಕಟಪೂರ್ವ ನಿರ್ದೇಶಕ ಸುರೇಶ ತಂಗಾ, ಯೋಜನೆ ಮತ್ತು ಸಾಂಖ್ಯಿಕ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಅಜಿತ್ ಮುರಗುಂಡೆ, ಬೆಳಗಾವಿ ಜೈನ ಸಮಾಜದ ಮುಖಂಡರಾದ ನೇಮಿನಾಥ ಚೌಗಲೆ ಉಪಸ್ಥಿತರಿದ್ದರು.

ಕುಂತಿನಾಥ ಕಲಮನಿ ಅವರಿಗೆ ಸಾರ್ವಜನಿಕ ಗ್ರಂಥಾಲಯ ಪತ್ರಕರ್ತ ಪ್ರಶಸ್ತಿ

Article Image

ಕುಂತಿನಾಥ ಕಲಮನಿ ಅವರಿಗೆ ಸಾರ್ವಜನಿಕ ಗ್ರಂಥಾಲಯ ಪತ್ರಕರ್ತ ಪ್ರಶಸ್ತಿ

ಬೆಳಗಾವಿಯ ಸಾರ್ವಜನಿಕ ಗ್ರಂಥಾಲಯ ವತಿಯಿಂದ ನೀಡಲಾಗುವ "ಸಾರ್ವಜನಿಕ ಗ್ರಂಥಾಲಯ ಪತ್ರಕರ್ತ ಪ್ರಶಸ್ತಿ"ಯನ್ನು ಕನ್ನಡ ವಿಭಾಗದಲ್ಲಿ ಬೆಳಗಾವಿಯ ಹಳ್ಳಿಯ ಸಂದೇಶ ಪತ್ರಿಕೆಯ ಸಂಪಾದಕರಾದ ಕುಂತಿನಾಥ ಕಲಮನಿ ಅವರಿಗೆ ಬೆಳಗಾವಿಯ ಮರಾಠಾ ಮಂದಿರದಲ್ಲಿ ಜ. 18ರಂದು ಬ್ಯಾರಿಸ್ಟರ್‌ ನಾಥ್ ಪೈ ಉಪನ್ಯಾಸ ಮಾಲಿಕೆ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಈ ಪ್ರಶಸ್ತಿಯು 5 ಸಾವಿರ ರೂ. ನಗದು ಗೌರವ ಧನ, ಸ್ಮರಣಿಕೆ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.

ಡಾ. ಜಿನದತ್ತ ದೇಸಾಯಿ ಇವರಿಗೆ ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿ

Article Image

ಡಾ. ಜಿನದತ್ತ ದೇಸಾಯಿ ಇವರಿಗೆ ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿ

ನಿವೃತ್ತ ಜಿಲ್ಲಾ ನ್ಯಾಯಾಧೀಶರೂ, ಸಮಾಜದ ಹಿರಿಯ ಸಾಹಿತಿಗಳೂ, ಈ ನಾಡು ಕಂಡ ಅಪರೂಪದ ಜನಪ್ರಿಯ ಕವಿ, ಶಿಕ್ಷಣ ಪ್ರೇಮಿ ಡಾ. ಜಿನದತ್ತ ದೇಸಾಯಿ ಇವರು ಸಾಹಿತ್ಯ ಕ್ಷೇತ್ರಕ್ಕೆ ಹಾಗೂ ಹಲವಾರು ಸಾಮಾಜಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಸಲ್ಲಿಸಿದ ಸೇವೆ ಮತ್ತು ಜೀವಮಾನದ ಅಮೋಘ ಸಾಧನೆಯನ್ನು ಗುರುತಿಸಿ ಕರ್ನಾಟಕ ಸರಕಾರ 2023ನೇ ಸಾಲಿನ ಪ್ರತಿಷ್ಠಿತ "ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿ"ಗೆ ಆಯ್ಕೆ ಮಾಡಲಾಗಿದ್ದು, ಈ ಪ್ರಶಸ್ತಿಯು ರೂ. ಹತ್ತು ಲಕ್ಷ ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.

ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿಗೆ ಕೌಸಲ್ಯಾ ಧರಣೇಂದ್ರಯ್ಯರವರು ಆಯ್ಕೆ

Article Image

ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿಗೆ ಕೌಸಲ್ಯಾ ಧರಣೇಂದ್ರಯ್ಯರವರು ಆಯ್ಕೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕೊಡಮಾಡುವ "ದಾನ ಚಿಂತಾಮಣಿ ಅತ್ತಿಮಬ್ಬೆ " ಪ್ರಶಸ್ತಿಗೆ ಕೌಸಲ್ಯಾ ಧರಣೇಂದ್ರಯ್ಯರವರು ಭಾಜನರಾಗಿದ್ದಾರೆ. ಜನವರಿ 31ರಂದು ಸಂಜೆ 6 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ 5 ಲಕ್ಷ ರೂ.ಗಳ ನಗದು ಬಹುಮಾನವನ್ನು ನೀಡಿ ಸನ್ಮಾನಿಸಲಾಗುತ್ತದೆ.

ಸೂಡಿ ಶಿರ್ಲಾಲು : ಜ. 28 - ಫೆ. 1 - ಪಂಚಕಲ್ಯಾಣ ಪೂರ್ವಕ ನೂತನ ಜಿನಬಿಂಬ ಪ್ರತಿಷ್ಠಾ ಮಹೋತ್ಸವ

Article Image

ಸೂಡಿ ಶಿರ್ಲಾಲು : ಜ. 28 - ಫೆ. 1 - ಪಂಚಕಲ್ಯಾಣ ಪೂರ್ವಕ ನೂತನ ಜಿನಬಿಂಬ ಪ್ರತಿಷ್ಠಾ ಮಹೋತ್ಸವ

ಉಡುಪಿ ಜಿಲ್ಲೆ, ಕಾರ್ಕಳ ತಾಲೂಕಿನ ಸೂಡಿ ಶಿರ್ಲಾಲು ಇಲ್ಲಿಯ ಭ| ಶ್ರೀ ಆದಿನಾಥ ಸ್ವಾಮಿ ಬಸದಿಯ ಪಂಚಕಲ್ಯಾಣ ಪೂರ್ವಕ ನೂತನ ಜಿನಬಿಂಬ ಪ್ರತಿಷ್ಠಾ ಮಹೋತ್ಸವವು ಪರಮಪೂಜ್ಯ ೧೦೮ ಅಮರಕೀರ್ತಿ ಮುನಿ ಮಹಾರಾಜರು ಹಾಗೂ ಪರಮಪೂಜ್ಯ ೧೦೮ ಅಮೋಘಕೀರ್ತಿ ಮುನಿ ಮಹಾರಾಜರ ಪಾವನ ಸಾನ್ನಿಧ್ಯದಲ್ಲಿ ಮತ್ತು ಕಾರ್ಕಳ ದಾನಶಾಲಾ ಶ್ರೀ ಜೈನ ಮಠದ ಪರಮಪೂಜ್ಯ ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯ ಹಾಗೂ ಮಾರ್ಗದರ್ಶನದಲ್ಲಿ, ನಾಡಿನ ಎಲ್ಲಾ ಶ್ರೀ ಜೈನ ಮಠದ ಪೂಜ್ಯ ಭಟ್ಟಾರಕ ಸ್ವಾಮೀಜಿಗಳವರ ದಿವ್ಯ ಸಾನ್ನಿಧ್ಯದಲ್ಲಿ ಮತ್ತು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ, ಸಮಿತಿಯ ಗೌರವಾಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ನೇತೃತ್ವದಲ್ಲಿ ಜನವರಿ 28ರಿಂದ ಮೊದಲ್ಗೊಂಡು ಫೆಬ್ರವರಿ 1ರ ಪರ್ಯಂತ ಆಗಮೋಕ್ತ ವಿಧಿ ವಿಧಾನಗಳೊಂದಿಗೆ ಸಂಪನ್ನಗೊಳ್ಳಲಿರುವುದು.

ವೇಣೂರು ಅಕ್ಕಂಗಳ ಬಸದಿ : ಜ. 31 - ಫೆ. 2 - ಧಾಮ ಸಂಪ್ರೋಕ್ಷಣಾ ಪೂರ್ವಕ ಪ್ರತಿಷ್ಠಾ ಮಹೋತ್ಸವ

Article Image

ವೇಣೂರು ಅಕ್ಕಂಗಳ ಬಸದಿ : ಜ. 31 - ಫೆ. 2 - ಧಾಮ ಸಂಪ್ರೋಕ್ಷಣಾ ಪೂರ್ವಕ ಪ್ರತಿಷ್ಠಾ ಮಹೋತ್ಸವ

ಐತಿಹಾಸಿಕ ಪ್ರಸಿದ್ಧ ವೇಣೂರಿನ ಭ| ಶ್ರೀ ಬಾಹುಬಲಿ ಸ್ವಾಮಿ ಬೆಟ್ಟದ ಎಡಭಾಗದಲ್ಲಿರುವ ಅಕ್ಕಂಗಳ ಬಸದಿ, ಭ| ೧೦೦೮ ಶ್ರೀ ಶಾಂತಿನಾಥ ಸ್ವಾಮಿ ಜಿನಮಂದಿರದ ಧಾಮ ಸಂಪ್ರೋಕ್ಷಣಾ ಪೂರ್ವಕ ಪ್ರತಿಷ್ಠಾ ಮಹೋತ್ಸವವು ಮೂಡುಬಿದಿರೆ ಶ್ರೀ ಜೈನಮಠದ ಪರಮಪೂಜ್ಯ ‘ಭಾರತಭೂಷಣ' ಸ್ವಸ್ತಿಶ್ರೀ ಡಾ| ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರ ದಿವ್ಯ ಸಾನ್ನಿಧ್ಯ ಮತ್ತು ಮಾರ್ಗದರ್ಶನದಲ್ಲಿ ಹಾಗೂ ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದೊಂದಿಗೆ, ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್‌ ಅಜಿಲರ ಉಪಸ್ಥಿತಿಯಲ್ಲಿ ಜನವರಿ 31ರಂದು ಮೊದಲ್ಗೊಂಡು ಫೆಬ್ರವರಿ 2ರ ಪರ್ಯಂತ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಲಿದೆ.

ಸುಮ್ಮಗುತ್ತು, ಬಂಡಶಾಲೆ: ಭ| ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವ

Article Image

ಸುಮ್ಮಗುತ್ತು, ಬಂಡಶಾಲೆ: ಭ| ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವ

ಕಾರ್ಕಳ ತಾಲೂಕಿನ ಬಜಗೋಳಿ ಸುಮ್ಮಗುತ್ತು, ಬಂಡಶಾಲೆಯ ಐತಿಹಾಸಿಕ ಪರಮ ಪುನೀತ ಧರ್ಮಶಾಲೆ ತೀರ್ಥ, ಭಗವಾನ್ ಶ್ರೀ ಶ್ರೀ ಶ್ರೀ ಮುನಿಸುವ್ರತ ತೀರ್ಥಂಕರರ ವಾರ್ಷಿಕ ಮಹೋತ್ಸವ ಹಾಗೂ ೧೦೦೮ ಭಗವಾನ್ ಶ್ರೀ ಶ್ರೀ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವವು ಮೂಡುಬಿದಿರೆ ಶ್ರೀ ಜೈನಮಠದ ಜಗದ್ಗುರು ಡಾ| ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಮಾರ್ಗದರ್ಶನ, ದಿವ್ಯ ಉಪಸ್ಥಿತಿ, ನೇತೃತ್ವದಲ್ಲಿ ಜನವರಿ 27ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿರುವುದು.

ವೇಣೂರು ಕಲ್ಲು ಬಸದಿ: ಫೆ. 4 - ವಾರ್ಷಿಕ ಮಹೋತ್ಸವ

Article Image

ವೇಣೂರು ಕಲ್ಲು ಬಸದಿ: ಫೆ. 4 - ವಾರ್ಷಿಕ ಮಹೋತ್ಸವ

ವೇಣೂರು ಕಲ್ಲುಬಸದಿ ಸಮುಚ್ಚಯದ ಭ| ೧೦೦೮ ಶ್ರೀ ಶಾಂತಿನಾಥ ಸ್ವಾಮಿ, ಭ| ೧೦೦೮ ಶ್ರೀ ಆದಿನಾಥ ಸ್ವಾಮಿ, ಶ್ರೀ 24 ತೀರ್ಥಂಕರರ ಬಸದಿಗಳ ವಾರ್ಷಿಕ ಮಹೋತ್ಸವವು ಫೆಬ್ರವರಿ 4ರಂದು ಕಾರ್ಕಳ, ದಾನಶಾಲೆ ಶ್ರೀ ಜೈನಮಠದ ಪರಮಪೂಜ್ಯ ‘ಧ್ಯಾನಯೋಗಿ' ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನ, ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್‌ ಅಜಿಲರ ನೇತೃತ್ವದಲ್ಲಿ ಜರಗಲಿರುವುದು ಎಂದು ಶ್ರೀ ದಿಗಂಬರ ಜೈನ ತೀಥ೯ಕ್ಷೇತ್ರ ಸಮಿತಿ (ರಿ.) ಪ್ರಕಟಣೆಯಲ್ಲಿ ತಿಳಿಸಿದೆ.

ಧರ್ಮಸ್ಥಳ: ಭ| ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ 42ನೇ ವರ್ಧಂತ್ಯುತ್ಸವ

Article Image

ಧರ್ಮಸ್ಥಳ: ಭ| ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ 42ನೇ ವರ್ಧಂತ್ಯುತ್ಸವ

ಶ್ರೀ ಕ್ಷೇತ್ರ ಧರ್ಮಸ್ಥಳದ ಭ| ಶ್ರೀ ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ 42ನೇ ವರ್ಧಂತ್ಯುತ್ಸವ ನಿಮಿತ್ತ ಅಗ್ರೋದಕ ಮೆರವಣಿಗೆ ಮತ್ತು 216 ಕಲಶಗಳಿಂದ ಭ| ಶ್ರೀ ಬಾಹುಬಲಿ ಸ್ವಾಮಿಯ ಪಾದಾಭಿಷೇಕ ಕಾರ್ಯಕ್ರಮವು ಕಾರ್ಕಳ ಶ್ರೀ ಜೈನ ಮಠದ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರ ಪಾವನ ಸಾನ್ನಿಧ್ಯದಲ್ಲಿ ವಿವಿಧ ಧಾರ್ಮಿಕ ವಿಧಿ- ವಿಧಾನಗಳೊಂದಿಗೆ ದಿನಾಂಕ 01-02-2024 ರಿಂದ ದಿನಾಂಕ 02-02-2024ರವರೆಗೆ ನೆರವೇರಲಿದೆ.

ಬೆಂಗಳೂರು: ರಾಜ್ಯ ಮಟ್ಟದ ಅಂಚೆ ಚೀಟಿಗಳ ಪ್ರದರ್ಶನ ಕರ್ನಾಪೆಕ್ಸ್ 2024

Article Image

ಬೆಂಗಳೂರು: ರಾಜ್ಯ ಮಟ್ಟದ ಅಂಚೆ ಚೀಟಿಗಳ ಪ್ರದರ್ಶನ ಕರ್ನಾಪೆಕ್ಸ್ 2024

ವೇಣೂರು ಭ|| ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕದ ಶುಭ ಸಂದರ್ಭದಲ್ಲಿ ಭಾರತೀಯ ಅಂಚೆ ಇಲಾಖೆಯು ಕರ್ನಾಟಕದಲ್ಲಿನ 10 ಶ್ರೀ ಬಾಹುಬಲಿ ಸ್ವಾಮಿಯ ಮೂರ್ತಿಗಳ ಪಿಕ್ಚರ್ ಪೋಸ್ಟ್ ಕಾರ್ಡ್ ಹಾಗೂ ಜೈನ ಧರ್ಮದ ಮಹತ್ವ ಸಾರುವ ವಿಶ್ವ ಶಾಂತಿ, ಬದುಕು ಮತ್ತು ಬದುಕಲು ಬಿಡು, ಸತ್ಯ ಅಹಿಂಸೆಯ ಸಂದೇಶದ ವಿಶೇಷ ಸರಕಾರಿ ಅಂಚೆ ಮುದ್ರೆಗಳನ್ನು ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಅಂಚೆ ಚೀಟಿಗಳ ಪ್ರದರ್ಶನ ಕರ್ನಾಪೆಕ್ಸ್ 2024ನಲ್ಲಿ ಲೋಕಾರ್ಪಣೆಗೊಳಿಸಲಾಯಿತು. ನಂತರ ಕರ್ನಾಟಕದ ಐತಿಹಾಸಿಕ ಭವ್ಯ ಸಂಸ್ಕೃತಿ, ಪರಂಪರೆ ಸಾರುವ ಪ್ರಮುಖ ಸ್ಥಳಗಳ ಕುರಿತು ಭಾರತೀಯ ಅಂಚೆ ಇಲಾಖೆ ಶಾಶ್ವತ ಮುದ್ರೆಗಳನ್ನು ಲೋಕಾರ್ಪಣೆ ಮಾಡುವ ಕಾರ್ಯದಲ್ಲಿ ವಿಶೇಷ ಶ್ರಮ ವಹಿಸಿದ ಹಿನ್ನಲೆಯಲ್ಲಿ ಹುಬ್ಬಳ್ಳಿಯ ಸಂಸ್ಕಾರ ಸ್ಕೂಲ್ ಅಧ್ಯಕ್ಷ ಮಹಾವೀರ ಕುಂದೂರ ಅವರನ್ನು ಕರ್ನಾಟಕ ಅಂಚೆ ವೃತ್ತದ ಚೀಫ್ ಪೋಸ್ಟ್ ಮಾಸ್ಟರ್ ಜನರಲ್ ರಾಜೇಂದ್ರ ಕುಮಾರ ಅವರು ಗೌರವಿಸಿದರು.

ಕಾರ್ಕಳ: ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ಧಾಮ ಸಂಪ್ರೋಕ್ಷಣೆ ಮತ್ತು ಶ್ರೀ ಜೈನ ಮಠದ ನೂತನ ಕಟ್ಟಡದ ಪ್ರವೇಶೋತ್ಸವ

Article Image

ಕಾರ್ಕಳ: ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ಧಾಮ ಸಂಪ್ರೋಕ್ಷಣೆ ಮತ್ತು ಶ್ರೀ ಜೈನ ಮಠದ ನೂತನ ಕಟ್ಟಡದ ಪ್ರವೇಶೋತ್ಸವ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಪ್ರಾಚೀನ ಕಾರ್ಕಳ ಶ್ರೀ ಜೈನ ಮಠವು ಬೈರವದೇವ ಅರಸರಿಂದ ಸ್ಥಾಪನೆಯಾಗಿದ್ದು, ಇದೀಗ ಶಿಥಿಲಗೊಂಡ ಕಾರಣ ಪೀಠಾಧೀಶರಾಗಿರುವ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ಅಪೇಕ್ಷೆಯನ್ನು ಸಾಕಾರಗೊಳಿಸುವ ದೃಷ್ಠಿಯಿಂದ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆ ಹಾಗೂ ನೇತೃತ್ವದಲ್ಲಿ ಮತ್ತು ಸಮಾಜ ಬಾಂಧವರ ಸಹಕಾರದೊಂದಿಗೆ ಸುಂದರವಾದ, ವಿಶಾಲವಾದ ಹಾಗೂ ಆಗಮೋಕ್ತ ಪದ್ಧತಿಯಂತೆ ವಾಸ್ತುವಿನ್ಯಾಸ ಹೊಂದಿರುವ ಮಠದ ನೂತನ ಕಟ್ಟಡದ ನಿರ್ಮಾಣ ಕಾರ್ಯವು ದಿನಾಂಕ 20-08-2022ರಂದು ಶಿಲಾನ್ಯಾಸ ಪೂರ್ವಕ ಪ್ರಾರಂಭಗೊಂಡು ಇದೀಗ ಲೋಕಾರ್ಪಣೆಗೆ ಸಿದ್ಧವಾಗಿದೆ. ಪ.ಪೂ. ೧೦೮ ಶ್ರೀ ಅಮೋಘಕೀರ್ತಿ ಮುನಿಮಹಾರಾಜರು ಮತ್ತು ಪ.ಪೂ. ೧೦೮ ಶ್ರೀ ಅಮರಕೀರ್ತಿ ಮುನಿಮಹಾರಾಜರ ಪಾವನ ಸಾನ್ನಿಧ್ಯದಲ್ಲಿ, ಕಾರ್ಕಳ ಶ್ರೀ ಜೈನ ಮಠದ ಪ.ಪೂ. ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ದಿವ್ಯ ಸಾನಿಧ್ಯ ಹಾಗೂ ಮಾರ್ಗದರ್ಶನದಲ್ಲಿ ಮತ್ತು ಸಮಸ್ತ ಭಟ್ಟಾರಕರ ದಿವ್ಯ ಉಪಸ್ಥಿತಿಯಲ್ಲಿ ಭ| ಶ್ರೀ ಚಂದ್ರನಾಥ ಸ್ವಾಮಿ ಬಸದಿ ಧಾಮ ಸಂಪ್ರೋಕ್ಷಣಾ ಮತ್ತು ಶ್ರೀ ಮಠದ ನೂತನ ಕಟ್ಟಡದ ಪ್ರವೇಶೋತ್ಸವ ಕಾರ್ಯಕ್ರಮವು ದಿನಾಂಕ 24-01-2024ನೇ ಬುಧವಾರದಿಂದ ಮೊದಲ್ಗೊಂಡು ದಿನಾಂಕ 26-01-2024ನೇ ಶುಕ್ರವಾರದ ಪರ್ಯಂತ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಜರಗಲಿದೆ.

ಆನೆಕೆರೆ ಚತುರ್ಮುಖ ಕೆರೆ ಬಸದಿ ಪಂಚಕಲ್ಯಾಣ ಮಹೋತ್ಸವವು ಇಂದಿನಿಂದ ಪ್ರಾರಂಭ

Article Image

ಆನೆಕೆರೆ ಚತುರ್ಮುಖ ಕೆರೆ ಬಸದಿ ಪಂಚಕಲ್ಯಾಣ ಮಹೋತ್ಸವವು ಇಂದಿನಿಂದ ಪ್ರಾರಂಭ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಐತಿಹಾಸಿಕ ಆನೆಕೆರೆ ಚತುರ್ಮುಖ ಕೆರೆ ಬಸದಿಯ ಪಂಚಕಲ್ಯಾಣ ಮಹೋತ್ಸವವು ಇಂದಿನಿಂದ ಪ್ರಾರಂಭಗೊಂಡು ಜ. 22ರ ವರೆಗೆ ನಡೆಯಲಿದೆ. ಸುಮಾರು 5 ಶತಮಾನಗಳಷ್ಟು ಪ್ರಾಚೀನ ಆನೆಕೆರೆ ಬಸದಿ ಐವರು ತೀರ್ಥಂಕರರ ಭವ್ಯ ಬಿಂಬಗಳಿಂದ ಕೂಡಿದೆ. ಚತುರ್ಮುಖ ಬಸದಿಯ ವಾಸ್ತು ಶೈಲಿಯನ್ನು ಹೊಂದಿರುವ ಕೆರೆ ಬಸದಿಯನ್ನು ಭೈರವರಸರ ವಂಶಸ್ಥ ಪಾಂಡ್ಯನಾಥ ಪಾಂಡ್ಯಪ್ಪೊಡೆಯ 16.05.1545ರಲ್ಲಿ ಕಟ್ಟಿಸಿದರು ಎಂದು ಇತಿಹಾಸ ಹೇಳುತ್ತದೆ. 2022ರಲ್ಲಿ ಜೀರ್ಣೋದ್ಧಾರ ಕಾರ್ಯವನ್ನು ಆರಂಭಿಸಿದ್ದು, ಸುಮಾರು 26 ಎಕರೆ ವಿಸ್ತೀರ್ಣದಲ್ಲಿ ಆನೆಕೆರೆ ಬಸದಿಯು ಶೋಭಿಸುತ್ತಿದೆ. ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರು ಶ್ರೀ ಜೈನಮಠ, ದಾನಶಾಲಾ ಕಾರ್ಕಳ ಇವರ ನೇತೃತ್ವದಲ್ಲಿ ಮತ್ತು ಸಮಸ್ತ ಭಟ್ಟಾರಕರ ಪಾವನ ಸಾನಿಧ್ಯದಲ್ಲಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ರಾಜರ್ಷಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಶ್ರೀಮತಿ ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಮತ್ತು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಡಾ.ಎಂ.ಎನ್. ರಾಜೇಂದ್ರ ಕುಮಾರ್ ರವರ ಸಹಕಾರದೊಂದಿಗೆ ಶ್ರೀ ಪಾರ್ಶ್ವನಾಥ ಸ್ವಾಮಿಗೆ ಪಂಚಕಲ್ಯಾಣ ಮಹೋತ್ಸವವು ನೂತನ ಶಿಲಾಮಂದಿರಲ್ಲಿ ಆಗಮೋಕ್ತ ವಿಧಿ- ವಿಧಾನಗಳೊಂದಿಗೆ ಸಂಪನ್ನಗೊಳ್ಳಲಿದೆ. ನೂತನ ಆನೆಕೆರೆ ಬಸದಿಯು ಸುಂದರವಾದ ಕೆತ್ತನೆಯಲ್ಲಿ ಶಿಲಾಮಯವಾಗಿ ರೂಪುಗೊಂಡ ದ್ವಾರಪಾಲಕರು, ತಿರುಗಿಸಬಹುದಾದಂತಹ ಕಂಬಗಳು, ಪಾಣಿಪೀಠದ ಬುಡದಲ್ಲಿ ಸೂಕ್ಷ್ಮವಾದ ಕೆತ್ತನೆಗಳು, ಶಾಶ್ವತ ವಿದ್ಯುತ್ ದೀಪಾಲಂಕಾರ ಹೀಗೆ ಅನೇಕ ವಿಶೇಷತೆಗಳೊಂದಿಗೆ ಲೋಕಾರ್ಪಣೆಗೆ ಸಿದ್ದವಾಗಿದೆ.

ಚೇತನ್ ಫಣಿರಾಜ್ ಗೆ ಸನ್ಮಾನ

Article Image

ಚೇತನ್ ಫಣಿರಾಜ್ ಗೆ ಸನ್ಮಾನ

ಹಾಸನ: ದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ ಆವರಣದಲ್ಲಿ ಸಹಕಾರ ಭಾರತಿ ಇತ್ತಿಚಿಗೆ ಆಯೋಜಿಸಿದ್ದ ಕ್ರೆಡಿಟ್ ಸೊಸೈಟಿಗಳ ರಾಷ್ಟ್ರೀಯ ಅಧಿವೇಶನದಲ್ಲಿ, 100 ವರ್ಷ ಪೂರೈಸಿರುವ ಕ್ರೆಡಿಟ್ ಸೊಸೈಟಿಗಳ ಸಹಕಾರ ಸನ್ಮಾನ ಕಾರ್ಯಕ್ರಮದಲ್ಲಿ ಕರ್ನಾಟಕದಿಂದ ಹಾಸನದ ಜೈನ ಮಂಡಳಿ ಪತ್ತಿನ ಸಹಕಾರ ಸಂಘಕ್ಕೆ 103 ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ಪಟ್ಟಣ ಸಹಕಾರಿ ಬ್ಯಾಂಕುಗಳು ಮತ್ತು ಕ್ರೆಡಿಟ್ ಸೊಸೈಟಿಗಳ ರಾಷ್ಟ್ರೀಯ ಒಕ್ಕೂಟದ, ವತಿಯಿಂದ ಸಂಘದ ಅದ್ಯಕ್ಷರಾದ ಹೆಚ್.ಪಿ. ಚೇತನ್ ಫಣಿರಾಜ್ರವರನ್ನು ಸನ್ಮಾನಿಸಲಾಯಿತು. ಈ ಸಮಾರಂಭದಲ್ಲಿ ಭಾರತ ಸರ್ಕಾರದ ಕೇಂದ್ರ ಸಚಿವರಾದ ಭಗವತ ಕರಾಢ್, ಪಟ್ಟಣ ಸಹಕಾರಿ ಬ್ಯಾಂಕುಗಳು ಮತ್ತು ಕ್ರೆಡಿಟ್ ಸೊಸೈಟಿಗಳ ರಾಷ್ಟ್ರೀಯ ಒಕ್ಕೂಟದ ಅಧ್ಯಕ್ಷರಾದ ಜ್ಯೋತಿಂದರ್ ಮೆಹ್ತಾರವರು ಮತ್ತು ಸಹಕಾರ ಭಾರತಿ ರಾಷ್ಟ್ರೀಯ ಅಧ್ಯಕ್ಷರಾದ ದೀನಾನಾಥ್ ಠಾಕೂರ್ ಇತರರು ಉಪಸ್ಥಿತರಿದ್ದರು.

ಭಾರತೀಯ ಜೈನ್ ಮಿಲನ್ ಮಾಸಿಕ ಸಭೆ

Article Image

ಭಾರತೀಯ ಜೈನ್ ಮಿಲನ್ ಮಾಸಿಕ ಸಭೆ

ಬೆಂಗಳೂರು: ಇಲ್ಲಿಯ ರತ್ನತ್ರಯ ಜೈನ್ ಮಿಲನಿನ ಮಾಸಿಕ ಸಭೆಯು ಶ್ರೀ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ಜ. 6ರಂದು ಜರುಗಿತು. ಮುಖ್ಯ ಅತಿಥಿಗಳಾಗಿ ಹಿರಿಯ ವಕೀಲರಾದ ನಾಗಶ್ರೀ ಮುಪ್ಪಾನೆ ಆಗಮಿಸಿದ್ದರು. ಗಣ್ಯರೆಲ್ಲರೂ ಸೇರಿ ದೀಪ ಪ್ರಜ್ವಲನೆ ಮಾಡುವುದರ ಮುಖಾಂತರ ಕಾರ್ಯಕ್ರಮ ಪ್ರಾರಂಭವಾಯಿತು. ಪೂರ್ಣಿಮಾರವರು ಡಿಸೆಂಬರ್ ತಿಂಗಳಲ್ಲಿ ವಿವಾಹ ವಾರ್ಷಿಕೋತ್ಸವ ಹಾಗೂ ಹುಟ್ಟುಹಬ್ಬವನ್ನು ಅಚರಿಸಿಕೊಂಡ ಮಿಲನ್ ಸದಸ್ಯರಿಗೆ ಶುಭಕೋರಿದರು. ಪದ್ಮಾ ಸೂರಿರವರು ಮಿಲನಿನ ನಡಾವಳಿಯನ್ನು ವಾಚಿಸಿದರು. ನಂತರ ಬೆಂಗಳೂರು ವಿಭಾಗದ ಜಿನಭಜನಾ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಬಹುಮಾನ ಪಡೆದ ಮಿಲನಿನ ಸದಸ್ಯರನ್ನು ಅಭಿನಂದಿಸಲಾಯಿತು, ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಾಗಶ್ರೀ ಮುಪ್ಪಾನೆಯವರು, “ಜೈನ ಧರ್ಮದಲ್ಲಿ ಭಟ್ಟಾರಕ ಮಹತ್ವ, ಜೈನ ಮಠ ಮತ್ತು ಆಸ್ತಿ ಸಂರಕ್ಷಸಿಕೊಳ್ಳುವಲ್ಲಿ ನಮ್ಮ ಪಾತ್ರ” ಎಂಬ ವಿಷಯದ ಬಗ್ಗೆ ಕೂಲಂಕುಷವಾಗಿ ಮಾತನಾಡಿ ಅರಿವು ಮೂಡಿಸಿದರು. ನವೀನ್ ಕುಮಾರ್ ಗುಬ್ಬಿರವರು ಅಧ್ಯಕ್ಷೀಯ ನುಡಿಗಳನ್ನಾಡಿದರು. ವೇದಿಕೆಯಲ್ಲಿ ಪ್ರೇಮಾ ಸುಖಾನಂದ ಉಪಸ್ಥಿತರಿದ್ದರು. ಅನಂತಕುಮಾರಿರವರು ಸ್ವಾಗತಿಸಿ, ಶ್ವೇತಾ ನವೀನ್ ವಂದಿಸಿದರು. ಧೀರಜ್ ಜೈನ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದ ಅತಿಥ್ಯವನ್ನು ಪದ್ಮರಾಜ್ ಹಾಗೂ ಅನಂತ ಕುಮಾರಿರವರು ವಹಿಸಿಕೊಂಡಿದ್ದರು.

ಪದ್ಮಾವತಿ ಅಮ್ಮ

Article Image

ಪದ್ಮಾವತಿ ಅಮ್ಮ

ಹಾಸನ ಜಿಲ್ಲೆಯ ಜಾವಗಲ್ ನ ನಿವಾಸಿ ಪದ್ಮಾವತಿ ಅಮ್ಮ (95ವ) ಇವರು ಜ. 8ರಂದು ನಿಧನ ಹೊಂದಿದರು. ಇವರು ಮಕ್ಕಳಾದ ಮರುದೇವಿಯಮ್ಮ, ಧರ್ಮಪಾಲ್ ಎಚ್. ಎ. ಮತ್ತು ಪೂರ್ಣಿಮಾ ಜೈನ್ ಹಾಗೂ ಅಪಾರ ಬಂಧು-ವರ್ಗವನ್ನು ಅಗಲಿದ್ದಾರೆ.

ಆದಿನಾಥ ಉಪಾಧ್ಯೆಗೆ ಪಿಎಚ್.ಡಿ

Article Image

ಆದಿನಾಥ ಉಪಾಧ್ಯೆಗೆ ಪಿಎಚ್.ಡಿ

ಬೆಳಗಾವಿ: ಗುಲ್ಬರ್ಗಾ ವಿಶ್ವವಿದ್ಯಾಲಯವು ಗಣಿತಶಾಸ್ತ್ರ ವಿಷಯದಲ್ಲಿ ‘ನ್ಯೂಮರಿಕಲ್ ಸ್ಟಡಿ ಆಫ್ ಸ್ಲೈಡರ್ ಆ್ಯಂಡ್ ಸ್ಕ್ವೀಝ್ ಫಿಲ್ಮ್ ಬೇರಿಂಗ್ಸ್ ಲೂಬ್ರಿಕೇಟೆಡ್ ವಿಥ್ ನಾನ್- ನ್ಯೂಟೋನಿಯನ್ ಪ್ಲೂಯಿಡ್’ ಎಂಬ ವಿಷಯದ ಕುರಿತು ಸಂಶೋಧನಾ ಮಹಾಪ್ರಬಂಧಕ್ಕೆ ಆದಿನಾಥ ಚಂದ್ರನಾಥ ಉಪಾಧ್ಯೆ ಅವರಿಗೆ ಪಿಎಚ್.ಡಿ ಪದವಿ ಪ್ರದಾನ ಮಾಡಿದೆ. ಮೂಲತಃ ಬಿಜಾಪುರ ಜಿಲ್ಲೆಯ ತಾಳಿಕೋಟೆಯ ಆದಿನಾಥ ಉಪಾಧ್ಯೆ ಅವರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಗಣಿತಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರಿಗೆ ಕಲಬುರ್ಗಿಯ ಜಿಲ್ಲೆಯ ಸೇಡಂನ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ನಿವೃತ್ತ ಸಹ ಪ್ರಾಧ್ಯಾಪಕ ಡಾ| ಕಾಶೀನಾಥ ಬಿರಾದಾರ ಮಾರ್ಗದರ್ಶಕರಾಗಿದ್ದರು. ಇವರು ತಾಳಿಕೋಟೆಯ ಚಂದ್ರನಾಥ ಜೆ. ಉಪಾಧ್ಯ ಮತ್ತು ವಿಜಯಮಾಲಾ ಚಂದ್ರನಾಥ ಉಪಾಧ್ಯ ದಂಪತಿಗಳ ಪುತ್ರ.

ಆಕರ್ಷಣಿ ಶೈಲೆಂದ್ರ ಕುಮಾರ್

Article Image

ಆಕರ್ಷಣಿ ಶೈಲೆಂದ್ರ ಕುಮಾರ್

ಅಜ್ಜಿಬೆಟ್ಟು ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ನ ಸಮೃದ್ಧಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾಗಿರುವ ಆಕರ್ಷಣಿ ಶೈಲೆಂದ್ರ ಕುಮಾರ್ ಇವರು ಬಂಟ್ವಾಳ ತಾಲೂಕು ಸಂಜೀವಿನಿ ಒಕ್ಕೂಟದ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಆಗಿರುತ್ತಾರೆ.

ಎಂ. ಬಾಹುಬಲಿ ಪ್ರಸಾದ್ ಇವರು ಪುನರ್ ಆಯ್ಕೆ

Article Image

ಎಂ. ಬಾಹುಬಲಿ ಪ್ರಸಾದ್ ಇವರು ಪುನರ್ ಆಯ್ಕೆ

ಮೂಡುಬಿದಿರೆ ಕೋ-ಓಪರೇಟಿವ್ ಸರ್ವಿಸ್ ಸೊಸೈಟಿ ಲಿ., ಇದರ ಅಧ್ಯಕ್ಷರಾಗಿ “ಸಹಕಾರ ರತ್ನ” ಎಂ. ಬಾಹುಬಲಿ ಪ್ರಸಾದ್ ನ್ಯಾಯವಾದಿ ಇವರು ಎರಡನೇ ಬಾರಿಗೆ ಸರ್ವಾನುಮತದಿಂದ ಪುನರ್ ಆಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ ಕೆ. ಅಭಯಚಂದ್ರ ಜೈನ್, ಅಶೋಕ ಕಾಮತ್ ಎಂ.ಪಿ., ಎಂ. ಜ್ಞಾನೇಶ್ವರ ಕಾಳಿಂಗ ಪೈ, ಜಯರಾಮ ಕೋಟ್ಯಾನ್, ಮನೋಜ್ ಕುಮಾರ್ ಶೆಟ್ಟಿ ಸಿ. ಎಚ್. ಅಬ್ದುಲ್ ಗಫೂರ್ ಆಯ್ಕೆಯಾಗಿದ್ದಾರೆ. ಈಗಾಗಲೇ ಎಂ. ಗಣೇಶ್ ನಾಯಕ್, ಜಾರ್ಜ್ ಮೋನಿಸ್, ಎಂ. ಪದ್ಮನಾಭ ಹಾಗೂ ದಯಾನಂದ ನಾಯ್ಕ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಫೆ. 22ರಿಂದ ಮಾ. 1: ವೇಣೂರು ಭ| ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ

Article Image

ಫೆ. 22ರಿಂದ ಮಾ. 1: ವೇಣೂರು ಭ| ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ

ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವವು ಪರಮಪೂಜ್ಯ ಯುಗಳ ಮುನಿವರ್ಯರಾದ ೧೦೮ ಅಮೋಘಕೀರ್ತಿ ಮುನಿ ಮಹಾರಾಜರು ಹಾಗೂ ೧೦೮ ಅಮರಕೀರ್ತಿ ಮುನಿ ಮಹಾರಾಜರ ಪಾವನ ಸಾನಿಧ್ಯ-ಶುಭಾಶೀರ್ವಾದಗಳೊಂದಿಗೆ, ಮೂಡುಬಿದಿರೆ ಶ್ರೀ ದಿಗಂಬರ ಜೈನ ಮಠದ ಡಾ| ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಉಪಸ್ಥಿತಿ ಹಾಗೂ ಮಾರ್ಗದರ್ಶನದಲ್ಲಿ, ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ʼರಾಜರ್ಷಿʼ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ, ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರ ಕಾರ್ಯಾಧ್ಯಕ್ಷತೆಯಲ್ಲಿ ಫೆ. 22ರಿಂದ ಮಾ. 1ರ ತನಕ ಜರಗಲಿದೆ.

ಧರ್ಮದ ಕಾಲಂನಲ್ಲಿ ಜೈನ ಎಂದು ಸೇರಿಸಿ

Article Image

ಧರ್ಮದ ಕಾಲಂನಲ್ಲಿ ಜೈನ ಎಂದು ಸೇರಿಸಿ

ಪಾವಗಡ: ಜೈನ ಧರ್ಮ ವಿಶ್ವಧರ್ಮವಾಗಿದೆ. ವಿಶ್ವದ ಬಹುತೇಕ ವಿಶ್ವವಿದ್ಯಾಲಯಗಳಲ್ಲಿ ಜೈನಪೀಠಗಳಿವೆ. ಇದೊಂದು ಶ್ರೇಷ್ಠ ಅಹಿಂಸಾ ಧರ್ಮವಾಗಿದೆ. ಹಿಂದಿನ ಜನಸಂಖ್ಯೆಗಿಂತ ಈಗ ಜೈನ ಧರ್ಮೀಯರ ಜನಸಂಖ್ಯೆ ಕ್ಷೀಣಿಸುತ್ತಿದೆ. ಧರ್ಮದ ಕಾಲಂನಲ್ಲಿ ಜೈನ ಎಂದು ಬರೆಯುವಂತೆ ಜೈನ ಸಮಾಜದ ಹಿರಿಯ ಮುಖಂಡ ಬ್ರಹ್ಮದೇವಯ್ಯ ಮನವಿ ಮಾಡಿದರು. ತಾಲ್ಲೂಕಿನ ನಿಡಗಲ್ ಬೆಟ್ಟದಲ್ಲಿ ಶ್ರೀಕೃಷ್ಣಹರಣ ಪಾರ್ಶ್ವನಾಥ ತೀರ್ಥಂಕರರ ಜನುಮ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ವಾರ್ಷಿಕ ಪೂಜಾ ಮಹೋತ್ಸವದಲ್ಲಿ ಅವರು ಮಾತನಾಡಿದರು. ಶಳ್ಳಕ್ಕಿರೆ ದಿಗಂಬರ ಜೈನ ಸಮಾಜದ ಅಧ್ಯಕ್ಷ, ಉದ್ಯಮಿ ಹಂಬಣ್ಣನವರು ಕಾರ್ಯಕ್ರಮ ಉದ್ಘಾಟಿಸಿದರು. ನಿಡಗಲ್ ಕಷ್ಟ ಹರಣ ಪಾರ್ಶ್ವನಾಥ ಜನುಮ ದಿನದ ಸಮಿತಿ ಅಧ್ಯಕ್ಷ ಪಿ.ಸುಂದರ ರಾಜಯ್ಯ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಮಿತಿಯ ಕಾರ್ಯದರ್ಶಿ ಆರ್. ಬಿ. ಜಯಣ್ಣ, ಗೌರಿಪುರ ಪಾರ್ಶ್ವನಾಥ್ ಕುಜ ನಾಗಭೂಷಣ್, ಟ್ರಸ್ಟಿ ಆರ್. ಎಸ್ ಕುಬೇರಪ್ಪ, ಭರತ್, ರಾಜು, ಪ್ರದೀಪ್, ಜೈನ್, ಶೈನ್ ಜೈನ್, ತುಮಕೂರು ಜೈನ ಸಮಾಜದ ನಿರ್ದೇಶಕರಾದ ಬ್ರಹ್ಮ ಪ್ರಕಾಶ್, ಮಂಡಿ ನಾಗರಾಜ್, ಸುನಿಲ್ ಅಮರಾಪುರ ಸೇರಿದಂತೆ ಜೈನ ಮಹಿಳಾ ಮಂಡಳಿಗಳು ಭಾಗವಹಿಸಿದ್ದವು. ನಂತರ ದ್ರವ್ಯ ಅಭಿಷೇಕ ಹರಾಜುಗಳ ಪ್ರಕ್ರಿಯೆ ನಡೆಯಿತು.

ಅರ್ಜಿ ಆಹ್ವಾನ

Article Image

ಅರ್ಜಿ ಆಹ್ವಾನ

ರಾಜಸ್ಥಾನ ಸಾಂಗನೇರದಲ್ಲಿರುವ ಶ್ರಮಣ ಸಂಸ್ಕೃತಿ ಸಂಸ್ಥಾನದಲ್ಲಿ ಸಂತ ಶಿರೋಮಣಿ 108 ಆಚಾರ್ಯ ಶ್ರೀ ವಿದ್ಯಾಸಾಗರ ಮುನಿ ಮಹಾರಾಜರ ಆಶೀರ್ವಾದ ಮತ್ತು ಮುನಿಪುಂಗವ 108 ಶ್ರೀ ಸುಧಾಸಾಗರ ಮಹಾರಾಜರ ಪ್ರೇರಣೆಯಿಂದ ನಡೆಯುತ್ತಿರುವ ದ್ವಾದಶ ವರ್ಷಿಯ ಕೋರ್ಸ್ಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇದರಲ್ಲಿ ಉತ್ತಮ ಪಂಡಿತರಿಂದ ಗ್ರಂಥ ಸ್ವಾಧ್ಯಾಯ ಮತ್ತು ಪ್ರತಿ ವರ್ಷ ಪರೀಕ್ಷೆ ಬರೆಯ ಬೇಕಾಗುತ್ತದೆ. ಇಲ್ಲಿಯವರೆಗೂ ಹಿಂದಿಯಲ್ಲಿ ನಡೆಯುತ್ತಿದ್ದು, ಪ್ರಥಮ ಬಾರಿಗೆ ಮೈಸೂರಿನಲ್ಲಿ ಪಠ್ಯಕ್ರಮವನ್ನು ಕನ್ನಡಕ್ಕೆ ಅನುವಾದಿಸಿ, ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅನುಮತಿ ನೀಡಲಾಗಿದೆ. ಕರ್ನಾಟಕ ರಾಜ್ಯಾದ್ಯಂತ ಎಲ್ಲರಿಗೂ ಈ ಪರೀಕ್ಷೆ ಬರೆಯುವ ಅವಕಾಶವಿದ್ದು, ಪರೀಕ್ಷೆಯನ್ನು ಬರೆಯಲು ಯಾವುದೇ ವ್ಯಾಸಂಗದ ಅರ್ಹತೆ ಮತ್ತು ವಯಸ್ಸಿನ ಮಿತಿ ಇರುವುದಿಲ್ಲ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-01-2024 ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸಪ್ನ ಲಕ್ಷ್ಮೀಶ್ ಮೈಸೂರು: 9448254546 / 8660747004

ಡಾ. ಅಜಿತ ಮುರುಗುಂಡೆ

Article Image

ಡಾ. ಅಜಿತ ಮುರುಗುಂಡೆ

ಡಾ. ಅಜಿತ ಮುರುಗುಂಡೆ ಅವರ ಕೃತಿ ಕೆ. ಸಾ. ಪ. ದತ್ತಿನಿಧಿ ಪ್ರಶಸ್ತಿಗೆ ಆಯ್ಕೆ. ಕನ್ನಡ ಸಾಹಿತ್ಯ ಪರಿಷತ್ತು ೨೦೨೦ ಎರಡನೇ ಸಾಲಿನ ವಿವಿಧ ದತ್ತಿ ಪ್ರತಿ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಬೆಂಗಳೂರಿನ ಡಾ. ಅಜಿತ ಮುರಗುಂಡೆ ಇವರು ಬರೆದ ‘ರತ್ನಾಕರ ವರ್ಣಿಯ ಹಾಡುಗಳು, ಸಾಹಿತ್ಯ ಮತ್ತು ತಾತ್ವಿಕತೆ’ ಈ ಕೃತಿ ಹೊಳಲ್ಕೆರೆ ಪದ್ಮಾವತಮ್ಮ ಶ್ರೀಪಾಲ ಶೆಟ್ಟಿ ಡಾ. ಮದನಕೇಸರಿ ಜೈನ ಸಾಹಿತ್ಯ ದತ್ತಿ ಪ್ರಶಸ್ತಿಗೆ ಆಯ್ಕೆಯಾಗಿದೆ. ಪ್ರಸ್ತುತ ಇವರು ಯೋಜನೆ ಮತ್ತು ಸಾಂಖ್ಯಿಕ ಸಚಿವರ ವಿಶೇಷ ಅಧಿಕಾರಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ

First Previous

Showing 8 of 8 pages

Next Last